ಪೊನ್ನಂಪೇಟೆಯಲ್ಲಿ ಮಾದಕ ವಸ್ತು ಸರಬರಾಜು – 1.79 ಕೆಜಿ ಗಾಂಜಾ ಸಹಿತ ಆರೋಪಿ ಅಂದರ್..!

ಗೋಣಿಕೊಪ್ಪ : ಮಾದಕ ವಸ್ತು MDMA ಮತ್ತು ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪಿಯೊಬ್ಬನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿದ್ದಾರೆ. ಗೋಣಿಕೊಪ್ಪದ ಗುರುದತ್ (30) ಬಂಧಿತ ವ್ಯಕ್ತಿ. ಬಂಧಿತನಿಂದ 4 ಗ್ರಾಂ MDMA ಹಾಗೂ 1 ಕೆ.ಜಿ. 79 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ದಿನ ಈತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ವಿರಾಜಪೇಟೆ ಉಪವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್, ಗೋಣಿಕೊಪ್ಪ ಪ್ರಭಾರ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, […]

ಪೊಲೀಸರ ಮನೆಗೇ ಕನ್ನ ಹಾಕಿದ ಖತರ್ನಾಕ್‌ ಚೋರರು..! – ಇಲ್ಲಿದೆ ನೋಡಿ ಮಾಹಿತಿ..!

ಮಡಿಕೇರಿ : ರಕ್ಷಣೆ ನೀಡುವ ಪೊಲೀಸರ ಮನೆಗೇ ಖತರ್ನಾಕ್‌ಗಳು ಕನ್ನ ಹಾಕಿರುವ ಘಟನೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ನಗರದ ಮೈತ್ರಿ ಪೊಲೀಸ್‌ ಸಮುದಾಯ ಭವನ ಬಳಿಯಿರುವ ಪೊಲೀಸರ ವಸತಿ ಗೃಹಗಳನ್ನೇ ಟಾರ್ಗೆಟ್‌ ಮಾಡಿದ ಕಳ್ಳರು ಮನೆಗೆ ನುಗ್ಗಿ ನಗದು, ಅಮೂಲ್ಯ ವಸ್ತುಗಳನ್ನ ದೋಚಿದ್ದಾರೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ಕೃತ್ಯವೆಸಗಿದ್ದಾರೆ. ಕೃತ್ಯ ನಡೆದ ಮನೆಗಳಿಗೆ ಪೊಲೀಸ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದ್ರೆ ನಗರದಲ್ಲಿ […]

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ – ರಾಜ್ಯಾಧ್ಯಕ್ಷರಿಂದ ಆದೇಶ ಪ್ರತಿ ಸ್ವೀಕಾರ..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಮರು ನೇಮಕವಾದ ನಾಪಂಡ ರವಿ ಕಾಳಪ್ಪ ಇಂದು ರಾಜ್ಯಾಧ್ಯಕ್ಷರಿಂದ ಅಧಿಕೃತ ಆದೇಶ ಪ್ರತಿ ಸ್ವೀಕರಿಸಿದರು. ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ ಬಿ.ವೈ. ವಿಜಯೇಂದ್ರ ಆದೇಶ ಪ್ರತಿ ನೀಡಿದರು. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಕ್ಯಾ. ಗಣೇಶ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ‌ ಪಿ. ರಾಜೀವ, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. […]

65 ಸಾವಿರಕ್ಕೆ ಹೊಸ ಸ್ಕೂಟರ್ ಬಿಡುಗಡೆ: ಏನಿದರ ವಿಶೇಷತೆ ಗೊತ್ತಾ?

The new scooter is available in three different battery packs and three new colours. Rusty Orange, Glossy Green and Glossy Grey. The 60V/30A variant is priced at Rs. 75,000, while the 74V/32A variant is priced at Rs. 79,000. Both the variants have lithium-ion batteries. 6.70 lakhs.. 5-seater, 30 km mileage.

ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬ್ರಾಂಡ್‌ಗಳಲ್ಲಿ ಒಂದಾದ ಝೀಲಿಯೋ ಇ (ZELIO E) ಕಂಪನಿಯು, ತನ್ನ ಜನಪ್ರಿಯ ‘ಲೆಜೆಂಡರ್ ಕಡಿಮೆ ವೇಗ’ದ (Low speed) ಎಲೆಕ್ಟ್ರಿಕ್ ಸ್ಕೂಟರ್‌ನ ಬಹು ನಿರೀಕ್ಷಿತ ಫೇಸ್‌ಲಿಫ್ಟ್ ಮಾಡಲ್‌ನ್ನು ಬಿಡುಗಡೆ ಮಾಡಿದೆ. ಹೊಸ ಸ್ಕೂಟರ್ ಅನ್ನು ಮೂರು ವಿಭಿನ್ನ ಬ್ಯಾಟರಿ ಪ್ಯಾಕ್ ಹಾಗೂ ಮೂರು ಹೊಸ ಬಣ್ಣಗಳಲ್ಲಿ ಲಭ್ಯವಿದೆ. ರಸ್ಟಿ ಆರೆಂಜ್, ಗ್ಲಾಸಿ ಗ್ರೀನ್ ಮತ್ತು ಗ್ಲಾಸಿ ಗ್ರೇ. 60V/30A ವೇರಿಯೆಂಟ್ ಬೆಲೆಯು ರೂ. 75,000 ಇದ್ದು, 74V/32A […]

ಕೊಡಗಿನಲ್ಲಿ ಕಳೆದ ವರ್ಷಕ್ಕಿಂತ ಎರಡರಷ್ಟು ಮಳೆಯ ದಾಖಲೆ!?

Kodagu district recorded 39.92 mm rainfall on Wednesday..... Kodagu district recorded an average of 39.92 mm rainfall in the last 24 hours

ಕೊಡಗು ಜಿಲ್ಲೆಯಲ್ಲಿ (Kodagu) ಕುಂಠಿತಗೊಂಡ ಮಳೆ ಬುಧವಾರ 39.92 ಮಿ. ಮೀ ಮಳೆ ದಾಖಲು….. ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 39.92 ಮಿ.ಮೀ. ಮಳೆಯಾಗಿದೆ(Rain). ಕಳೆದ ವರ್ಷ ಇದೇ ದಿನ 8.07 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1029.43 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 504.49 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ 54.25 ಮಿ.ಮೀ. ಕಳೆದ ವರ್ಷ ಇದೇ ದಿನ 15.30 […]

ಜಲಪ್ರವಾಹ : ಚೇರಂಬಾಣೆ ಗ್ರಾಮಸ್ಥರ ಸಂಚಾರಕ್ಕೆ ಕೇವಲ ದೋಣಿ ಆಶ್ರಯ

There has been a flood in Doni Kadu in Bengur village, and locals are using boats to travel.

ಚೇರಂಬಾಣೆ (cherambane) ದೋಣಿ ಕಾಡುವಿನಲ್ಲಿ ಪ್ರವಾಹ ಸ್ಥಳೀಯರಿಗೆ ಸಂಚರಿಸಲು ದೋಣಿ ವ್ಯವಸ್ಥೆ.ಭಾಗಮಂಡಲ ಹೋಬಳಿ ಚೇರಂಬಾಣೆ ಗ್ರಾಮ ಪಂಚಾಯತಿಯ ಬೆಂಗೂರು ಗ್ರಾಮದ ದೋಣಿ ಕಾಡು ಎಂಬಲ್ಲಿ ಪ್ರವಾಹ ಬಂದಿದ್ದು ಸ್ಥಳೀಯರು ದೋಣಿ ಮುಖಾಂತರ ಸಂಚಾರ ಮಾಡುತ್ತಿದ್ದಾರೆ. ಪ್ರವಾಹ ಬಂದಿರುವ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರರು ಮಡಿಕೇರಿ ತಾಲ್ಲೂಕು ಇವರು ಭೇಟಿ ನೀಡಿ ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಿದರು. ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

ಜೂನ್‌ 21 ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ಗಿನ್ನಿಸ್‌ ವಿಶ್ವ ದಾಖಲೆಗೆ ಸಜ್ಜಾದ ಮದೆನಾಡಿನ ಸಿಂಚನಾ..!

Sinchana in the Dimbasana yoga pose

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಕೊಡಗಿನ ಯುವ ಯೋಗಪಟು ಮದೆನಾಡಿನ ಸಿಂಚನಾಳ (Sinchana) ಯೋಗ ಪ್ರದರ್ಶನವನ್ನು ಗಿನ್ನಿಸ್ ವಿಶ್ವದಾಖಲೆಗೆ ಸೇರ್ಪಡೆ ಮಾಡುವ ಕಾರ್ಯಕ್ರಮ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು (International yoga day ) ಮಡಿಕೇರಿಯಲ್ಲಿ ಆಯೋಜಿತವಾಗಿದೆ. ಮಡಿಕೇರಿಯ ಪತ್ರಿಕಾಭವನ ಸಭಾಂಗಣದಲ್ಲಿ ಜೂನ್ 21 ರಂದು ಶನಿವಾರ ಸಂಜೆ 6.30 ಗಂಟೆಗೆ ಸಿಂಚನಾಳ ಯೋಗಪ್ರದರ್ಶನವಿರಲಿದೆ.30 ನಿಮಿಷ 5 ಸೆಕೆಂಡ್ ಕಾಲ ಸಿಂಚನಾ ಡಿಂಬಾಸನ ಯೋಗ ಭಂಗಿಯಲ್ಲಿರುವ […]

ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್‌ ರೈ..

ಮಡಿಕೇರಿ : ದೆಹಲಿಯಲ್ಲಿ(Delhi) ನಡೆಯಲಿರುವ ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಕೊಡಗು ಜಿಲ್ಲೆಯ ಪ್ರತಿನಿಧಿಯಾಗಿ ಮೂರ್ನಾಡುವಿನ ಯಶಸ್‌ ರೈ(Yashas Rai) ಆಯ್ಕೆಯಾಗಿದ್ದಾರೆ. 15ರಿಂದ 28 ವರ್ಷದೊಳಗಿನವರಿಗೆ ಈ ಅವಕಾಶ ಕಲ್ಪಿಸಲಾಗಿತ್ತು. ನೆಹರು ಯುವ ಕೇಂದ್ರದ ಮೈ ಭಾರತ್‌ ಪೋರ್ಟಲ್‌ ಮೂಲಕ ಈ ಆಯ್ಕೆ ನಡೆದಿದೆ. ದೇಶಾದ್ಯಂತ ಸಹಸ್ರಾರು ಮಂದಿ ಯುವಕರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಕೊಡಗಿನ ಯಶಸ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರು ಆಯ್ಕೆಯಾಗಿದ್ದಾರೆ. ಯಶಸ್‌ ರೈ ಮೂರ್ನಾಡುವಿನ ಅಂಗನವಾಡಿ ಕಾರ್ಯಕರ್ತೆ ಬಿ.ಬಿ. ಜಯಂತಿ […]

ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

kodagu rain

ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 75.67 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 989.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 496.42 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 122.45 ಮಿ.ಮೀ. ಕಳೆದ ವರ್ಷ ಇದೇ ದಿನ 9.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1505.52 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 688.64 […]

ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ – ಮಡಿಕೇರಿ ನಗರ ಬಿಜೆಪಿಯಿಂದ ಕಾರ್ಯಾಗಾರ..!

ಮಡಿಕೇರಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕಾರ್ಯಾಗಾರ ನಡೆಯಿತು.  ನಗರದ ಬಿಜೆಪಿ ಕಚೇರಿಯಲ್ಲಿ ಉಮೇಶ್‌ ಸುಬ್ರಹ್ಮಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಸರ್ಕಾರದ ಸಾಧನೆ, ಐತಿಹಾಸಿಕ ನಿರ್ಧಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಶಾಂತ್ ಭೀಮಯ್ಯ, ಕನ್ನಿಕೆ,  ವಕ್ತರ ಅರುಣ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ  ಕಾಂಗೀರ ಸತೀಶ್ ಅಶ್ವಿನ್, ಪ್ರಮುಖರಾದ ಜಗದೀಶ್,  ವಿವಿಧ ಮಂಡಲಗಳ ಮುಖಂಡರು […]