ಮಾಜಿ ಸೈನಿಕ ಗಿರೀಶ್ ನಾಪತ್ತೆ: ಶೋಧ ಕಾರ್ಯ ಚುರುಕು

ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ (Girish) (46)ಎಂಬವರು ನಾಪತ್ತೆ. ಗಿರೀಶ್ ಕುಶಾಲನಗರದ (Kushalnagara) ಎಸ್.ಎಲ್.ಎನ್ ಸಂಸ್ಥೆ ಯ ಉದ್ಯೋಗಿ ಇವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ಶಂಕೆಯಾಗಿದೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ (investigation) ನಡೆಯುತ್ತಿದೆ.
ಕೊಡಗಿನಲ್ಲಿ ತುರ್ತಾಗಿ BSNL ಸೇವೆ ಸರಿಪಡಿಸಲು ಕೇಂದ್ರ ಸಚಿವರಿಗೆ ಯದುವೀರ್ ಮನವಿ

ಕೊಡಗಿನಲ್ಲಿ ಹೆಚ್ಚಾಗಿರುವ ಬಿಎಸ್ಎನ್ಎಲ್ ನೆಟ್ವರ್ಕ್ ( BSNLNetwork) ವ್ಯವಸ್ಥೆಯನ್ನು ಸರಿಪಡಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮೈಸೂರು-ಕೊಡಗು ಸಂಸದ ಯದುವೀರ್ (Yaduveer) ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್, ಕೊಡಗಿನಲ್ಲಿ ಈಗ ಅತ್ಯಂತ ತುರ್ತಾಗಿ ಈ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡಿದರು.ಈ ಸಂಬಂಧ ಯದುವೀರ್ ಅವರು ಪತ್ರವೊಂದನ್ನು ಸಚಿವರಿಗೆ ನೀಡಿದ್ದಾರೆ ಕೊಡಗಿನಲ್ಲಿ ಇತ್ತೀಚೆಗೆ ಧಾರಾಕಾರ […]
ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟ: ದ್ವಿತೀಯ ಸ್ಥಾನ ಮುಡಿಗೇರಿಸಿಕೊಂಡ ಕೊಡಗು ಸೈನಿಕ ಶಾಲೆ

ಒಡಿಶಾದ (Odisha)ಭುವನೇಶ್ವರದಲ್ಲಿ ನಡೆದ ರಾಷ್ಟ್ರಮಟ್ಟದ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ(National Inter-Sainik Schools Football Tournament)ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ಪ್ರಥಮ ಬಾರಿಗೆ ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿ ಹಾಗೂ ಟ್ರೋಫಿಯನ್ನು ಗಳಿಸಿದೆ. ಈ ಸಾಧನೆಯೊಂದಿಗೆ ಶಾಲೆಯು ಜಿಲ್ಲೆಗೆ ಕೀರ್ತಿ ತಂದಿದೆ. ಕ್ರೀಡಾಕೂಟದಿಂದ ಮರಳಿದ ವಿದ್ಯಾರ್ಥಿಗಳನ್ನು ಕೂಡಿಗೆ ಅಂಜಲಾ ವಿದ್ಯಾನಿಕೇತನ ಶಾಲೆಯಿಂದ ಅಲಂಕಾರಗೊಂಡ ವಾಹನದಲ್ಲಿ ಮೆರವಣಿಗೆಯ ಮೂಲಕ ಸೈನಿಕ ಶಾಲೆಗೆ ಕರೆತರಲಾಯಿತು. ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಮಲ್ಲಾರ್ಪಣೆ ಮೂಲಕ ಮೆರವಣಿಗೆಗೆ ಚಾಲನೆ […]
ಬೆಂಗಳೂರಿನಲ್ಲಿ ಕೊಡಗಿನ ಯುವಕ ಆತ್ಮಹತ್ಯೆ

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಾವತಿರವರ ಪುತ್ರ ಗಗನ್ (21) ಎಂಬುವವರು ನೆನ್ನೆ ರಾತ್ರಿ ಬೆಂಗಳೂರಿನಲ್ಲಿ(Bangalore) ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Sucide)ಮಾಡಿಕೊಂಡಿದ್ದಾರೆ. ತಾಯಿಯ ಮುಖ ನೋಡುವ ಮೊದಲೇ ಇಹಲೋಕ ತ್ಯಜಿಸಿದ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗಗನ್ ರೀಲ್ಸ್ ಕೂಡ ಮಾಡುತ್ತಿದ್ದರು. ಕಳೆದ ಎರಡು ದಿವಸಗಳಿಂದ ತಾಯಿಗೆ ಕರೆ ಮಾಡಿ ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದ ಎನ್ನಲಾಗಿದೆ. […]
ಪೊನ್ನಂಪೇಟೆಯಲ್ಲಿ ಮಾದಕ ವಸ್ತು ಸರಬರಾಜು – 1.79 ಕೆಜಿ ಗಾಂಜಾ ಸಹಿತ ಆರೋಪಿ ಅಂದರ್..!

ಗೋಣಿಕೊಪ್ಪ : ಮಾದಕ ವಸ್ತು MDMA ಮತ್ತು ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪಿಯೊಬ್ಬನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಗುರುದತ್ (30) ಬಂಧಿತ ವ್ಯಕ್ತಿ. ಬಂಧಿತನಿಂದ 4 ಗ್ರಾಂ MDMA ಹಾಗೂ 1 ಕೆ.ಜಿ. 79 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ದಿನ ಈತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ವಿರಾಜಪೇಟೆ ಉಪವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್, ಗೋಣಿಕೊಪ್ಪ ಪ್ರಭಾರ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, […]
ಪೊಲೀಸರ ಮನೆಗೇ ಕನ್ನ ಹಾಕಿದ ಖತರ್ನಾಕ್ ಚೋರರು..! – ಇಲ್ಲಿದೆ ನೋಡಿ ಮಾಹಿತಿ..!

ಮಡಿಕೇರಿ : ರಕ್ಷಣೆ ನೀಡುವ ಪೊಲೀಸರ ಮನೆಗೇ ಖತರ್ನಾಕ್ಗಳು ಕನ್ನ ಹಾಕಿರುವ ಘಟನೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಮೈತ್ರಿ ಪೊಲೀಸ್ ಸಮುದಾಯ ಭವನ ಬಳಿಯಿರುವ ಪೊಲೀಸರ ವಸತಿ ಗೃಹಗಳನ್ನೇ ಟಾರ್ಗೆಟ್ ಮಾಡಿದ ಕಳ್ಳರು ಮನೆಗೆ ನುಗ್ಗಿ ನಗದು, ಅಮೂಲ್ಯ ವಸ್ತುಗಳನ್ನ ದೋಚಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಕೃತ್ಯವೆಸಗಿದ್ದಾರೆ. ಕೃತ್ಯ ನಡೆದ ಮನೆಗಳಿಗೆ ಪೊಲೀಸ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ ನಗರದಲ್ಲಿ […]
ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ – ರಾಜ್ಯಾಧ್ಯಕ್ಷರಿಂದ ಆದೇಶ ಪ್ರತಿ ಸ್ವೀಕಾರ..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮರು ನೇಮಕವಾದ ನಾಪಂಡ ರವಿ ಕಾಳಪ್ಪ ಇಂದು ರಾಜ್ಯಾಧ್ಯಕ್ಷರಿಂದ ಅಧಿಕೃತ ಆದೇಶ ಪ್ರತಿ ಸ್ವೀಕರಿಸಿದರು. ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ ಬಿ.ವೈ. ವಿಜಯೇಂದ್ರ ಆದೇಶ ಪ್ರತಿ ನೀಡಿದರು. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಕ್ಯಾ. ಗಣೇಶ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. […]
65 ಸಾವಿರಕ್ಕೆ ಹೊಸ ಸ್ಕೂಟರ್ ಬಿಡುಗಡೆ: ಏನಿದರ ವಿಶೇಷತೆ ಗೊತ್ತಾ?

ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬ್ರಾಂಡ್ಗಳಲ್ಲಿ ಒಂದಾದ ಝೀಲಿಯೋ ಇ (ZELIO E) ಕಂಪನಿಯು, ತನ್ನ ಜನಪ್ರಿಯ ‘ಲೆಜೆಂಡರ್ ಕಡಿಮೆ ವೇಗ’ದ (Low speed) ಎಲೆಕ್ಟ್ರಿಕ್ ಸ್ಕೂಟರ್ನ ಬಹು ನಿರೀಕ್ಷಿತ ಫೇಸ್ಲಿಫ್ಟ್ ಮಾಡಲ್ನ್ನು ಬಿಡುಗಡೆ ಮಾಡಿದೆ. ಹೊಸ ಸ್ಕೂಟರ್ ಅನ್ನು ಮೂರು ವಿಭಿನ್ನ ಬ್ಯಾಟರಿ ಪ್ಯಾಕ್ ಹಾಗೂ ಮೂರು ಹೊಸ ಬಣ್ಣಗಳಲ್ಲಿ ಲಭ್ಯವಿದೆ. ರಸ್ಟಿ ಆರೆಂಜ್, ಗ್ಲಾಸಿ ಗ್ರೀನ್ ಮತ್ತು ಗ್ಲಾಸಿ ಗ್ರೇ. 60V/30A ವೇರಿಯೆಂಟ್ ಬೆಲೆಯು ರೂ. 75,000 ಇದ್ದು, 74V/32A […]
ಕೊಡಗಿನಲ್ಲಿ ಕಳೆದ ವರ್ಷಕ್ಕಿಂತ ಎರಡರಷ್ಟು ಮಳೆಯ ದಾಖಲೆ!?

ಕೊಡಗು ಜಿಲ್ಲೆಯಲ್ಲಿ (Kodagu) ಕುಂಠಿತಗೊಂಡ ಮಳೆ ಬುಧವಾರ 39.92 ಮಿ. ಮೀ ಮಳೆ ದಾಖಲು….. ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 39.92 ಮಿ.ಮೀ. ಮಳೆಯಾಗಿದೆ(Rain). ಕಳೆದ ವರ್ಷ ಇದೇ ದಿನ 8.07 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1029.43 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 504.49 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ 54.25 ಮಿ.ಮೀ. ಕಳೆದ ವರ್ಷ ಇದೇ ದಿನ 15.30 […]
ಜಲಪ್ರವಾಹ : ಚೇರಂಬಾಣೆ ಗ್ರಾಮಸ್ಥರ ಸಂಚಾರಕ್ಕೆ ಕೇವಲ ದೋಣಿ ಆಶ್ರಯ

ಚೇರಂಬಾಣೆ (cherambane) ದೋಣಿ ಕಾಡುವಿನಲ್ಲಿ ಪ್ರವಾಹ ಸ್ಥಳೀಯರಿಗೆ ಸಂಚರಿಸಲು ದೋಣಿ ವ್ಯವಸ್ಥೆ.ಭಾಗಮಂಡಲ ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ಎಂಬಲ್ಲಿ ಪ್ರವಾಹ ಬಂದಿದ್ದು ಸ್ಥಳೀಯರು ದೋಣಿ ಮುಖಾಂತರ ಸಂಚಾರ ಮಾಡುತ್ತಿದ್ದಾರೆ. ಪ್ರವಾಹ ಬಂದಿರುವ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರರು ಮಡಿಕೇರಿ ತಾಲ್ಲೂಕು ಇವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.