ಪೊದಕೋಟೆಯಲ್ಲಿ ಮಳೆಯಿಂದ ಮನೆಗೆ ಹಾನಿ

ವಿರಾಜಪೇಟೆ (virajpet)ಹೋಬಳಿ ಪೊದಕೋಟೆ ಗ್ರಾಮದ ನಿವಾಸಿಯಾದ ಹೆಚ್ ಕೆ ಬಾಬು ಅವರ ವಾಸದ ಮನೆಯು ಇಂದು ಮಳೆಯಿಂದಾಗಿ ಭಾಗಶಃ ಹಾನಿಯಾಗಿದೆ. ಈ ಸಂಬಂಧ ಕಂದಾಯ ಪರಿವೀಕ್ಷಕರು,ಸಹಾಯಕ ಅಭಿಯಂತರರು,ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರುಗಳು, ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರದ ಭರವಸೆಯನ್ನು ನೀಡಿದ್ದಾರೆ.
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 31.52 ಮಿ.ಮೀ. ಮಳೆಯಾಗಿದೆ (Average rainfall) . ಕಳೆದ ವರ್ಷ ಇದೇ ದಿನ 30.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1173.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ (During this same period) 559.82 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ 29.37 ಮಿ.ಮೀ. ಕಳೆದ ವರ್ಷ ಇದೇ ದಿನ 51.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ […]
ವಿರಾಜಪೇಟೆ: ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (Agriculture Extension Sub-Mission) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2025-26 ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ( post of Taluk Technical Manager )ಎಂಎಸ್ಸಿ(ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 2 […]
ಅರಣ್ಯ ಹಕ್ಕು ಪತ್ರದ ಪ್ರಕ್ರಿಯೆಗೆ ವೇಗ: ಮಡಿಕೇರಿಯಲ್ಲಿ ಡಿಜಿಟಲ್ ಸಹಾಯ ಕೋಶ ಆರಂಭ

ಮಡಿಕೇರಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (Department of Integrated Tribal Development Planning) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ (Forest Rights Cell) ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah )ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ […]
‘CET’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ ಕಾರ್ಯಗಾರ ಜೂ.28ಕ್ಕೆ

ಮಡಿಕೇರಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಜೂನ್ ೨೮ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ‘ಸಿಇಟಿ’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ (ನ್ಯೂ ಸೀಟ್ ಸೆಲೆಕ್ಷನ್ ಪ್ರೋಸೆಸ್) ಕಾರ್ಯಗಾರ ನಡೆಯಲಿದೆ. ಆದ್ದರಿಂದ ಎಲ್ಲಾ ಯುಜಿ ಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಹಾಜರಾಗಿ ಸೀಟು ಹಂಚಿಕೆಯ ಮಾರ್ಗದರ್ಶನದ ಕಾರ್ಯಗಾರ ಸದುಪಯೋಗ ಪಡೆಯಲು ಕೋರಿದೆ. ಜಿಲ್ಲೆಯ ಮತ್ತು ನೆರೆ […]
ಅತಿಸಾರ ಬೇಧಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ – ಮಕ್ಕಳ ಉತ್ತಮ ಆರೋಗ್ಯದತ್ತ ಗಮನ ಇರಲಿ: ಡಾ.ಸತೀಶ್ ಕುಮಾರ್

ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ(ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸೋಮವಾರ ನಡೆಯಿತು. ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜುಲೈ ೩೧ ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ […]
ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ: ವಿದ್ಯಾರ್ಥಿನಿ ನಿಧಿಗೆ ಶಾಸಕರಿಂದ ಸನ್ಮಾನ

ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಮೂಲದವರು. ಇದೀಗ ರಾಷ್ಟ್ರೀಯ ಮಟ್ಟದ ನೀಟ್ (NEET) ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 710 ಅಂಕಗಳನ್ನು ಪಡೆದು ಭಾರತದಲ್ಲಿ 84ನೇ ರ್ಯಾಂಕ್ ಮತ್ತು ಕರ್ನಾಟಕ ರಾಜ್ಯದಲ್ಲಿ ಗೌರವಾನ್ವಿತ 7ನೇ ಸ್ಥಾನವನ್ನು ಪಡೆದು ತಮ್ಮ ಗ್ರಾಮ ಹಾಗೂ ಜಿಲ್ಲೆಯ ಹೆಮ್ಮೆಗಾಗಿರುವ ವಿದ್ಯಾರ್ಥಿನಿ ಕೆ. ಜಿ. ನಿಧಿ ಅವರು ತಮ್ಮ ಈ ಅಪಾರ ಶ್ರದ್ಧೆ, ಪರಿಶ್ರಮ ಹಾಗೂ ಕನಸುಗಳನ್ನು ಪೂರೈಸುವ ದೃಢನಿಶ್ಚಯದಿಂದ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (kodagu)ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 68.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1142.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 529.05 ಮಿ.ಮೀ ಮಳೆಯಾಗಿತ್ತು. ಮಡಿಕೇರಿ : ಇಂದಿನ ಸರಾಸರಿ ಮಳೆ 99.60 ಮಿ.ಮೀ. ಕಳೆದ ವರ್ಷ ಇದೇ ದಿನ 13.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1713.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಕುಶಾಲನಗರ : ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತ

ಕುಶಾಲನಗರ (Kushalnagar) ತಾಲೂಕು, ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದ ನಿವಾಸಿಯಾದ ಪಿ ಬಿ ಗುರುವ ಪೌತಿ ಬಾಬು ಇವರ ವಾಸದ ಮನೆ ಭಾನುವಾರ ಸುರಿದ ಬಾರಿ ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತವಾಗಿದ್ದು ಅಂದಾಜು 30% ಹಾನಿ ಉಂಟಾಗಿದೆ. ಸೋಮವಾರ ಕಂದಾಯ ಪರೀವಿಕ್ಷಕರು ಸುಂಟಿಕೊಪ್ಪ ಹೋಬ ಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಕೂರು ಶಿರಂಗಾಲರವರೊಂದಿಗೆ ಜಂಟಿ ಪರಿಶೀಲಿಸಿದರು.
ಭಾಗಮಂಡಲದಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಜೂನ್ 30ಕ್ಕೆ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ರೋಟರಿ ಮಡಿಕೇರಿ ವುಡ್ಸ್ ಸಹಯೋಗದೊಂದಿಗೆ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಜೂನ್ 30ರಂದು ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ, ಸ್ತ್ರೀರೋಗ, ಹೃದಯ ಸಂಬಂಧಿಸಿದ ಕಾಯಿಲೆಗಳ ತಪಾಸಣೆ ಮಾಡಲಾಗುವುದು. ಶಿಬಿರಕ್ಕೆ ಬರುವ ಮಂದಿಗೆ ಭಾಗಮಂಡಲ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಉಚಿತ ಸೇವೆ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]