RCB ವಿಜಯೋತ್ಸವ: ಕಾಲ್ತುಳಿತದಲ್ಲಿ ಕೊಡಗು ಮೂಲದ ಯುವತಿ ಬಲಿ

ಬೆಂಗಳೂರು ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ RCB ವಿಜಯೋತ್ಸವ ಸಂದರ್ಭ ಉಂಟಾದ ಕಾಲ್ತುಳಿತದಲ್ಲಿ ಕೊಡಗು (Kodagu) ಜಿಲ್ಲೆಯ ಯುವತಿ ಬಲಿಯಾಗಿದ್ದಾರೆ. ಮೂಲತಃ ಸೋಮವಾರಪೇಟೆ ಸಮೀಪದ ಹಾನಗಲ್ಲು ಗ್ರಾಮದವರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿ ಆಗಿರುವ ಕರುಣಾಕರ ಶೆಟ್ಟಿರವರ ಪುತ್ರಿ ಚಿನ್ಮಯಿ ಶೆಟ್ಟಿ (19) ಮೃತ ದುರ್ದೈವಿ. RCB ತಂಡದ ಅಭಿಮಾನಿ ಆಗಿದ್ದ ಈಕೆ ತನ್ನ ಗೆಳತಿಯರೊಂದಿಗೆ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ತೆರಳಿದ್ದರು. ಆದರೆ ನೂಕು ನುಗ್ಗಲಿನಿಂದಾಗಿ ಜೊತೆಗಿದ್ದ ಗೆಳತಿಯರಿಂದ ಪ್ರತ್ಯೇಕಗೊಂಡು ಕಾಲ್ತುಳಿತಕ್ಕೆ ಸಿಲುಕಿ ಚಿಂತಾಜನಕರಾಗಿದ್ದರು. ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ […]
‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ – ಸ್ಮಿತಾ ಅಮೃತರಾಜ್ಗೆ ʼವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ

ಮಡಿಕೇರಿ : ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ […]
ಪೊನ್ನಂಪೇಟೆ : ಸಿಐಟಿ ಕಾಲೇಜಿನಲ್ಲಿ ಪದವಿ ಪ್ರದಾನ – ವಿದ್ಯಾರ್ಥಿಗಳು ಪಾಲಕರ ತ್ಯಾಗ ಮರೆಯಬಾರದು : ಡಾ.ಕೆ.ಎನ್.ಸುಬ್ರಹ್ಮಣ್ಯ ಅಭಿಪ್ರಾಯ

ಪೊನ್ನಂಪೇಟೆ : ಪೊನ್ನಂಪೇಟೆಯ ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೨೦೨೧–೨೦೨೫ ಬ್ಯಾಚ್ ನ ಪದವಿ ಪ್ರದಾನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಆರ್ವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎನ್.ಸುಬ್ರಹ್ಮಣ್ಯ, ಹೊಸ ತಂತ್ರಜ್ಞಾನದೊಂದಿಗೆ ನವೀಕರಿಸಿಕೊಳ್ಳುವುದು ಹಾಗೂ ತಮ್ಮ ಕೌಶಲ್ಯವನ್ನು ಸದಾ ಮೆರುಗು ಪಡಿಸಿಕೊಳ್ಳುವುದು ಅತ್ಯಗತ್ಯ. ಜೊತೆಯಲ್ಲಿ ಪಾಲಕರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಮಾಜಿ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್ …

ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 1.77 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.86 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ (Rain) 779.67 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 359.23 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.40 ಮಿ.ಮೀ. ಕಳೆದ ವರ್ಷ ಇದೇ ದಿನ 7.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1134.46 ಮಿ.ಮೀ, ಕಳೆದ […]
ಕೂಡಲೇ ಅರ್ಜಿ ಸಲ್ಲಿಸಿ: ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 08 ಅತಿಥಿ ಶಿಕ್ಷಕರ (Guest Teacher) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 10 ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್. ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು […]
‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ:-ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ (Nalwadi Krishnaraja Wadiyar) ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್ ನೋಡಿ

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 10.47 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.79 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 777.90 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 357.37 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.55 ಮಿ.ಮೀ. ಕಳೆದ ವರ್ಷ ಇದೇ ದಿನ 14.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1130.06 ಮಿ.ಮೀ, ಕಳೆದ ವರ್ಷ ಇದೇ […]
ಬಾನು ಮುಷ್ತಾಕ್ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ – ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ – ಇಬ್ಬರಿಗೂ ತಲಾ 10 ಲಕ್ಷ ಪುರಸ್ಕಾರ ಘೋಷಿಸಿದ ಮುಖ್ಯಮಂತ್ರಿ

ಬೆಂಗಳೂರು : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್(buker) ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು. ಬಾನು ಮುಷ್ತಾಕ್(banu mushtaq) ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ […]
ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಇಸ್ಮಾಯಿಲ್, ರಾಕೇಶ್, ಆನಂದ್ – ಜೂನ್ 08ರಂದು ಪ್ರಶಸ್ತಿ ಪ್ರದಾನ..

ಮಡಿಕೇರಿ : ಕೊಡಗು ಪ್ರೆಸ್ ಕ್ಲಬ್(kodagu press club) ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಮೂವರು ಪತ್ರಕರ್ತರು ಭಾಜನರಾಗಿದ್ದಾರೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿರಿಯ ಪತ್ರಕರ್ತ ಕೆ.ಬಿ.ಮಹಂತೇಶ್ ಅವರ ಸ್ಮರಣಾರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ರೂ.೭ ಕೋಟಿ ವೆಚ್ಚದ ಜರ್ಮನ್ ತಂತ್ರಜ್ಞಾನದ ತಡೆಗೋಡೆ ಪೂರ್ಣಗೊಳ್ಳುವುದು ಎಂದು?” ಎಂಬ ವರದಿಗೆ ಹೆಚ್.ಜೆ.ರಾಕೇಶ್ ಪಡೆದುಕೊಂಡಿದ್ದಾರೆ. ಕೋವರ್ ಕೊಲ್ಲಿ ಇಂದ್ರೇಶ್ […]
ಕೊಡಗಿನಲ್ಲಿ ಕ್ಷೀಣಿಸಿದ ಮಳೆ ಅಬ್ಬರ: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

ಮಡಿಕೇರಿ:-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.81 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ (Rainfall) 742.06 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 335.10 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.08 ಮಿ.ಮೀ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1074.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]