ಬನ್ನಿ ರಥ ಎಳೆಯೋಣ… ಆದಿಯೋಗಿ ಶಿವಾಂಗ ರಥಯಾತ್ರೆ ಡಿಸೆಂಬರ್‌ 22ಕ್ಕೆ ಮಡಿಕೇರಿ ಪ್ರವೇಶ

ಮಡಿಕೇರಿ : ಕೊಯಮತ್ತೂರಿನ ಈಶ ಫೌಂಡೇಷನ್‌ ವತಿಯಿಂದ ಹಮ್ಮಿಕೊಂಡಿರುವ ಆದಿಯೋಗಿ ಶಿವಾಂಗ ರಥಯಾತ್ರೆ ಡಿಸೆಂಬರ್‌ 22ರಂದು ಮಡಕೇರಿ ಪ್ರವೇಶಿಸಲಾಗಿದೆ. ಉಡುಪಿಯಿಂದ ಆರಂಭವಾಗಿರುವ ರಥಯಾತ್ರೆ ಡಿ.21ರಂದು ಸಂಪಾಜೆ ಮೂಲಕ ಕೊಡಗು ಪ್ರವೇಶಿಸಲಿದ್ದು, ಅಂದು ಮದೆನಾಡಿನಲ್ಲಿ ತಂಗಲಿದೆ. ಮಾರನೇ ದಿನ ಅಲ್ಲಿಂದ ಹೊರಟು ಸಂಜೆ ವೇಳೆಗೆ ಮಡಿಕೇರಿ ನಗರಕ್ಕೆ ಬರಲಿದೆ. ವಿಶೇಷ ವಿನ್ಯಾಸದ ಈ ರಥವನ್ನು ಭಕ್ತರು ನೆರವಿನಿಂದ ಎಳೆಯುತ್ತಾ ಸಾಗುವುದು ವಿಶೇಷ. ಮಡಿಕೇರಿಗೆ ಬರುವ ರಥ ಜನರಲ್‌ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಹಳೆ ಖಾಸಗಿ ಬಸ್‌ […]

ಬೇಟಿ ಬಚಾವೋ ಬೇಟಿ ಪಡಾವೋ: ಬಾಲ್ಯ ವಿವಾಹ ನಿಷೇಧದ ಕುರಿತು ಮಾಹಿತಿ ಕಾರ್ಯಗಾರ

workshop

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಹಯೋಗದೊಂದಿಗೆ 2025-26 ನೇ ಸಾಲಿನ ಬೇಟಿ ಬಚಾವೋ ಬೇಟಿ ಪಡಾವೋ ಕಾಯಕ್ರಮದಡಿಯಲ್ಲಿ ಬಾಲ್ಯ ವಿವಾಹ ನಿಷೇಧದ ಕುರಿತು ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಶಾಲಾ ಮಕ್ಕಳಿಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ […]

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಡಿಸೆಂಬರ್, 18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ, ಬಿಳಿರೆಕೊಪ್ಪ, ಮಟ್ನಳ್ಳಿ, ಕಿಬ್ಬೆಟ್ಟ, ಅಯ್ಯಪ್ಪ ಕಾಲೋನಿ, ದೊಡ್ಡಹನಕೋಡು, ಗೆಜ್ಜೆಹನಕೋಡು, ಕಾಡುಮನೆ, ಚಿಕ್ಕತೊಳೂರು, ಕಾಗಡೀಕಟ್ಟೆ, ದೊಡ್ಡಮಳ್ತೆ, ಒಳಗುಂದ, ಸುಳಿಮಳ್ತೆ, ಹೊನ್ನಾವಳ್ಳಿ, ಕೂಗೆಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಕಂಡಂಗಾಲದಲ್ಲಿ ಕೊಡವ ಮುಸ್ಲಿಮರ ಶೂಟಿಂಗ್ ಸ್ಪರ್ಧೆ

  ಪೊನ್ನಂಪೇಟೆ: ಒಂದು ಕಾಲದಲ್ಲಿ ರಾಜ ಮನೆತನದವರ ಐಷಾರಾಮಿ ಕ್ರೀಡೆಯಾಗಿದ್ದ ಶೂಟಿಂಗ್ ಇಂದು ಜನಸಾಮಾನ್ಯರ ಕ್ರೀಡೆಯಾಗಿ ಮಾರ್ಪಟ್ಟಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಶೂಟಿಂಗ್ಸ್ ಸ್ಪರ್ಧೆಗಳು ಇತ್ತೀಚಿಗೆ ವ್ಯಾಪಕವಾಗಿ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಈ ಕಾರಣದಿಂದ ಕೊಡಗಿನಿಂದ ಮತ್ತಷ್ಟು ಶೂಟರ್ಸ್ ಗಳು ಉದಯಿಸುವ ಭರವಸೆಯಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಹೇಳಿದರು. ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಬಿಟ್ಟಂಗಾಲ ಸಮೀಪದ ಕಂಡಂಗಾಲದ ಜಿಎಂಪಿ ಶಾಲಾ ಮೈದಾನದಲ್ಲಿ […]

ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಲೋಕಾರ್ಪಣೆ

ಪೊನ್ನಂಪೇಟೆ: ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಆದರೆ ಅವರಿಗೆ ಪೂರಕ ವ್ಯವಸ್ಥೆ ಇಲ್ಲದಿರುವ ಕಾರಣ ಯಶಸ್ಸು ಸಾಧಿಸಲಾಗುತ್ತಿಲ್ಲ. ಆದ್ದರಿಂದ ಅರ್ಹ ಕ್ರೀಡಾ ಪ್ರತಿಭಗಳಿಗೆ ಸರಕಾರೇತರ ಸಂಘ ಸಂಸ್ಥೆಗಳ ಪ್ರೋತ್ಸಾಹ ತೀರಾ ಅಗತ್ಯ ಎಂದು ಕೊಡಗು ಜಿಲ್ಲಾ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹೇಳಿದರು. ಕಕ್ಕಬ್ಬೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಮಕ್ಕಳಿಗೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವುದರ ಮೂಲಕ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ […]

ಪ್ರಧಾನಿ ಮೋದಿ ಬಗ್ಗೆ ಯುವಕರಿಂದ ಅವಹೇಳನ – ಬಿಜೆಪಿಗರು ಬಹಿರಂಗವಾಗಿ ಕ್ಷಮೆ ಯಾಚಿಸಲಿ – ತೆನ್ನೀರ ಮೈನಾ ಆಗ್ರಹ

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನ ಮಾಡಿ ಬಂಧಿತರಾಗಿರುವ ಕಿಡಿಗೇಡಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿ ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೋಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ಷಿಪ್ರಗತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. […]

ಪತ್ನಿಯನ್ನು ಹ*ತ್ಯೆಗೈದ ಪತಿಗೆ ಕಠಿಣ ಜೀವಾವಧಿ ಶಿಕ್ಷೆ – ವೀರಾಜಪೇಟೆ ನ್ಯಾಯಾಲಯ ತೀರ್ಪು

ವೀರಾಜಪೇಟೆ : ಪತ್ನಿಯ ಕೊ*ಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ವೀರಾಜಪೇಟೆ ತಾಲೂಕಿನ ಕಾಕೋಟುಪರಂಬುವಿನ ಚೋಮಚ್ಚರ ಪಿ. ಲವ(30) ಶಿಕ್ಷೆಗೊಳಗಾದ ವ್ಯಕ್ತಿ. ಈತ 2022 ಏಪ್ರಿಲ್‌ 28ರಂದು ತನ್ನ ಪತ್ನಿ ಸುಮಿತ್ರಳನ್ನು ಹ*ತ್ಯೆಗೈದಿದ್ದ. ಪತ್ನಿ ತನಗೆ ಹೇಳದೆ ಮನೆಯಿಂದ ಹೋಗುತ್ತಾಳೆ ಎಂಬ ವಿಚಾರವಾಗಿ ಗಲಾಟೆ ಶುರುವಾಗಿ, ನಂತರ ಕಬ್ಬಿಣದ ಪೈಪ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ಪರಿಣಾಮ ಆಕೆ ಮೃತಪಟ್ಟಿದ್ದರು. ಈ ಸಂಬಂದ ವೀರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ 2ನೇ […]

ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಪ್ರಯುಕ್ತ ಅಖಂಡ ಏಕಾಹ ಭಜನೆ ಡಿ.14ಕ್ಕೆ

ಮಡಿಕೇರಿ : ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಪ್ರಯುಕ್ತ ಅಖಂಡ ಏಕಾಹ ಭಜನೆ ಕಾರ್ಯಕ್ರಮ ಡಿಸೆಂಬರ್‌ 14(ಭಾನುವಾರ) ಮಡಿಕೇರಿಯಲ್ಲಿ ನಡೆಯಲಿದೆ. ಶ್ರೀ ಆಂಜನೇಯ ದೇವಾಲಯದಲ್ಲಿ ಅಂದು ಬೆಳಗ್ಗೆ 6.10ರಿಂದ ಭಜನೆ ಆರಂಭವಾಗಲಿದ್ದು, ಮಡಿಕೇರಿ ನಗರಸಭೆ ಅಧ್ಯಕ್ಷೆ ಕೆ.ಪಿ. ಕಲಾವತಿ ಭದ್ರದೀಪ ಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಜಿಲ್ಲೆಯ ವಿವಿಧೆಡೆಯ 15 ತಂಡಗಳಿಂದ ನಿರಂತರ ಭಜನೆ ಇರಲಿದೆ. ಸಂಜೆ ವಿನಾಯಕ ಸೇವಾ ಟ್ರಸ್ಟ್‌ ಕತ್ತಲೆಕಾಡು, ಆದಿಶಕ್ತಿ ವಿನಾಯಕ ಭಜನಾ ಮಂಡಳಿ ಉಡೋತ್‌ಮೊಟ್ಟೆ, ಮದೆ […]

ಪ್ರಧಾನಿ ಮೋದಿಯ ಅವಹೇಳನ ಪ್ರಕರಣ – ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷೆ ಕಲಾವತಿ. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಸ್ಪೈಸಸ್‌ ಅಂಗಡಿಯ ಮೂವರನ್ನು ಬಂಧಿಸಿದ ಪೊಲೀಸರು

ಮಡಿಕೇರಿ : ಸ್ಪೈಸಸ್‌ ಅಂಗಡಿಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ ರಾಣಿಪೇಟೆ ನಿವಾಸಿ ಫಹಾದ್ ಎಮ್‌.ಇ(31), ತ್ಯಾಗರಾಜ ಕಾಲನಿಯ ನಿವಾಸಿ ಬಾಸಿಲ್ ಎಂ.ಎಚ್.(29), ತ್ಯಾಗರಾಜ ಕಾಲೋನಿ ನಿವಾಸಿ ಸಮೀರ್ ಎಂ.ಎಂ.(31) ಬಂಧಿತರು. ಯುವಕರ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಕೀಳುಮಟ್ಟದ ಭಾಷೆ ಬಳಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅವರ ವಿರುದ್ಧ […]