FMC ಕಾಲೇಜಿನಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಉದ್ಘಾಟನೆ

FMC College

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನ (FMC) 75ನೇ ವರ್ಷದ ಅಮೃತ ಮಹೋತ್ಸವ ಸವಿ ನೆನಪಿಗಾಗಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಪೋಷಕರು ಹಾಗೂ ಶಿಕ್ಷಕರ ಸಂಘ, ಮಡಿಕೇರಿಯ ಕ್ರಿಯೆಟಿವ್ ಖಲೀಲ್ ಹಾಗೂ ಆಲ್ಫಾ ಟೆಕ್ನಾಲಜೀಸ್‌ನ ಹೆಂಟ್ರಿಕ್ ಮಾರ್ಟಿನ್ ಜಿ ಇವರ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು ಉದ್ಘಾಟಿಸಲಾಯಿತು. ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು […]

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಅಣ್ಣಯ್ಯ ಕುಟುಂಬಕ್ಕೆ ಪರಿಹಾರ ಹಸ್ತಾಂತರ

Wild elephant

ಮೇ ತಿಂಗಳ 21ರಂದು ದೇವರಪುರ ಸಮೀಪದ ಕಾಡಾನೆ (Wild elephant) ತುಳಿತಗೊಳಕ್ಕಾಗಿ ಸಾವನ್ನಪ್ಪಿದ ಕೂಲಿ ಕಾರ್ಮಿಕ ಅಣ್ಣಯ್ಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್‌ ಹಸ್ತಾಂತರಿಸಿದ್ದಾರೆ. ಈ ವೇಳೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ,ಎ.ಸಿ.ಎಫ್‌ ಗೋಪಾಲ್‌ ಹಾಗೂ ಅರಣ್ಯ ಇಲಾಖಾಧಿಕಾರಿಗಳು, ಬಾನಂಡ ಪೃಥ್ವಿ ಭಾಗಿಯಾಗಿದ್ದರು. ವಿರಾಜಪೇಟೆ ಶಾಸಕ ಎ.ಎಸ್‌ ಪೊನ್ನಣ್ಣ ಮೃತ ಅಣ್ಣಯ್ಯ ಮನೆಗೆ ಭೇಟಿ ನೀಡಿ ಶೀಘ್ರದಲ್ಲಿ ಎರಡನೇ ಹಂತದ 15 ಲಕ್ಷದ […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಡಿಟೇಲ್ಸ್

kodagu rain

ಕೊಡಗು (Kodagu) ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 53.94 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.07 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 643.27 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 326.97 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 75.58 ಮಿ.ಮೀ. ಕಳೆದ ವರ್ಷ ಇದೇ ದಿನ 3.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 881.79 ಮಿ.ಮೀ, ಕಳೆದ ವರ್ಷ ಇದೇ […]

ಅತಿಥಿ ಶಿಕ್ಷಕ ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Guest Teacher

ಮಡಿಕೇರಿ:-ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ/ ಕಾಲೇಜುಗಳಿಗೆ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು/ ಉಪನ್ಯಾಸಕರ ಹುದ್ದೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಅದರಂತೆ ಅರ್ಹ ಅಭ್ಯರ್ಥಿಗಳು ಜೂನ್ 03 ರೊಳಗೆ ಸೂಕ್ತ ದಾಖಲೆಗಳೊಂದಿಗೆ ವಸತಿ ಶಾಲಾ-ಕಾಲೇಜುಗಳಲ್ಲಿ ಅರ್ಜಿ ಪಡೆಯಬಹುದಾಗಿದೆ. ಅತಿಥಿ ಶಿಕ್ಷಕರು/ ಉಪನ್ಯಾಸಕರನ್ನು ಆಯಾಯ ಹುದ್ದೆಗೆ ಸಂಘದ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಬೋಧನಾ ಕೌಶಲ್ಯ, ಸೇವಾ ಅನುಭವ, […]

ಮಡಿಕೇರಿಯಲ್ಲಿ ನೈರ್ಮಲ್ಯ ನಿರ್ವಹಣೆ ದಿನಾರಣೆ

Madikeri

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವೈದ್ಯಕೀಯ ವಿಜ್ಞಾನಗಳ ಬೋಧಕ ಆಸ್ಪತ್ರೆ, ಸ್ನೇಹ ಕ್ಲೀನಿಕ್ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲ್ಲೂಕಿನ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಇಂದು “ಋತು ಸ್ರಾವ ನೈರ್ಮಲ್ಯ ನಿರ್ವಹಣೆ ದಿನ” ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಸ್ನೇಹ ಕ್ಲಿನಿಕ್‍ನ ಆಪ್ತ ಸಮಲೋಚಕರಾದ ಪ್ರಮೀಳ ಅವರು ಮಕ್ಕಳಿಗೆ ಋತು ನೈರ್ಮಲ್ಯದ ಕುರಿತು ಮಾಹಿತಿ ನೀಡಿದರು. ಋತು ಸ್ರಾವದ ಸಮಯದಲ್ಲಿ ಮಕ್ಕಳ ದೇಹದಲ್ಲಿ ಬದಲಾವಣೆಗಳು […]

ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸೂಚನೆ

CM Siddaramaiah

ಬೆಂಗಳೂರು : ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

Kodagu

ಕೊಡಗು (Kodagu) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 62.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 589.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.90 ಮಿ.ಮೀ ಮಳೆಯಾಗಿತ್ತು. ಮಡಿಕೇರಿ (Madikeri) ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 65.83 ಮಿ.ಮೀ. ಕಳೆದ ವರ್ಷ ಇದೇ ದಿನ 0.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 806.21 ಮಿ.ಮೀ, ಕಳೆದ ವರ್ಷ […]

ಕೊಡಗಿನಲ್ಲಿ ಮಳೆ ಆರ್ಭಟ: ನಾನಾ ಅವಾಂತರ ಸೃಷ್ಟಿ, ಎಲ್ಲೆಲ್ಲಿ ಏನೇನಾಗಿದೆ?

kodagu rain

ಅವಧಿಗೂ ಮುನ್ನವೇ ಕೊಡಗಿಗೆ (Kodagu) ಕಾಲಿಟ್ಟಿರುವ ಮುಂಗಾರು (Monsoon) ಮಳೆ ಆರಂಭದಲ್ಲೇ ಅವಾಂತರಗಳನ್ನು ಸೃಷ್ಟಿಸಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಬಿರುಗಾಳಿ ಸಹಿತ ಮಳೆಗೆ ಜಿಲ್ಲೆಯ ಹಲವೆಡೆಗಳಲ್ಲಿ ನೀರು ರಸ್ತೆ ಮೇಲೆ ನದಿಯಂತೆ ಹರಿದಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡು ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಮಾಲ್ದಾರೆ ಸುತ್ತಮುತ್ತಲಿನಲ್ಲಿ ಸುರಿಯುತ್ತಿದ್ದ ಭಾರಿ ಗಾಳಿ ಮಳೆಗೆ ಮನೆಯಿಂದ ಹೊರ ಬರುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದು ಮಾಜಿ ಗ್ರಾಮ ಪಂಚಾಯಿತಿ ಸದಸ್ಯ […]

ಭಾರೀ ಮಳೆಯಿಂದಾಗಿ ಕೊಡಗಿನ ಅಂಗನವಾಡಿಗಳಿಗೆ ರಜೆ ಘೋಷಣೆ

Anganwadis

ಕೊಡಗು ಜಿಲ್ಲೆಯಲ್ಲಿ, ಹೆಚ್ಚಿನ ಗಾಳಿ-ಮಳೆ ಮುಂದುವರೆದಿರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 28.05.2025 ರ ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ (Anganwadis) ರಜೆ ವಿಸ್ತರಿಸಿ ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು THR ರೂಪದಲ್ಲಿ ಫಲಾನುಭವಿಗಳಿಗೆ ನೀಡುವುದು ಮತ್ತು ಅದನ್ನ ಪೋಷಣ್ ಟ್ರಾಕರ್ ನಲ್ಲಿ ನಮೂದಿಸುವುದಂತೆ ಜಿಲ್ಲಾಧಿಕಾರಿಗಳು, ಪ್ರಕಟಣೆ ಹೊರಡಿಸಿದ್ದಾರೆ.

ನಾಳೆ ಕೊಡಗು ವಿವಿಗೆ ಒಳಪಡುವ ಕಾಲೇಜುಗಳಿಗೆ ರಜೆ

Kodagu University

ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವಿದ್ಯುತ್ ಹಾಗೂ ಸಂಪರ್ಕ ಕಡಿತಗಳಾಗಿರುವುದರಿಂದ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಇರುವ ಅಡೆತಡೆಗಳನ್ನು ಅವಲೋಕಿಸಿ ಹಾಗೂ ಕೊಡಗು (Kodagu) ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ, ಸರ್ಕಾರಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ದಿನಾಂಕ: 28-5-2025 ರಂದು ಒಂದು ದಿನದ ರಜೆ (Holiday) ಘೋಷಿಸಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ.ಅಶೋಕ ಸಂಗಪ್ಪ ಆಲೂರ ಅವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಲ್ಲಿ ನಿಗದಿತವಾಗಿದ್ದ ಪ್ರಾಯೋಗಿಕ […]