ಗೋಣಿಕೊಪ್ಪ ಕಾವೇರಿ ದಸರಾ ಸಮಿತಿ ಅಧ್ಯಕ್ಷರಾಗಿ ಕೆ.ಜಿ. ರಾಮಕೃಷ್ಣ ಆಯ್ಕೆ

ಗೋಣಿಕೊಪ್ಪ : ಶ್ರೀ ಕಾವೇರಿ ದಸರಾ ಸಮಿತಿಯ ೪೭ನೇ ದಸರಾ ಜನೋತ್ಸವದ ಅಧ್ಯಕ್ಷರಾಗಿ ಗ್ರಾ.ಪಂ. ಸದಸ್ಯ ಕೆ.ಜಿ. ರಾಮಕೃಷ್ಣ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರ ಒಮ್ಮತ ಈ ಆಯ್ಕೆ ನಡೆದಿದೆ. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷರು ಜನೋತ್ಸವವನ್ನು ವಿಭಿನ್ನವಾಗಿ ಆಚರಿಸಲು ಸರ್ವರ ಸಹಕಾರದೊಂದಿಗೆ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಈ ಆಯ್ಕೆಯ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪ್ರಮೊದ್ ಗಣಪತಿ, ಉಪಾಧ್ಯಕ್ಷೆ ಮಂಜುಳ, ಪಿ.ಡಿ.ಓ ತಿಮ್ಮಯ್ಯ ಹಾಗೂ ಸದಸ್ಯರು ಹಾಜರಿದ್ದರು.

ಬಾಲ ಗೋಕುಲ ವತಿಯಿಂದ ಸಂಭ್ರಮದಿಂದ ಜರುಗಿದ ಶ್ರೀಕೃಷ್ಣ ಜನ್ಮಾಷ್ಟಮಿ & ಛದ್ಮವೇಷ ಸಮಾಗಮ

ಮಡಿಕೇರಿ : ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಬಾಲ ಗೋಕುಲ ಮಡಿಕೇರಿ ವತಿಯಿಂದ ಮಡಿಕೇರಿಯ ಮಹದೇವಪೇಟೆಯಲ್ಲಿರುವ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ʼಶ್ರೀ ಕೃಷ್ಣ, ರುಕ್ಮಣಿ, ರಾಧೆ, ದೇವಕಿ, ಯಶೋಧೆ ಹಾಗೂ ವಸುದೇವರʼ ಛದ್ಮವೇಷ ಸಮಾಗಮ ಕಾರ್ಯಕ್ರಮ ನಡೆಯಿತು. ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಬಾಲಗೋಕುಲ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖರಾದ ಉಮೇಶ್‌, ನೈತಿಕ ವೌಲ್ಯ ಕುಸಿಯುತ್ತಿರುವ ಈ ಕಾಲಘಟ್ಟದಲ್ಲಿ ಸಾಮಾಜಿಕ ಅಧಃಪತನ ಉಂಟಾಗುತ್ತಿದ್ದು, ಮಾನವೀಯ ವೌಲ್ಯ ಬೆಳೆಸುವ ಸಾಂಸ್ಕೃತಿಕ […]

ಕುಶಾಲನಗರ : ಧರ್ಮಸ್ಥಳ ವಿರೋಧಿಗಳ ವಿರುದ್ಧ ಪ್ರತಿಭಟನೆ – ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್‌ ಕೆರೆಹಳ್ಳಿ ಪೊಲೀಸ್‌ ವಶಕ್ಕೆ..!

ಕುಶಾಲನಗರ : ಧರ್ಮಸ್ಥಳ ವಿರುದ್ಧ ಕೆಲವರು ಷಡ್ಯಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ವಿವಿಧ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದವು. ಈ ಕಾರ್ಯಕ್ರಮದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೆಹಳ್ಳಿ(punith kerehalli) ಮುಖ್ಯ ಭಾಷಣ ಮಾಡಬೇಕಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಪುನೀತ್‌ಗೆ ಪೊಲೀಸರು ಅವಕಾಶ ನೀಡಲಿಲ್ಲ. ವಶಕ್ಕೆ ಪಡೆಯಲು ಮುಂದಾದಾಗ ಸಂಘಟನೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ನಂತರ ಅಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೂಚಿಸಿದ ಪುನೀತ್‌ ಅಲ್ಲಿಂದ ತೆರಳಿದರು. ಈ ಬೆಳವಣಿಗೆಯಿಂದ […]

ಸುಳ್ಯ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯೆ..!

ಸುಳ್ಯ : ಪಿಜಿಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಅಭಿ(20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕೊಡಗು ಜಿಲ್ಲೆಯ ವೀರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ ಅಭಿ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪಿಜಿಯಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದು, ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.  ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Power Cut

ಪೊನ್ನಂಪೇಟೆ ಹಾಗೂ ಶ್ರೀಮಂಗಲ ವಿದ್ಯುತ್ ಉಪ ಕೇಂದ್ರದಲ್ಲಿ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆ, ಎಫ್1 ನಲ್ಲೂರು, ಎಫ್2 ಬಾಳೆಲೆ, ಎಫ್4 ತಿತಿಮತಿ, ಎಫ್5 ಪಾಲಿಬೆಟ್ಟ, ಎಫ್6 ಬೇಗೂರು, ಎಫ್7 ಗೋಣಿಕೊಪ್ಪ, ಎಫ್8 ಪೊನ್ನಂಪೇಟೆ, ಎಫ್9 ಹಾತೂರು, ಎಫ್10 ಹೈಸೊಡ್ಲೂರು, ಎಫ್1 ಬಿರುನಾಣಿ, ಎಫ್2 ಕುಟ್ಟ, ಎಫ್3 ಶ್ರೀಮಂಗಲ, ಎಫ್4 ಕಾನೂರು, ಎಫ್5 ಕೆ.ಬಾಡಗ, ಎಪ್6 ಬೀರುಗ, ಎಫ್7 ಟಿ.ಶೆಟ್ಟಗೇರಿ, ಈ ಫೀಡರ್‍ಗಳಿಂದ ಹೊರಹೊಮ್ಮುವ ಸುಳುಗೋಡು, ಕೋಣನಕಟ್ಟೆ, ಕೊಟ್ಟಗೇರಿ, ದೇವನೂರು, ಕಿರಗೂರು, ನಿಟ್ಟೂರು, ಜಾಗಲೆ, ಅರವತೋಕ್ಲು, ದೇವರಪುರ, ಕಾಯಿಮನೆ, […]

🛑 *ದಾಖಲೆಯ ಬೆನ್ನೇರಿ ʼಸು ಫ್ರಂ ಸೋʼ ಯಶಸ್ಸಿನ ಓಟ – ಸ್ಯಾಟಲೈಟ್‌ ಮತ್ತು ಡಿಜಿಟಲ್‌ ಹಕ್ಕು 5.5 ಕೋಟಿ ರೂ.ಗೆ ಮಾರಾಟ..!

ಬೆಂಗಳೂರು : ಕನ್ನಡ ಚಿತ್ರೋದ್ಯಮದಲ್ಲಿ ʼಸು ಫ್ರಂ ಸೋʼ ಹಲವು ದಾಖಲೆಗಳನ್ನ ನಿರ್ಮಿಸುತ್ತಾ ಯಶಸ್ಸಿನ ಓಟ ಮುಂದುವರೆಸಿದೆ. 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್‌ ಮಾಡಿರುವ ಚಿತ್ರ ಈಗ ಸ್ಯಾಟಲೈಟ್‌ ಮತ್ತು ಡಿಜಿಟಲ್‌ ಹಕ್ಕು ಮಾರಾಟದಲ್ಲಿಯೂ ದಾಖಲೆ ನಿರ್ಮಿಸಿದೆ. ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್‌ ಪ್ರಸಾರ ಹಕ್ಕನ್ನು ಕಲರ್ಸ್‌ ಮತ್ತು ಹಾಟ್‌ಸ್ಟಾರ್‌ ಸಂಸ್ಥೆ ಪಡೆದುಕೊಂಡಿದೆ. ಬರೋಬ್ಬರಿ ಐದೂವರೆ ಕೋಟಿ ರೂಪಾಯಿಗೆ ಹಕ್ಕು ಮಾರಾಟವಾಗಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಭಾರತದ ಎಲ್ಲಾ ಭಾಷೆಯ ಹಕ್ಕು ಖರೀದಿಯಾಗಿದ್ದು, ಕಲರ್ಸ್‌ […]

ಮೊಬೈಲ್ ಫೋಟೋಗಳಿಂದ ಛಾಯಾಗ್ರಾಹಕರ ವೃತ್ತಿ ಬದುಕಿಗೆ ಆತಂಕ – ಆವೃತ್ತಿ ಮಹದೇವಪ್ಪ

ಕುಶಾಲನಗರ : ಮೊಬೈಲ್ ಫೋಟೋಗ್ರ‍್ರಫಿ ಪರಿಣಾಮ ವೃತ್ತಿಪರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್‌ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕುಶಾಲನಗರದ ಗೌಡ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಛಾಯಾಗ್ರಾಹಕರು ಒಂದೇ ನಾಣ್ಯದ ಎರಡು ಮುಖವೆಂದು ಬಣ್ಣಿಸಿದ […]

ಮುಜರಾಯಿ ಸಚಿವರನ್ನು ಭೇಟಿಯಾದ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯ ಆಡಳಿತ ವ್ಯವಸ್ಥಾಪನಾ ಸಮಿತಿ

ಮಡಿಕೇರಿ : ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿಯಾಗಿ ಸಭೆ ನಡೆಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಸಲ್ಲಿಸಿದರು. ನಂತರ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಯೋಜನಾ ವರದಿ ತಯಾರಿ ಮಾಡಿ ವರದಿ […]

Power Cut: ನಾಳೆ ಕೊಡಗಿನ ಹಲವೆಡೆ ವಿದ್ಯುತ್ ಕಡಿತ: ಯಾವೆಲ್ಲ ಪ್ರದೇಶಗಳಲ್ಲಿ?

Power Cut

220/66/11 ಕೆ.ವಿ ಕುಶಾಲನಗರ, 66/11 ಕೆ.ವಿ ಸುಂಟಿಕೊಪ್ಪ, 33/11 ಕೆವಿ ಸೋಮವಾರಪೇಟೆ ಹಾಗೂ 66/11 ಕೆವಿ ಮಾದಾಪುರ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕೈಗೆತ್ತಿಕೊಳ್ಳಲಾಗುದರಿಂದ ಆಗಸ್ಟ್, 20 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ, ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕಾನ್‍ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಸುಂಟಿಕೊಪ್ಪ, ಮಾದಾಪುರ, ಚೆಟ್ಟಳ್ಳಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ […]

ಕೊಡಗು ಜಿಲ್ಲಾ ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಟೆಂಡರ್ ಆಹ್ವಾನ

Tender invitation for various posts

ಕೊಡಗು (Kodagu) ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು(ಕಂಪ್ಯೂಟರ್ ಆಪರೇಟರ್), ವಾಹನ ಚಾಲಕರು ಮತ್ತು ಡಿ ಗ್ರೂಪ್ ಹುದ್ದೆಗೆ ಸೇವೆಯನ್ನು ಬಾಹ್ಯ ಮೂಲಕ ಪಡೆಯಲು ಇ-ಪ್ರೊಕ್ಯೂರ್ ಮೆಂಟ್ ಮುಖಾಂತರ ಟೆಂಡರ್ ಆಹ್ವಾನಿಸಲಾಗಿದೆ. ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ವಾಹನ ಚಾಲಕರು, ಗ್ರೂಪ್ ‘ಡಿ’ ಮತ್ತು ಸ್ವೀಪರ್ ಹುದ್ದೆಗಳ ಪೈಕಿ ಕೆಲವು ಹುದ್ದೆಗಳಿಗೆ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ವರೆಗೆ ಅಥವಾ ಸರ್ಕಾರದಿಂದ ಹುದ್ದೆಗಳು ನೇರ […]