ಕೊಡಗಿನ ಯುವಜನತೆಗೆ ಉದ್ಯೋಗಾವಕಾಶ: ಮಡಿಕೇರಿಯಲ್ಲಿ ಉದ್ಯೋಗ ಮೇಳ

Job fair

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 09 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್, ಮಡಿಕೇರಿ, ಆರೇಂಜ್ ಕೌಂಟಿ ರೆಸಾರ್ಟ್, ಸಿದ್ದಾಪುರ, ಪೆಂಟಾಟೆಕ್, ಮಡಿಕೇರಿ, ಡಾಬರ್ ಮ್ಯಾನ್, ಮಂಗಳೂರು ಹಾಗೂ ಪಿಆರ್ ಕನ್‍ಸ್ಟ್ರಕ್ಷನ್ಸ್ ಕುಶಾಲನಗರ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು […]

ನಾಳೆಯಿಂದ ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Vehicle traffic banned

ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಯಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ(5) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜುಲೈ, 6 […]

ಸಿನೆಮಾ ಇಂಡಸ್ರ್ಟಿಗೆ ಬಂದ ಮೊದಲ ಕೊಡವತಿ ನಾನು ಎಂದ ರಶ್ಮಿಕಾ ವಿರುದ್ಧ ಆಕ್ರೋಶ, ನಟಿ ಪ್ರೇಮಾ ಹೇಳಿದ್ದೇನು?

ಕಿರಿಕ್‌ ಪಾರ್ಟಿ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಲಗ್ಗೆ ಇಟ್ಟ ನಟಿ ರಶ್ಮಿಕಾ ಮಂದಣ್ಣ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಈಗ ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೊಡವ ಸಮುದಾಯದಿಂದ ಸಿನಿಮಾಗೆ ಬಂದವರಲ್ಲಿ ನಾನೇ ಮೊದಲು ಎಂದು ಹೇಳುವ ಮೂಲಕ ಮತ್ತೊಂದು ವಿವಾದ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಹಿರಿಯ ಪತ್ರಕರ್ತೆ ಬರ್ಖಾ ದತ್ ಅವರಿಗೆ ರಶ್ಮಿಕಾ ಮಂದಣ್ಣ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದಲ್ಲಿ ತಮ್ಮನ್ನು ತಾವು ಹೊಗಳಿಕೊಳ್ಳುವ ಭರದಲ್ಲಿ, ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದ ಏಕೈಕ […]

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 35.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.97 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1540.50 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 950.98 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.17 ಮಿ.ಮೀ. ಕಳೆದ ವರ್ಷ ಇದೇ ದಿನ 8.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2213.01 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ವಿದ್ಯುತ್ ಆಘಾತಕ್ಕೆ ಯುವಕ ಬಲಿ – ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಶಾಸಕ ಡಾ. ಮಂತರ್‌ ಗೌಡ

ಮಡಿಕೇರಿ : ನಿನ್ನೆ ವಿದ್ಯುತ್‌ ಆಘಾತಕ್ಕೆ ಒಳಗಾಗಿ ಮೃತಪಟ್ಟ ಹುಲಿತಾಳದ ಯುವಕ ಹೆಚ್.ಪಿ.ಪ್ರತೀಪ್‌ ಕುಟುಂಬಸ್ಥರನ್ನು ಶಾಸಕ ಡಾ. ಮಂತರ್‌ ಗೌಡ (Mantar Gowda) ಭೇಟಿಯಾಗಿ ಸಾಂತ್ವನ ಹೇಳಿದರು. ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಮಂತರ್‌ ಗೌಡ ಘಟನೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದರು. ನಿನ್ನೆ ಮನೆಯ ಬಳಿ ವಿದ್ಯುತ್‌ ಕಂಬ ಏರಿ ದುರಸ್ಥಿ ವೇಳೆ ವಿದ್ಯುತ್‌ ತಗಲಿ ಪ್ರತೀಪ್‌ ಮೃತಪಟ್ಟಿದ್ದರು.

ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಡಗಿನ ಅಬ್ದುಲ್‌ ರೆಹಮಾನ್‌ ಎನ್‌ಐಎ ವಶಕ್ಕೆ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಹಿಂದು ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೋಮವಾರಪೇಟೆಯ ಅಬ್ದುಲ್‌ ರೆಹಮಾನ್‌ನನ್ನು NIA ಅಧಿಕಾರಿಗಳು ಬಂಧಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪ ಸೋಮವಾರಪೇಟೆಯ ಕಲ್ಕಂದೂರಿನ ಅಬ್ದುಲ್‌ ರೆಹಮಾನ್‌ ಮೇಲೆ ಇತ್ತು. ಪ್ರರಕಣದ ನಂತರ ಈತ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಈತನ ಮಾಹಿತಿ ನೀಡಿದವರಿಗೆ ನಗದು ಬಹುಮಾನೂ ಘೋಷಣೆಯಾಗಿತ್ತು. ಆದರೆ ಈತ ಮಾತ್ರ ಸಿಕ್ಕಿರಲಿಲ್ಲ. ಇಂದು ಕೇರಳದ ವಿಮಾನದ […]

ವಿದ್ಯುತ್ ಪ್ರವಹಿಸಿ ಯುವಕ ದುರ್ಮರಣ..!

ಮಡಿಕೇರಿ : ವಿದ್ಯುತ್ ತಗಲಿ ಯುವಕನೋರ್ವ ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ನಡೆದಿದೆ. H.P. ಪ್ರತೀಪ್(32) ಮೃತ ಯುವಕ. ಇಂದು ಸಂಜೆ ಮನೆ ಬಳಿಯ ವಿದ್ಯುತ್ ಕಂಬವೇರಿ ದುರಸ್ತಿಗೆ ಮುಂದಾಗಿದ್ದ ವೇಳೆ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ. ಕಂಬದಲ್ಲೇ ಪ್ರತೀಪ್ ಕೊನೆಯುಸಿರೆಳೆದಿದ್ದಾನೆ. ಮೃತದೇಹವನ್ನು ಮಡಿಕೇರಿ ಶವಾಗಾರಕ್ಕೆ ರವಾನಿಸಲಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಂ. ಬಾಡಗ ಅಂಗನವಾಡಿ ಕೇಂದ್ರದಲ್ಲಿ ಕೈ ತೊಳೆಯುವ ದಿನಾಚರಣೆ

ಮೂರ್ನಾಡು : ಎಂ. ಬಾಡಗ ಅಂಗನವಾಡಿ ಕೇಂದ್ರದಲ್ಲಿ ವಿಟಮಿನ್‌ ಎ ಕಾರ್ಯಕ್ರಮ ಹಾಗೂ ಕೈ ತೊಳೆಯುವ ದಿನಾಚರಣೆ ನಡೆಯಿತು. ಕೇಂದ್ರದ ಮಕ್ಕಳಿಗೆ ಪ್ರತಿ ಬಾರಿ ಹೇಗೆ ಕೈ ತೊಳೆದು ಶುಚಿಯಾಗಿರಬೇಕೆಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು. ಕೈ ತೊಳೆಯುವ 7 ವಿಧಾನಗಳನ್ನು ಮಕ್ಕಳು ಹಾಗೂ ಪೋಷಕರಿಗೆ ಅಂಗನವಾಡಿ ಸಿಬ್ಬಂದಿ ವಿವರಿಸಿದರು. 1 ವರ್ಷ 3 ತಿಂಗಳಿಂದ ಐದು ವರ್ಷದವರೆಗಿನ ಮಕ್ಕಳಿಗೆ ವರ್ಷದಲ್ಲಿ ಎರಡು ಸಲ ಅಂದರೆ ಆರು ತಿಂಗಳಿಗೊಮ್ಮೆ ಇರುಳು ಕುರುಡುತನ ಬರದಂತೆ ತಡೆಯುವುದಕ್ಕಾಗಿ ವಿಟಮಿನ್ ಎ […]

Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್‍ನಲ್ಲಿ ಜುಲೈ, 05 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 05 ಗಂಟೆಯವರೆಗೆ, ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆಎಸ್‍ಆರ್‍ಟಿಸಿ ಬಸ್ ಸ್ಟಾಂಡ್, ಹಳೆ ಪ್ರೈವೇಟ್ ಬಸ್ ಸ್ಟಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯಗೆ ಬೀಳ್ಕೊಡುಗೆ

ಮಡಿಕೇರಿ : ಸಮಾಜ ಕಲ್ಯಾಣ ಇಲಾಖೆಯಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕು ಸಹಾಯಕ ನಿರ್ದೇಶಕರಾಗಿ ಸುದೀರ್ಘ 7 ವರ್ಷ ಸೇವೆ ಸಲ್ಲಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣಕ್ಕೆ ವರ್ಗಾವಣೆಗೊಂಡ ಪ್ರೀತಿ ಚಿಕ್ಕಮಾದಯ್ಯ ಅವರನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಮಡಿಕೇರಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉಪನಿರ್ದೇಶಕರ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರು, ಸಿಬ್ಬಂದಿ, ಮಡಿಕೇರಿ, ಸೋಮವಾರಪೇಟೆಯ ಸಹಾಯಕ ನಿರ್ದೇಶಕರು, ಪೊನ್ನಂಪೇಟೆ ತಾಲೂಕಿನ ಸಿಬ್ಬಂದಿಗಳು, ಮಡಿಕೇರಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಮತ್ತು ಸಿಬ್ಬಂದಿ ಈ […]