ಇಂಜಲಗೆರೆಯ ಕಾಫಿ ತೋಟದಲ್ಲಿ ವ್ಯಾಘ್ರನ ಹೆಜ್ಜೆ ಗುರುತು ಪತ್ತೆ – ಆತಂಕದಲ್ಲಿ ಗ್ರಾಮಸ್ಥರು..!

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಒಂದೆಡೆ ಕಾಡಾನೆ ಉಪಟಳ ನಿರಂತರವೆಂಬಂತಾಗಿದೆ. ಈ ನಡುವೆ ಅಲ್ಲಲ್ಲಿ ಹುಲಿಗಳ ದರ್ಶನವಾಗುತ್ತಿದ್ದು, ಅರಣ್ಯದಂಚಿನ ಜನರ ನಿದ್ದೆಗೆಡಿಸಿದೆ. ಇಂಜಲಗೆರೆ ಗ್ರಾಮದಲ್ಲಿ ಹುಲಿಯ ಹೆಜ್ಜೆಗುರುತು ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಗ್ರಾಮದ ಮಂಡೇಪಂಡ ಪ್ರವೀಣ್ ಬೋಪಯ್ಯ ಅವರ ಕಾಫಿ ತೋಟದಲ್ಲಿ ಮಂಗಳವಾರ ಹೆಜ್ಜೆಗುರುತು ಕಂಡಿದೆ. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕೆಲವು ದಿನದ ಹಿಂದೆ ಸಿದ್ದಾಪುರ ಬಳಿಯ ಕರಡಿಗೋಡು ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿತ್ತು. ಬಾಣಂಗಾಲ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿಗೆ ಜಾನುವಾರು ಮೃತಪಟ್ಟಿದ್ದವು. […]
ಡಾ. ಕೆ.ಬಿ. ಸೂರ್ಯಕುಮಾರ್ ಅವರ ಪುಸ್ತಕಕ್ಕೆ ರಾಜ್ಯಮಟ್ಟದ ಶ್ರೇಷ್ಠ ವೈದ್ಯೇತರ ಕೃತಿ ಪ್ರಶಸ್ತಿ

ಮಡಿಕೇರಿ : ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆ, ಕನ್ನಡ ವೈದ್ಯಕೀಯ ಬರಹಗಾರರ ಸಮಿತಿ ವತಿಯಿಂದ ನೀಡಲಾಗುವ ರಾಜ್ಯಮಟ್ಟದ ಪ್ರಶಸ್ತಿಗೆ ಕೊಡಗಿನ ಹಿರಿಯ ವೈದ್ಯ, ಸಾಹಿತಿ ಡಾ. ಕೆ.ಬಿ. ಸೂರ್ಯಕುಮಾರ್ ಭಾಜನರಾಗಿದ್ದಾರೆ. ಸೂರ್ಯಕುಮಾರ್ ಅವರು ಬರೆದ ಮಂಗಳಿ ಕೃತಿಗೆ ಡಾ. ಕೆ. ಶ್ಯಾಮ್ಪ್ರಸಾದ್ ಶ್ರೇಷ್ಠ ವೈದ್ಯೇತರ ಕೃತಿ ಪ್ರಶಸ್ತಿ ಲಭಿಸಿದೆ. ಕೆ. ಶ್ಯಾಮ್ಪ್ರಸಾದ್ ಶ್ರೇಷ್ಠ ವೈದ್ಯ ಕೃತಿ ಪ್ರಶಸ್ತಿಗೆ ಡಾ. ಕೆ.ಎಸ್. ಶ್ರಿಧರ್ ಅವರ ʼಚಿತ್ತ ಚಾಂಚಲ್ಯʼ ಕೃತಿ, ಡಾ. ಸುನಂದಾ ಕುಲಕರ್ಣಿ ಶ್ರೇಷ್ಠ ವೈದ್ಯಕೀಯ […]
ಕೊಡಗು ಜಿಲ್ಲೆಯ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಿಎಂ ಸಭೆ – ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿವಿಧ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದರು. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಿಎಂ, ಮಳೆ ಹಾನಿ, ಕೈಗೊಂಡಿರುವ ಪರಿಹಾರ ಕ್ರಮ, ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಚರ್ಚಿಸಿದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಬೋಸರಾಜ್, ಶಾಸಕರಾದ ಎ.ಎಸ್. ಪೊನ್ನಣ್ಣ, ಮಂತರ್ ಗೌಡ ಇದ್ದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ: ಹೋಂಸ್ಟೇ ಅಭಿವೃದ್ಧಿಗೆ ಸಹಾಯಧನ

ಮಡಿಕೇರಿ:- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ (DA-JGUA) ಮತ್ತು ಪ್ರಧಾನಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನ (PM-JUGA)ದ ಅಧೀನದಲ್ಲಿ, ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ಯೋಜನೆಯ ಉಪಯೋಜನೆಯಾಗಿ ಆದಿವಾಸಿ ಪ್ರದೇಶಗಳಲ್ಲಿ ಹೋಂಸ್ಟೇ (Homestay) ಅಭಿವೃದ್ಧಿಗೆ ಸಹಾಯಧನ ನೀಡಲಾಗುತ್ತಿದ್ದು, ಈ ಯೋಜನೆಯ ಉದ್ದೇಶ, ಪರಿಶಿಷ್ಟ ಪಂಗಡದ ಬುಡಕಟ್ಟು/ಅದಿವಾಸಿ ಸಮುದಾಯವಿರುವ ಗ್ರಾಮಗಳಲ್ಲಿ ಅತಿಥ್ಯಾಧಾರಿತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು, ಸ್ಥಳೀಯ ಜನರಿಗೆ ಖಾಯಂ ಸ್ವಯಂ ಉದ್ಯೋಗ ಅವಕಾಶಗಳನ್ನು ಒದಗಿಸುವುದು ಮತ್ತು ಬುಡಕಟ್ಟು/ ಆದಿವಾಸಿ ಸಮುದಾಯದ […]
ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ತಮ್ಮಯ್ಯಗೆ ಅಧ್ಯಾಪಕ ಭೂಷಣ ಪ್ರಶಸ್ತಿ

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ ಚಂದ್ ಗೊಹ್ಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಕ್ರೀಡಾ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿಗಳು ಮಾಡಿದ ಸಾಧನೆಯ ಹಿನ್ನಲೆ ಅತ್ಯುತ್ತಮ ದೈಹಿಕ ನಿರ್ದೇಶಕ ಎಂಬ ನೆಲೆಯಲ್ಲಿ […]
ಕೆಎಸ್ಸಿಎ ಮಹಾರಾಣಿ ಟ್ರೋಫಿ ಕ್ರಿಕೆಟ್ – ಶಿವಮೊಗ್ಗ ಲಯನ್ಸ್ ತಂಡದಲ್ಲಿ ಶ್ರೀನಿತಿ ಪಿ. ರೈ

ಮಡಿಕೇರಿ : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸುವ ಮಹಾರಾಣಿ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಕೊಡಗು ಮೂಲದ ಶ್ರೀನಿತಿ ಪ್ರಕಾಶ್ ರೈ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಲಯನ್ಸ್ ತಂಡ 80,000 ರೂ.ಗೆ ಎಡಗೈ ಸ್ಪಿನ್ನರ್ ಶ್ರೀನಿತಿ ಅವರನ್ನು ಖರೀದಿಸಿದೆ. ರಾಜ್ಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುತ್ತಿರುವ ಇವರು, ಕಳೆದ ವರ್ಷ 19 ಮತ್ತು 23 ವರ್ಷದೊಳಗಿನ ತಂಡವನ್ನು ಪ್ರತಿನಿಧಿಸಿದ್ದರು. 19 ವರ್ಷದೊಳಗಿನವರ ಟಿ20 ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಗಮನ ಸೆಳೆದಿದ್ದರು. […]
ಬಯಲಾಗುತ್ತಾ ʼಬುರುಡೆʼ ರಹಸ್ಯ..? – ನೇತ್ರಾವತಿ ತೀರದಲ್ಲಿ SITಯಿಂದ ಉತ್ಕನನ ಶುರು – ಹಿಟಾಚಿ ಮೂಲಕ ಕಾರ್ಯಾಚರಣೆ ಮುಂದುವರಿಕೆ..!

ಧರ್ಮಸ್ಥಳ : ನೂರಕ್ಕೂ ಹೆಚ್ಚು ಶವಗಳನ್ನು ಹೂತಿದ್ದಾಗಿ ಹೇಳಿದ ವ್ಯಕ್ತಿಯ ವಿಚಾರದಲ್ಲಿ ತನಿಖೆ ಆರಂಭಿಸಿರುವ ಎಸ್ಐಟಿ ನೇತ್ರಾವತಿ ನದಿ ತೀರದಲ್ಲಿ ಉತ್ಕನನ ಆರಂಭಿಸಿದೆ. ನಿನ್ನೆ ಈ ವ್ಯಾಪ್ತಿಯ 13 ಸ್ಥಳಗಳನ್ನು ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಗುರುತು ಮಾಡಲಾಗಿತ್ತು. ಇಂದು ಬೆಳಗ್ಗೆ ತನಿಖಾಧಿಕಾರಿಗಳು ವಿವಿಧ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಮಿಕರ ಸಹಾಯದಿಂದ ಕಳೇಬರಕ್ಕಾಗಿ ಉತ್ಕನನ ಆರಂಭಿಸಿದರು. ಪಾಯಿಂಟ್ 01ರಲ್ಲಿ ಮಳೆಯ ನಡುವೆಯೂ ಮಧ್ಯಾಹ್ನವರೆಗೆ ಅಗೆದಾಗ ಯಾವುದೇ ಕುರುಹು ಸಿಗಲಿಲ್ಲ. ತನಿಖಾ ತಂಡದ ಎಂ.ಎನ್. ಅನುಚೇತ್ ಕೂಡಾ ಖುದ್ದು ಸ್ಥಳದಲ್ಲಿದ್ದು ಕಾರ್ಯಾಚರಣೆ […]
ಕೊಡಗಿನಲ್ಲಿ ತಗ್ಗಿದ ಮಳೆಯ ಆರ್ಭಟ: ಜಲಾಶಯಗಳ ನೀರಿನ ಮಟ್ಟ ಹೇಗಿದೆ

ಮಡಿಕೇರಿ:- ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 46.68 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2099.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1996.15 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.18 ಮಿ.ಮೀ. ಕಳೆದ ವರ್ಷ ಇದೇ ದಿನ 61.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3144.82 ಮಿ.ಮೀ, ಕಳೆದ ವರ್ಷ […]
ನಟಿ ರಮ್ಯಾಗೆ ದರ್ಶನ್ ಫ್ಯಾನ್ಸ್ ನಿಂದನೆ – ಕೊನೆಗೂ ಮೌನ ಮುರಿದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ – ರಮ್ಯಾ ಜೊತೆ ನಾವಿದ್ದೇವೆ ಎಂದ ಶಿವಣ್ಣ ದಂಪತಿ..!

ಬೆಂಗಳೂರು : ಸೋಷಿಯಲ್ ಮೀಡಿಯಾದಲ್ಲಿ ತನ್ನ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ಸ್ಯಾಂಡಲ್ವುಡ್ ತಾರೆ ರಮ್ಯಾಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ನಿಮ್ಮ ನಿಲುವು ಸರಿಯಾಗಿದೆ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆಂದು ಶಿವರಾಜ್ಕುಮಾರ್ ಹಾಗೂ ಗೀತಾ ಶಿವರಾಜ್ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆ ವಿರುದ್ಧವು ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು […]
ಗೂಗಲ್ ಪೇ, ಫೋನ್ ಪೇ ಬಳಕೆದಾರರೇ ಗಮನಿಸಿ: UPI ನಿಯಮಗಳಲ್ಲಿ ಮಹತ್ವದ ಬದಲಾವಣೆ

ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ (UPI) ವ್ಯವಸ್ಥೆಯಲ್ಲಿ ಆಗಸ್ಟ್ 1 ರಿಂದ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಫೋನ್ಪೇ, ಗೂಗಲ್ ಪೇ, ಪೇಟಿಎಂ ಮುಂತಾದ ಯುಪಿಐ ಆ್ಯಪ್ಗಳನ್ನು ದಿನನಿತ್ಯ ಬಳಸುವವರಿಗೆ ಈ ನಿಯಮ ಅನ್ವಯವಾಗುತ್ತದೆ. ಪ್ರತಿ ಯುಪಿಐ ಆ್ಯಪ್ನಲ್ಲಿ ಕೆಲ ಬಳಕೆದಾರರು ಪದೇ ಪದೇ ತಮ್ಮ ಬ್ಯಾಲೆನ್ಸ್ ಚೆಕ್ ಮಾಡುತ್ತಾರೆ. ಈಗ ಬ್ಯಾಲನ್ಸ್ ಪರಿಶೀಲನೆ, ಆಟೊಪೇಯಂತಹ ಫೀಚರ್ಗಳಿಂದ ಹಿಡಿದು ಎಪಿಐ ಬಳಕೆ ಸಂಬಂಧ ಪರಿಷ್ಕೃತ ಮಾರ್ಗಸೂಚಿಯವರೆಗೆ ಕ್ರಮ ಬದಲಾವಣೆ ಮಾಡಲಾಗುತ್ತಿದೆ. ಯುಪಿಐ ಬಳಕೆ ಈಗ ಬಹಳಷ್ಟು ಆಗುತ್ತಿದೆ. ಒಂದು […]