Power Cut: ನಾಳೆ ಕೊಡಗಿನಲ್ಲಿ ಹಲವೆಡೆ ಕರೆಂಟ್ ಇರಲ್ಲ: ಎಲ್ಲೆಲ್ಲಿ ಗೊತ್ತಾ?

ವಿರಾಜಪೇಟೆ (Virajpet) 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆಎಸ್ಆರ್ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್ಗಳಲ್ಲಿ ಜುಲೈ, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಗೋಣಿಕೊಪ್ಪ ರಸ್ತೆ, ಪಂಜರಪೇಟೆ, ವಿದ್ಯಾನಗರ, ಕೆಎಸ್ಆರ್ಟಿಸಿ, ಶಾಂತಿನಗರ, ಸುಭಾಶ್ನಗರ, ಮೀನುಪೇಟೆ, ಹೆಗ್ಗಳ, ಬೇಟೋಳಿ, ಆರ್ಜಿ, ರಾಮನಗರ, ತೋರ, ಬೂದಿಮಾಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ […]
ಪ್ರಭಾವಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಅಕ್ರಮ ರೆಸಾರ್ಟ್ – ನೆಲಸಮಗೊಳಿಸಲು ಪರಿಸರ ಪ್ರೇಮಿಗಳ ಆಗ್ರಹ..!

ಮಡಿಕೇರಿ: ಪ್ರಭಾವಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಭೂ ಕುಸಿತ ಪ್ರದೇಶಗಳಲ್ಲಿ ನಿರ್ಮಾಣ ಮಾಡಿರುವ ರೆಸಾರ್ಟ್ಗಳನ್ನು ಜಿಲ್ಲಾಡಳಿತ ನೆಲಸಮಗೊಳಿಸಬೇಕು ಎಂದು ಪರಿಸರವಾದಿ (Environmentalist) ಕರ್ನಲ್ ಸಿ.ಪಿ.ಮುತ್ತಣ್ಣ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಡಗಿನಲ್ಲಿ ತೋಟ, ಜಮ್ಮಾ ಬಾಣೆ ಮತ್ತು ಜೌಗು ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗೆ ಪರಿವರ್ತಿಸುವುದನ್ನು ನಿಷೇಧಿಸುತ್ತದೆ. ಅಲ್ಲದೇ, ಭೂ ಪರಿವರ್ತನೆಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾದಲ್ಲಿ ಅದನ್ನು ಪರಿಶೀಲಿಸಲು ಮತ್ತು ಭೂ ಕುಸಿತ ಪೀಡಿತ ಪ್ರದೇಶಗಳಲ್ಲಿ ಪರಿವರ್ತನೆಗಳಿಗೆ ಅನುಮತಿ ನಿರಾಕರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸುವ ಆದೇಶ ಹೊರಡಿಸಿತ್ತು. ಆದರೆ, […]
ಕೊಡಗಿನಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ಮಾಹಿತಿ

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 15.42 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.49 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1633.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1009.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.78 ಮಿ.ಮೀ. ಕಳೆದ ವರ್ಷ ಇದೇ ದಿನ 20.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2344.34 ಮಿ.ಮೀ, ಕಳೆದ ವರ್ಷ ಇದೇ […]
ಜನ್ಮದಿನದಂದು ಶಾಸಕ ಪೊನ್ನಣ್ಣ ಶ್ರೀ ಭಗಂಡೇಶ್ವರ – ತಲಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಎ.ಎಸ್.ಪೊನ್ನಣ್ಣ ತಮ್ಮ 51ನೇ ಜನ್ಮದಿನದಂದು ಪತ್ನಿ ಕಾಂಚನ ಅವರೊಂದಿಗೆ ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಅಭಿವೃದ್ಧಿ,ನೆಮ್ಮದಿ,ಸಮೃದ್ದಿ ತರುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೊಡಗಿನ ಯುವ ಫುಟ್ಬಾಲ್ ಆಟಗಾರ ಆತ್ಮಹತ್ಯೆ

ಸುಂಟಿಕೊಪ್ಪ: ಕೊಡಗು (Kodagu) ಜಿಲ್ಲೆಯ ಉದಯೋನ್ಮುಖ ಯುವ ಫುಟ್ ಬಾಲ್ (Football) ಆಟಗಾರ(ಗೋಲ್ ಕೀಪರ್) ಕಿರಣ ಸುಂಟಿಕೊಪ್ಪದ ಬೆಟ್ಟಗೇರಿ ತೋಟದ ಲೈನ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಡಗು ಜಿಲ್ಲೆಯಲ್ಲಿ ಪ್ರತಿಷ್ಠಿತ ಫುಟ್ ಬಾಲ್ ತಂಡಗಳಲ್ಲಿ ಗೋಲ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿರುವ ಕಿರಣ ಎಲ್ಲರ ಫೇವರೇಟ್ ಗೋಲ್ ಕೀಪರ್ ಆಗಿ ಹಲವು ಪ್ರಶಸ್ತಿಯನ್ನು ಜಯಿಸಿದ್ದಾನೆ.
ಪೊಲೀಸರ ಭರ್ಜರಿ ಕಾರ್ಯಚರಣೆ : ಜಾನುವರು ಕಳ್ಳರ ಬಂಧನ

ಜೂ.24 ರಂದು ನೋಕ್ಯ ಗ್ರಾಮದ ನಿವಾಸಿ ಆನಂದ ಎ.ಎಸ್ ಅವರ ಎಸ್ಟೇಟ್ನ ಕೊಟ್ಟಿಗೆಯಲ್ಲಿ ಕಟ್ಟಿದ್ದ 02 ಹಸುಗಳನ್ನು ಕಳ್ಳತನ ಮಾಡಿರುವ ಕುರಿತು ಹಾಗೂ ಭದ್ರಗೋಳ ಗ್ರಾಮದ ನಿವಾಸಿ ಪಿ.ಪಿ. ಮುತ್ತಣ್ಣ, ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ 01 ಎಮ್ಮೆಯನ್ನು ಕಳ್ಳತನ ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಂಡರು ಎರಡು ಪ್ರಕರಣಗಳ ಆರೋಪಿ ಪತ್ತೆಗಾಗಿ ಮಹೇಶ್ ಕುಮಾರ್.ಎಸ್, ಡಿಎಸ್ಪಿ, ವಿರಾಜಪೇಟೆ ಉಪವಿಭಾಗ, ಶಿವರಾಜ ಆರ್.ಮುಧೋಳ್, ಸಿಪಿಐ, ಗೋಣಿಕೊಪ್ಪ ವೃತ್ತ, […]
ಕಾಂತೂರು ಮೂರ್ನಾಡು ಗ್ರಾಮ ಪಂಚಾಯತಿ ವತಿಯಿಂದ ಅಂಗನವಾಡಿಗಳಿಗೆ ಸಾಮಗ್ರಿಗಳ ವಿತರಣೆ

ಮೂರ್ನಾಡು: ಕಾಂತೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟ 12 ಅಂಗನವಾಡಿ ಕೇಂದ್ರಗಳಿಗೆ (Anganwadis) ಗ್ರಾಮ ಪಂಚಾಯಿತಿ ವತಿಯಿಂದ ಬಕೆಟ್, ಮಗ್, ಹ್ಯಾಂಡ್ ವಾಶ್, ಬ್ಲೀಚಿಂಗ್ ಪೌಡರ್, ಚಾಪೆ, ಕೌದಿ, ಕಂಬಳಿ, ಪಿನಾಯಿಲ್, ಪೊರಕೆಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷೆ ರೇಖಾ, ಸದಸ್ಯರಾದ ಸುಜಾತ, ವಿಜಯಲಕ್ಷ್ಮಿ, ಮೂಡೇರ ಅಶೋಕ, ಅಯ್ಯಪ್ಪ, ಈರ ಸುಬ್ಬಯ್ಯ, ಅಪ್ಪಚಂಡ ಮೀನಾಕ್ಷಿ ದೇವಯ್ಯ, ಅವರೇಮಾದಂಡ ಅನಿಲ್, ಪುಷ್ಪಲತಾ, ಪುಷ್ಪ, ಸೋಮಣ್ಣ, ದಿವ್ಯ, ನಿಂಗಪ್ಪ, ಕೃಷ್ಣಪ್ಪ, ಯಶ್ವಿನ್ ಪೊನ್ನಪ್ಪ, ರಾಜೇಶ್, ರೀತ, […]
ಗರವಾಲೆ ಅಂಗನವಾಡಿ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ

ಅಂಗನವಾಡಿ ಸಹಾಯಕಿಯ ಬೇಬಿ ಅಂಗನವಾಡಿಯ ಒಳಗಿದ್ದ ಸಂದರ್ಭದಲ್ಲಿ ಮರ ಬಿದ್ದು ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆ ಹಾಗೂ ಎದೆ ಬಾಗಕ್ಕೆ ಗಾಯಗಳಾಗಿವೆ.
ಕೊಡಗಿನಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆ ಅಬ್ಬರ ಹೇಗಿತ್ತು ನೋಡಿ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.29 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1617.95 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 997.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.65 ಮಿ.ಮೀ. ಕಳೆದ ವರ್ಷ ಇದೇ ದಿನ 34.68 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2329.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ವಿರಾಜಪೇಟೆಯ ಉದ್ಯಮಿ ಮಂಜುನಾಥ್ ಮಲ್ಯ ನಿಧನ

ವಿರಾಜಪೇಟೆಯ ಉದ್ಯಮಿ ಗಾಂಧಿನಗರ ನಿವಾಸಿ ಶ್ರೀ ಮಂಜುನಾಥ್ ಮಲ್ಯ (ಮಂಜು )ಶಾಂತಲಾ ಎಜೆನ್ಸಿ ಮಾಲೀಕರು ಆಕಸ್ಮಿಕ ವಾಗಿ ಕಾಲುಜಾರಿ ತಮ್ಮ ಸ್ವಂತ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.