ಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ: ಎ.ಎಸ್.ಪೊನ್ನಣ್ಣ

ಮಡಿಕೇರಿ:- ಕೊಡಗಿನ ಪೂರ್ವಜರು ಉಳಿಸಿ ಬೆಳೆಸಿಕೊಂಡು ಬಂದಿರುವ ಕೃಷಿ ಪದ್ಧತಿ, ಸಂಸ್ಕೃತಿ, ಕಲೆ, ಪರಂಪರೆಗಳನ್ನು ಇಂದಿನ ಯುವಜನರು ಮರೆಯದೆ ಮುಂದುವರಿಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಬಿದ್ದಾಟಂಡ ಕುಟುಂಬ, ನಾಲ್ಕುನಾಡು ಪ್ಲಾಂಟರ್ಸ್ ಕ್ಲಬ್ ಅಸೋಸಿಯೇಷನ್ ಮತ್ತು ಕೊಡವ ಸಮಾಜ ಸಂಸ್ಕøತಿ ಮತ್ತು ಕ್ರೀಡಾ ಅಸೋಷಿಯೇಷನ್ ಇವರ ವತಿಯಿಂದ ನಾಪೋಕ್ಲುವಿನ ಬಿದ್ದಾಟಂಡ ಕುಟುಂಬಸ್ಥರ ಗದ್ದೆಯಲ್ಲಿ ಗುರುವಾರ […]
ವಿರಾಜಪೇಟೆ ಕಾವೇರಿ ಕಾಲೇಜು ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

ಆಧುನಿಕ ಜೀವನ ಶೈಲಿಯಿಂದ ಕೃಷಿ ಭೂಮಿಯಿಂದ ದೂರ ಉಳಿದ ಯುವ ಜನತೆ ಒಂದು ದಿನವಾದರೂ ಕೃಷಿ ಭೂಮಿಯ ಸಂಪರ್ಕಕ್ಕೆ ಬಂದು ರೈತಾಪಿ ಬದುಕಿನ ಅನುಭವ ಪಡೆಯಬೇಕು ಎಂದು ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯ ಪಟ್ಟರು. ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಟ್ಟಂಗಾಲದ ನಿವೃತ್ತ ಪೋಲಿಸ್ ಉನ್ನತಾಧಿಕಾರಿ.ಬಿ.ಡಿ.ಮಂದಪ್ಪ ರವರ ಗದ್ದೆಗಳಲ್ಲಿ ಬುಧವಾರ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದ ಅವರು ಇತ್ತೀಚಿನ ವರ್ಷದಲ್ಲಿ ಯುವಜನತೆ ಕೃಷಿ ಭೂಮಿಯಿಂದ ದೂರ ಸರೆಯುತಿದ್ದು, […]
ಕುಶಾಲನಗರದಲ್ಲಿ ಸ್ತನ್ಯಪಾನ ಸಪ್ತಾಹ – ಸೊಪ್ಪಿನ ರಸಗಳನ್ನು ಮಕ್ಕಳಿಗೆ ಕುಡಿಸಬೇಡಿ – ಕರೆ ನೀಡಿದ ಪ್ರಮುಖರು

ಕುಶಾಲನಗರ : ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಕುಶಾಲನಗರದ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಇಂದುಧರ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ಸಂಪೂರ್ಣವಾಗಿ ತಿಳಿದಿರುವುದಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಿ ತಾಯಂದಿರನ್ನು ಹಾಲುಣಿಸಲು ಪ್ರೇರೇಪಿಸಲು ಮತ್ತು ತಾಯಿ ಮತ್ತು ಮಗುವಿಗೆ ಆಗುವ ಪ್ರಯೋಜನವನ್ನು ಉತ್ತೇಜಿಸಲು ಸಪ್ತಾಹವನ್ನು ಆಚರಿಸಲಾಗುತ್ತದೆ. ಇದು ಕೇವಲ ಒಂದು ವಾರದ ಆಚರಣೆಯಾಗಬಾರದು. ಪ್ರತಿ […]
ಮದೆ ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ

ಮಡಿಕೇರಿ:- ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕೆನರಾ ಬ್ಯಾಂಕ್, ಮೈನ್ ಬ್ರಾಂಚ್, ಮಡಿಕೇರಿ ಶಾಖೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲೂಕಿನ ಮದೆ ಗ್ರಾಮದಲ್ಲಿ, ಮದೆ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಆಯಾಯ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಇತ್ತೀಚೆಗೆ ಮದೆ ಗ್ರಾಮದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ನ ಎಜಿಎಂ ರವರಾದ ರಾಜೇಶ್ ಕುಮಾರ್ ವಿ. ಅವರು ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ […]
ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ವಿಜಯ್ ಕೊನೆಯುಸಿರು..!

ಮಡಿಕೇರಿ : ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ನಿಧನರಾಗಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ನ DAR ನಲ್ಲಿ ಪೊಲೀಸ್ ಬ್ಯಾಂಡ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯ್ ಮೃತ ಸಿಬ್ಬಂದಿ.ಇವರು ಫೊಲೀಸ್ ಮೈತ್ರಿ ಭವನದ ಮೇಲ್ವಿಚಾರಕರಾಗಿಯೂ ಕಾರ್ಯ ನಿರ್ವಹಿ ಚಿರಪರಿಚಿತರಾಗಿದ್ದರು. ಸದಾ ಹಸನ್ಮುಖಿಯಾಗಿದ್ದ ಇವರ ಅಕಾಲಿಕ ನಿಧನ ಇಲಾಖಾ ಸಿಬ್ಬಂದಿ ಹಾಗೂ ಸ್ನೇಹಿತ ಬಳಗಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.
ನಾಟಿ ಔಷಧಿ ಸೊಪ್ಪಿನ ರಸ ಕುಡಿಸುವುದರಿಂದ ಮಕ್ಕಳ ಸಾವಿನ ಪ್ರಮಾಣ ಹೆಚ್ಚಳ : ಡಾ.ಮಧುಸೂದನ್ ಆತಂಕ

ಮಡಿಕೇರಿ : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಆರು ತಿಂಗಳವರೆಗೆ ಕಡ್ಡಾಯವಾಗಿ ಎದೆಹಾಲು ಕುಡಿಸಬೇಕು. ಜೊತೆಗೆ ೨ ವರ್ಷದವರೆಗೆ ಪೂರಕ ಆಹಾರದ ಜೊತೆಗೆ ಎದೆಹಾಲು ಉಣಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್ಸಿಎಚ್ ಅಧಿಕಾರಿ ಡಾ.ಮಧುಸೂದನ್ ಹೇಳಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದಲ್ಲಿ ಬುಧವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಎದೆಹಾಲಿನ ಮಹತ್ವ […]
ಧರಾಲಿಯಲ್ಲಿ ಭೀಕರ ಭೂಕುಸಿತ – 70ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ ಭಾರತೀಯ ಸೇನೆ…

ಉತ್ತರಾಖಂಡ : ಉತ್ತರಾಖಂಡದ ಧರಾಲಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿರುವವರ ರಕ್ಷಣೆಗೆ ಸೇನೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಬುಧವಾರ ಮಧ್ಯಾಹ್ನವರೆಗೆ 70ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ ಎಂದು ಸೇನೆ ತಿಳಿಸಿದೆ. ಗಂಗೋತ್ರಿ ಮತ್ತು ಧರಾಲಿಯಲ್ಲಿ ಎರಡು ಹೆಚ್ಚುವರಿ ರಕ್ಷಣಾ ಮತ್ತು ಪರಿಹಾರ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಭೂಕುಸಿತಕ್ಕೊಳಗಾದ ಪ್ರದೇಶಕ್ಕೆ ತಲುಪಲು ತಾತ್ಕಾಲಿಕ ರಸ್ತೆ ನಿರ್ಮಿಸಿಕೊಂಡು ತೆರಳಲಾಗುತ್ತಿದೆ. ಕಾರ್ಯಾಚರಣೆಗೆ ವಿವಿಧ ಯಂತ್ರೋಪಕರಣಗಳನ್ನೂ ಬಳಸಲಾಗುತ್ತಿದೆ. ಸಿಲುಕಿಕೊಂಡಿರುವ ನಾಗರಿಕರನ್ನು ಪತ್ತೆಹಚ್ಚಲು ಡ್ರೋನ್ಗಳು ಮತ್ತು ರಕ್ಷಣಾಪಡೆಯ ಶ್ವಾನಗಳನ್ನು ಬಳಸಿಕೋಳ್ಳಲಾಗುತ್ತಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಲುಕಿದ […]
‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ದೇಶಾದ್ಯಂತ ವಿಶೇಷ ಅಭಿಯಾನ – ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಮಡಿಕೇರಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಸರ್ವೋಚ್ಛ ನ್ಯಾಯಾಲಯ ದೇಶಾದ್ಯಂತ ಅಕ್ಟೋಬರ್ ೦೭ ರವರೆಗೆ ೯೦ ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ ೯೦ ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ […]
ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ಕೇರ್ಟೇಕರ್) ಹುದ್ದೆಗೆ (ಹೊರಗುತ್ತಿಗೆ ಆಧಾರದ ಮೇಲೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. ೦೮೨೭೨-೨೨೦೯೮೬ ಅಥವಾ ೯೪೮೦೦೩೨೭೧೨ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
ನಿಮ್ಮ ಶಾಲೆ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದ್ಯಾ..? ಸರ್ಕಾರದಿಂದ ಸಿಗುತ್ತೆ ಪ್ರೋತ್ಸಾಹ ಧನ – ನೀವೇನ್ ಮಾಡ್ಬೇಕು ಗೊತ್ತಾ..?

ಮಡಿಕೇರಿ : ರಾಜ್ಯ ಯುವನೀತಿ-೨೦೧೨ ಅನುಷ್ಠಾನ ಅಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ೨೦೧೭-೧೮ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟç ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.೧ ಲಕ್ಷದಂತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಅನುದಾನದಲ್ಲಿ […]