ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ 127ನೇ ಜನ್ಮ ದಿನಾಚರಣೆ

Field Marshal K.M. cariappa

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ […]

ಕ್ಲೋಸ್‌ಬರ್ನ್‌ ಸಹಿಪ್ರಾ ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ

ಮಡಿಕೇರಿ : ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಡಗದಾಳು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎನ್. ಪುಷ್ಪಾವತಿ‌ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಿತು. ಎಸ್‌ಡಿಎಂಸಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ದಿನದ ಮಹತ್ವದ ಕುರಿತಾಗಿ ಮಾತನಾಡಿದರು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಅಂಗನವಾಡಿ […]

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ

ಪೊನ್ನಂಪೇಟೆ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಪೊನ್ನಂಪೇಟೆ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್ಲೈನ್ ದೇಶಭಕ್ತಿ ಗೀತೆ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯು ಪೊನ್ನಂಪೇಟೆ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಎಂಟರಿಂದ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ, 4ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು […]

ಭಕ್ತಿ-ಸಂಭ್ರಮದಿಂದ ಜರುಗಿದ ವಾಯತೂರ್ ಆದಿ ಬೈತೂರಪ್ಪ ಊಟು ಮಹೋತ್ಸವ

ವರದಿ : ರಜಿತ ಕಾರ್ಯಪ್ಪ ವಿರಾಜಪೇಟೆ : ಉಳಿಕ್ಕಲ್ ಶ್ರೀ ವಾಯತೂರ್ ಕಲಿಯಾರ್ ಕೊಡಗಿನ ಶ್ರೀ ಆದಿ ಬೈತೂರಪ್ಪ ದೇವಸ್ಥಾನದ ಊಟು ಮಹೋತ್ಸವ ಜ.೧೩ ರಿಂದ ಪ್ರಾರಂಭವಾಗಿ ಜ.೨೬ ರವರೆಗೆ ೧೪ ದಿನಗಳ ಕಾಲ ಅತ್ಯಂತ ಶ್ರದ್ದಾಭಕ್ತಿಯಿಂದ ನಡೆದು ಧಾರ್ಮಿಕ ವಿಧಿವಿಧಾನಗಳೊಂದಿಗೆ ಉತ್ಸವಕ್ಕೆ ತೆರೆ ಎಳೆಯಲಾಯಿತು. ಬೆಳಿಗ್ಗೆ ಶ್ರೀ ಕ್ಷೇತ್ರದಲ್ಲಿ ಆರಾಟ್ ಉತ್ಸವ, ಆನೆಯ ಜೊತೆ ಭಕ್ತಿಯಿಂದ ನಡೆಸಲಾಯಿತು. ವಿಶೇಷ ಚಂಡೆಮೇಳದೊಂದಿಗೆ ಆನೆಯ ಮೇಲೆ ಉತ್ಸವ ಮೂರ್ತಿಯ ಮೆರವಣಿಗೆ, ದೇವರ ನೃತ್ಯ ಬಲಿ, ದೇವರ ಮೂಲ ಸ್ಥಾನದ […]

ಶಾಸಕ ಪೊನ್ನಣ್ಣ ತೇಜೋವಧೆಗೆ ಯತ್ನ: ಸುಳ್ಳು ಸುದ್ದಿ ಹರಡುವವರ ವಿರುದ್ಧ ನಾಪೋಕ್ಲು ವಲಯ ಕಾಂಗ್ರೆಸ್ ಕಿಡಿ

Napoklu Zone Congress

ನಾಪೋಕ್ಲು: ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ಹಾಗೂ ದೃಶ್ಯ ಮಾಧ್ಯಮಗಳ ಮೂಲಕ ನಮ್ಮ ನೆಚ್ಚಿನ ಶಾಸಕರಾದಂತಹ ಅಜ್ಜಿಕುಟ್ಟಿರ. ಎಸ್ ಪೊನ್ನಣ್ಣ ನವರ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಡಿಸುತ್ತಾ, ಜನರ ದಾರಿ ತಪ್ಪಿಸುತ್ತಿರುವುದು ವಿಪರ್ಯಾಸ. ಇದನ್ನು ನಾಪೋಕ್ಲು ವಲಯ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ನಾಪೋಕ್ಲು ವಲಯ ಕಾಂಗ್ರೆಸ್ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ ಹೇಳಿದರು. ಬೇತು ಗ್ರಾಮದ ದವಸ ಭಂಡಾರದಲ್ಲಿ ಮಂಗಳವಾರ ನಾಪೋಕ್ಲು ವಲಯ ಕಾಂಗ್ರೆಸಿನಿಂದ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದು ಸರ್ಕಾರದ ಅಧೀನದಲ್ಲಿ ನಡೆಯುವಂತಹ […]

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಬರೆಯಲು ಹೆಚ್ಚಿನ ಕೊಡವ ಕುಟುಂಬಗಳು ಪಾಲ್ಗೊಳ್ಳಿ: ಸಿ.ಎಂ ಅಪ್ಪಚ್ಚು

India Book of Records

ನಾಪೋಕ್ಲು: ಚೀಯಕ ಪೂವಂಡ ಕುಟುಂಬದ ವತಿಯಿಂದ ಏಪ್ರಿಲ್ 2026ರಲ್ಲಿ ಆಯೋಜಿಸಲಾಗಿರುವ ಕೊಡವ ಕೌಟುಂಬಿಕ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅಧಿಕ ಸಂಖ್ಯೆಯ ಕೊಡವ ಕುಟುಂಬಗಳು ಪಾಲ್ಗೊಳ್ಳುವುದರ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಕ್ರೀಡೆ ದಾಖಲಾಗಲು ಪ್ರಯತ್ನಿಸಬೇಕು ಎಂದು ಚೀ ಯಕ ಪೂವಂಡ ಕುಟುಂಬದ ಅಧ್ಯಕ್ಷ ಸಿ.ಎಂ ಅಪ್ಪಚ್ಚು ಹೇಳಿದರು. ಇಲ್ಲಿನ ನಾಲ್ನಾಡು ಪ್ಲಾಂಟಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಪೋಕ್ಲುವಿನ ಕೆಪಿಎಸ್ ಶಾಲಾ ಆಟದ ಮೈದಾನದಲ್ಲಿ ಏಪ್ರಿಲ್ 23 ರಿಂದ 26ರ ವರೆಗೆ 4 […]

ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ಕುರಿತು ಮಾಹಿತಿ ಕಾರ್ಯಗಾರ

workshop

ಮಡಿಕೇರಿ:-ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ ತರಬೇತಿ ಕಾರ್ಯಾಗಾರವು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಉದ್ಘಾಟಿಸಿ ಮಾತನಾಡಿ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡುವ ಅಂಕಿ ಅಂಶ ವಿವರವನ್ನು ಮುಂದಿನ ಯೋಜನೆಗಳಿಗೆ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದ್ದು, ವರದಿಗೆ ಸಂಬಂಧಿಸಿದ ನಿಖರವಾದ ಮಾಹಿತಿಯನ್ನು ಫೆಬ್ರವರಿ-2026 ರೊಳಗೆ ಸಂಬಂಧಿಸಿದ ಇಲಾಖೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು. ರಾಜ್ಯಮಟ್ಟದ ಸಂಪನ್ಮೂಲ […]

ಹುಲುಗುಂದ ಸಹಿಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ – L.K.G ದಾಖಲಾತಿಗೆ ಚಾಲನೆ

ಹಾರಂಗಿ : ಕೂಡುಮಂಗಳೂರು ಪಂಚಾಯತಿ ವ್ಯಾಪ್ತಿಯ (ಹಾರಂಗಿ)ಹುಲುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಮತ್ತು ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು. ಆ ಪ್ರಯುಕ್ತ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ಬಳಿಕ ವೇದಿಕೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಉದ್ಘಾಟಿಸಿದರು. 2026-27ನೇ ಶೈಕ್ಷಣಿಕ ಸಾಲಿನಿಂದ L.K.G TO 1st STANDARD English Medium ಪ್ರಾರಂಭ ಮಾಡುವ ಸಲುವಾಗಿ ದಾಖಲಾತಿ ಪ್ರಕ್ರಿಯೆಗೆ ಅತಿಥಿಗಳು ಚಾಲನೆ ನೀಡಿದರು. ಶಾಲೆ ಮುಖ್ಯ ಶಿಕ್ಷಕ ರಾಜಣ್ಣ, ಪಂಚಾಯಿತಿ […]

ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಸದಸ್ಯರಾದ ವಿನೋದ್ ಟಿ. ಆರ್. ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆಯ ಪೂರ್ವ ಪೀಠಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಾದ ಬಿ. ಎನ್. ಶಾಂತಿಭೂಷಣ್ ಬೋರ್ಕರ್ ರವರು ದಿನದ ಮಹತ್ವದ ಕುರಿತು ಮಾತನಾಡುತ್ತಾ ಭಾರತವು ವಿಶ್ವದಲ್ಲಿಯೇ […]

ಕೊಡಗು ಜಿಲ್ಲಾ ತೀಯಾನ್ ಮಹಾಸಭಾ ಸಮಿತಿಗೆ ನೂತನ ಸಾರಥಿಗಳ ಆಯ್ಕೆ

Thiyan Mahasabha

ಮಡಿಕೇರಿ: ಇಲ್ಲಿನ ರಾಜ ದರ್ಶನ್ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದ ತೀಯಾನ್ ಮಹಾಸಭಾ ಜಿಲ್ಲಾ ಸಮಿತಿಯ ಪ್ರಮುಖ ಸಭೆಯಲ್ಲಿ ಸಂಘಟನೆಯ ಬಲವರ್ಧನೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಕಿರಗಂದೂರಿನ ಎ.ಎನ್. ಪದ್ಮನಾಭ ಆಯ್ಕೆಯಾಗಿದ್ದಾರೆ. ಉಳಿದಂತೆ ಎಸ್.ಆರ್. ಅಶೋಕ್ ಕುಮಾರ್ (ಉಪಾಧ್ಯಕ್ಷ), ಶ್ರೀಮತಿ ಜ್ಯೋತಿ ಅರುಣ್ (ಪ್ರಧಾನ ಕಾರ್ಯದರ್ಶಿ), ಎಂ.ಕೆ. ಮೋಹನ್ (ಖಜಾಂಜಿ) ಹಾಗೂ ಎನ್.ಸಿ. ಸುದರ್ಶನ್ (ಸಂಘಟನಾ ಕಾರ್ಯದರ್ಶಿ) ಅವರನ್ನು ನೇಮಕ ಮಾಡಲಾಯಿತು. ಸಂಘಟನೆಯ ಗೌರವ ಸಲಹೆಗಾರರಾಗಿ […]