ಜೂ.11 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ – ನೀವೂ ದೂರು ಸಲ್ಲಿಸಹುದು..!?
ಮಡಿಕೇರಿ : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ(lokayukta) ಅಧಿಕಾರಿಗಳು ಜೂನ್ 11 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರತದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು […]
ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿಎಂ ಸಿದ್ದರಾಮಯ್ಯ
ನವದೆಹಲಿ(new dellhi) : ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು […]
ಯುವಜನತೆಗೆ ಅವಕಾಶ: ಕೊಡಗಿನಲ್ಲಿ ಉದ್ಯೋಗ ಮೇಳ

ಮಡಿಕೇರಿ:-ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ (Job fair) ಟೀಷರ್ ದಿ ಟೆಕ್ನಿಕಲ್ ಸರ್ವೀಸ್ (Techser the technical service, Mysore), ಕಲ್ಯಾಣಿ ಮೋಟಾರ್ಸ್ ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಅಪೋಲೋ ಫಾರ್ಮಸಿ, ಮೈಸೂರು, ತಾಜ್ ರೆಸಾಟ್ರ್ಸ್, ಮಡಿಕೇರಿ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ […]
ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ ಹಾಗೂ ಯೋಗ ಪ್ರದರ್ಶನ’

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ವಿವಿಧ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರರಾಷ್ಟ್ರೀಯ ಯೋಗ (Yoga) ದಿನಾಚರಣೆ ಪ್ರಯುಕ್ತ ಹಸಿರು ಯೋಗ, ಶ್ರಮದಾನ, ಸ್ವಚ್ಛತಾ ಅಭಿಯಾನ ಮತ್ತು ಸಸಿ ನೆಡುವ ಕಾರ್ಯಕ್ರಮವು ಮಂಗಳವಾರ ನಗರದ ಗಾಂಧಿ ಮೈದಾನ ಹಾಗೂ ಗಾಂಧಿ ಭವನದಲ್ಲಿ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಚತಾ ಅಭಿಯಾನಕ್ಕೆ ನಗರಸಭಾ ಸದಸ್ಯರಾದ ಚಂದ್ರಶೇಖರ್ ಅವರು ಚಾಲನೆ ನೀಡಿದರು. ಬಳಿಕ ಗಾಂಧಿ ಮೈದಾನದಿಂದ ಗಾಂಧಿ ಭವನದವರೆಗೆ ಯೋಗದ ಮಹತ್ವ ಕುರಿತು ‘ಜಾಗೃತಿ ಜಾಥ’ ಜರುಗಿತು. ನಗರದ […]
ಕಳೆದ 24 ಗಂಟೆ ಅವಧಿಯಲ್ಲಿ ಕೊಡಗಿನಲ್ಲಿ ಸುರಿದ ಮಳೆ ಮಾಹಿತಿ

ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 0.44 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.62 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 786.04 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 426.29 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.93 ಮಿ.ಮೀ. ಕಳೆದ ವರ್ಷ ಇದೇ ದಿನ 33.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1159.99 ಮಿ.ಮೀ, ಕಳೆದ ವರ್ಷ ಇದೇ […]
“ಮನರೇಗಾ ಕನಸು ನನಸಾಯಿತು”: ಹೊಸ ಅಂಗನವಾಡಿಗೆ ಶಾಸಕ ಪೊನ್ನಣ್ಣ ಚಾಲನೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿರಾಜಪೇಟೆ (Virajpet) ತಾಲ್ಲೂಕಿನ ಕಾರ್ಮಾಡು ಗ್ರಾ.ಪಂ ( Karmadu Gram Panchayat)ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ (Ponnanna) ಅವರು ಉದ್ಘಾಟಿಸಿದರು. ಅಂಗನವಾಡಿ ಕೇಂದ್ರಗಳು ( Anganwadi Center) ಮಕ್ಕಳ ಪ್ರಾಥಮಿಕ ಹಂತದ ಶಿಕ್ಷಣ ಒದಗಿಸುವ ಒಂದು ಪ್ರಮುಖ ಕೇಂದ್ರಗಳಾಗಿದ್ದು, ಮಕ್ಕಳ ದೈಹಿಕ ಹಾಗೂ ಬೌದ್ದಿಕ ಬೆಳವಳಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. […]
ವಿರಾಜಪೇಟೆಯಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಪಟ್ಟಣದ ಪರಂಜರುಪೇಟೆಯ ನಿಸರ್ಗ ಬಡಾವಣೆಯ ((Nisarga Layout) ಬಳಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣವನ್ನು (new bus stand) ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್ ಪೊನ್ನಣ್ಣ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಇವರು ಬಸ್ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಈ ತಂಗುದಾಣದ (bus stand) ನಿರ್ಮಾಣ ಮಾಡಲಾಗಿದ್ದು ಇದರ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಅದೇ ರೀತಿ ಸುಚಿತ್ವವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಇದಕ್ಕೆ ಸಂಭಂದ ಪಟ್ಟವರು ಇಲ್ಲಿ ಇರಲು ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಹೇಳಿದರು. ಈ […]
ಡೊನೇಟರ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ 11ನೇ ವರ್ಷದ ಉಚಿತ ನೋಟ್ ಬುಕ್ ವಿತರಣೆ

ಬಡವರ ಬೆಳಕಾಗಿ ಜನಸೇವೆಗೆಂದೇ ಹೆಸರುವಾಸಿಯಾಗಿರುವ ವಿರಾಜಪೇಟೆಯ (virajpet) ಡೊನೇಟರ್ಸ್ ಚಾರಿಟಬಲ್ ಟ್ರಸ್ಟ್ ಕಳೆದ 10 ವರ್ಷದಿಂದ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಜನಸೇವೆ ಮಾಡುತ್ತಾ ಬಂದಿದೆ. ಇದರ ಭಾಗವಾಗಿ 11ನೇ ವರ್ಷದ ಕಾರ್ಯಕ್ರಮದ ಹಿನ್ನಲೆ ವಿರಾಜಪೇಟೆಯ ವಿವಿಧ ಶಾಲೆಯ 350ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ವಿರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಯಿತು. ಹಾಗೆಯೇ ವಿರಾಜಪೇಟೆಯ ಆರ್ಜಿಯಲ್ಲಿರುವ ಉರ್ದು ಶಾಲೆ ಹೆಗ್ಗಳ , ಚಿಟ್ಟಡೆ ಮತ್ತು ದೇವಣಗೇರಿ ಶಾಲೆಗಳ 450ಕ್ಕೂ […]
ಮಡಿಕೇರಿ ಹಿಂದೂ ಮಲಯಾಳಿ ಸಂಘದಿಂದ ಪುಸ್ತಕ ವಿತರಣೆ : ಹೆಚ್ಚು ಅಂಕದೊಂದಿಗೆ ಉತ್ತಮ ಸಂಸ್ಕೃತಿಯನ್ನೂ ಮೈಗೂಡಿಸಿಕೊಳ್ಳಿ : ಕೆ.ಎಸ್.ರಮೇಶ್ ಕರೆ

ಮಡಿಕೇರಿ : ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಹೆಚ್ಚು ಅಂಕ ಗಳಿಸಿದರೆ ಮಾತ್ರ ಸಾಲದು, ಉತ್ತಮ ಸಂಸ್ಕೃತಿಯನ್ನು ಕೂಡ ಮೈಗೂಡಿಸಿಕೊಳ್ಳಬೇಕು ಎಂದು ಹಿಂದೂ ಮಲಯಾಳಿ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್ ಅವರು ಕರೆ ನೀಡಿದ್ದಾರೆ. ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ನಗರದಲ್ಲಿ ನಡೆದ ೧ ರಿಂದ ೧೦ನೇ ತರಗತಿಯವರೆಗಿನ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಎಲ್ಲರಿಗೂ ಅಗತ್ಯವಿದೆ, ಶಿಕ್ಷಣದೊಂದಿಗೆ ಮಕ್ಕಳು ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಪೋಷಕರು […]
ಮರಾಠ, ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಡಿಕೇರಿ: ಕೊಡಗು (Kodagu) ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘದ ೨೯ನೇ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.೮ ರಂದು ನಡೆಯಲಿದೆ. ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ಕೊಡಗು ಜಿಲ್ಲಾ ಅಂಭಾಭವಾನಿ ಯುವಕ, ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆಯ ಸಂಘದ ನಿವೇಶನದಲ್ಲಿ ಬೆಳಿಗ್ಗೆ ೯ ಗಂಟೆಗೆ ಸಭೆ ನಡೆಯಲಿದೆ. ಸಭೆಯನ್ನು ಕರ್ನಾಟಕ ಮಾರಾಟಿ ಒಕ್ಕೂಟದ ಅಧ್ಯಕ್ಷ ಡಾ.ಕೆ.ಸುಂದರ್ ನಾಯ್ಕ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಮರಾಠ-ಮರಾಟಿ […]