ಅತಿವೃಷ್ಟಿಯಿಂದ ಕಾಫಿ ಬೆಳೆ ಹಾನಿ – ಬೆಳೆಗಾರರಿಗೆ ನೆರವಾಗುವಂತೆ ಕಾಫಿ ಮಂಡಳಿಗೆ ಮನವಿ..!

ಸೋಮವಾರಪೇಟೆ : ಪ್ರಸ್ತುತ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕಾಫಿ (Coffee) ಕ್ಷೇತ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿರುವುದರಿಂದ ಸರ್ಕಾರ ಹಾಗೂ ಕಾಫಿ ಮಂಡಳಿ ಬೆಳೆಗಾರರ ನೆರವಿಗೆ ಬರಬೇಕೆಂದು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಬೆಳೆಗಾರರ ನಿಯೋಗ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವಿ ಸಲ್ಲಿಸಿದೆ. ಸೋಮವಾರಪೇಟೆಗೆ ಆಗಮಿಸಿದ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರನ್ನು ಭೇಟಿಯಾದ ಪ್ರಮುಖರು ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಕುರಿತು […]
ವಾಯುಪಡೆ ಅಗ್ನಿವೀರರ ಪ್ರವೇಶ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ […]
ಕರ್ಣಂಗೇರಿಯಲ್ಲಿ ವಿಟಮಿನ್ ʼಎʼ ದ್ರಾವಣ, ಅಂಧತ್ವ ನಿವಾರಣೆ ಜಾಗೃತಿ ಕಾರ್ಯಕ್ರಮ

ಮಡಿಕೇರಿ : ಕರ್ಣಂಗೇರಿ ಅಂಗನವಾಡಿ ಕೇಂದ್ರದ ವ್ಯಾಪ್ತಿಗೆ ಒಳಪಟ್ಟ ಮಕ್ಕಳಿಗೆ ಅಂಧತ್ವ ನಿವಾರಣೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಳಕ್ಕಾಗಿ ವಿಟಮಿನ್ ಎ ದ್ರಾವಣ ಹಾಕಲಾಯಿತು. ವಿಟಮಿನ್ಎ ದ್ರಾವಣ, ಅತಿಸಾರ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮ, ಜಿಂಕ್ ಮಾತ್ರೆ ಬಳಕೆ ಬಗ್ಗೆ ಆರೋಗ್ಯ ಇಲಾಖೆಯ phco ದೇವಕಿ ಮಾಹಿತಿ ನೀಡಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಮಳೆಗಾಲದಲ್ಲಿ ಮಕ್ಕಳಿಗೆ ಎದುರಾಗುವ ಆರೋಗ್ಯ ಸಮಸ್ಯೆ ತಡೆಗಟ್ಟಲು ಪೋಷಣಾಂಶಯುಕ್ತ ಆಹಾರ ಸೇವನೆ ಹಾಗೂ ಸ್ವಚ್ಛತೆಗೆ ಹೆಚ್ಚು ಗಮನಹರಿಸಲು […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 27.18 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.09 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1598.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 980.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.90 ಮಿ.ಮೀ. ಕಳೆದ ವರ್ಷ ಇದೇ ದಿನ 19.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2308.91 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಕೊಡಗಿನ ಯುವಜನತೆಗೆ ಉದ್ಯೋಗಾವಕಾಶ: ಮಡಿಕೇರಿಯಲ್ಲಿ ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 09 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್ಸ್ಟಾಕ್ ರೆಸಾರ್ಟ್, ಮಡಿಕೇರಿ, ಆರೇಂಜ್ ಕೌಂಟಿ ರೆಸಾರ್ಟ್, ಸಿದ್ದಾಪುರ, ಪೆಂಟಾಟೆಕ್, ಮಡಿಕೇರಿ, ಡಾಬರ್ ಮ್ಯಾನ್, ಮಂಗಳೂರು ಹಾಗೂ ಪಿಆರ್ ಕನ್ಸ್ಟ್ರಕ್ಷನ್ಸ್ ಕುಶಾಲನಗರ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು […]
ನಾಳೆಯಿಂದ ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಯಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ(5) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜುಲೈ, 6 […]
ಸಿನೆಮಾ ಇಂಡಸ್ರ್ಟಿಗೆ ಬಂದ ಮೊದಲ ಕೊಡವತಿ ನಾನು ಎಂದ ರಶ್ಮಿಕಾ ವಿರುದ್ಧ ಆಕ್ರೋಶ, ನಟಿ ಪ್ರೇಮಾ ಹೇಳಿದ್ದೇನು?

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಲಗ್ಗೆ ಇಟ್ಟ ನಟಿ ರಶ್ಮಿಕಾ ಮಂದಣ್ಣ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಈಗ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೊಡವ ಸಮುದಾಯದಿಂದ ಸಿನಿಮಾಗೆ ಬಂದವರಲ್ಲಿ ನಾನೇ ಮೊದಲು ಎಂದು ಹೇಳುವ ಮೂಲಕ ಮತ್ತೊಂದು ವಿವಾದ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಬರ್ಖಾ ದತ್ ಅವರಿಗೆ ರಶ್ಮಿಕಾ ಮಂದಣ್ಣ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ತಮ್ಮನ್ನು ತಾವು ಹೊಗಳಿಕೊಳ್ಳುವ ಭರದಲ್ಲಿ, ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದ ಏಕೈಕ […]
ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 35.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.97 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1540.50 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 950.98 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.17 ಮಿ.ಮೀ. ಕಳೆದ ವರ್ಷ ಇದೇ ದಿನ 8.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2213.01 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ವಿದ್ಯುತ್ ಆಘಾತಕ್ಕೆ ಯುವಕ ಬಲಿ – ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಶಾಸಕ ಡಾ. ಮಂತರ್ ಗೌಡ

ಮಡಿಕೇರಿ : ನಿನ್ನೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ಹುಲಿತಾಳದ ಯುವಕ ಹೆಚ್.ಪಿ.ಪ್ರತೀಪ್ ಕುಟುಂಬಸ್ಥರನ್ನು ಶಾಸಕ ಡಾ. ಮಂತರ್ ಗೌಡ (Mantar Gowda) ಭೇಟಿಯಾಗಿ ಸಾಂತ್ವನ ಹೇಳಿದರು. ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಮಂತರ್ ಗೌಡ ಘಟನೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದರು. ನಿನ್ನೆ ಮನೆಯ ಬಳಿ ವಿದ್ಯುತ್ ಕಂಬ ಏರಿ ದುರಸ್ಥಿ ವೇಳೆ ವಿದ್ಯುತ್ ತಗಲಿ ಪ್ರತೀಪ್ ಮೃತಪಟ್ಟಿದ್ದರು.
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ – ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಡಗಿನ ಅಬ್ದುಲ್ ರೆಹಮಾನ್ ಎನ್ಐಎ ವಶಕ್ಕೆ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೋಮವಾರಪೇಟೆಯ ಅಬ್ದುಲ್ ರೆಹಮಾನ್ನನ್ನು NIA ಅಧಿಕಾರಿಗಳು ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪ ಸೋಮವಾರಪೇಟೆಯ ಕಲ್ಕಂದೂರಿನ ಅಬ್ದುಲ್ ರೆಹಮಾನ್ ಮೇಲೆ ಇತ್ತು. ಪ್ರರಕಣದ ನಂತರ ಈತ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಈತನ ಮಾಹಿತಿ ನೀಡಿದವರಿಗೆ ನಗದು ಬಹುಮಾನೂ ಘೋಷಣೆಯಾಗಿತ್ತು. ಆದರೆ ಈತ ಮಾತ್ರ ಸಿಕ್ಕಿರಲಿಲ್ಲ. ಇಂದು ಕೇರಳದ ವಿಮಾನದ […]