ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ..!

ಮಡಿಕೇರಿ : ಪ್ರಸಕ್ತ (೨೦೨೫-೨೬) ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ಸೇವಾಸಿಂಧು ಪೋರ್ಟಲ್ನ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ನೀಡಲು ಸೇವಾಸಿಂಧು ಪೋರ್ಟಲ್ನ (https://sevasindhu.karnataka.gov.in/Sevasindhu/DepartmentServices) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ […]
ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ – ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು. ಆಸಕ್ತರು ಜೂನ್, ೩೦ ರೊಳಗೆ ಬೆಳಗ್ಗೆ […]
ಕೊಡಗು ಜಿಲ್ಲಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಯೋಗದ ಮಹತ್ವ ವಿವರಿಸಿದ ಗಣ್ಯರು..!

ಮಡಿಕೇರಿ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ೧೧ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತೀಯ ಮೂಲದ ಯೋಗ ವಿಶ್ವದಾದ್ಯಂತ ಪಸರಿಸಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯಸ್ಸು ಹೆಚ್ಚಾಗಲಿದೆ. ಇದರಿಂದ ಕ್ರಿಯಾಶೀಲತೆ […]
ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ : ಜೂನ್ 27 ಕೊನೆ ದಿನಾಂಕ

ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ(application) ಆಹ್ವಾನಿಸಲಾಗಿದೆ. ಅರ್ಜಿಯನ್ನು ಜೂನ್, 27 ರೊಳಗೆ ಸಲ್ಲಿಸಬಹುದು.(ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು). ವೇತನ ಶ್ರೇಣಿ ರೂ.18,150. ಎಂಎಸ್ಸಿ, ಬಿ.ಇಡಿ ವಿದ್ಯಾರ್ಹತೆ (qualification) ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂ.ಸಂ. 08272–225528, 9686138688 ಹಾಗೂ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ. 7676473767 ನ್ನು ಸಂಪರ್ಕಿಸಬಹುದು […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (Kodagu) ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 16.49 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.35 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1065.39 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ(during this same period) 516.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ (average rainfall )14.90 ಮಿ.ಮೀ. ಕಳೆದ ವರ್ಷ ಇದೇ ದಿನ 11.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1601 […]
ನಾಪತ್ತೆಯಾಗಿದ್ದ ಮಾಜಿ ಸೈನಿ ಗಿರೀಶ್ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆ..!

ಕುಶಾಲನಗರ : ಮೂರು ದಿನದಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿಯಾದ ನಿವಾಸಿಯಾದ ಗಿರೀಶ್ (46) ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಕುಶಾಲನಗರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಪತ್ತೆಗಾಗಿ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್ಡಿಆರ್ಎಫ್ ಸಿಬ್ಬಂದಿ ಮೂರು ದಿನದಿಂದ ನಿರಂತರ ಹುಡುಕಾಟ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (Kodagu )ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.39 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.09 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1048.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ (During this same period) 513.48 ಮಿ.ಮೀ ಮಳೆಯಾಗಿತ್ತು. ಮಡಿಕೇರಿ : ಇಂದಿನ ಸರಾಸರಿ ಮಳೆ (Average rainfall )10.33 ಮಿ.ಮೀ. ಕಳೆದ ವರ್ಷ ಇದೇ ದಿನ 7.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ […]
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ: ಧರ್ಮಜ ಉತ್ತಪ್ಪ

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ಯಾರಂಟಿ (guarantee) ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಸಲಹೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಗುರುವಾರ ಮಾಹಿತಿ ಪಡೆದು ಅವರು ಮಾತನಾಡಿದರು. ಬಡವರಿಗಾಗಿ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ (Anna bhagya scheme )ಯೋಜನೆಯು ಅರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ತಲುಪಬೇಕು. ಯಾವುದೇ ಕಾರಣಕ್ಕೂ ಬಡವರಿಗೆ ಅನ್ಯಾಯ […]
ಶೀಘ್ರದಲ್ಲೇ ದುಬೈನಲ್ಲಿ ಕೊಡಗು ಪ್ರೀಮಿಯರ್ ಲೀಗ್ ವಾಲಿಬಾಲ್ ಪಂದ್ಯಾಟ

ಕೊಡಗು ಪ್ರೀಮಿಯರ್ ಲೀಗ್ (Kodagu Premier League) – ವಾಲಿಬಾಲ್ ಟೂರ್ನಮೆಂಟ್ 2025ರ ಮೊದಲ ಆವೃತ್ತಿ, ಈ ಉತ್ಸಾಹಪೂರ್ಣ ಕಾರ್ಯಕ್ರಮವು ಕೊಡವ ಕ್ರೀಡಾ ಪ್ರತಿಭೆ, ಶಿಸ್ತು ಮತ್ತು ಸಮುದಾಯದ ಆತ್ಮೀಯತೆಯನ್ನು ತೋರಿಸುವ ಅದ್ಭುತ ವೇದಿಕೆ. ತಂಡದ ಮಾಲೀಕರು ಮತ್ತು ಪ್ರಾಯೋಜಕರು – ನಿಮಗೆ ಆತ್ಮೀಯ ಆಹ್ವಾನ! ಈ ಗೌರವಾನ್ವಿತ ಲೀಗ್ನಲ್ಲಿ ಭಾಗವಹಿಸಲು ತಂಡ ಮಾಲೀಕರು ಮತ್ತು ಪ್ರಾಯೋಜಕರು ಅವರನ್ನು ಹೃತ್ಪೂರ್ವಕವಾಗಿ ಆಹ್ವಾನಿಸುತ್ತೇವೆ. ಇದು ಕೇವಲ ಕ್ರೀಡಾ ಟೂರ್ನಮೆಂಟ್ (Tournament)ಮಾತ್ರವಲ್ಲ – ನಿಮ್ಮ ಬ್ರ್ಯಾಂಡ್ ಅನ್ನು ಬೆಳಗಿಸಲು ಮತ್ತು […]
ಬಿದ್ದು ಸಿಕ್ಕ ಪರ್ಸ್ವೊಂದನ್ನು ಮಾಲಿಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಶಾಫಿ, ಮುಕ್ರಂ

ವಿರಾಜಪೇಟೆ (virajpet) ನಗರದ ನಿವಾಸಿಗಳಾದ ಮೊಹಮ್ಮದ್ ಶಾಫಿ ಮತ್ತು ಮುಕ್ರಂ ಅವರು ಮಾನವೀಯತೆಯ ಸ್ಫೂರ್ತಿದಾಯಕ ಉದಾಹರಣೆಯಾಗಿ, ವಿರಾಜಪೇಟೆ ನಗರದಲ್ಲಿ ಬಿದ್ದು ಸಿಕ್ಕಿದ್ದ ಪರ್ಸ್ನ್ನು ಅದರೊಳಗಿನ ನಗದು ಹಣ, ಮೊಬೈಲ್ ಫೋನ್ ಹಾಗೂ ಮಹತ್ವದ ಬ್ಯಾಂಕ್ ದಾಖಲೆಗಳೊಂದಿಗೆ ಕೂಡಲೇ ಪೊಲೀಸ್ ಠಾಣೆಗೆ ಹಾಜರುಪಡಿಸಿ, ತಕ್ಷಣವೇ ಪರ್ಸ್ (purse) ಅನ್ನು ಮಾಲಿಕರಾದ ಬಾಳುಗೋಡು ಗ್ರಾಮದ ಲೀಲಾವತಿ ಅವರಿಗೆ ಹಿಂತಿರುಗಿಸುವ ಮೂಲಕ ತಮ್ಮ ಪ್ರಾಮಾಣಿಕತೆ, ನಿಷ್ಠೆ ಮತ್ತು ಸಮಾಜದ ಪರವಾದ ಮಾನವೀಯ ಮೌಲ್ಯಗಳನ್ನು ಮೆರೆದಿದ್ದಾರೆ.