ಏಪ್ರಿಲ್ 10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್

ಗೋಣಿಕೊಪ್ಪ: ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಮೂರನೇ ಆವ್ಲತ್ತಿಯ ಕೊಡವ ಲೆದರ್ ಬಾಲ್ ಕ್ರಿಕೆಟ್ (Cricket) ಲೀಗ್ ಏಪ್ರಿಲ್ 10 ರಿಂದ, 15 ದಿನಗಳವರೆಗೆ ಟಿ20 ಮಾದರಿಯಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. 10 ತಂಡಗಳು ಪೈಪೋಟಿ ನಡೆಸಲಿದ್ದು, ಸುಮಾರು 160 ಆಟಗಾರರು ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದ್ದಾರೆ. ಕೊಡವ ಜನಾಂಗದ ಯುವ ಸಮೂಹದಲ್ಲಿ ಲೆದರ್ ಬಾಲ್ ಆಟಗಾರರನ್ನು ದೇಶಿಯ ತಂಡ ಪ್ರತಿನಿಧಿಸುವಂತಾಗಬೇಕು ಎಂಬ ಕನಸ್ಸಿನೊಂದಿಗೆ ಟೂರ್ನಿ ಆಯೋಜಿಸುತ್ತಿದ್ದು, ವೃತ್ತಿಪರ ಕ್ರಿಕೆಟ್ಗೆ […]
ಶ್ರೀ ಮುತ್ತಪ್ಪ ದೇವಸ್ಥಾನಕ್ಕೆ ₹1.20 ಲಕ್ಷ ಮೌಲ್ಯದ ಅನ್ನ ಶೇಖರಣಾ ಪಾತ್ರೆ ಕೊಡುಗೆ

ವಿರಾಜಪೇಟೆ: ಪಟ್ಟಣದ ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಸುಮಾರು ಒಂದು ಲಕ್ಷದ ಇಪ್ಪತ್ತು ಸಾವಿರ ರುಪಾಯಿ ಮೌಲ್ಯದ ಬೃಹತ್ ಅನ್ನ ಶೇಖರಿಸುವ ಸ್ಟೀಲ್ ಪಾತ್ರೆಯನ್ನು ಉದಾರವಾಗಿ ನೀಡಲಾಯಿತು. ವರ್ಷಂಪ್ರತಿ ಜರುಗುವ ಶ್ರೀ ಮುತ್ತಪ್ಪ ತೆರೆ ಮಹೋತ್ಸವದಲ್ಳಿ ದಾಸೋಹದ ಸೇವೆಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಕೊಡುಗೆಯನ್ನು ದೇವಸ್ಥಾನಕ್ಕೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಮುತ್ತಪ್ಪ ಮಲಯಾಳಿ ಸಮಾಜದ ಅಧ್ಯಕ್ಷರಾದ ಪಿ. ಜಿ. ಸುಮೇಶ್ ರವರು ಪಾತ್ರೆಯನ್ನು ಶ್ರೀ ಮುತ್ತಪ್ಪ ದೇವಸ್ಥಾನದ […]
ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುವ ಸ್ವ-ಉದ್ಯೋಗ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವತಿಯರಿಗೆ ಮಾತ್ರ ಅವಕಾಶ. ಆಸಕ್ತಿ ಉಳ್ಳವರು ಸಂಸ್ಥೆಯನ್ನು ನೇರವಾಗಿ ಅಥವಾ ಕರೆ ಮಾಡಿ ಮಾಹಿತಿ ಪಡೆಯಬಹುದು. ಬ್ಯೂಟಿ ಪಾರ್ಲರ್ ತರಬೇತಿ: 35 ದಿನಗಳು. ಪ್ರಾರಂಭ 01.04.2026 ರಿಂದ 05.05.2026 ರ ವರೆಗೆ., ಮಹಿಳೆಯರ ಹೊಲಿಗೆ ತರಬೇತಿ: 31 ದಿನಗಳು. ಪ್ರಾರಂಭ 06.05.2026 […]
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡ ತನವನ್ನು ಬೆಳೆಸುವ ಕಾರ್ಯ ಮಾಡುತ್ತದೆ ಎಂದು ಸ. ಪ್ರ.ದ ಕಾಲೇಜಿನ ಪ್ರಾಂಶುಪಾಲೆ ಪ್ರೊ ಡಿ.ಕೆ. ಸರಸ್ವತಿ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ದಿ. ಸಾಹಿತಿ ಮುಲ್ಲೇಂಗಡ ಬೇಬಿ ಚೋಂದಮ್ಮ ಹಾಗೂ ಮಂಡೇಪಂಡ ಅಕ್ಕಮ್ಮ ಗಣಪತಿ […]
ಡಾ.ಐ.ಆರ್. ದುರ್ಗಾಪ್ರಸಾದ್ ವಿರುದ್ಧ ಅಪಪ್ರಚಾರಕ್ಕೆ ಖಂಡನೆ – ಆರೋಪಿಗಳ ಬಂಧನಕ್ಕೆ ಸಿಪಿಐ(ಎಂ) ಆಗ್ರಹ

ವೀರಾಜಪೇಟೆ : ಸಾಮಾಜಿಕ ಜಾಲತಾಣದಲ್ಲಿ ವೀರಾಜಪೇಟೆಯ ನಾಗರೀಕ ಸಮಿತಿಯ ಸಂಚಾಲಕರು, ಸಿಪಿಐ(ಎಂ) ಪಕ್ಷದ ಹಿರಿಯ ಜಿಲ್ಲಾ ಮುಖಂಡರಾದ ಡಾ. ಇ.ರಾ. ದುರ್ಗಾಪ್ರಸಾದ್ ಅವರನ್ನು ತೇಜೋವಧೆ, ವ್ಯಕ್ತಿನಿಂದನೆ ಹಾಹೂ ಅಪಪ್ರಚಾರ ಮಾಡಿ ಅವಮಾನಿಸಿದ್ದಾರೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ. ರಮೇಶ್ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಮೇಶ್, ವೀರಾಜಪೇಟೆಯಲ್ಲಿ ಹಲವಾರು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ದುರ್ಗಾಪ್ರಸಾದ್ ಒಬ್ಬ ಹುಟ್ಟು ಹೋರಾಟಗಾರ. ಅವರು ಎಂದಿಗೂ ಬಡವರ ಹೊಟ್ಟೆಗೆ ಹೊಡೆದವರಲ್ಲ. ಅನ್ಯಾಯದ ವಿರುದ್ದ ಹೋರಾಟ ಮಾಡುತ್ತಾ, ಜನಸಮಾನ್ಯರ, ಕಾರ್ಮಿಕರ […]
ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಲೋಕಾರ್ಪಣೆ

ಕುಶಾಲನಗರ : ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ನೂತನ ಭವನವನ್ನು ವಿಧಾನಸಭೆ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಲೋಕಾರ್ಪಣೆಗೊಳಿಸಿದರು. ಗೌಡ ಬಾಂಧವರು ಸಾಂಪ್ರಾದಾಯಿಕ ಉಡುಪಿನಲ್ಲಿ ಕಂಗೊಳಿಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಗೌಡ ಸಮಾಜ, ಸಂಘಟನೆ, ಯುವ ವೇದಿಕೆ ಹಾಗೂ ಮಹಿಳಾ ಒಕ್ಕೂಟದ ಪ್ರತಿನಿಧಿಗಳು ಆಗಮಿಸಿದ್ದರು. ಸಮುದಾಯ ಭವನಕ್ಕೆ ಧನಸಹಾಯ ನೀಡಿದವರು ಹಾಗೂ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಡಾ.ಮಂತರ್ ಗೌಡ, ಮಾತನಾಡಿ ಗೌಡ ಸಮುದಾಯ ಎಲ್ಲಾ ಕ್ಷೇತ್ರಗಳಿಗೂ ತನ್ನದೇ […]
ಕೊಡಗಿನ ಎಲ್ಪಿಜಿ ಗ್ಯಾಸ್ ಬಳಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ!

ಮಡಿಕೇರಿ:- ಜಿಲ್ಲೆಯಲ್ಲಿ ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು.ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, […]
ಇಸ್ರೋ ಅಹಮದಾಬಾದ್ ಕೇಂದ್ರಕ್ಕೆ ಗೋಣಿಕೊಪ್ಪದ ಪಿ.ಇ. ಮನ್ಸೂರ್ ಆಯ್ಕೆ

ಕೊಡಗಿನ ಗೋಣಿಕೊಪ್ಪದ ಪ್ರತಿಭಾನ್ವಿತ ಯುವಕ ಪಿ.ಇ. ಮನ್ಸೂರ್ ಅವರು ಅಹಮದಾಬಾದ್ನಲ್ಲಿರುವ ಇಸ್ರೋದ ಪ್ರತಿಷ್ಠಿತ ಸ್ಪೇಸ್ ಅಪ್ಲಿಕೇಶನ್ ಸೆಂಟರ್ (SAC) ಗೆ ಪ್ರಾಜೆಕ್ಟ್ ಅಸೋಸಿಯೇಟ್ ಆಗಿ ಆಯ್ಕೆಯಾಗುವ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ. ಗೋಣಿಕೊಪ್ಪದ ಕಾವೇರಿ ಹಿಲ್ಲಸ್ ನಿವಾಸಿ, ನಿವೃತ್ತ ಸೈನಿಕ ಪಿ.ಎಂ. ಇಬ್ರಾಹಿಂ ಹಾಗೂ ದೇವರಪುರ ಸರ್ಕಾರಿ ಶಾಲೆಯ ಶಿಕ್ಷಕಿ ಕೆ.ಇ. ಸಪೂರ ದಂಪತಿಯ ಪುತ್ರರಾದ ಮನ್ಸೂರ್, ಇತ್ತೀಚೆಗೆ ನಡೆದ ಇಸ್ರೋ (ISRO) ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ FASAL 2.0, IPCM […]
ಮಡಿಕೇರಿ: ಮಾಜಿ ನಗರಸಭೆ ಉಪಾಧ್ಯಕ್ಷ, ಹಿರಿಯ ಕಲಾವಿದ ಲಿಯಾಕತ್ ಅಲಿ ನಿಧನ

ಮಡಿಕೇರಿ: ಮಡಿಕೇರಿ ನಗರಸಭೆಯ ಮಾಜಿ ಉಪಾಧ್ಯಕ್ಷರು ಹಾಗೂ ಕೊಡಗಿನ ಹಿರಿಯ ಕಲಾವಿದರಾದ ಲಿಯಾಕತ್ ಅಲಿ (69) ಅವರು ಇಂದು ಬೆಳಿಗ್ಗೆ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗದೆ, ಸಾಂಸ್ಕೃತಿಕ ಲೋಕದಲ್ಲೂ ಗುರುತಿಸಿಕೊಂಡಿದ್ದರು. ಗಾಯಕರಾಗಿದ್ದ ಇವರು ಕಲೆ ಮತ್ತು ಸಾಹಿತ್ಯದ ಮೇಲೆ ಅಪಾರ ಅಭಿಮಾನ ಹೊಂದಿದ್ದರು. ವಿಶೇಷವಾಗಿ ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಲಿಯಾಕತ್ ಅಲಿ ಅವರು, ಐತಿಹಾಸಿಕ ‘ಗೋಕಾಕ್ ಚಳುವಳಿ’ಯೂ ಸೇರಿದಂತೆ ಜಿಲ್ಲೆಯ […]
ಆಧುನಿಕತೆಯ ಬರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತಿರುವುದು ವಿಷಾದನೀಯ: ವಿನೋದ್ ಮೂಡಗದ್ದೆ

ವಿರಾಜಪೇಟೆ: ಪೂರ್ವಜರು ಪ್ರಕೃತಿಯೊಂದಿಗೆ ಒಡನಾಟದೊಂದಿಗೆ ಬಾಳಿ ಬದುಕು ಕಂಡಿದ್ದರು. ಸುಖಿ ಜೀವನ ನಡೆಸುತಿದ್ದರು. ಇದೀಗ ಆಧುನಿಕತೆ ಎಲ್ಲಡೆ ಪಸರಿಸಿ ಪೂರ್ವಜರು ನಡೆಸಿಕೊಂಡು ಬಂದ ಜೀವನ ಪದ್ದತಿಯು ಕಣ್ಮರೆಯಾಗುತಿರುವುದನ್ನು ನಾವು ಮನಕಾಣುತಿದ್ದೇವೆ ಎಂದು ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ವಿನೋದ್ ಮೂಡಗದ್ದೆ ಅವರು ವಿಷಾದ ವ್ಯಕ್ತಪಡಿಸಿದರು. ಕೊಡಗು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಸಂತ ಅನ್ನಮ್ಮ ಪದವಿ ಕಾಲೇಜು ವಿರಾಜಪೇಟೆ, ಆಶ್ರಯದಲ್ಲಿ ಕಲ್ತೋಡು ನಾಂಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೦೬ ದಿನಕಾಲ ವಾರ್ಷಿಕ ವಿಶೇಷ […]