ಸಕಾಲ ಕಾಯ್ದೆಯಡಿ ಅರ್ಜಿ ಕಾಲಮಿತಿಯಲ್ಲಿ ಮಾಹಿತಿ ನೀಡಿ: ವೆಂಕಟ್ ರಾಜಾ

Sakala

ಮಡಿಕೇರಿ:- ವಿವಿಧ ಇಲಾಖೆಗೆ ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಸಂಬಂಧ ಅಧಿಕಾರಿಗಳ ಜೊತೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಕಾಲದಲ್ಲಿ ಮಾಹಿತಿ ಒದಗಿಸಬೇಕು. ತಮ್ಮ ಹಂತದಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು, ಅದನ್ನು ಹೊರತುಪಡಿಸಿ ಸತಾಯಿಸುವುದು […]

ಕೂಡಲೇ ಅರ್ಜಿ ಸಲ್ಲಿಸಿ: ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Guest Teachers

ಪ್ರಸಕ್ತ (2025-26) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ/ ಕಾಲೇಜು, ಮೊರಾರ್ಜಿ ದೇಸಾಯಿ ಶಾಲೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರ ಹುದ್ದೆಯ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು https://dom.karnataka.gov.in/ ಅಥವಾ ಜಿಲ್ಲಾ ಅಧಿಕಾರಿಗಳ ಕಚೇರಿ, ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಸಂಬಂಧಪಟ್ಟ ಶಾಲಾ ಕಾಲೇಜುಗಳಿಂದ ಪಡೆದು ದೃಢೀಕೃತ ದಾಖಲೆಗಳೊಂದಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ […]

ಕೊಡಗಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್: ಮಿನಿ ಉದ್ಯೋಗ ಮೇಳ

Job fair

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಾಟೆಕ್, ಮಡಿಕೇರಿ, ಇಬ್ಬನಿ ರೆಸಾಟ್ರ್ಸ್, ಮಡಿಕೇರಿ ಹಾಗೂ ಕ್ಲಬ್‍ಮಹೀಂದ್ರ ರೆಸಾಟ್ರ್ಸ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ […]

Power Cut: ಕೊಡಗಿನ ಜನರೇ… ನಾಳೆ ಈ ಭಾಗಗಳಲ್ಲಿ ಕರೆಂಟ್​ ಇರಲ್ಲ!

Power Cut

ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ಕೈಗೊಳ್ಳಬೇಕಿದೆ. ಆದ್ದರಿಂದ ಈ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಈ ಹಿನ್ನೆಲೆ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್‍ಆರ್‍ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ […]

ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎಂ.ಹನೀಫ್ ಇನ್ನಿಲ್ಲ

M.M. Haneef

ಕೊಡಗು ಜಲ್ಲಾ ಕಾಂಗ್ರೆಸ್ ಹಿರಿಯ ಕಾರ್ಯಕರ್ತ,ಜಿಲ್ಲಾ ಕಾರಾಗೃಹ ಸಮಿತಿ ಸದಸ್ಯರಾದ ಎಂ.ಎಂ.ಹನೀಫ್ (M.M. Haneef) ರವರು ಮಂಗಳೂರಿನಲ್ಲಿ ಅನಾರೋಗ್ಯದಿಂದ ಮೃತರಾಗಿದ್ದಾರೆ.ಮೃತರ ಅಂತ್ಯಕ್ರಿಯೆ ಮಡಿಕೇರಿಯಲ್ಲಿ ಸಂಜೆ ನಡೆಯಲಿದೆ.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Anganwadi workers

ಮಡಿಕೇರಿ:- ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ (Anganwadi workers), ಮಿನಿ ಅಂಗನವಾಡಿ ಕಾರ್ಯಕರ್ತೆ-1 ಮತ್ತು 32- ಸಹಾಯಕಿಯರು ಹುದ್ದೆ ಸೇರಿದಂತೆ ಒಟ್ಟು 45 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‍ಲೈನ್ ವೆಬ್‍ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ […]

ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

Virajpet

ಮಡಿಕೇರಿ:- ವಿರಾಜಪೇಟೆ (Virajpet) ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಂ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬೀ ಅವರ ನೇತೃತ್ವದಲ್ಲಿ ಜರುಗಿತು. ಮುಂದಿನ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮುಂಜಾಗ್ರತೆಯಾಗಿ ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಸಿದ್ದರಾಗಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಲಜೀವನ್ ಮಿಷನ್ ಬ್ಯಾಚ್ 1, ಬ್ಯಾಚ್ 2 ಹಾಗೂ ಬ್ಯಾಚ್ 3 ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. […]

ಗೌತಮ ಬುದ್ಧನ ಸಂದೇಶ ಇಡೀ ಮಾನವಕುಲಕ್ಕೆ ಮಾರ್ಗದರ್ಶಿ: ವಿನಾಯಕ ನರ್ವಡೆ

Gautama Buddha

ಗೌತಮ ಬುದ್ಧನ (Gautama Buddha) ಸಂದೇಶಗಳು ಇಡೀ ಮಾನವಕುಲಕ್ಕೆ ಮಾನವೀಯತೆಯ ಮಾರ್ಗದರ್ಶಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗೌತಮ ಬುದ್ಧ ಇಡೀ ವಿಶ್ವಕ್ಕೆ ಶಾಂತಿ, ಸಹನೆ, ಸಹಭಾಳ್ವೆ, ಸಹೋದರತೆಯನ್ನು ಬಿತ್ತಿದರು. ಭಾರತದಲ್ಲಿ ಹುಟ್ಟಿ ಬೆಳೆದ ಗೌತಮ ಬುದ್ಧರು ಇಡೀ ವಿಶ್ವಕ್ಕೆ ಶಾಂತಿಯ […]

Power Cut: ನಾಳೆ ಕೊಡಗಿನ ಈ ಭಾಗದಲ್ಲಿ ಕರೆಂಟ್​ ಇರಲ್ಲ!

Power Cut

ಆಲೂರು ಸಿದ್ದಾಪುರ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಪ್3 ಮಾಲಂಬಿ ಫೀಡರ್‍ನಲ್ಲಿ ಮೇ, 13 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಫೀಡರ್ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಕೂಡುರಸ್ತೆ, ಮಾಲಂಬಿ, ಹೊಸಗುತ್ತಿ, ಕಣಿವೆ, ಬಸವನಹಳ್ಳಿ, ಸಂತೆ ಬಸವನಹಳ್ಳಿ, ಸೀಗೆಮರೂರು, ಬಡುವನಹಳ್ಳಿ, ಕೈಸರಳ್ಳಿ, ಹೊನ್ನೆಕೊಪ್ಪಲು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ನದಿಯಲ್ಲಿ ಸ್ನಾನಕ್ಕೆ ತೆರಳಿದ ಯುವಕರಿಬ್ಬರು ನೀರುಪಾಲು

kaveri river

ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಚೇರಂಬಾಣೆ ಮೂಲದ ಗಿರೀಶ್‌ (16) ಮತ್ತು ಅಯ್ಯಪ್ಪ (18) ಎಂಬಿಬ್ಬರು ಯುವಕರು ಕಾವೇರಿ ನದಿಯಲ್ಲಿ (kaveri river) ಈಜಲು ತೆರಳಿ ಜಲ ಸಮಾಧಿ ಆಗಿರುವ ನತದೃಷ್ಟ ರಾಗಿದ್ದಾರೆ. ಇವರ ಪೈಕಿ ಓರ್ವನ ಮೃತದೇಹ ದೊರಕಿದೆ, ಇನ್ನೊರ್ವನ ಮೃತದೇಹದ ಶೋಧ ಕಾರ್ಯ ನಡೆಯುತ್ತಿದ್ದು, ಸ್ಥಳಕ್ಕೆ ನಾಪೋಕ್ಲು ಪಿ.ಎಸ್.ಐ ಮಂಜುನಾಥ್‌ ಹಾಗೂ ಸಿಬ್ಬಂದಿಗಳು […]