ಜು.03 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಲೋಚನಾ ಸಭೆ

ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಜುಲೈ ೦೩ ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಶಾಸಕರಾದ ಡಾ.ಮಂತರ್ಗೌಡ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಮುಖರು ತಿಳಿಸಿದ್ದಾರೆ.
ರೈತರಿಗೆ ಮಾಹಿತಿ : ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಅವಕಾಶ

ಮಡಿಕೇರಿ : ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೨೫-೨೬ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ […]
ಗ್ರಾಮ ಒನ್ ಕೇಂದ್ರ ನಡೆಸಲು ಆಸಕ್ತಿ ಹೊಂದಿದ್ದೀರಾ?- ಈ ಗ್ರಾಮಗಳಲ್ಲಿ ಅವಕಾಶವಿದೆ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೦ ಗ್ರಾಮ ಪಂಚಾಯತ್ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಜುಲೈ ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net […]
ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ೧೦ ಮಂದಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ – ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆಗೆ ಪತ್ರಿಕಾ ರಂಗದ ಕೊಡುಗೆ ಅಪಾರ : ಶಿವಕುಮಾರ್ ನಾಣಯ್ಯ ಅಭಿಮತ

ಮಡಿಕೇರಿ : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ ನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಪ್ರಾಯಿಸಿದರು. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಪತ್ರಿಕಾ ದಿನಾಚರಣೆ’ ಮತ್ತು ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥ್ಯ ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು […]
ಕೊಡವ ಹಾಕಿ ಪ್ರೀಮಿಯರ್ ಲೀಗ್ – ಪಳೆ ತಾಲೂಕ್ ಚಾಂಪಿಯನ್, ಕೂರ್ಗ್ ಟೈಟಾನ್ಸ್ ರನ್ನರಪ್..!

ಮೈಸೂರು : ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕೊಡವ ಹಾಕಿ ಪ್ರೀಮಿಯರ್ ಲೀಗ್ನಲ್ಲಿ ಪಳೆ ತಾಲೂಕ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಳೆ ತಾಲೂಕ್ ಹಾಗೂ ಕೂರ್ಗ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯಿತು. ಪಳೆ ತಾಲೂಕ್ ತಂಡ 3-1 ಗೋಲುಗಳ ಅಂತರದಲ್ಲಿ ಗೆದ್ದು ಕೊಡವ ಹಾಕಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪಟ್ಟ ಅಲಂಕರಿಸಿತು. ರನ್ನರಪ್ ಪ್ರಶಸ್ತಿಗೆ ಕೂರ್ಗ್ ಟೈಟಾನ್ಸ್ ಭಾಜನವಾದರೆ, ಮೂರನೇ ಸ್ಥಾನಕ್ಕೆ ಕೊಡವು ವಾರಿಯರ್ಸ್ ತಂಡ ತೃಪ್ತಿ ಪಟ್ಟುಕೊಂಡಿತು. […]
ಕೊಡಗು ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ – ಜುಲೈ 01ರಂದು ಪ್ರದಾನ ಸಮಾರಂಭ..!

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ದಿಂದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು, ಜಿಲ್ಲೆಯ ಹತ್ತು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜು.1 ರಂದು ಮಂಗಳವಾರ ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಕರ್ತರಾಗಿದ್ದ ದಿ.ಕೆ.ಬಿ. ಮಹಂತೇಶ್ ಸ್ಮರಣಾರ್ಥ ಅವರ ಪತ್ನಿ ಭಾಗೀರಥಿ ಅವರು […]
ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವನ್ಯ ಪ್ರಾಣಿ-ಮಾನವ ಸಂಘರ್ಷ ಪ್ರತಿಧ್ವನಿ : ಉಸ್ತುವಾರಿ ಸಚಿವ ಬೋಸರಾಜ್ ಹೇಳಿದ್ದೇನು..?

ಮಡಿಕೇರಿ : ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಹಾಗೂ ಮಾನವ ಸಂಘರ್ಷ ನಿರಂತರವಾಗಿ ಮುಂದುವರಿದಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಅಧಿಕಾರಿಗಳು ಅಗತ್ಯ ಕಾರ್ಯಯೋಜನೆ ರೂಪಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ನಿರ್ದೇಶನ ನೀಡಿದ್ದಾರೆ. ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಇದ್ದು, ಇವುಗಳನ್ನು […]
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿಪೂಜೆ

ಮಡಿಕೇರಿ : ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜ ಉತ್ತಪ್ಪ ಇತರರು ಇದ್ದರು. ಬಳಿಕ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ […]
ಈ ಬಾರಿ ೧೧ ದಿನ ನಾಡಹಬ್ಬ ದಸರಾ ಆಚರಣೆ – ವಿಜೃಂಭಣೆಯ ಉತ್ಸವಕ್ಕೆ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ..!

ಬೆಂಗಳೂರು : ಈ ಬಾರಿಯ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು. ಈ ಬಾರಿ […]
ಚಾಮರಾಜನಗರ : ಐದು ಹುಲಿ ಸಾವು ಪ್ರಕರಣ – ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ..!

ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ವಿಷವಿಕ್ಕಿದ್ದ ಮಾದರಾಜು, ನಾಗರಾಜು ಇಬ್ಬರನ್ನು ಮೊದಲು ಬಂಧಿಸಲಾಗಿತ್ತು. ಇದೀಗ ಪೊಲೀಸರು ಕೋನಪ್ಪ ಅಲಿಯಾಸ್ ಕೂನಯ್ಯ ಎಂಬಾತನನ್ನ ಬಂಧಿಸಿದ್ದಾರೆ. ಈತನನ್ನು ಮೃತ ಹಸುವಿನ ಮಾಲೀಕ ಎನ್ನಲಾಗಿದೆ. ಕಳ್ಳಬೇದೊಡ್ಡಿಯ ಮಾದುರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.