ಕೊಡಗಿನ ಹುಡುಗನ ಜೊತೆ ಆ್ಯಂಕರ್ ಅನುಶ್ರೀ ಮದುವೆ ಫಿಕ್ಸ್!

ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ (Anchor Anushree) ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಕೇಳುಬರುತ್ತಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ. ಕೊಡಗು ಮೂಲದ ರೋಷನ್ ಎಂಬುವವರೊಂದಿಗೆ ಅವರ ವಿವಾಹ ಆಗಸ್ಟ್ 28 ರಂದು ನಡೆಯಲಿದೆ ಎನ್ನಲಾಗಿದೆ. ಸರಳ ಶಾಸ್ತ್ರೋಕ್ತವಾಗಿ ಮದುವೆಯಾಗಿ ಬಳಿಕ ಸಿನಿಮಾ ಇಂಡಿಸ್ಟ್ರಿಯವರನ್ನ ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ. ಮಂಗಳೂರಿನ ಸುರತ್ಕಲ್ ಮೂಲದ ಅನುಶ್ರೀ, ತಮ್ಮ ಚುರುಕಾದ ನಿರೂಪಣೆಯಿಂದ ಕನ್ನಡ ಕಿರುತೆರೆಯಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ಬಿಗ್ ಬಾಸ್ […]
ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಕುಶಾಲನಗರ ತಾಲೂಕು ಘಟಕದಲ್ಲಿ ಕೊಡವಂಡ ವಸಂತಿ ಪೊನ್ನಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಧಿಸಿದಂತೆ ದತ್ತಿನಿಧಿಯನ್ನು ಸ್ಥಾಪಿಸಿದ್ದು, ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ರೂ.24 ಸಾವಿರ ಮೊತ್ತದ ಚೆಕ್ ಅನ್ನು ಗುರುವಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಕೊರವಂಡ ಪೊನ್ನಪ್ಪ, ಸಂಘದ ಗೌರವಾಧ್ಯಕ್ಷ ಕೆ. ತಿಮ್ಮಪ್ಪ, ಉಪಾಧ್ಯಕ್ಷ ಬಿ.ಸಿ. ದಿನೇಶ್, ನಿರ್ದೇಶಕರಾದ ಶಿವಣ್ಣ, ಅನಿಲ್ ಇದ್ದರು.
ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ

ಮಡಿಕೇರಿ : ಪಾಲಿಬೆಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಪೋಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು. ಪೊಲೀಸ್ ಉಪನಿರೀಕ್ಷಕ ಹೆಚ್.ಕೆ. ಮಂಜುನಾಥ್ ಅವರು ಪೋಕ್ಸೊ ಕಾಯ್ದೆ,112 ತುರ್ತು ಸಂಖ್ಯೆ, ಮಕ್ಕಳ ಸಹಾಯವಾಣಿ, ಮಾದಕ ಪದಾರ್ಥಗಳ ದುಷ್ಪರಿಣಾಮ, ಮೊಬೈಲ್ ಬಳಕೆ, ಸೈಬರ್ ಅಪರಾಧ, ಬಾಲ ಅಪರಾಧ, ಗುಡ್ ಟಚ್-ಬ್ಯಾಡ್ ಟಚ್ ಇವುಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಕ್ಕಳ ಆರೋಗ್ಯದ […]
ಹಾಸನದಿಂದ ಬೂಕರ್ವರೆಗೆ ಬಾನು ಮುಷ್ತಾಕ್ ಪಯಣ – Coorg Buzzನಲ್ಲಿ ಪ್ರಸಾರವಾಗಲಿದೆ ಸಾಧಕಿಯ ಸಂದರ್ಶನ..!

ಮಡಿಕೇರಿ : ಸಾಹಿತ್ಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ʼಬೂಕರ್ ಪ್ರಶಸ್ತಿʼ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು Coorg Buzz ಸಂದರ್ಶಿಸಿದೆ. ಹಾಸನದಲ್ಲಿರುವ ಅವರ ಮನೆಗೆ ಭೇಟಿ ನೀಡಿದ ಕೂರ್ಗ್ ಬಜ್ಹ್ ತಂಡ ಅವರನ್ನು ಅಭಿನಂದಿಸಿತು. ಬಳಿಕ ಬಾನು ಮುಷ್ತಾಕ್ ಅವರು ನಮ್ಮ ವಾರದ ವಿಶೇಷ ಪಾಡ್ಕಾಸ್ಟ್ ʼin & out’ಗಾಗಿ ವಿಶೇಷ ಸಂದರ್ಶನ ನೀಡಿದರು. ನಿರಂತರ ಪ್ರವಾಸ, ಪ್ರತಿನಿತ್ಯ ಹಲವಾರು ಕಾರ್ಯಕ್ರಮ, ಬಿಡುವಿಲ್ಲದ ವೇಳಾಪಟ್ಟಿಯ ನಡುವೆ ಒಂದು ಗಂಟೆ ಕಾಲ ನಮ್ಮ ಮಾತುಕೆಯಲ್ಲಿ ಭಾಗಿಯಾದರು. […]
ಕೊಡಗಿನ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ಶಿಪ್ಗೆ ಆಯ್ಕೆ

ವಿರಾಜಪೇಟೆಯ ತೆಲುಗರ ಬೀದಿ ನಿವಾಸಿಗಳಾದ ಅಜಯ್ ಸಿಂಗ್ ಹಾಗು ವಿಭಾ ದಂಪತಿಗಳ ಮಗಳು ಹಾಗೂ ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯ 10ನೇ ತರಗತಿ ವಿದ್ಯಾರ್ಥಿನಿ ಆದ್ಯ ಸಿಂಗ್ 4ನೇ ಏಷಿಯನ್ ಸರ್ಫಿಂಗ್ ಚಾಂಪಿಯನ್ ಶಿಪ್ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ

ಮಡಿಕೇರಿ: ರಾಜಾಸೀಟಿನಲ್ಲಿ ‘ಮಕ್ಕಳ ಪುಟಾಣಿ ರೈಲು’ ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈಲು ಬೋಗಿ ಅಳವಡಿಸುವುದು ಸೇರಿದಂತೆ ದಕ್ಷಿಣ ರೈಲ್ವೆ ವಲಯದ ವಿಭಾಗದ ಎಂಜಿನಿಯರ್ಗಳು ಮಾಹಿತಿ ಪಡೆದಿದ್ದು, ಈ […]
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮುತ್ತಾರ್ಮುಡಿ ಗದ್ದೆಯಲ್ಲಿ ಬೇಲ್ರ ಕೋಯಿಮೆ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಹಾಗೂ ಕನೆಕ್ಟಿಂಗ್ ಕೊಡವಾಸ್ ಇವರ ಸಹಯೋಗದಲ್ಲಿ ಮುತ್ತಾರ್ಮುಡಿ ಗದ್ದೆಯಲ್ಲಿ ಬೇಲ್ರ ಕೋಯಿಮೆ ಕಾರ್ಯಕ್ರಮವು ಸೋಮವಾರ ನಡೆಯಿತು. ಮೂರ್ನಾಡು ಪಿಯು ಕಾಲೇಜು, ಜ್ಞಾನಜ್ಯೋತಿ ಕಾಲೇಜು, ಕೊಡಗು ವಿದ್ಯಾಲಯ, ಮಾರುತಿ ಶಾಲೆಯ ನೂರಾರು ವಿದ್ಯಾರ್ಥಿಗಳು ಬೇಲ್ರ ಕೋಯಿಮೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ಮಾತನಾಡಿ ಕೊಡಗು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಕೃಷಿಯನ್ನೇ ನಂಬಿ ಬದುಕು ನಡೆಸುತ್ತಿದ್ದೇವೆ. ಆ ನಿಟ್ಟಿನಲ್ಲಿ […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಮಡಿಕೇರಿ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್ನಲ್ಲಿ ಜುಲೈ, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಸಂಪಿಗೆ ಕಟ್ಟೆ, ಕನ್ನಂಡಬಾಣೆ, ಎ.ವಿ.ಶಾಲೆ, ಗದ್ದಿಗೆ, ಉಕ್ಕುಡ, ಅಜಾದ್ನಗರ, ತ್ಯಾಗರಾಜ ಕಾಲೋನಿ, ಅಬ್ಬಿಫಾಲ್ಸ್ ರಸ್ತೆ, ಭಗವತಿ ನಗರ, ಮಲ್ಲಿಕಾರ್ಜುನ ನಗರ, ರಾಣಿಪೇಟೆ, ಮಾರ್ಕೇಟ್ ರಸ್ತೆ, ಮಹದೇವ ಪೇಟೆ, ಕಾನ್ವೆಂಟ್ ಜಂಕ್ಷನ್, ಕೂರ್ಗ್ ಇಂಟರ್ ನ್ಯಾಷನಲ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್, ಅಬ್ದುಲ್ ಕಲಾಮ್ ಲೇಔಟ್ ಹಾಗೂ […]
ಅರೆಕಾಡು ಅಂಗನವಾಡಿ ಕೇಂದ್ರದಲ್ಲಿ LKG-UKG ಪ್ರಾರಂಭೋತ್ಸವ

ಮರಗೋಡು : ಅರೆಕಾಡು ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭೋತ್ಸವ ಕಾರ್ಯಕ್ರಮ ನೆರವೇರಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಹಳ್ಳಿಗಳಲ್ಲಿ ಎಲ್ಕೆಜಿ ಇಲ್ಲದಿರುವುದರಿಂದ ಇಂಗ್ಲಿಷ್ ಕಲಿಕೆಗಾಗಿ ಪೋಷಕರು ತಮ್ಮ ಮಕ್ಕಳನ್ನು ದೂರದಲ್ಲಿರುವ ಶಾಲೆಗೆ ವಾಹನಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಒತ್ತಡವನ್ನು ಲೆಕ್ಕಿಸದೆ ಕಳುಹಿಸುತ್ತಿದ್ದರು. ಆದರೆ ಇನ್ನು ಮುಂದೆ ಅಂಗನವಾಡಿ ಕೇಂದ್ರದಲ್ಲಿ LKG, UKG ಶಿಕ್ಷಣವನ್ನು ಪಡೆಯಬಹುದು. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಗ್ರಾಮ ಪಂಚಾಯಿತಿಯಿಂದ […]
ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್(ರಿ) ವಿದ್ಯಾರ್ಥಿ ಘಟಕ ಪುನಾರಚನೆ – ಅಧ್ಯಕ್ಷರಾಗಿ ಟಿ.ಕೆ. ಕಿರಣ್ ಆಯ್ಕೆ

ಮಡಿಕೇರಿ : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್(ರಿ) ಇದರ ವಿದ್ಯಾರ್ಥಿ ಘಟಕವನ್ನು ಪುನಾರಚಿಸಲಾಗಿದೆ. ನೂತನ ಅಧ್ಯಕ್ಷರಾಗಿ ಟಿ.ಕೆ. ಕಿರಣ್, ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಟ್ರಸ್ಟ್ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವೈ.ಒ. ಶ್ರಾವ್ಯ, ಸಹಕಾರ್ಯದರ್ಶಿಯಾಗಿ ಬಿ.ಜೆ. ದೀಕ್ಷಾ, ಖಜಾಂಜಿಯಾಗಿ ಪಿ.ವಿ. ನವಿತ್, ಯು.ಯು. ಮೇಘನಾ, ಕ್ರೀಡಾ ಸಂಚಾಲಕರಾಗಿ ಬಿ.ವೈ. ಸುಜನ್, ಲಿಖಿತ ರೈ, ಪೂಜಾ ಕಾರ್ಯಕ್ರಮದ ಉಸ್ತುವಾರಿಗಳಾಗಿ ಟಿ.ಕೆ. ವಿನಯ್, ಕೆ.ಪಿ. ಪ್ರಜಿತ್, ಆರಾಧ್ಯ, ಕಾವ್ಯಶ್ರೀ, ಭಜನೆ ಕಾರ್ಯಕ್ರಮದ ಉಸ್ತುವಾರಿಗಳಾಗಿ ಯಶಸ್ವಿನಿ, […]