ಮರಗೋಡು : ಸ್ತನ್ಯಪಾನ ಸಪ್ತಾಹ, ನಿವೃತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ

ಮರಗೋಡು : ಮರಗೋಡು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮತ್ತು ನಿಔರತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರಭಾರ ಸಾಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷ ಕಾಲ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಕೆ. ಸುಶೀಲಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಮರಗೋಡು ವೃತ್ತಕ್ಕೆ ಸೇರಿದ […]
ತಲಕಾವೇರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಜ್ಯೋತಿಶ್

ಮಡಿಕೇರಿ : ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹೆಚ್. ಜ್ಯೋತಿಶ್ (H.Jyothish), ರಾಜ್ಯ ಕಾರ್ಯದರ್ಶಿ ಕುಮಾರ್(Kumar ) ಶನಿವಾರ ಜೀವನದಿ ಕಾವೇರಿಯ ಉಗಮ ಸ್ಥಳ ತಲಕಾವೇರಿಗೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರೊಂದಿಗೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ವಿರಾಜಪೇಟೆ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗೌರೀಶ್ ರೈ(Gowrish rai), ಅನಂತ್ ಭಾಗಮಂಡಲ, ಜಸ್ವಂತ್ ಭಾಗಮಂಡಲ, DCC ಸದಸ್ಯ ಸುನೀಲ್ ಪತ್ರವೊ, ಮೈಸೂರು ನಗರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯದ್ ಅಬ್ರಾರ್, […]
ಮೂರ್ನಾಡುವಿನಲ್ಲಿ ಸ್ತನ್ಯಪಾನ ಸಪ್ತಾಹ – LKG, UKG ಪ್ರಾರಂಭೋತ್ಸವ

ಮೂರ್ನಾಡು : ಎಂ ಬಾಡಗ -1 ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಕಾಂತರೂ ಮುರ್ನಾಡು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ ನೆರವೇರಿತು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾದಂಡ ಸವಿತಾ ಕೀರ್ತನ್ ಎದೆ ಹಾಲಿನ ಮಹತ್ವದ ಬಗ್ಗೆ ಮಾತನಾಡಿದರು. 2025ರ ಸ್ತನ್ಯಪಾನ ಸಪ್ತಾಹದ ಘೋಷವಾಕ್ಯ “ಸ್ತನ್ಯಪಾನಕ್ಕೆ ಆದ್ಯತೆ ನೀಡಿ ಸುಸ್ಥಿರ ಬೆಂಬಲ ವ್ಯವಸ್ಥೆಗಳನ್ನು ರಚಿಸಿ” ಎಂಬುದಾಗಿದೆ. ಮಹಿಳಾ […]
ಕೊಡಗಿನ ಪಾಲಂಗಾಲದಲ್ಲಿ ಭೂಕುಸಿತ – ಕೊಚ್ಚಿ ಹೋದ ಎಕ್ರೆಗಟ್ಟಲೆ ಅರಣ್ಯ ಪ್ರದೇಶ..!

ವೀರಾಜಪೇಟೆ : ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನಲ್ಲಿ ಭಾರಿ ಪ್ರಮಾಣದ ಭೂ ಕುಸಿತವಾಗಿದೆ. ಆದರೆ ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲ. ವಿರಾಜಪೇಟೆ ಹೋಬಳಿಯ ಪಾಲಂಗಾಲ ಗ್ರಾಮದ ಸ.ನಂ 171/11P2 ರಲ್ಲಿ ಈ ಭೂಕುಸಿತ ಸಂಭವಿಸಿದೆ. 341.00 ಎಕ್ರೆ ಅರಣ್ಯ ಪ್ರದೇಶದ ಕೊಡಗು ಮತ್ತು ಕೇರಳ ಗಡಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಎತ್ತರದ ಪ್ರದೇಶದಿಂದ ಕುಸಿತ ಸಂಭವಿಸಿ, ನೂರಾರು ಮೀಟರ್ಗಳ ಉದ್ದಕ್ಕೆ ಸಾಗಿದೆ. ಅರಣ್ಯ ಪ್ರದೇಶದೊಳಗೇ ವ್ಯಾಪ್ತಿ ಇದ್ದುದ್ದರಿಂದ ಹೆಚ್ಚಿನ ಹಾನಿಯಾಗಿಲ್ಲ. ಈ ಭೂಕುಸಿತ ಜಾಗದಿಂದ ಅಂದಾಜು 15KM ಆ […]
ಕೊಡಗು ಜಿಲ್ಲೆಯ ಮಳೆ ವಿವರ ಇಲ್ಲಿದೆ

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 43.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2141.72 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2217.65 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.05 ಮಿ.ಮೀ. ಕಳೆದ ವರ್ಷ ಇದೇ ದಿನ 71.73 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3222.77 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಉಚಿತ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ..! – ಕುಶಾಲನಗರದಲ್ಲಿ ಅಧಿಕಾರಿಗಳ ದಾಳಿ – ದೊಡ್ಡ ದಂಧೆಯ ಶಂಕೆ.!

ಕುಶಾಲನಗರ : ನ್ಯಾಯಬೆಲೆ ಅಂಗಡಿಯಲ್ಲಿ ಸಿಕ್ಕ ಅಕ್ಕಿಯನ್ನ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಕುಶಾಲನಗರದಲ್ಲಿ (Kushalnagar) ಬೆಳಕಿಗೆ ಬಂದಿದೆ. ಪೂರಕ ಮಾಹಿತಿ ಹಿನ್ನೆಲೆಯಲ್ಲಿ ಬೆಳಗ್ಗೆ ಕಾರ್ಯಾಚರಣೆ ಕೈಗೊಂಡ ತಾಲೂಕು ಆಹಾರ ನಿರೀಕ್ಷಕಿ ಎಂ.ಎಸ್. ಸ್ವಾಮಿ ನೇತೃತ್ವದ ತಂಡ ಅಕ್ಕಿ ಮಾರಾಟ ದಂಧೆಯನ್ನು ಬಯಲಿಗೆಳೆದಿದೆ. ವ್ಯಕ್ತಿಯೊಬ್ಬ ಮನೆ ಮನೆಗೆ ತೆರಳಿ ಅಕ್ಕಿ ಸಂಗ್ರಹಿಸಿ ಅದನ್ನು ಬೇರೆಡೆ ಕೊಂಡೊಯ್ದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಸುಂದರ ನಗರದಲ್ಲಿ ಮನೆಗಳಿಂದ ಅಕ್ಕಿ ಸಂಗ್ರಹಿಸುವ ವೇಳೆ ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ […]
Kodagu: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಮಡಿಕೇರಿ:- ಕೊಡಗು (Kodagu) ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 60.87 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2132.17 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2174.42 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.80 ಮಿ.ಮೀ. ಕಳೆದ ವರ್ಷ ಇದೇ ದಿನ 101.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3197.72 ಮಿ.ಮೀ, ಕಳೆದ ವರ್ಷ […]
ಕೊಡಗು ಜಿಲ್ಲೆಯ ಮಳೆ ವಿವರ: ಇನ್ನೆಷ್ಟು ದಿನ ಮಳೆ ಅಬ್ಬರಿಸಲಿದೆ?

ಮಡಿಕೇರಿ:- ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.66 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 117.40 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2116.12 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2113.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.10 ಮಿ.ಮೀ. ಕಳೆದ ವರ್ಷ ಇದೇ ದಿನ 180.03 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3165.92 ಮಿ.ಮೀ, ಕಳೆದ ವರ್ಷ […]
ವಿರಾಜಪೇಟೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತ

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರ ಕಾರು ವಿರಾಜಪೇಟೆ ಕಾವೇರಿ ಕಾಲೇಜಿನ ಸಮೀಪ ತಿರುವಿನಲ್ಲಿ ಅಪಘಾತಕ್ಕೀಡಾಗಿದ್ದು ಜಿಲ್ಲಾಧ್ಯಕ್ಷರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಅಂತಾರಾಷ್ಟ್ರೀಯ ಮಾಸ್ಟರ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿ: ಕೊಡಗಿನ ತಂಡಕ್ಕೆ ಚಿನ್ನ

ಕೇರಳದ ತಿರುವನಂತಪುರಂನಲ್ಲಿ ನಡೆದ ಸ್ಟಿಫನ್ ಜಾಕೋಬ್ ಕೋಶಿ ಅಂತಾರಾರಾಷ್ಟ್ರೀಯ ಮಾಸ್ಟರ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾರತೀಯ ಟೆಕ್ ಸಿಲ್ಕೋ ತಂಡವನ್ನು ಪ್ರತಿನಿಧಿಸಿದ್ದ ಕೊಡಗಿನ ಹಿರಿಯ ಬಾಸ್ಕೆಟ್ ಬಾಲ್ ತಂಡ ಮೂರು ಚಿನ್ನದ ಪದಕ ಗೆದ್ದಿದ್ದಾರೆ. 55 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಒಂದು, 60 ವರ್ಷ ಮೇಲ್ಪಟ್ಟದ ತಂಡದಲ್ಲಿ ಒಂದು ಮತ್ತು 65 ವರ್ಷ ಮೇಲ್ಪಟ್ಟ ತಂಡದಲ್ಲಿ ಒಂದು ಚಿನ್ನದ ಪದಕ ಬಾಚಿಕೊಂಡಿದ್ದಾರೆ.