ಹೆಗ್ಗಳ ಸರ್ಕಾರಿ ಶಾಲೆಗೆ ಪ್ರಿಂಟರ್ ಕೊಡುಗೆ

ವಿರಾಜಪೇಟೆಯ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ವಿರಾಜಪೇಟೆ ಶಾಖೆ, ಇವರು ಶನಿವಾರ ದಂದು ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಈ ವೇಳೆ ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್ ಅನೀಶ್ ಹಾಗೂ ಬ್ಯಾಂಕ್ ಸಿಬ್ಬಂದಿ ಗಣೇಶ್, ಶಾಲೆಯ ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಭಾಗಮಂಡಲ ಭಗಂಡೇಶ್ವರ ದೇವಾಲಯದ ಆವರಣ ಸ್ವಚ್ಛಗೊಳಿಸಿದ ಗಜಾನನ ಯುವಕ ಸಂಘ ಸದಸ್ಯರು…

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘದ ವತಿಯಿಂದ ಭಗಂಡೇಶ್ವರ ದೇವಾಲಯದ ಆವರಣವನ್ನು ಶುಚಿಗೊಳಿಸಲಾಯಿತು. ಎರಡು ತಿಂಗಳಿನಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ದೇವಾಲಯದ ಆವರಣದಲ್ಲಿ ಹಾವಸೆ(ಪಾಚಿ) ನಿರ್ಮಾಣವಾಗಿತ್ತು. ಇದರಿಂದಾಗಿ ದೇವಾಲಯಕ್ಕೆ ಆಗಮಿಸುವ ಭಕ್ತರು ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕುವಾಗ ಜಾರುವ ಪರಿಸ್ಥಿತಿ ಎದುರಾಗಿತ್ತು. ಈ ಬಗ್ಗೆ ಇಲ್ಲಿನ ಅರ್ಚಕರು ಇತ್ತೀಚೆಗೆ ಯುವಕ ಸಂಘದ ಪದಾಧಿಕಾರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಯುವಕ ಸಂಘದ ಸದಸ್ಯರು ಸೋಮವಾರ ಕಾರ್ಯಪ್ರವೃತ್ತರಾಗಿ ಆವರಣವನ್ನು ಶುಚಿಗೊಳಿಸಿದರು. ಸುಣ್ಣ ಪುಡಿ, ಬ್ಲೀಚಿಂಗ್ ಪೌಡರ್ ಹಾಕಿ […]
Breaking News : ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ- ಚಿನ್ನಾಭರಣ ದೋಚಿದ ಯುವಕ..! ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಕೃತ್ಯ..!

ಮಡಿಕೇರಿ : ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕತ್ತಿನಲ್ಲಿದ್ದ ಸರ ಕದ್ದೊಯ್ದಿರುವ ಘಟನೆ ಕೊಂಡಗೇರಿಯಲ್ಲಿ ನಡೆದಿದ್ದು, ಜಿಲ್ಲೆಯ ಜನ ಬೆಚ್ಚಿ ಬೀಳುವಂತೆ ಮಾಡಿದೆ. ಇಂದು ಮಧ್ಯಾಹ್ನ ವೇಳೆಗೆ ಘಟನೆ ನಡೆದಿದ್ದು, ಸಾರಮ್ಮ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಸಾರಮ್ಮ ತನ್ನ ಸೊಸೆಯೊಂದಿಗೆ ಮನೆಯಲ್ಲಿದ್ದು, ʼನಾನು ಪಕ್ಕದಲ್ಲಿ ಕೆಲಸಕ್ಕೆ ಬಂದಿದ್ದೇನೆ. ಕುಡಿಯೋಕೆ ನೀರು ಕೊಡಿʼ ಅಂತ ವ್ಯಕ್ತಿಯೊಬ್ಬ ಬಂದಿದ್ದಾನೆ. ಕೆಲವೇ ನಿಮಿಷದಲ್ಲಿ ಮಹಿಳೆ ಬಳಿಯಿದ್ದ ಸರವನ್ನು ಕಿತ್ತುಕೊಳ್ಳಲು ಯತ್ನಿಸಿದ್ದು, ಅದಕ್ಕೆ ಆಕೆ ಪ್ರತಿರೋಧವೊಡ್ಡಿದಾಗ ಹಲ್ಲೆ ನಡೆಸಿ ಚಿನ್ನಾಭರಣ […]
ದುದ್ದಿಯಂಡ ಮುಸ್ಕಾನ್ ಸೂಫಿ ಚೊಚ್ಚಲ ಕವನ ಸಂಕಲನ ಪ್ರಕಟಿಸಿದ ಅಂತರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್

ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೊಡಗಿನ ವಿದ್ಯಾರ್ಥಿನಿಯೊಬ್ಬರು ರಚಿಸಿದ ಕವನ ಸಂಕಲನ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ನಾಮನಿರ್ದೇಶನಗೊಂಡು ಸದ್ದಿಲ್ಲದೆ ಸುದ್ದಿಯಾಗಿದೆ. ವಿರಾಜಪೇಟೆ ಮೂಲದ ದುದ್ದಿಯಂಡ ಮುಸ್ಕಾನ್ ಸೂಫಿ ಅವರ ಚೊಚ್ಚಲ ಇಂಗ್ಲಿಷ್ ಕೃತಿ ‘ದಿಸ್ ಟೂ ಶೆಲ್ ಪಾಸ್’ ಅನ್ನು ಅಂತರಾಷ್ಟ್ರೀಯ ಖ್ಯಾತಿಯ ಬುಕ್ ಲಿಫ್ ಪಬ್ಲಿಕೇಶನ್ ಪ್ರಕಟಿಸಿದ್ದು, ಅಮೆರಿಕ ಮೂಲದ ಪ್ರಸಿದ್ಧ ಕವಿ ಎಮಿಲಿ ಡಿಕ್ಕಿನ್ಸನ್ ಸ್ಮರಣಾರ್ಥವಾಗಿ ನೀಡಲಾಗುವ 21ನೇ ಶತಮಾನದ ಅಂತರಾಷ್ಟ್ರೀಯ ಮಟ್ಟದ ‘ಇಂಡಿ ಆಥರ್ಸ್ ಅವಾರ್ಡ್ 2025’ ಕ್ಕೆ ನಾಮನಿರ್ದೇಶನಗೊಂಡಿದೆ. ಕೊಡವ ಮುಸ್ಲಿಂ ಸಮುದಾಯದ […]
ಅನುದಾನಿತ ಮತ್ತು ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಮಸ್ಯೆ ಬಗೆಹರಿಕೆಗೆ ಆಗ್ರಹ – ಶಾಸಕ ಡಾ. ಮಂತರ್ ಗೌಡರಿಗೆ ಮನವಿ ಸಲ್ಲಿಸಿದ ನಿಯೋಗ..!

ಸೋಮವಾರಪೇಟೆ : ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನಿತ ಮತ್ತು ಸರ್ಕಾರಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕ ಮತ್ತು ಕೊಡಗು ಜಿಲ್ಲಾ ಅನುದಾನಿತ ನೌಕರರ ಸಂಘದ ವತಿಯಿಂದ ಶಾಸಕ ಡಾ. ಮಂತರ್ ಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸೋಮವಾರಪೇಟೆಯಲ್ಲಿ ಭೇಟಿಯಾದ ನಿಯೋಗ ತಮ್ಮ ಸಮಸ್ಯೆಗಳ ಕುರಿತು ಶಾಸಕರಿಗೆ ಮನವರಿಕೆ ಮಾಡಿಕೊಟ್ಟಿತು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜಿ. ಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಕಳೆದ […]
Big Breaking News : ಧರ್ಮಸ್ಥಳದಲ್ಲಿ ನೂರಾರು ಶ* ಹೂತಿಟ್ಟ ಕೇಸ್ – ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ..!

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ವ್ಯಕ್ತಿಯೊಬ್ಬ ಹೇಳಿದ ವಿಚಾರ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ(SIT)ವನ್ನು ರಾಜ್ಯ ಸರ್ಕಾರ ರಚಿಸಿದೆ. ಪೊಲೀಸ್ ಮಹಾ ನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಈ ತಡದ ಮುಖ್ಯಸ್ಥರಾಗಿರಲಿದ್ದು, ಸದಸ್ಯರಾಗಿ ಉಪ ಪೊಲೀಸ್ ಮಹಾನಿರ್ದೇಶಕ ಎಂ.ಎಂ. ಅನುಚೇತ್, ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ, ಪೊಲೀಸ್ ಅಧೀಕ್ಷ ಜಿತೇಂದ್ರ ಕುಮಾರ್ ದಯಾಮ ಇರಲಿದ್ದಾರೆ. ಪ್ರಕರಣದ ತನಿಖೆಯ ಪ್ರಗತಿಯನ್ನು ಆಗಿಂದಾಗ್ಗೆ […]
ಭಾಗಮಂಡಲ ಗಜಾನನ ಯುವಕ ಸಂಘದ ವತಿಯಿಂದ ಆಂಬುಲೆನ್ಸ್ ಸೇವೆ ಆರಂಭ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ಗ್ರಾಮ ವ್ಯಾಪ್ತಿಯ ಜನರ ಅನುಕೂಲಕ್ಕಾಗಿ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ. ನೂತನ ಆಂಬುಲೆನ್ಸ್ಗೆ ಭಾಗಮಂಡಲ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹ್ಯಾರಿಸ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು ಸಂಘದ ಕಾರ್ಯಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗಜಾನನ ಯುವಕ ಸಂಘ ಸಮಾಜಕ್ಕೆ ಅನುಕೂಲವಾಗುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಗ್ರಾಮಸ್ಥರು ಕೂಡಾ ಸಹಕಾರ ನೀಡಬೇಕೆಂದರು. ಸಂಘದ ಅಧ್ಯಕ್ಷ ಗೌರೀಶ್ ರೈ […]
ಕೊಡಗಿನ ಹುಡುಗನ ಜೊತೆ ಆ್ಯಂಕರ್ ಅನುಶ್ರೀ ಮದುವೆ ಫಿಕ್ಸ್!

ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ (Anchor Anushree) ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಕೇಳುಬರುತ್ತಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ. ಕೊಡಗು ಮೂಲದ ರೋಷನ್ ಎಂಬುವವರೊಂದಿಗೆ ಅವರ ವಿವಾಹ ಆಗಸ್ಟ್ 28 ರಂದು ನಡೆಯಲಿದೆ ಎನ್ನಲಾಗಿದೆ. ಸರಳ ಶಾಸ್ತ್ರೋಕ್ತವಾಗಿ ಮದುವೆಯಾಗಿ ಬಳಿಕ ಸಿನಿಮಾ ಇಂಡಿಸ್ಟ್ರಿಯವರನ್ನ ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ. ಮಂಗಳೂರಿನ ಸುರತ್ಕಲ್ ಮೂಲದ ಅನುಶ್ರೀ, ತಮ್ಮ ಚುರುಕಾದ ನಿರೂಪಣೆಯಿಂದ ಕನ್ನಡ ಕಿರುತೆರೆಯಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಗಳಿಸಿದ್ದಾರೆ. ಬಿಗ್ ಬಾಸ್ […]
ಕೊಡಗು ಪತ್ರಕರ್ತರ ಸಂಘದಲ್ಲಿ ದತ್ತಿನಿಧಿ ಸ್ಥಾಪನೆ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಕುಶಾಲನಗರ ತಾಲೂಕು ಘಟಕದಲ್ಲಿ ಕೊಡವಂಡ ವಸಂತಿ ಪೊನ್ನಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಧಿಸಿದಂತೆ ದತ್ತಿನಿಧಿಯನ್ನು ಸ್ಥಾಪಿಸಿದ್ದು, ತಾಲೂಕು ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅವರಿಗೆ ರೂ.24 ಸಾವಿರ ಮೊತ್ತದ ಚೆಕ್ ಅನ್ನು ಗುರುವಾರ ಹಸ್ತಾಂತರ ಮಾಡಿದರು. ಈ ಸಂದರ್ಭ ಕೊರವಂಡ ಪೊನ್ನಪ್ಪ, ಸಂಘದ ಗೌರವಾಧ್ಯಕ್ಷ ಕೆ. ತಿಮ್ಮಪ್ಪ, ಉಪಾಧ್ಯಕ್ಷ ಬಿ.ಸಿ. ದಿನೇಶ್, ನಿರ್ದೇಶಕರಾದ ಶಿವಣ್ಣ, ಅನಿಲ್ ಇದ್ದರು.
ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ

ಮಡಿಕೇರಿ : ಪಾಲಿಬೆಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಪೋಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಾನೂನು ಅರಿವು ಮತ್ತು ಹದಿಹರೆಯದ ಮಕ್ಕಳ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಯಿತು. ಪೊಲೀಸ್ ಉಪನಿರೀಕ್ಷಕ ಹೆಚ್.ಕೆ. ಮಂಜುನಾಥ್ ಅವರು ಪೋಕ್ಸೊ ಕಾಯ್ದೆ,112 ತುರ್ತು ಸಂಖ್ಯೆ, ಮಕ್ಕಳ ಸಹಾಯವಾಣಿ, ಮಾದಕ ಪದಾರ್ಥಗಳ ದುಷ್ಪರಿಣಾಮ, ಮೊಬೈಲ್ ಬಳಕೆ, ಸೈಬರ್ ಅಪರಾಧ, ಬಾಲ ಅಪರಾಧ, ಗುಡ್ ಟಚ್-ಬ್ಯಾಡ್ ಟಚ್ ಇವುಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಕ್ಕಳ ಆರೋಗ್ಯದ […]