17ನೇ ಆವೃತ್ತಿ ಈಶ ಗ್ರಾಮೋತ್ಸವ – ಕರ್ನಾಟದಲ್ಲಿ 700ಕ್ಕೂ ಹೆಚ್ಚು ತಂಡಗಳು, 8100ಕ್ಕೂ ಹೆಚ್ಚು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ

ಮಡಿಕೇರಿ : ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ ಈಶ(isha) ಗ್ರಾಮೋತ್ಸವ 17ನೇ ಆವೃತ್ತಿ ಕರ್ನಾಟಕದಲ್ಲಿ ಈಗಾಗಲೆ ಆರಂಭವಾಗಿದ್ದು, 700ಕ್ಕೂ ಹೆಚ್ಚು ತಂಡಗಳು, 8,100ಕ್ಕೂ ಹೆಚ್ಚು ಆಟಗಾರರು ಪಾಲ್ಗೊಳ್ಳುತ್ತಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖರು, ಕರ್ನಾಟಕದ 18 ಜಿಲ್ಲೆಗಳಲ್ಲಿ 19 ಕ್ಲಸ್ಟರ್ಗಳಲ್ಲಿ ನಡೆಯುತ್ತಿದೆ. ಎಂಟು ಕ್ಲಸ್ಟರ್ಗಳಲ್ಲಿ ಥ್ರೋಬಾಲ್ ಪಂದ್ಯಾವಳಿ ನಡೆಯುತ್ತವೆ. ಪುರುಷರ ವಿಭಾಗದಲ್ಲಿ ವಾಲಿಬಾಲ್ ಮತ್ತು ಮಹಿಳೆಯರ ವಿಭಾಗದಲ್ಲಿ ಥ್ರೋಬಾಲ್ ನಡೆಯಲಿದೆ. ಫೈನಲ್ನಲ್ಲಿ ಪ್ಯಾರಾ ವಾಲಿಬಾಲ್ ಪ್ರದರ್ಶನ ಪಂದ್ಯವೂ ಜರುಗಲಿದೆ. ರಾಜ್ಯದಲ್ಲಿ ಕ್ಲಸ್ಟರ್ […]
ರಸ್ತೆ ಗುಂಡಿ ಮುಚ್ಚಿದ ಪೊಲೀಸ್ ಸಿಬ್ಬಂದಿ – ಜನರ ಆಕ್ರೋಶದ ಬಳಿಕ ನಗರಸಭೆ ಮಾಡಿದ್ದೇನು..!?

ಮಡಿಕೇರಿ : ನಗರದ ಅಬ್ಬಿಫಾಲ್ಸ್ ರಸ್ತೆಯಲ್ಲಿ ಗುಂಡಿಗಳಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ವಾಹನ ದಟ್ಟಣೆ ಕೂಡಾ ದೊಡ್ಡ ಪ್ರಮಾಣದಲ್ಲಿ ಆಗುತ್ತಿತ್ತು. ಹೀಗಾಗಿ ಆಗಸ್ಟ್ 17ರಂದು ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ರಸ್ತೆ ಮಧ್ಯೆ ನಿರ್ಮಾಣವಾಗಿದ್ದ ಗುಂಡಿಗಳಿಗೆ ಕಲ್ಲು ಹಾಕಿ ಮುಚ್ಚಿ ವಾಹನ ಸಂಚಾರ ಸುಗಮವಾಗಲು ಶ್ರಮಿಸಿದ್ದರು. ಆ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದನ್ನು ಕಂಡ ಜನ ನಗರಸಭೆ ವಿರುದ್ಧ ತೀವ್ರವಾಗಿ ಆಕ್ರೋಶ ಹೊರಹಾಕಿದ್ದರು. ಇದಾದ ಎರಡೇ ದಿನದಲ್ಲಿ ನಗರಸಭೆ ಅಲರ್ಟ್ ಆಗಿದೆ. ಎಚ್ಚೆತ್ತಿರುವ ನಗರಸಭೆ ಎಂ […]
ತೊಂಬತ್ತುಮನೆ : ಅಂಗನವಾಡಿ ನಿವೃತ್ತ ಕಾರ್ಯಕರ್ತೆ ಶೀಲಾವತಿಯವರಿಗೆ ಬೀಳ್ಕೊಡುಗೆ

ಮಡಿಕೇರಿ : ತೊಂಬತ್ತುಮನೆ ಅಂಗನವಾಡಿ ಕಾರ್ಯಕರ್ತೆಯಾಗಿ 36 ವರ್ಷ ಕಾರ್ಯನಿರ್ವಹಿಸಿದ ಅಮ್ಮಚಳಿಯಂಡ ಎಂ.ಬಿ. ಶೀಲಾವತಿ ಅವರು ಇತ್ತೀಚೆಗೆ ನಿವೃತ್ತರಾದರು. ಇವರನ್ನು ಇಲಾಖೆ ಹಾಗೂ ಸಹೋದ್ಯೋಗಿ ಮಿತ್ರರು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಟ್ಟರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂರ್ನಾಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಶೀಲಾವತಿ ಅವರನ್ನು ಗೌರವಿಸಿದರು.
ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ದಿಬ್ಬಕ್ಕೆ ಡಿಕ್ಕಿಯಾದ KSRTC ಬಸ್..!

ಮಾದಾಪುರ : ಕೆಎಸ್ಆರ್ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಸರಿದ ಘಟನೆ ಮುಟ್ಲುವಿನಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಇಲ್ಲಿನ ಸುಬ್ರಹ್ಮಣ್ಯ ದೇವಾಲಯ ಬಳಿ ನಿಯಂತ್ರಣ ಕಳೆದುಕೊಂಡಿದೆ. ರಸ್ತೆ ಬದಿಗೆ ಸರಿದು ಅಲ್ಲೇ ಇದ್ದ ಸಣ್ಣ ದಿಬ್ಬಕ್ಕೆ ಡಿಕ್ಕಿಯಾಗಿ ನಿಂತಿದೆ. ಬಸ್ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಸ್ವಾತಂತ್ರ್ಯ ದಿನ ರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಮಹತ್ವದಾಗಿದ್ದು – ಪ್ರೊ. ಅಶೋಕ ಸಂಗಪ್ಪ ಆಲೂರ

ಕುಶಾಲನಗರ(kushalanagar) : ನಮ್ಮ ಭಾರತ ದೇಶದ ಸ್ವಾತಂತ್ರ್ಯದ ದಿನವು ರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಮಹತ್ವದಾಗಿದ್ದು, ಶತಮಾನಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ದೇಶ ವಿಮೋಚನೆ ಹೊಂದಿದ ಸರ್ವ ಶ್ರೇಷ್ಠ ದಿನವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ(Ashoka sangappa Aloora) ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದಂತಹ ಅದಮ್ಯ ಚೈತನ್ಯಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ, […]
ಹೆಗ್ಗಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವ ಸಂಭ್ರಮ

ವೀರಾಜಪೇಟೆ : ಹೆಗ್ಗಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ ನೆರವೇರಿಸಿದರು. ಧ್ವಜವಂದನೆಯನ್ನು ಕಾಫಿ ಬೆಳೆಗಾರರಾದ ಕೋಡಿರ ಟಿ. ಗಣಪತಿ ನೆರವೇರಿಸಿದರು. ಶಾಲೆಯ ಸಹ ಶಿಕ್ಷಕಿ ಕಮರುನ್ನಿಸ, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರುಗಳು, ಶಾಲೆಯ ಸಿಬ್ಬಂದಿ, ಪೋಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸ್ವಾತಂತ್ರ್ಯೋತ್ಸವ ಅಂಗವಾಗಿ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸ್ವಾತಂತ್ರ್ಯೋತ್ಸವ ಅಂಗವಾಗಿ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕಂಡಂಗಾಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವಿರಾಜಪೇಟೆ : 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಂಡಂಗಾಲದ ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಬೇರಳಿನಾಡು ವತಿಯಿಂದ ಶುಕ್ರವಾರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಂಡಂಗಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದ ನೇತೃತ್ವವನ್ನು ಯುನೈಟೆಡ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೂಕಚಂಡ ಪ್ರಸನ್ನ ಸುಬ್ಬಯ್ಯ ವಹಿಸಿದ್ದರು. ಇದಕ್ಕೂ ಮೊದಲು ಶಾಲಾ ಆವರಣದಲ್ಲಿ ಧ್ವಜಾರೋಹಣ ನೆರವೇರಿತು. ಮೂಕಚಂಡ ಪ್ರಸನ್ನ ಸುಬ್ಬಯ್ಯ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಧ್ಯಾಹ್ನದವರೆಗೆ ಶಾಲಾ ಆವರಣವನ್ನು ಸಂಸ್ಥೆಯ […]
ಗೋಣಿಕೊಪ್ಪ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಗೋಣಿಕೊಪ್ಪ : ಗೋಣಿಕೊಪ್ಪ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಕುಲ್ಲಚಂಡ ಪ್ರಮೋದ್ ಗಣಪತಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯರು ಹಾಗೂ ಸ್ವಾತಂತ್ರ್ಯ ಹೋರಾಟಗಾರ ಟ್ರಸ್ಟ್ ಸಂಚಾಲಕ ಅಜಿತ್ ಅಯ್ಯಪ್ಪ ಧ್ವಜಾರೋಹಣ ನೆರವೇರಿಸಿದರು. ಸಮೀರ್ ಮುಖ್ಯ ಭಾಷಣ ಮಾಡಿದರು. ಗೋಣಿಕೊಪ್ಪ ಕಾಂಗ್ರೆಸ್ ಉಪಾಧ್ಯಕ್ಷ ನಾಯಂಡಿರ ಶಿವಾಜಿ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಂಶಿಫ್, ಪಂಚಾಯಿತಿ ಸದಸ್ಯರಾದ ಚೆಪ್ಪುಡಿರ ಧ್ಯಾನ್ ದೇವಯ್ಯ , ಗೋಣಿಕೊಪ್ಪಲು ಗ್ರಾಮ ಪಂಚಾಯತಿ […]
ಎಂ. ಬಾಡಗ 01 ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

ಮೂರ್ನಾಡು : ಎಂ ಬಾಡಗ 1 ಅಂಗನಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಧ್ವಜದೊಂದಿಗೆ ಫೋಟೋ ಕ್ಲಿಕ್ ಮಾಡಿ ಅಪ್ಲೋಡ್ ಮಾಡಿದರು. ಕೇಂದ್ರದ ವಿದ್ಯಾರ್ಥಿಗಳಿಗೆ ತಿರಂಗ್ ಬ್ಯಾಡ್ಜ್ ವಿತರಿಸಲಾಯಿತು. ಮಕ್ಕಳು ಹಾಗೂ ಕೇಂದ್ರದ ಸಿಬ್ಬಂದಿ ದೇಶಭಕ್ತಿ ಗೀತೆ ಹಾಡಿದರು. ದಿನದ ಸಂಭ್ರಮದ ಪ್ರಯುಕ್ತ ಸಿಹಿ ವಿತರಿಸಲಾಯಿತು.
ಅಂಗಾಂಗ ದಾನದ ನಾಯಕತ್ವದತ್ತ ಕರ್ನಾಟಕದ ಪಯಣ – ತಪ್ಪು ಕಲ್ಪನೆ ಬಿಟ್ಟು ಅಂಗಾಂಗ ದಾನದಲ್ಲಿ ಭಾಗಿಯಾಗಿ…

ಲೇಖನ : ಡಾ. ಸುನೀಲ್ ಕಾರಂತ್, ಬೆಂಗಳೂರು ಅಂಗಾಂಗ ದಾನದ ಪ್ರತಿಜ್ಞೆ ಮಾಡುವಲ್ಲಿ ಕರ್ನಾಟಕವು ಈಗ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಇದು ಹೆಮ್ಮೆಯ ಸಂಗತಿಯಾಗಿದ್ದು, ಜೀವ ಉಳಿಸುವ ಈ ಕಾರ್ಯದ ಬಗ್ಗೆ ಜಾಗೃತಿ ನಿಧಾನವಾಗಿ ಬೆಳೆಯುತ್ತಿದೆ ಎಂಬುದನ್ನು ತೋರಿಸುತ್ತದೆ. ಆದರೆ, ಸಾಗಬೇಕಾದ ದಾರಿ ಇನ್ನೂ ಬಲು ದೂರವಿದೆ. ಪ್ರತಿದಿನ ನಮ್ಮ ಆಸ್ಪತ್ರೆಯಲ್ಲಿ ಹೃದಯ, ಯಕೃತ್ತು, ಮೂತ್ರಪಿಂಡ, ಶ್ವಾಸಕೋಶ ಅಥವಾ ಕರುಳು ಕಸಿಗಾಗಿ ರೋಗಿಗಳು ಹತಾಶೆಯಿಂದ ಕಾಯುತ್ತಿರುವುದನ್ನು ನಾವು ನೋಡುತ್ತೇವೆ. ಅವರಲ್ಲಿ ಅನೇಕರಿಗೆ ಬಹಳ ಸಮಯ ತಗಲುತ್ತದೆ. […]