ಮೇ 26ಕ್ಕೆ ನುಡಿ ಉತ್ಸವದ ರಾಷ್ಟ್ರಮಟ್ಟದ ವಿಚಾರ ಸಂಕಿರಣ

ಕೊಡಗಿನ ನುಡಿ ಉತ್ಸವ ಸಮಿತಿ, ಕೊಡಗು ವಿಶ್ವವಿದ್ಯಾಲಯ ಮತ್ತು ಕಾವೇರಿ ಕಾಲೇಜು ವಿರಾಜಪೇಟೆ ಇವರ ಸಹಭಾಗಿತ್ವದಲ್ಲಿ ಮೇ 26ರಂದು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಜಿ.ವೀಣಾ ಮಾಹಿತಿ ನೀಡಿದರು. ವಿರಾಜಪೇಟೆ ಪತ್ರಕರ್ತರ ವೇದಿಕೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು “ಗಡಿ ಪ್ರದೇಶಗಳ ಪಠ್ಯಕ್ರಮದಲ್ಲಿ ಕನ್ನಡ ಭಾಷಾ ಶಿಕ್ಷಣ ಸ್ವರೂಪ, ಭಾಷಾ ನೀತಿ ಹಾಗೂ ಬಹುಭಾಷಾ ವಾಸ್ತವಿಕತೆಗಳ ಮರುಚಿಂತನೆ” ಎಂಬ ಪರಿಕಲ್ಪನೆಯ ಕುರಿತು […]
ವೀರಾಜಪೇಟೆ ಕಾವೇರಿ ಕಾಲೇಜು ಪ್ರಾಂಶುಪಾಲರಾಗಿ ಡಾ.ಕೆ.ಜಿ.ವೀಣಾ ಅಧಿಕಾರ ಸ್ವೀಕಾರ

ವಿರಾಜಪೇಟೆ : ಕಾವೇರಿ ಕಾಲೇಜಿನ ಪದವಿ ವಿಭಾಗದ ನೂತನ ಪ್ರಾಂಶುಪಾಲೆಯಾಗಿ ಡಾ. ಕುಪ್ಪಂಡ ವೀಣಾ ಅಧಿಕಾರ ವಹಿಸಿಕೊಂಡರು. ಬೆನೆಡಿಕ್ಟ್ ಆರ್ ಸಲ್ಡಾನರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಗೆ ಆಡಳಿತ ಮಂಡಳಿ ಆದೇಶದ ಮೇರೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ವೀಣಾರವರು ಈ ಹಿಂದೆ ಆಂಗ್ಲ ವಿಭಾಗದ ಉಪನ್ಯಾಸಕರಾಗಿ, ಮುಖ್ಯಸ್ಥರಾಗಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಓ.ಎಸ್ ಹಾಗೂ ಕೊಡಗು ವಿಶ್ವವಿದ್ಯಾಲಯದ ಬಿ.ಓ.ಇ ಆಗಿ ಸೇವೆ ಸಲ್ಲಿಸಿರುತ್ತಾರೆ. ಇದರೊಂದಿಗೆ ಕಾವೇರಿ ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕರಾಗಿ ಐದು ವರ್ಷ ಸೇವೆ […]
ಕೊಡಗು ಬಂಟರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ – ಸಮುದಾಯ ಬಾಂಧವರ ಒಗ್ಗಟ್ಟಿಗೆ ಗಣ್ಯರ ಕರೆ

ಮಡಿಕೇರಿ : ಸುಸಂಸ್ಕೃತ ಸಮಾಜ ನಿರ್ಮಾಣದಕ್ಕೆ ಬಂಟ ಸಮಾಜದ ಕೊಡುಗೆ ದೊಡ್ಡದಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ನ ಗುರುದೇವಾನಂದ ಸ್ವಾಮೀಜಿ ಬಣ್ಣಿಸಿದರು. ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಹಾಗೂ ಜಿಲ್ಲಾ ಬಂಟರ ಸಂಘದ ವತಿಯಿಂದ ಶುಕ್ರವಾರ ಮಡಿಕೇರಿಯಲ್ಲಿ ಜರುಗಿದ ಬಂಟರ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಇಂದಿನ ಸಮಾಜಕ್ಕೆ ಸುಸಂಸ್ಕೃತ ಪ್ರಜೆಗಳ ಅಗತ್ಯವಿದೆ. ಮಕ್ಕಳಿಗೆ ಸಂಸ್ಕಾರ ಕಲಿಸುವ ಕಾರ್ಯವನ್ನು ಮನೆಯಿಂದಲೇ ಆರಂಭಿಸಬೇಕು. ಈ ವಿಚಾರದಲ್ಲಿ ಮಾತೆಯರಿಗೆ ಮಹತ್ತರ ಜವಾಬ್ದಾರಿ ಇದೆ […]
ರಸಗೊಬ್ಬರ ಖರೀದಿಸಲು ಇನ್ನು ಎಫ್ಐಡಿ ಕಡ್ಡಾಯ

ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್ಐಡಿ ಹೊಂದಿರಬೇಕು. ಅಷ್ಟೇ ಅಲ್ಲ ತಮ್ಮ ಭೂಮಿಯನ್ನು ಸಹ ಎಫ್ಐಡಿಗೆ ಜೋಡಿಸಿರಬೇಕು. ಇದರ ಆಧಾರದಲ್ಲಿಯೇ ರಸಗೊಬ್ಬರವನ್ನು ಕೆ.ಕಿಸಾನ್ ತಂತ್ರಜ್ಞಾನದ ಮೂಲಕ ವಿತರಣೆ ಮಾಡಲಾಗುತ್ತದೆ. ಹೌದು ರಸಗೊಬ್ಬರ ತಯಾರಿಕೆಗೆ ವಿದೇಶದಿಂದ ಕಚ್ಚಾಸಾಮಾಗ್ರಿ ಹೆಚ್ಚು ಆಮದು ಮಾಡಿಕೊಳ್ಳಲಾಗುತ್ತಿದೆ. ಯುದ್ದದಿಂದ ರಸಗೊಬ್ಬರ ತಯಾರಿಕೆ ಕಚ್ಚಾ ಸಾಮಾಗ್ರಿಯ ಆಮದಿನಲ್ಲಿ ಭಾರಿ ಸಮಸ್ಯೆಯಾಗಿದೆ, ಹೀಗಾಗಿ ಈ ಬಾರಿ ರಸಗೊಬ್ಬರ ಉತ್ಪಾದನೆಯಲ್ಲಿ ಕುಸಿತವಾಗುವ ಸಾಧ್ಯತೆ ಇದೆ. ಇದರಿಂದ ರಸಗೊಬ್ಬರ ವಿತರಣೆಯ ಮೇಲೆ ವಿಶೇಷ ನಿಗಾ ಇರಿಸಲು ನಿರ್ಧರಿಸಲಾಗಿದೆ. ಈ […]
ವೈದ್ಯರ ಚೀಟಿ ಇಲ್ಲದೆ ಔಷಧ ಮಾರುವಂತಿಲ್ಲ: ಮೆಡಿಕಲ್ ಶಾಪ್ಗಳಿಗೆ ಅಧಿಕಾರಿಗಳ ಖಡಕ್ ವಾರ್ನಿಂಗ್

ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿರುವ ವಿವಿಧ ಔಷಧ ಅಂಗಡಿಗಳಿಗೆ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದಕ ವಸ್ತುಗಳ ನಿಯಂತ್ರಣದ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಅಂಗಡಿ ಮಾಲೀಕರಿಗೆ ಕಾನೂನು ಪಾಲಿಸುವಂತೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ. ಮಾದಕ ವಸ್ತುಗಳ ಮಾರಾಟ ತಡೆಗಟ್ಟುವ ಸರ್ಕಾರದ ಮಾರ್ಗಸೂಚಿಯಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಔಷಧ ಮಳಿಗೆಯಲ್ಲೂ ಕಡ್ಡಾಯವಾಗಿ “ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧಿ ಮಾರಾಟ ಮಾಡಲಾಗುವುದಿಲ್ಲ” ಎಂಬ ಸ್ಪಷ್ಟ […]
ಕಾವೇರಿ ಎಜುಕೇಶನ್ ಸೊಸೈಟಿ: ನಿವೃತ್ತ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮ

ಸಂಸ್ಥೆ ಉತ್ತಮ ರೀತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಾ ಮುಂದಕ್ಕೆ ಸಾಗಲು ಅಲ್ಲಿನ ಸಿಬ್ಬಂದಿಗಳ ನಿಷ್ಠಾವಂತ ಸೇವೆ ಅತ್ಯಂತ ಮುಖ್ಯವಾದದ್ದು ಎಂದು ಕಾವೇರಿ ಎಜುಕೇಶನ್ ಸೊಸೈಟಿ ರಿ. ಅಧ್ಯಕ್ಷರಾದ ಎಂ.ಎಸ್. ಮುತ್ತಣ್ಣ ಅಭಿಪ್ರಾಯಪಟ್ಟರು . ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ಕಾವೇರಿ ಎಜುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಲಾಗಿದ್ದ ನಿವೃತ್ತ ಸಿಬ್ಬಂದಿಗಳ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಒಂದು ಸಂಸ್ಥೆಯ ಏಳಿಗೆಯೂ ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಮೇಲೆ ಅವಲಂಬಿತವಾಗಿದೆ. ಸಿಬ್ಬಂದಿಗಳು ಸಂಸ್ಥೆಯ ಏಳಿಗೆಗೆ ಶ್ರಮಿಸಿ ತಮ್ಮ ಸೇವೆಯನ್ನು […]
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣ, ಮಗ್ಗುಲ, ಕುಕ್ಲೂರು, ಕದನೂರು, ಬೊಳ್ಳುಮಾಡು, ಕಾಕೋಟುಪರಂಬು, ಬೇತ್ರಿ, ಪಾಲಂಗಾಲ, ಕೆದಮಳ್ಳೂರು, ಆರ್ಜಿ, ಬೇಟೋಳಿ, ಪೆರಂಬಾಡಿ, ಬಿಟ್ಟಂಗಾಲ, ಬಾಳುಗೋಡು, ವಿ.ಬಾಡಗ, ಕುಟ್ಟಂದಿ, ಬಿ.ಶೆಟ್ಟಿಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಏಪ್ರಿಲ್, 28 ರಂದು ಬೆಳಗ್ಗೆ 10 ರಿಂದ 05 ಗಂಟೆಯವರೆಗೆ, ಮೂರ್ನಾಡು ಟೌನ್, ಮುತ್ತಾರ್ಮುಡಿ, ಕುಂಬಳದಾಳು, ಕಿಗ್ಗಾಲು, ಕಬಡಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ […]
ಕಿರಣ್ಗೆ ರಾಜ್ಯ ಮಟ್ಟದ ‘ಕಾಯಕ ರತ್ನ’ ಪ್ರಶಸ್ತಿ

ವಿರಾಜಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಬೆಂಗಳೂರು ( ರಿ) ಇದರ ರಾಜ್ಯ ಮಟ್ಟದ ಪದಗ್ರಹಣ ಸಮಾರಂಭ ಧಾರವಾಡದ ವಿದ್ಯಾವರ್ಧಕ ಸಂಘ ಪಾಟೀಲ್ ಪುಟ್ಟಪ್ಪ ಭವನದಲ್ಲಿ ಜರುಗಿತು. ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಉಪನಿರ್ದೆೇಶಕರ ಕಛೇರಿಯ ಸೂಪರಿಡೆಂಟ್ ಆಗಿ ಹಾಗೂ ಭರತನಾಟ್ಯ ಕಲಾವಿದರಾಗಿ ಸೇವೆ ಸಲ್ಲಿಸುತಿರುವ ಕಿರಣ್ ಎಸ್ ಕೆ ರವರಿಗೆ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಅಧ್ಯಕ್ಷರಾದ ರಮಾ , ಬಸವರಾಜು ಗುರಿಕಾರ್ […]
ಪ್ರವಾಸಿಗರ ಸುರಕ್ಷತೆಗೆ ಆದ್ಯತೆ: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹತ್ವದ ಸಭೆ

ಪ್ರವಾಸಿಗರ ಸುರಕ್ಷತೆ ಹಾಗೂ ನಿಯಮಗಳ ಪಾಲನೆಗೆ ಒತ್ತು ನೀಡುವ ನಿಟ್ಟಿನಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಹೋಂಸ್ಟೇ, ಹೋಟೆಲ್ ಹಾಗೂ ಟ್ರಾವೆಲ್ಸ್ ಮಾಲೀಕರ ಸಂಘದ ಪದಾಧಿಕಾರಿಗಳ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಮುಖವಾಗಿ ಹೋಂಸ್ಟೇ ಮತ್ತು ಹೋಟೆಲ್ಗಳ ಕಡ್ಡಾಯ ನೋಂದಣಿ, ಪ್ರವಾಸಿಗರ ಸುರಕ್ಷತಾ ಕ್ರಮಗಳು, ಸಿಬ್ಬಂದಿಯ ಹಿನ್ನೆಲೆ (ಗುಣನಡತೆ) ಪರಿಶೀಲನೆ ಹಾಗೂ ವಿದೇಶಿ ಪ್ರವಾಸಿಗರ ಕಡ್ಡಾಯ ನೋಂದಣಿ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ […]
SSLC Result: ಹೆಗ್ಗಳ ಸರ್ಕಾರಿ ಶಾಲೆಗೆ 100% ಫಲಿತಾಂಶ

ವಿರಾಜಪೇಟೆ: ಹೆಗ್ಗಳ (Heggala) ಗ್ರಾಮದ ಸರ್ಕಾರಿ ಪ್ರೌಢ ಶಾಲೆಯು ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 100% ಫಲಿತಾಂಶವನ್ನು ಪಡೆಯುದರ ಮೂಲಕ ಸಾಧನೆಯನ್ನು ಮಾಡಿದೆ. ಒಟ್ಟು 25 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಡಿಸ್ಟಿಂಕ್ಷನ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು, ಪ್ರಥಮ ಸ್ಥಾನದಲ್ಲಿ 19 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಸ್ಥಾನದಲ್ಲಿ 4 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿನಿ ಪ್ರೇಕ್ಷಾ ಬಿ. ಹೆಚ್.558 ಅಂಕಗಳನ್ನು ಪಡೆದುಕೊಂಡು 89.28% ಮೂಲಕ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ ಎಂದು ಮುಖ್ಯೋಪಾಧ್ಯಾಯರಾದ ಸುನೀತಾ ರವರು ಮಾಹಿತಿ ನೀಡಿದ್ದಾರೆ.