ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು : ಪ್ರೊ. ಅಶೋಕ ಸಂಗಪ್ಪ ಆಲೂರ

ಕುಶಾಲನಗರ : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇಲ್ಲಿನ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ. ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತಾದ […]

Power Cut: ನಾಳೆ ಕೊಡಗಿನಲ್ಲಿ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ!

Power Cut

ವಿರಾಜಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ತೆಲುಗರ ಬೀದಿ, ಸುಂಕದ ಕಟ್ಟೆ, ಅಪ್ಪಯ್ಯಸ್ವಾಮಿ ರಸ್ತೆ, ಕುಕ್ಲೂರು, ಕಾಕೋಟುಪರಂಬು, ಬೇತ್ರಿ, ಕೆದಮುಳ್ಳೂರು, ಪಾಲಂಗಾಲ, ಕೊಟ್ಟೋಳಿ, ಬೋಯಿಕೇರಿ, ಕದನೂರು, ಮೈತಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ […]

ಯುವನಿಧಿ ಯೋಜನೆ: ಯಾರೆಲ್ಲಾ ಅರ್ಹ? ಅರ್ಜಿ ಸಲ್ಲಿಸೋದು ಹೇಗೆ?

Yuvanidhi Yojana

ಮಡಿಕೇರಿ:- ಯುವನಿಧಿ ಯೋಜನೆಯಡಿ (Yuvanidhi Yojana) ಅರ್ಜಿ ಸಲ್ಲಿಸದ ಅರ್ಹರ ಅನುಕೂಲಕ್ಕಾಗಿ ಜುಲೈ, 07 ರಿಂದ ಆಗಸ್ಟ್, 07 ರವರೆಗೆ ವಿಶೇಷ ನೋಂದಣಿ ಅಭಿಯಾನ (Campaign) ನಡೆಯಲಿದೆ. 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ ಆನ್‍ಲೈನ್‍ನಲ್ಲಿ ಲಾಗಿನ್ ಆಗಿ ಸ್ವ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005997154 ಗೆ ಕರೆ ಮಾಡುವ ಮೂಲಕ ಅಥವಾ […]

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್, ಕೊಡೆ ವಿತರಣೆ

Sri Muthappan Malayali Samaj

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ 17ನೇ ವರ್ಷದ ಸ್ಥಾಪನ ದಿನ ಅಂಗವಾಗಿ ವಿರಾಜಪೇಟೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಕೆದಮುಳ್ಳೂರಿನ ಕಥರಿನ ಚಿತ್ತದಿನಿ ಮಕ್ಕಳ ಮನೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಮತ್ತು ಛತ್ರಿಯನ್ನು ವಿತರಿಸಲಾಗಿದೆ. ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜದ ಅಧ್ಯಕ್ಷರಾದ ಸುಮೇಶ್ ರವರ ನೇತ್ರತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಣೆ ಮಾಡಲಾಗಿದೆ.

ಗುಡ್ಡೆಹೊಸೂರುವಿನಲ್ಲಿ ಲಾರಿ ಹರಿದು ವ್ಯಕ್ತಿ ಸಾವು

Guddehosuru

ಇಂದು ಬೆಳಗ್ಗಿನ ಜಾವ ಲಾರಿಯೊಂದು ವ್ಯಕ್ತಿ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಡ್ಡೆಹೊಸೂರುವಿನಲ್ಲಿ ನಡೆದಿದೆ. ಮೃತನನ್ನು ನಾಪೋಕ್ಲು ಸಮೀಪದ ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಎಂದು ಗುರುತಿಸಲಾಗಿದೆ. ಈತ ಕಳೆದ ರಾತ್ರಿಯಿಂದ ಹೆದ್ದಾರಿ ಬದಿಯಲ್ಲೇ ಅಡ್ಡಾಡುತ್ತಿದ್ದ ಎನ್ನಲಾಗಿದ್ದು, ಇಂದು ಬೆಳಿಗ್ಗೆ ಮೈಸೂರಿನತ್ತ ತೆರಳುತ್ತಿದ್ದ ಲಾರಿ (Truck) ಹರಿದು ಮೃತಾಪಟ್ಟಿದ್ದಾನೆ. ಕುಶಾಲನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ

government school

ಇಂದು ಸ. ಕಿ. ಪ್ರಾ. ಹೆಗ್ಗಳ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನ ನಡೆಯಿತು. ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ನೆರವಾಗುತ್ತದೆ. ಶಾಲೆಗಳಲ್ಲಿ ನಡೆದ ಚುನಾವಣೆಗಳ ಅನ್ವಯ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಖಾತೆಗಳ ಹಂಚಿಕೆ ಮಾಡಿ ಆಯಾ ವರ್ಷದ ಶಾಲಾ ಜವಾಬ್ದಾರಿಯನ್ನು ವಹಿಸಲಾಗಿದೆ. ಪ್ರಧಾನ ಮಂತ್ರಿ, ಶಿಕ್ಷಣ ಮಂತ್ರಿ, ಸ್ವಚ್ಛತಾ ಮಂತ್ರಿ, ಗ್ರಂಥಾಲಯ ಪಾಲನೆ, ರಕ್ಷಣಾ ಮಂತ್ರಿ, ಆಹಾರ ಮಂತ್ರಿ ಹೀಗೆ ನಾನಾ ಖಾತೆಗಳನ್ನು ನೀಡಿ ಮಕ್ಕಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ವಿದ್ಯಾರ್ಥಿಗಳೆಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.

Power Cut: ನಾಳೆ ಕೊಡಗಿನಲ್ಲಿ ಹಲವೆಡೆ ಕರೆಂಟ್ ಇರಲ್ಲ: ಎಲ್ಲೆಲ್ಲಿ ಗೊತ್ತಾ?

Power Cut

ವಿರಾಜಪೇಟೆ (Virajpet) 66/33/11 ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆಎಸ್‍ಆರ್‍ಟಿಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಜುಲೈ, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಗೋಣಿಕೊಪ್ಪ ರಸ್ತೆ, ಪಂಜರಪೇಟೆ, ವಿದ್ಯಾನಗರ, ಕೆಎಸ್‍ಆರ್‍ಟಿಸಿ, ಶಾಂತಿನಗರ, ಸುಭಾಶ್‍ನಗರ, ಮೀನುಪೇಟೆ, ಹೆಗ್ಗಳ, ಬೇಟೋಳಿ, ಆರ್ಜಿ, ರಾಮನಗರ, ತೋರ, ಬೂದಿಮಾಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ […]

ಪ್ರಭಾವಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಅಕ್ರಮ ರೆಸಾರ್ಟ್‌ – ನೆಲಸಮಗೊಳಿಸಲು ಪರಿಸರ ಪ್ರೇಮಿಗಳ ಆಗ್ರಹ..!

Environmentalists

ಮಡಿಕೇರಿ: ಪ್ರಭಾವಿಗಳ ಬೆಂಬಲದಿಂದ ಜಿಲ್ಲೆಯಲ್ಲಿ ಭೂ ಕುಸಿತ ಪ್ರದೇಶಗಳಲ್ಲಿ ನಿರ್ಮಾಣ ಮಾಡಿರುವ ರೆಸಾರ್ಟ್‌ಗಳನ್ನು ಜಿಲ್ಲಾಡಳಿತ ನೆಲಸಮಗೊಳಿಸಬೇಕು ಎಂದು ಪರಿಸರವಾದಿ (Environmentalist) ಕರ್ನಲ್ ಸಿ.ಪಿ.ಮುತ್ತಣ್ಣ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊಡಗಿನಲ್ಲಿ ತೋಟ, ಜಮ್ಮಾ ಬಾಣೆ ಮತ್ತು ಜೌಗು ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗೆ ಪರಿವರ್ತಿಸುವುದನ್ನು ನಿಷೇಧಿಸುತ್ತದೆ. ಅಲ್ಲದೇ, ಭೂ ಪರಿವರ್ತನೆಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾದಲ್ಲಿ ಅದನ್ನು ಪರಿಶೀಲಿಸಲು ಮತ್ತು ಭೂ ಕುಸಿತ ಪೀಡಿತ ಪ್ರದೇಶಗಳಲ್ಲಿ ಪರಿವರ್ತನೆಗಳಿಗೆ ಅನುಮತಿ ನಿರಾಕರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸುವ ಆದೇಶ ಹೊರಡಿಸಿತ್ತು. ಆದರೆ, […]

ಕೊಡಗಿನಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ಮಾಹಿತಿ

Rainfall Kodagu

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 15.42 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.49 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1633.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1009.55 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.78 ಮಿ.ಮೀ. ಕಳೆದ ವರ್ಷ ಇದೇ ದಿನ 20.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2344.34 ಮಿ.ಮೀ, ಕಳೆದ ವರ್ಷ ಇದೇ […]

ಜನ್ಮದಿನದಂದು ಶಾಸಕ ಪೊನ್ನಣ್ಣ ಶ್ರೀ ಭಗಂಡೇಶ್ವರ – ತಲಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ

MLA Ponnanna

ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಎ.ಎಸ್.ಪೊನ್ನಣ್ಣ ತಮ್ಮ 51ನೇ ಜನ್ಮದಿನದಂದು ಪತ್ನಿ ಕಾಂಚನ ಅವರೊಂದಿಗೆ ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಅಭಿವೃದ್ಧಿ,ನೆಮ್ಮದಿ,ಸಮೃದ್ದಿ ತರುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರು, ವಲಯ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.