KMA: ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಾಯೋಜಕರ ನೆರವಿನಿಂದ ನೀಡಲಾಗುವ ಈ ಸಾಲಿನ ಕೆ.ಎಂ.ಎ. ವಿಶೇಷ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್. ಸಿ. ಪರೀಕ್ಷೆಯ ‘ಕನ್ನಡ ವಿಷಯ’ದಲ್ಲಿ ಇಡೀ ಕೊಡಗು ಜಿಲ್ಲೆಗೆ ಅತೀ ಹೆಚ್ಚು ಅಂಕ ಪಡೆದ “ಜಿಲ್ಲೆಯ ಸರಕಾರಿ ಶಾಲೆಯ” ಇಬ್ಬರು ವಿದ್ಯಾರ್ಥಿಗಳಿಗೆ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರು ತಮ್ಮ ದಿವಂಗತ ತಂದೆ ದುದ್ದಿಯಂಡ ಹುಸೈನಾರ್ […]
ಮಡಿಕೇರಿ ತಾಲೂಕು ಬಂಟರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಪ್ರತಿ ವರ್ಷ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಇನ್ನು ಮುಂದೆ ಮಡಿಕೇರಿ ತಾಲೂಕು ತಾಲೂಕು ಬಂಟರ ಸಂಘದ ವತಿಯಿಂದ ಪ್ರತಿ ವರ್ಷ ನೀಡಲಾಗುವುದೆಂದು ಪ್ರಕಟಣೆ ತಿಳಿಸಿದೆ. 2023-24 ಮತ್ತು 2024-25 ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇಕಡ 90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ […]
ಕರಿಕೆ : ಮನೆ ಮೇಲೆ ಮರ ಬಿದ್ದು ಹಾನಿ – ಟಾರ್ಪಾಲ್ ವಿತರಿಸಿದ ಗ್ರಾಪಂ ಅಧ್ಯಕ್ಷ ಬಾಲಚಂದ್ರ ನಾಯರ್

ಕರಿಕೆ : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಹಲವೆಡೆ ಅನಾಹುತ ಸಂಭವಿಸುತ್ತಿದೆ. ಕರಿಕೆ ಚೆತ್ತುಕಾಯ ದೊಡ್ಡಚೇರಿ ಗ್ರಾಮದ ದಾಮೋದರ ಎಂಬವರ ಮನೆಗೆ ಮರ ಬಿದ್ದು ಮನೆಗೆ ಭಾಗಶಃ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಭೇಟಿ ನೀಡಿ ಪರಿಶೀಲಿಸಿದರು. ತಾತ್ಕಾಲಿಕ ಪರಿಹಾರವಾಗಿ ಮನೆಯ ಮೇಲೆ ಹಾಕಲು ಪಂಚಾಯಿತಿ ವತಿಯಿಂದ ವಿಶಾಲವಾದ ಟಾರ್ಪಾಲ್ ವಿತರಿಸಿದರು. ಮಳೆ ಕಡಿಮೆಯಾದ ನಂತರ ದುರಸ್ತಿಯ ಭರವಸೆ ನೀಡಿದರು.
ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ – ಅಪಾಯದಿಂದ ಪಾರಾದ ಪತ್ರಕರ್ತ..!

ಕೊಡಗು : ವಾಹನದ ಮೇಲೆ ಮರ ಬಿದ್ದು ಪತ್ರಕರ್ತ ಜೀವಪಾಯದಿಂದ ಪಾರಾಗಿದ್ದಾರೆ. ಪ್ರತಿನಿಧಿ ಪತ್ರಿಕೆ ಸೋಮವಾರಪೇಟೆ ವರದಿಗಾರ ಡಿ. ಜಿ. ಶರಣ್ ಗೌಡ ಹರಗ ಶನಿವಾರ ರಾತ್ರಿ ಮನೆಗೆ ವಾಹನದಲ್ಲಿ ತೆರಳುತ್ತಿದ್ದಾಗ ಶಾಂತಳ್ಳಿ ರಸ್ತೆಯ ಜೆಡಿಗುಂಡಿ ಎಂಬಲ್ಲಿ ಇವರು ಚಲಾಯಿಸುತ್ತಿದ್ದ ಮಾರುತಿ ಒಮ್ನಿ ಕಾರಿನ ಮೇಲೆ ಮರ ಬಿದ್ದಿದೆ . ಕಾರು ತೀವ್ರವಾಗಿ ಜಖಂ ಆಗಿದೆ. ಕಾರಿನಲ್ಲಿ ಒಬ್ಬರೆ ಇದ್ದ ಕಾರಣ, ಮುಂಭಾಗಕ್ಕೆ ಹಾನಿಯಾಗದ ಹಿನ್ನೆಲೆ ಅಪಾಯದಿಂದ ಹೊರ ಬಂದರು. ಬರೆ ಕುಸಿತ ಉಂಟಾಗಿ ವಾಹನ ಸಂಚಾರ […]
ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಬರೆದ ಮೂರು ಕೃತಿ ಮೈಸೂರಿನಲ್ಲಿ ಬಿಡುಗಡೆ

ಮೈಸೂರು: ಮೈಸೂರು ಕಲ್ಚರಲ್ ಅಸೋಸಿಯೇಷನ್, ವಿಸ್ಮಯ ಪ್ರಕಾಶನ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ವತಿಯಿಂದ ಸಂಗೀತ ವಿವಿ ಸಭಾಂಗಣದಲ್ಲಿ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರ ಮೂರು ಕೃತಿಗಳು ಲೋಕಾರ್ಪಣೆಗೊಂಡವು. ‘ಮೈಸೂರು ವೃತ್ತಗಳ ವೃತ್ತಾಂತ’ ಕೃತಿಯನ್ನು ಕರ್ನಾಟಕ ಪೊಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕ ಸಂದೇಶ್ ಕುಮಾರ್, ‘ಸಿಂಧೂರ’ ಕೃತಿಯನ್ನು ಲೆಫ್ಟಿನೆಂಟ್ ಕರ್ನಲ್ ಪಿ.ಎಸ್. ಗಣಪತಿ, ‘ಮೈಸೂರಿನ ಗಲ್ಲಿ ಕಥೆ’ ಕೃತಿಯನ್ನು ಶಾಸಕ ಟಿ.ಎಸ್. ಶ್ರೀವತ್ಸ ಬಿಡುಗಡೆಗೊಳಿಸಿದರು. ಸಾನ್ನಿಧ್ಯ ವಹಿಸಿದ್ದ […]
ಕೊಡಗಿನಲ್ಲಿ ಗಾಳಿ ಸಹಿತ ಭಾರೀ ಮಳೆ: ಮರ ಬಿದ್ದು ದೇವಾಲಯಕ್ಕೆ ಹಾನಿ

ಕೆದಮಳ್ಳೂರು ಗ್ರಾಮದ ಚೂರಿ ಯಾಲದ ದೇವಸ್ಥಾನದ ಮೇಲೆ ಮರ ಬಿದ್ದು ದೇವಸ್ಥಾನವು ಅರ್ಧಕ್ಕಿಂತ ಹೆಚ್ಚು ಹಾನಿಯಾಗಿರುತ್ತದೆ. ಸ್ಥಳಕ್ಕೆ ವಿರಾಜಪೇಟೆ ತಹಶಿಲ್ದಾರರು ಭೇಟಿ ನೀಡಿ ಪರಿಶೀಸಿದ್ದಾರೆ.
ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಕೊಡಗಿನ ಪ್ರೇಕ್ಷಾ

ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದಿರುವ ಕೊಡಗು ಜಿಲ್ಲೆಯ ವಿರಳಾತಿ ವಿರಳರಲ್ಲಿ ಎಚ್.ಪ್ರೇಕ್ಷಾ ಸಹ ಒಬ್ಬಳು. ಸೋಮವಾರಪೇಟೆ ತಾಲ್ಲೂಕಿನ ಅಟ್ಟೂರುಕಟ್ಟೆ ಗ್ರಾಮದ ಗುತ್ತಿಗೆದಾರ ಹರೀಶ್ ಹಾಗೂ ಸಿಂಧು ಅವರ ಪುತ್ರಿಯಾದ ಎಚ್.ಪ್ರೇಕ್ಷಾ 4ನೇ ತರಗತಿ ವಿದ್ಯಾರ್ಥಿನಿ. ಈಕೆ ಈ ವಯಸ್ಸಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಸ್ಥಾನ ಪಡೆದಿರುವುದು ವಿಶೇಷ. ಮಹಾಭಾರತದಲ್ಲಿ ಬರುವ 101 ಕೌರವರ ಹೆಸರನ್ನು 54 ಸೆಕೆಂಡ್ನಲ್ಲಿ ಹೇಳುವ ಮೂಲಕ ಈ ವಿಷಯದಲ್ಲಿ ಈ ಹಿಂದೆ ಇದ್ದ ದಾಖಲೆಯನ್ನು ಮುರಿದಿದ್ದಾಳೆ. ಈ ಹಿಂದೆ […]
ಕಾರ್ಗಿಲ್ ವಿಜಯ್ ದಿವಸ್ ಮತ್ತು ಬಲಿದಾನಿಗಳ ಸ್ಮರಣೆ – ವಿಶೇಷ ಲೇಖನ

ಜುಲೈ 26—ಇದು ಭಾರತೀಯರ ಆತ್ಮಸ್ಮರಣೆಯ ದಿನ. ಇದು ಕೇವಲ ಒಂದು ಇತಿಹಾಸದ ಪುಟವಲ್ಲ; ದೇಶದ ಸಂವಿದಾನಿಕ ಸಮಗ್ರತೆಗಾಗಿ ಹೋರಾಡಿದ ವೀರ ಯೋಧರ ತ್ಯಾಗವನ್ನು ಸ್ಮರಿಸುವ ಪವಿತ್ರ ದಿವಸ. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಭಾರತದ ಗೆಲುವಿನ ಸಂಕೇತವಾಗಿ ಪ್ರತಿ ವರ್ಷದ ಈ ದಿನವನ್ನು ನಾವು ‘ಕಾರ್ಗಿಲ್ ವಿಜಯ ದಿವಸ’ ವಾಗಿ ಆಚರಿಸುತ್ತೇವೆ. ಇತ್ತೀಚೆಗೆ ನಡೆದ ‘ಆಪರೇಷನ್ ಸಿಂಧೂರ’ ದೇಶದ ಜನಮನದಲ್ಲಿ ಹೊಸ ಚೈತನ್ಯ ಮೂಡಿಸಿದರೂ, ಅದಕ್ಕೂ ಮುನ್ನ ಹಿಮಾಲಯದ ಎತ್ತರದ ಪರ್ವತಗಳಲ್ಲಿ ನಡೆದ ಕಾರ್ಗಿಲ್ ಯುದ್ಧವು ಭಾರತೀಯ […]
ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಮಹಿಳೆ ಸಾವು

ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ (Somwarpet) ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಮೂಲದ ಅಫೂಲ್ ಪುರದ ಸುಷ್ಮಾ(29) ಮೃತ ಮಹಿಳೆಯಾಗಿದ್ದಾರೆ. ಇಂದು ಬೆಳಿಗ್ಗೆ 5.30ಕ್ಕೆ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವಪ್ಪಿದ್ದಾರೆ. ಮನೆಯೊಳಗಿದ್ದ ಈರ್ವರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪ್ಪು ಕಪ್ ಸೀಸನ್ 3 ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

ಬೆಂಗಳೂರು: ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ಆಯೋಜಿಸಲಾಗುವ ʼಅಪ್ಪುಕಪ್ ಸೀಸನ್ 3ʼರ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಇಂದು ನಗರದ ಕಿಂಗ್ಸ್ ಕ್ಲಬ್ನಲ್ಲಿ ಚಾಲನೆ ನೀಡಲಾಯಿತು. ತೆರೆ ಮೇಲೆ ಮನರಂಜಿಸುವ ತಾರೆಯರು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಕಾತುರದಿಂದ ಕಾಯುತ್ತಿದ್ದುದು ಕಣ್ಣಿಗೆ ಹಬ್ಬದಂತಿತ್ತು. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಗೆ ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಲಾಯಿತು. ವೇದಿಕೆಯ ಮೇಲೆ ನಟ ಅನಿರುದ್ಧ್, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸೇರಿದಂತೆ ವಿವಿಧ ತಂಡದ ನಾಯಕರು […]