ಸ್ವಸ್ತಿಕ್ ಯುವ ವೇದಿಕೆ ಗಣೇಶೋತ್ಸವ ಸಮಿತಿಗೆ ಜಂಟಿ ಅಧ್ಯಕ್ಷರಾಗಿ ಜಗದೀಶ್, ಮಿಲನ್ ಆಚಾರ್ಯ ಆಯ್ಕೆ

ಮಡಿಕೇರಿ : ಸ್ವಸ್ತಿಕ್ ಯುವ ವೇದಿಕೆಯ 24ನೇ ವರ್ಷದ ಗಣೇಶೋತ್ಸವ ಸಮಿತಿಯ ಜಂಟಿ ಅಧ್ಯಕ್ಷರಾಗಿ ಜಗದೀಶ್ (ಜಗ್ಗಿ) ಹಾಗೂ ಮಿಲನ್ ಆಚಾರ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಂದ, ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತಿ, ಸಹ ಕಾರ್ಯದರ್ಶಿಯಾಗಿ ಪುನೀತ್ ಭೀಮಯ್ಯ, ಖಜಾಂಜಿಯಾಗಿ ಅಂಚೆಮನೆ ಸತೀಶ್ ಕುಟ್ಟಪ್ಪ, ಸಹ ಖಜಾಂಜಿಯಾಗಿ ಮನೋಹರ್, ಗೌರವರಾಧ್ಯಕ್ಷರಾಗಿ ಸವಿತಾ ರಾಕೇಶ್, ಪ್ರೇಮ ರಾಮಯ್ಯ, ರಶ್ಮಿ ಪ್ರವೀಣ್, ನಿರ್ದೇಶಕರಾಗಿ ಜಯನ್ ಡಿ, ಶಿವರಾಜ್, ಸೋನಲ್ ಎಂ.ಎಸ್, ಮಂಜುನಾಥ್, ಹೇಮಂತ್ ಕುಮಾರ್, ಸಮಿತಿ ಮುಖ್ಯಸ್ಥರಾಗಿ ಎಂ.ಎಸ್. ಪ್ರಸಾದ್ ಆಯ್ಕೆಯಾಗಿದ್ದಾರೆಂದು ಸಮಿತಿಯ […]
ಮೇಯಲು ಬಂದಿದ್ದ ಹಸು ವಿದ್ಯುತ್ ಸ್ಪರ್ಶವಾಗಿ ದುರ್ಮರಣ..!

ಕುಶಾಲನಗರದ : ವಿದ್ಯುತ್ ತಗಲಿ ಹಸುವೊಂದು ಮೃತಪಟ್ಟ ಘಟನೆ ರಾಧಾಕೃಷ್ಣ ಬಡಾವಣೆಯ ಓಂ ಶಾಂತಿ ಆಶ್ರಮದ ಉದ್ಯಾನದ ಬಳಿ ನಡೆದಿದೆ. ಪಾರ್ಕ್ ಬಳಿ ಮೇಯುತ್ತಿದ್ದ ವೇಳೆ ಹಸುವಿಗೆ ವಿದ್ಯುತ್ ಸ್ಪರ್ಶವಾಗಿ ಈ ದುರ್ಘಟನೆ ಸಂಭವಿಸಿದೆ.ಮುಳ್ಳುಸೋಗೆಯ ಎಂ.ಎಸ್. ಪ್ರಸನ್ನ ಎಂಬವರಿಗೆ ಸೇರಿದ ಹಸುವಾಗಿದ್ದು, ತನ್ನ ಮುದ್ದಿನ ಹಸು ಮೃತಪಟ್ಟಿದ್ದನ್ನ ಕಂಡು ರೋಧಿಸುತ್ತಿದ್ದ ಚಿತ್ರಣ ಅಲ್ಲಿದ್ದವರಲ್ಲೂ ಕಂಬನಿ ತರಿಸಿತ್ತು. ಈ ವ್ಯಾಪ್ತಿಯಲ್ಲಿ ಹೆಚ್ಚಿನ ಮಕ್ಕಳು ಆಟವಾಡಲು ಬರುತ್ತಿರುತ್ತಾರೆ. ಇಂದು ರಜೆ ಕೂಡಾ ಇದ್ದುದ್ದರಿಂದ ಸಮಯ ಕಳೆದಂತೆ ಹೆಚ್ಚಿನ ಮಕ್ಕಳು ಬರುವ […]
ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ಪ್ರದಾನ

ಬೆಂಗಳೂರು : ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಸಾಹಿತ್ಯ ವಿದ್ಯಾರ್ಥಿಯಾಗಿರುವ ಜಮೀರ್ ಅಹಮದ್, ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಬದುಕಿನುದ್ದಕ್ಕೂ ಮೈಗೂಡಿಸಿಕೊಂಡು ಸರ್ವ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಆರ್ಭಟಿಸಿದ ಮಳೆ ಡಿಟೇಲ್ಸ್

ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 40.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 92.22 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1367.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 737.17 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.28 ಮಿ.ಮೀ. ಕಳೆದ ವರ್ಷ ಇದೇ ದಿನ 160.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1950.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1083 […]
ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಭಾನುವಾರ ‘ಅಭಿವಂದನಾ ದೀಪಾ’ ಗೌರವ ಸಮರ್ಪಣೆ – ಏಕ ಕಾಲದಲ್ಲಿ ಹಲವಾರು ಸಂಘಟನೆಗಳಿಂದ ಸನ್ಮಾನ..

ಮಡಿಕೇರಿ : ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಜೂನ್ 29 ರಂದು ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 92.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 62.63 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1327.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 644.95 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 79 ಮಿ.ಮೀ. ಕಳೆದ ವರ್ಷ ಇದೇ ದಿನ 90.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1879.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ – ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ – ಇಲ್ಲಿದೆ ಮಾಹಿತಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆ ಮುಂಜಾನೆ 08:30 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ನಂತರ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಗಾಳಿ/ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು, ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರುವುದು ಮತ್ತು ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ನೀರಿರುವ ಪ್ರದೇಶಕ್ಕೆ […]
ಸೈಬರ್ ಪೊಲೀಸರ ಹೆಸರಿನಲ್ಲಿ 07 ಲಕ್ಷ ರೂ ವಂಚನೆ – ಐವರು ವಂಚಕರು ಪೊಲೀಸರ ಬಲೆಗೆ..!

ಕುಶಾಲನಗರ : ಸೈಬರ್ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಏಳು ಲಕ್ಷ ರೂಪಾಯಿ ವಂಚಿಸಿದ ನಕಲಿ ಪೊಲೀಸರ ತಂಡವೊಂದರ ಐವರು ಖತರ್ನಾಕ್ಗಳನ್ನು ಕುಶಾಲನಗರ ಟೌನ್ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ(25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ.(19), ಬೆಂಗಳೂರು ಬನಶಂಕರಿಯ ಸಂಗೀತ, ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ.(19) ಹಾಗೂ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಮಾದಾಪಟ್ಟಣ ನಿವಾಸಿ ಪರಶಿವಮೂರ್ತಿ ಎಂಬವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಫೇಸ್ಬುಕ್ನಲ್ಲಿ ಯಾರೋ […]
೫೦% ರಿಯಾಯಿತಿಯಲ್ಲಿ ಕೃಷಿಕರಿಗೆ ಯಂತ್ರೋಪಕರಣ ಲಭ್ಯ – ಯಾವೆಲ್ಲ ಯಂತ್ರಗಳನ್ನ ಖರೀದಿಸಬಹುದು ಗೊತ್ತಾ..?

ಮಡಿಕೇರಿ : ೨೦೨೫-೨೬ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.೫೦ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.೧೦೦ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು […]
ಜೂನ್ 26 ಮತ್ತು 27 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ – ಮಳೆ ಹಾನಿ ಪ್ರದೇಶಗಳಿಗೆ ಭೇಟಿ

ಮಡಿಕೇರಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರ ಎನ್.ಎಸ್. ಬೋಸರಾಜು ಜೂನ್ ೨೬ ಮತ್ತು ೨೭ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ೨೬ ರಂದು ಬೆಳಗ್ಗೆ ೧೧.೩೦ ಗಂಟೆಗೆ ಕುಶಾಲನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರುವ ವಿವಿಧ ಪ್ರದೇಶ ವೀಕ್ಷಿಸಲಿದ್ದಾರೆ. ಸಂಜೆ ೫ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಮಳೆ ಹಾನಿಯ ಕುರಿತು ಜಿಲ್ಲಾಧಿಕಾರಿ ಜೊತೆ ಚರ್ಚಿಸಲಿದ್ದಾರೆ. ೨೭ ರಂದು ಬೆಳಗ್ಗೆ ೯.೩೦ ಗಂಟೆಗೆ ಗ್ರಾಮೀಣಾಭಿವೃದ್ಧಿ […]