ಮುಂಗಾರು ಆರಂಭ: ಜಿಲ್ಲಾಡಳಿತದ ಸಹಾಯವಾಣಿಗೆ ಮಾಹಿತಿ ನೀಡಿ

ಮಡಿಕೇರಿ:- ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು (Monsoon) ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ (Helpline) ಸಂಖ್ಯೆ 08272-221077 ಆರಂಭಿಸಿದೆ. ಜೊತೆಗೆ 8550001077 ವಾಟ್ಸ್ಆಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದ್ದಾರೆ. ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಂಗಳವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಮಡಿಕೇರಿ ತಾಲ್ಲೂಕು […]
ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದ ಚಿರತೆಯ ಪ್ರಾಣ ಉಳಿಸಿದ ರೋಚಕ ಘಟನೆ

ತಂತಿ ಬೇಲಿಗೆ ಸಿಲಿಕಿಕೊಂಡಿದ್ದ ಚಿರತೆಯನ್ನು (Leopard) ರಕ್ಷಿಸಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಮಾಳೇಟಿರ ಗೌತಮ್ ರವರ ಕಾಫಿ ತೋಟದಲ್ಲಿ ನಡೆದಿದೆ. ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಇಂದು ಬೆಳಿಗ್ಗೆ ಆಹಾರ ಅರಸಿ ಬಂದಿದ್ದ ಚಿರತೆ ತೋಟದ ಬೇಲಿಯೊಳಗೆ ನುಸುಳಿ ತಂತಿಗಳ ನಡುವೆ ಬಂಧಿಯಾಗಿದೆ. ತಂತಿ ಬೇಲಿಯಿಂದ ಹೊರ ಬರಲಾಗದೇ ಜೀವ ಉಳಿಸಿಕೊಳ್ಳಲು ಶತ ಪ್ರಯತ್ನ ಪಡುತ್ತಿರುವುದನ್ನು ಗಮನಿಸಿದ ತೋಟದ ಮಾಲೀಕರಾದ ಮಾಳೇಟಿರ ಗೌತಮ್ ವನ್ಯಜೀವಿ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 76.82 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.45 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ (Rain) 526.66 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.85 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 82.55 ಮಿ.ಮೀ. ಕಳೆದ ವರ್ಷ ಇದೇ ದಿನ 2.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 740.38 ಮಿ.ಮೀ, ಕಳೆದ ವರ್ಷ […]
ಕೊಡಗಿನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ, ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ […]
ಕೊಡಗಿನಲ್ಲಿ ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಆಟ ಆಡುವುದು ನಿರ್ಬಂಧ

ಮಡಿಕೇರಿ:- ವಿಪತ್ತು ನಿರ್ವಹಣಾ ಕಾಯ್ದೆ, 2005 ಕಲಂ 34(ಸಿ)ರಲ್ಲಿ ಉಲ್ಲೇಖಿಸಿರುವಂತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 152 ಮತ್ತು 163 ರಲ್ಲಿ ದತ್ತವಾದ ಅಧಿಕಾರದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಅಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ (water) ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು (Kodagu) ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 126.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 449.84 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.40 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 143.30 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 657.83 ಮಿ.ಮೀ, ಕಳೆದ ವರ್ಷ ಇದೇ […]
ಅಮ್ಮತ್ತಿ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾಗಿ ರೆ.ಫಾ.ಮದಲೈ ಮುತ್ತು ಅಧಿಕಾರ ಸ್ವೀಕಾರ

ವಿರಾಜಪೇಟೆ: ಸಮೀಪದ ಅಮ್ಮತ್ತಿಯ (Ammatthi) ಸಂತ ಅಂತೋಣಿ ದೇವಾಲಯದ ಪ್ರಧಾನ ಧರ್ಮಗುರುಗಳಾಗಿ ರೆ. ಫಾ. ಮದಲೈ ಮುತ್ತು ರವರು ರೆ. ಫಾ. ರೈಮಂಡ್ ರವರಿಂದ ಅಧಿಕಾರವನ್ನು ಸ್ವೀಕರಿಸಿದರು. ವಿರಾಜಪೇಟೆ ವಲಯದ ಶ್ರೇಷ್ಠ ಗುರುಗಳು ಹಾಗೂ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿನಿಕ್ ರವರು ಅಧಿಕಾರ ಸ್ವೀಕಾರದ ಧಾರ್ಮಿಕ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದರು. ರೆ. ಫಾ. ಮದಲೈ ಮುತ್ತು ರವರು ಕಳೆದ 22 ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿಯೇ ಧಾರ್ಮಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ […]
ಮಾವು ಮತ್ತು ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಚಾಲನೆ

ಮಡಿಕೇರಿ:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಹಾಪ್ಕಾಮ್ಸ್ ವತಿಯಿಂದ ಮೇ, 26 ರವರೆಗೆ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮಾವು (Mango) ಮತ್ತು ಹಲಸು (jackfruit) ಮೇಳ ನಡೆಯಲಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಂಸ್ಥೆ ವತಿಯಿಂದ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮೇ, 26 ರವರೆಗೆ ನಡೆಯುವ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮಡಿಕೇರಿ:- ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಮಾರ್ಗದಲ್ಲಿ ಮೇ, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ […]
ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ ತಂಡ ಭೇಟಿ

ಮಡಿಕೇರಿ:- ಕೇಂದ್ರ ಸಂಸದೀಯ ಸ್ಥಾಯಿ ಸಮಿತಿ (Standing Committee) ತಂಡದ ಸದಸ್ಯರು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಜನರಲ್ ತಿಮ್ಮಯ್ಯ ಅವರ ಹುಟ್ಟು, ಬೆಳವಣಿಗೆ, ವಿದ್ಯಾಭ್ಯಾಸ, ಸೇನಾ ಕ್ಷೇತ್ರದಲ್ಲಿನ ಸಾಧನೆ, ಮತ್ತಿತರ ಬಗ್ಗೆ ಮಾಹಿತಿ ಪಡೆದರು. ತಂಡದಲ್ಲಿ ಲೋಕಸಭೆ ಮತ್ತು ರಾಜ್ಯ ಸಭೆ ಸದಸ್ಯರು ಇದ್ದರು. ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಗೌಡಂಡ ತಿಮ್ಮಯ್ಯ ಅವರು ಜನರಲ್ ತಿಮ್ಮಯ್ಯ ಅವರ ಜೀವನ ಚರಿತ್ರೆ ಕುರಿತು ಮಾಹಿತಿ ನೀಡಿದರು.