ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಮಡಿಕೇರಿ:- ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ ಚಾಲನೆ ದೊರೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಕಂದಾಯ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ನಗರಾಭಿವೃದ್ಧಿ, ಪೌರಾಡಳಿತ, ಕನ್ನಡ ಮತ್ತು ಸಂಸ್ಕøತಿ […]
ಮಡಿಕೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರತಿಭಟನೆ

ಸರ್ಕಾರಿ ಪ್ರಾಥಮಿಕ ಶಾಲೆಗಳ ಸೇವಾನಿರತ ಪದವೀದರ ಶಿಕ್ಷಕರಿಗೆ ಸಂಬಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕಡತಕ್ಕೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘದ ಪ್ರಮುಖರು ಹಾಗೂ ಶಿಕ್ಷಕರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಪ್ರಾಥಮಿಕ ಶಾಲಾ ಸೇವಾ ನಿರತ ಪದವೀಧರ ಶಿಕ್ಷಕರಿಗೆ ಸಂಬಂಧಿಸಿದಂತೆ ‘ವೃಂದ ಮತ್ತು ನೇಮಕಾತಿ’ ಆದೇಶದಿದ ತಿದ್ದುಪಡಿಯಿಂದ ಉಂಟಾಗಿರುವ ಸಮಸ್ಯೆಗಳನ್ನು […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ

ಗ್ರಂಥಾಲಯಗಳು ಜ್ಞಾನಾರ್ಜನೆಯ ಪ್ರಮುಖ ತಾಣವಾಗಿದ್ದು. ಸಮಾಜದ ಪ್ರಗತಿಗೆ ಹಾಗೂ ಪ್ರತಿ ಓದುಗರ ಬೆಳವಣಿಗೆಗೆ ಗ್ರಂಥಾಲಯ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವಿರಾಜಪೇಟೆ (Virajpet) ಕಾವೇರಿ ಕಾಲೇಜಿನ (Cauvery College) ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾದ ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥನ್ ರವರ 133 ನೇ ಜನ್ಮ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು ಪ್ರತಿವರ್ಷ ಆಗಸ್ಟ್ 12ರಂದು ಗ್ರಂಥಪಾಲಕರ ದಿನಾಚರಣೆ ಮಾಡುತ್ತಾ ಬಂದಿದ್ದೇವೆ. ಇಂದಿನ ಡಿಜಿಟಲ್ ಯುಗದಲ್ಲಿಯೂ […]
C & D ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕರೆ ನೀಡಿರುವ ಸೋಮವಾರಪೇಟೆ ಬಂದ್ಗೆ ಉತ್ತಮ ಪ್ರತಿಕ್ರಿಯೆ

ಸೋಮವಾರಪೇಟೆ : ಸಿ ಆಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಸೋಮವಾರಪೇಟೆ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಹೋರಾಟ ಸಮಿತಿಯು ತಾಲೂಕು ಬಂದ್ಗೆ ಕರೆ ನೀಡಿದ್ದು, ಸೋಮವಾರಪೇಟೆ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಇಲ್ಲಿನ ವಿವೇಕಾನಂದ ಸರ್ಕಲ್ ಬಳಿ ಸೇರಿದ ರೈತರು ವಾಹನ ಸಂಚಾರಕ್ಕೆ ತಡೆವೊಡ್ಡಿದರು. ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಅಂಗಡಿ ಮಳಿಗೆಗಳು ಬಂದ್ ಆಗಿವೆ. ಪ್ರತಿಭಟನೆ ವೇಳೆ ತಹಸೀಲ್ದಾರ್ ಕೃಷ್ಣಮೂರ್ತಿ, ಆರ್ಎಫ್ಒ ಶೈಲೇಂದ್ರ ಅವರನ್ನು ಸುತ್ತುವರೆದು ಆಕ್ರೋಶ […]
7.80 ಕೆಜಿ ಗಾಂಜಾ ಕೇರಳಕ್ಕೆ ಸಾಗಾಟ ಯತ್ನ – ಮಾಲು ಸಹಿತ ಆರೋಪಿಗಳು ವಶಕ್ಕೆ..!

ಮಡಿಕೇರಿ : ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೀರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಹುಣಸೂರಿನ ವಿಜಯನಗರದ ಅನೀಸ್ ಅಹಮದ್(45), ಹುಣಸೂರು ಪಟ್ಟಣದ ಸ್ಕೋರ್ ಬೀದಿ ನಿವಾಸಿ ಚೇತನ್(40) ಬಂಧಿತರು. ಗಾಂಜಾವನ್ನು ಕೇರಳಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ದಾಳಿ ಮಾಡಿದ್ದಾರೆ. ಬಂಧಿತರಿಂದ 7 ಕೆಜಿ 872 ಗ್ರಾಂ ತೂಕದ(2,50,000 ರೂ. ಮೌಲ್ಯದ) ಗಾಂಜಾ, ಸ್ವಿಫ್ಟ್ ಕಾರು, ಒಂದು ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ. ಪಡಿಸಲಾಗಿದೆ.
ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆ.೧೨ಕ್ಕೆ

ಮಡಿಕೇರಿ : ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆಗಸ್ಟ್ ೧೨ ರಂದು ಬೆಳಗ್ಗೆ ೯ ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಲಿದೆ. ಪ್ರಾಧಿಕಾರದ ಸಹಾಯಕ ನಿರ್ದೇಶಕರಾದ ಮಿನಿ ಉಣ್ಣಿರಾಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ಜವಾಹರ್ ನವೋದಯ ವಿದ್ಯಾಲಯ ೧೧ ನೇ ತರಗತಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೫-೨೬ ನೇ ಸಾಲಿನ ಖಾಲಿ ಇರುವ ೧೧ ನೇ ತರಗತಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸಿಬಿಎಸ್ಇ ಅಥವಾ ಮಾನ್ಯತೆ ಪಡೆದ ರಾಜ್ಯ ಮಂಡಳಿಯಿAದ ಹತ್ತನೇ ತರಗತಿ ಪಾಸಾಗಿದ್ದು, ಕನಿಷ್ಠ ಶೇ.೬೦ ಅಂಕಗಳನ್ನು ಪಡೆದಿರಬೇಕು. ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಕನಿಷ್ಠ ೬೦ ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಆನ್ಲೈನ್ ಮತ್ತು ಆಪ್ಲೈನ್ ಎರಡು ಮಾರ್ಗಗಳಲ್ಲಿ ಅವಕಾಶವಿದ್ದು, […]
ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಲು ಜಿಲ್ಲಾಡಳಿತ ಮನವಿ – ಏನು ಮಾಡ್ಬೇಕು? ಏನು ಮಾಡ್ಬಾರ್ದು..? ಇಲ್ಲಿದೆ ನೋಡಿ ಗೈಡ್ಲೈನ್ಸ್

ಮಡಿಕೇರಿ : ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಿನಾಂಕ ೨೦-೦೭-೨೦೧೬ ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ […]
Power Cut: ನಾಳೆ ಕೊಡಗಿನ ಹಲವೆಡೆ ವಿದ್ಯುತ್ ಕಡಿತ: ಯಾವೆಲ್ಲ ಪ್ರದೇಶಗಳಲ್ಲಿ ಪವರ್ ಕಟ್

66/11 ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಲ್ಲಿ ನಾಳೆ ಬೆಳಗ್ಗೆ 10.00 ರಿಂದ 5.00 ಗಂಟೆಯವರಗೆ ನಿರ್ವಹಣಾ ಕಾಮಗಾರಿ ನಡೆಯುವ ಕಾರಣದಿಂದ ಮಡಿಕೇರಿ ನಗರ, ರಾಜಾಸೀಟ್ ರಸ್ತೆ, ಗದ್ದಿಗೆ, ಕೋಟೆ, ಕುಂಡಮೇಸ್ತ್ರಿ, ಒಂಕಾರೇಶ್ವರ, ಜೆ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೊಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬಟ್ಟಗೇರಿ, ಕೆ.ಬಾಡಗ, ಬೆಟ್ಟಗೆರಿ, ಚೆಟ್ಟಿಮಾಣಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ನವೆಂಬರ್ 18-20ರವರೆಗೆ ಬೆಂಗಳೂರು ಟೆಕ್ ಸಮ್ಮಿತ್-2025 : ಕಂಪನಿಗಳ ಪ್ರಮುಖರೊಂದಿಗೆ ಸಿಎಂ Breakfast Meet

ಬೆಂಗಳೂರು : ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ CEOಗಳ ಜೊತೆ Breakfast Meetನಲ್ಲಿ ಪಾಲ್ಗೊಂಡರು. DCM ಡಿ.ಕೆ.ಶಿವಕುಮಾರ್, ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. “Futurise” “ಭವಿಷ್ಯೋದಯ” ಧ್ಯೇಯವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿದಲಾಗುತ್ತಿದೆ.