ನೇಣು ಬಿಗಿದು ಶಿಕ್ಷಕಿ ಆತ್ಮಹ*ತ್ಯೆ – ಪತಿ ಕುಟುಂಬದ ವಿರುದ್ಧ ಕೊ*ಲೆ ಆರೋಪ..!

ನಾಪೋಕ್ಲು : ಶಿಕ್ಷಕಿಯೊಬ್ಬರು (Teacher) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಸಫ್ರೀನಾ(32)ಆತ್ಮಹ*ತ್ಯೆ ಮಾಡಿಕೊಂಡ ಶಿಕ್ಷಕಿ.ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಮಧ್ಯರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಗಂಭೀರ ಸ್ವರೂಪದಲ್ಲಿದ್ದ ಅವರನ್ನು ತಕ್ಷಣ ನಾಪೋಕ್ಲು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. ಈ ನಡುವೆ ಪತಿ ನಜೀರ್ ವಿರುದ್ಧ ಸಫ್ರೀನಾ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ಕೊಲೆ ಮಾಡಿ ನೇಣು ಹಾಕಿದ್ದಾನೆಂದು ಗಂಭೀರ ಆರೋಪ ಮಾಡಿದ್ದಾರೆ. […]
ಕೊಡಗು ವಿಶ್ವವಿದ್ಯಾಲಯದ ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2024-25ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪದವಿಗಳ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ಒಂದು ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ. ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ಒಂದು […]
ಹೆಗ್ಗಳ ಸರ್ಕಾರಿ ಶಾಲೆಗೆ ಇನ್ವರ್ಟರ್ ಕೊಡುಗೆ

ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಸರ್ಕಾರಿ ಶಾಲೆಗಳುಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ನೆರವಾಗಲು ಕೊಡುಗೈ ದಾನಿ, ಲಿಟಲ್ ಸ್ಕಾಲರ್ಸ್ ಅಕಾಡಮಿಯ ಮುಖ್ಯಸ್ಥರಾದ ಪೂಜಾ ರವೀಂದ್ರ ಅವರು ವಿರಾಜಪೇಟೆಯ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಇನ್ವರ್ಟರ್ ಕೊಡುಗೆಯಾಗಿ ನೀಡಿದ್ದಾರೆ.
ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025ಕ್ಕೆ ಅರ್ಜಿ ಆಹ್ವಾನ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ (ಕೆ.ಎಂ.ಇ.ಎಫ್.) ಸಹಯೋಗದಲ್ಲಿ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿ ವರ್ಷದಂತೆ ಈ ಸಾಲಿನಲ್ಲೂ ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ಅನ್ನು ನೀಡಲು ಉದ್ದೇಶಿಸಲಾಗಿದ್ದು, ಈ ಕುರಿತು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ತೇರ್ಗಡೆ ಹೊಂದಿ ಇದೀಗ ವಿದ್ಯಾಭ್ಯಾಸ ಮುಂದುವರಿಸುತ್ತಿರುವ ಕೆ.ಎಂ.ಎ. ಸದಸ್ಯರ ಮಕ್ಕಳು “ಕೆ. ಎಂ. ಎ. ಪ್ರತಿಭಾ […]
ವಾಹನ ಅಪಘಾತದಲ್ಲಿ ಗುತ್ತಿಗೆದಾರ ದುರ್ಮರಣ

ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಅರುಣ ಸ್ಥಳದಲ್ಲಿ ಸಾವನ್ನಪ್ಪಿದರೆ, ಕಾರಿನಲ್ಲಿದ್ದ ಮತ್ತೋರ್ವ ರವಿ ಎಂಬವರಿಗೆ ಗಾಯಗಳಾಗಿದೆ.
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.82 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1854.35 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1664.95 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.50 ಮಿ.ಮೀ. ಕಳೆದ ವರ್ಷ ಇದೇ ದಿನ 26.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2807.56 ಮಿ.ಮೀ, ಕಳೆದ ವರ್ಷ ಇದೇ […]
ಮಡಿಕೇರಿಯಲ್ಲಿ ವಿಶ್ವ ಮೆದುಳು ದಿನಾಚರಣೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಮತ್ತು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಇವರ ವತಿಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಮೆದುಳು ದಿನಾಚರಣೆ ನಡೆಯಿತು. 2025 ನೇ ಸಾಲಿಗೆ ‘ಎಲ್ಲಾ ವಯಸ್ಸಿನವರಿಗೂ ಮೆದುಳಿನ ಆರೋಗ್ಯ’ ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಕೊಡಗು ಜಿಲ್ಲೆಯ ಮೆದುಳು ಆರೋಗ್ಯ ಕಾರ್ಯಕ್ರಮದ ಅಧಿಕಾರಿಗಳಾದ ಡಾ.ಆನಂದ್ ಅವರು ಮತ್ತು […]
ಉದ್ಯೋಗಾವಕಾಶ: ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಸಕ್ತ(2025-26) ಶೈಕ್ಷಣಿಕ ವರ್ಷದಿಂದ ನೂತನವಾಗಿ ಪ್ರಾರಂಭವಾಗುವ 60 ಸಂಖ್ಯಾ ಬಲದ ಮೌಲಾನಾ ಆಜಾದ್ ಮಾದರಿ ಶಾಲೆ ಮಡಿಕೇರಿ, ಮಡಿಕೇರಿ ತಾಲ್ಲೂಕು ಕೊಡಗು ಜಿಲ್ಲೆ, ಇಲ್ಲಿನ ಶಾಲಾ ವಿಭಾಗಕ್ಕೆ ಅತಿಥಿ ಶಿಕ್ಷಕರ ಸೇವೆಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಮೌಲಾನಾ ಆಜಾದ್ ಮಾದರಿ ಶಾಲೆ ಮಡಿಕೇರಿ, ಮಡಿಕೇರಿ ತಾಲ್ಲೂಕು ಕೊಡಗು ಜಿಲ್ಲೆ ಇಲ್ಲಿನ ಖಾಲಿ ಹುದ್ದೆಗಳು ಇದ್ದು, ಕನ್ನಡ ಭಾಷಾ ಶಿಕ್ಷಕರು ವಿದ್ಯಾರ್ಹತೆ ಬಿ.ಎ. ಮತ್ತು ಬಿ.ಎಡ್ (ಕನ್ನಡ) ಹುದ್ದೆಯ ಸಂಖ್ಯೆ-1, […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ ಇಲ್ಲಿದೆ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 8.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 19.88 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1837.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1633.13 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.33 ಮಿ.ಮೀ. ಕಳೆದ ವರ್ಷ ಇದೇ ದಿನ 10.78 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2779.06 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಹೆಗ್ಗಳ ಸರ್ಕಾರಿ ಶಾಲೆಗೆ ಪ್ರಿಂಟರ್ ಕೊಡುಗೆ

ವಿರಾಜಪೇಟೆಯ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ವಿರಾಜಪೇಟೆ ಶಾಖೆ, ಇವರು ಶನಿವಾರ ದಂದು ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ ವೇಳೆ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಅನೀಶ್ ಹಾಗೂ ಬ್ಯಾಂಕ್ ಸಿಬ್ಬಂದಿ ಗಣೇಶ್, ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.