ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್(ರಿ) ವಿದ್ಯಾರ್ಥಿ ಘಟಕ ಪುನಾರಚನೆ – ಅಧ್ಯಕ್ಷರಾಗಿ ಟಿ.ಕೆ. ಕಿರಣ್ ಆಯ್ಕೆ

ಮಡಿಕೇರಿ : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್(ರಿ) ಇದರ ವಿದ್ಯಾರ್ಥಿ ಘಟಕವನ್ನು ಪುನಾರಚಿಸಲಾಗಿದೆ. ನೂತನ ಅಧ್ಯಕ್ಷರಾಗಿ ಟಿ.ಕೆ. ಕಿರಣ್, ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಟ್ರಸ್ಟ್ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವೈ.ಒ. ಶ್ರಾವ್ಯ, ಸಹಕಾರ್ಯದರ್ಶಿಯಾಗಿ ಬಿ.ಜೆ. ದೀಕ್ಷಾ, ಖಜಾಂಜಿಯಾಗಿ ಪಿ.ವಿ. ನವಿತ್, ಯು.ಯು. ಮೇಘನಾ, ಕ್ರೀಡಾ ಸಂಚಾಲಕರಾಗಿ ಬಿ.ವೈ. ಸುಜನ್, ಲಿಖಿತ ರೈ, ಪೂಜಾ ಕಾರ್ಯಕ್ರಮದ ಉಸ್ತುವಾರಿಗಳಾಗಿ ಟಿ.ಕೆ. ವಿನಯ್, ಕೆ.ಪಿ. ಪ್ರಜಿತ್, ಆರಾಧ್ಯ, ಕಾವ್ಯಶ್ರೀ, ಭಜನೆ ಕಾರ್ಯಕ್ರಮದ ಉಸ್ತುವಾರಿಗಳಾಗಿ ಯಶಸ್ವಿನಿ, […]
ʼಬೆಳ್ಳಿ ಗೆಜ್ಜೆʼ ಕವನ ಸಂಕಲನ ಬಿಡುಗಡೆ ಜುಲೈ 15ಕ್ಕೆ

ಸೋಮವಾರಪೇಟೆ : ಯುವ ಸಾಹಿತಿ ಹೇಮಂತ್ ಪಾರೇರ ಬರೆದಿರುವ ʼಬೆಳ್ಳಿ ಗೆಜ್ಜೆʼ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಜು.15ರಂದು ನಡೆಯಲಿದೆ. ಕನ್ನಡಸಿರಿ ಸ್ನೇಹ ಬಳಗ ವತಿಯಿಂದ ಅಂದು ಸಂಜೆ 04 ಗಂಟೆಗೆ ಸೋಮವಾರಪೇಟೆ ಪತ್ರಿಕಾ ಭವನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮವನ್ನು ಸಿದ್ದಲಿಂಗಪುರ ಅರಿಸಿನಗುಪ್ಪೆ ಮಂಜುನಾಥ ದೇವಾಲಯದ ರಾಜೇಶನಾಥ ಗುರೂಜಿ ಉದ್ಘಾಟಿಸಲಿದ್ದಾರೆ. ಕೃತಿ ಪರಿಚಯವನ್ನು ಲೇಖಕಿ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ […]
ಕಡಗದಾಳು ಅಂಗನವಾಡಿಯಲ್ಲಿ LKG, UKG ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ

ಮಡಿಕೇರಿ : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಐಸಿಡಿಎಸ್ ಸುವರ್ಣ ಮಹೋತ್ಸವದ ಅಂಗವಾಗಿ ಸರ್ಕಾರ ಅಂಗನವಾಡಿ ಕೇಂದ್ರದಲ್ಲಿ ಎಲ್ಕೆಜಿ, ಯುಕೆಜಿಯನ್ನು ಪ್ರಾರಂಭಿಸುತ್ತಿದ್ದು, ಮಡಿಕೇರಿ ತಾಲೂಕಿನ 10 ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಯುಕೆಜಿ ಪ್ರಾರಂಭವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕೆಂದರು. ಕಡಗದಾಳು ಗ್ರಾಮ ಪಂಚಾಯಿತಿಯಿಂದ 18 ಮಕ್ಕಳಿಗೆ ಸಮವಸ್ತ್ರ, […]
ಕೊಡಗು ಜಿಲ್ಲೆಯ ಮಳೆ ವಿವರ: ಎಲ್ಲಿ ಮಳೆ ತಗ್ಗಿದೆ?

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 12.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.64 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1665.67 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1026.73 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.48 ಮಿ.ಮೀ. ಕಳೆದ ವರ್ಷ ಇದೇ ದಿನ 7.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2408.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು : ಪ್ರೊ. ಅಶೋಕ ಸಂಗಪ್ಪ ಆಲೂರ

ಕುಶಾಲನಗರ : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇಲ್ಲಿನ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ. ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತಾದ […]
Power Cut: ನಾಳೆ ಕೊಡಗಿನಲ್ಲಿ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್ಗಳಲ್ಲಿ ಜುಲೈ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ತೆಲುಗರ ಬೀದಿ, ಸುಂಕದ ಕಟ್ಟೆ, ಅಪ್ಪಯ್ಯಸ್ವಾಮಿ ರಸ್ತೆ, ಕುಕ್ಲೂರು, ಕಾಕೋಟುಪರಂಬು, ಬೇತ್ರಿ, ಕೆದಮುಳ್ಳೂರು, ಪಾಲಂಗಾಲ, ಕೊಟ್ಟೋಳಿ, ಬೋಯಿಕೇರಿ, ಕದನೂರು, ಮೈತಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ […]
ಯುವನಿಧಿ ಯೋಜನೆ: ಯಾರೆಲ್ಲಾ ಅರ್ಹ? ಅರ್ಜಿ ಸಲ್ಲಿಸೋದು ಹೇಗೆ?

ಮಡಿಕೇರಿ:- ಯುವನಿಧಿ ಯೋಜನೆಯಡಿ (Yuvanidhi Yojana) ಅರ್ಜಿ ಸಲ್ಲಿಸದ ಅರ್ಹರ ಅನುಕೂಲಕ್ಕಾಗಿ ಜುಲೈ, 07 ರಿಂದ ಆಗಸ್ಟ್, 07 ರವರೆಗೆ ವಿಶೇಷ ನೋಂದಣಿ ಅಭಿಯಾನ (Campaign) ನಡೆಯಲಿದೆ. 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ ಆನ್ಲೈನ್ನಲ್ಲಿ ಲಾಗಿನ್ ಆಗಿ ಸ್ವ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005997154 ಗೆ ಕರೆ ಮಾಡುವ ಮೂಲಕ ಅಥವಾ […]
ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಕೊಡೆ ವಿತರಣೆ

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ 17ನೇ ವರ್ಷದ ಸ್ಥಾಪನ ದಿನ ಅಂಗವಾಗಿ ವಿರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಕೆದಮುಳ್ಳೂರಿನ ಕಥರಿನ ಚಿತ್ತದಿನಿ ಮಕ್ಕಳ ಮನೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ಛತ್ರಿಯನ್ನು ವಿತರಿಸಲಾಗಿದೆ. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷರಾದ ಸುಮೇಶ್ ರವರ ನೇತ್ರತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗಿದೆ.
ಗುಡ್ಡೆಹೊಸೂರುವಿನಲ್ಲಿ ಲಾರಿ ಹರಿದು ವ್ಯಕ್ತಿ ಸಾವು

ಇಂದು ಬೆಳಗ್ಗಿನ ಜಾವ ಲಾರಿಯೊಂದು ವ್ಯಕ್ತಿ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಡ್ಡೆಹೊಸೂರುವಿನಲ್ಲಿ ನಡೆದಿದೆ. ಮೃತನನ್ನು ನಾಪೋಕ್ಲು ಸಮೀಪದ ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಎಂದು ಗುರುತಿಸಲಾಗಿದೆ. ಈತ ಕಳೆದ ರಾತ್ರಿಯಿಂದ ಹೆದ್ದಾರಿ ಬದಿಯಲ್ಲೇ ಅಡ್ಡಾಡುತ್ತಿದ್ದ ಎನ್ನಲಾಗಿದ್ದು, ಇಂದು ಬೆಳಿಗ್ಗೆ ಮೈಸೂರಿನತ್ತ ತೆರಳುತ್ತಿದ್ದ ಲಾರಿ (Truck) ಹರಿದು ಮೃತಾಪಟ್ಟಿದ್ದಾನೆ. ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ

ಇಂದು ಸ. ಕಿ. ಪ್ರಾ. ಹೆಗ್ಗಳ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ ನಡೆಯಿತು. ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗುತ್ತದೆ. ಶಾಲೆಗಳಲ್ಲಿ ನಡೆದ ಚುನಾವಣೆಗಳ ಅನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿಯನ್ನು ವಹಿಸಲಾಗಿದೆ. ಪ್ರಧಾನ ಮಂತ್ರಿ, ಶಿಕ್ಷಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.