ಮೇ.12 ರಿಂದ 21ರವರೆಗೆ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ

camp

ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೇ 12 ರಿಂದ 21ರವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ (Camp) ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಈರಮಂಡ ಹರಿಣಿ ವಿಜಯ್ ತಿಳಿಸಿದರು. ಮೂರ್ನಾಡು ಪಂಚಾಯಿತಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ 10 ದಿನಗಳ ಕಾಲ ನಡೆಯುವ ಶಿಬಿರದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಪ್ರತಿದಿನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ […]

ಕುಶಾಲನಗರದಲ್ಲಿ ಡಿವೈಎಸ್ಪಿ ಗಂಗಾಧರಪ್ಪಗೆ ನಾಗರಿಕ ಸನ್ಮಾನ ಕಾರ್ಯಕ್ರಮ

DySP

ಕುಶಾಲನಗರದಲ್ಲಿ ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್ಪಿ) ರಾಗಿ ಸೇವೆ ಸಲ್ಲಿಸುತ್ತಿದ್ದು, ಬೆಂಗಳೂರಿಗೆ ವರ್ಗಾವಣೆ ಆಗಿರುವ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ (DySP) ಪಿ ಆರ್.ವಿ.ಗಂಗಾಧರಪ್ಪ ಅವರಿಗೆ ಮಂಗಳವಾರ ಸಂಜೆ ಕುಶಾಲನಗರ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಇಲ್ಲಿನ ರೈತ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ವಿ.ಪಿ.ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಿದರು. […]

ಭಾರತದಾದ್ಯಂತ ರಸ್ತೆ ಸುರಕ್ಷತೆ ಸಾಧಿಸುವ ತನ್ನ ಬದ್ಧತೆಯನ್ನು ಪ್ರದರ್ಶಿಸಿದ ಟೊಯೋಟಾ

Toyota

ಬೆಂಗಳೂರು: ಸುರಕ್ಷಿತ ಮತ್ತು ಜವಾಬ್ದಾರಿಯುತ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸುವ ಗುರಿ ಹೊಂದಿರುವ ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಭಾರತದಾದ್ಯಂತ ತನ್ನ ವಿಶಿಷ್ಟ ಯೋಜನೆಗಳ ಮೂಲಕ ರಸ್ತೆ ಸುರಕ್ಷತೆ ಸಾಧಿಸುವ ತನ್ನ ದೀರ್ಘಕಾಲೀನ ಬದ್ಧತೆಯನ್ನು ಪುನರುಚ್ಛರಿಸಿದೆ. ಜಾಗೃತಿ, ಶಿಕ್ಷಣ ಮತ್ತು ಹೊಸತನವನ್ನು ಒಳಗೊಂಡ ಟಿಕೆಎಂನ ಸಮಗ್ರ ರಸ್ತೆ ಸುರಕ್ಷತಾ ಯೋಜನೆಗಳು ಭಾರತದ 10 ಲಕ್ಷಕ್ಕೂ ಹೆಚ್ಚು ಜನರ ಬದುಕಿನಲ್ಲಿ ಧನಾತ್ಮಕ ಪರಿಣಾಮ ಬೀರಿರುವುದು ಗಮನಾರ್ಹವಾಗಿದೆ. ಟೊಯೋಟಾದ ರಸ್ತೆ ಸುರಕ್ಷತಾ ಯೋಜನೆಗಳಲ್ಲಿ ಟಿಎಸ್ಇಪಿ ಪ್ರಮುಖ ಕಾರ್ಯಕ್ರಮವಾಗಿದ್ದು, ಈ ಯೋಜನೆಯನ್ನು […]

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮೊಂಬತ್ತಿ ಹಿಡಿದು ಹಿಂದೂ ಮಲಯಾಳಿ ಸಮಾಜ ಪ್ರತಿಭಟನೆ

Hindu Malayali

ವಿರಾಜಪೇಟೆ: ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಉಗ್ರರು ನಡೆಸಿದ ಪೈಶಾಚಿಕ ಕ್ರೌರ್ಯವನ್ನು ಖಂಡಿಸಿ ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ಹಿಂದೂ ಮಲಯಾಳಿ (Hindu Malayali) ಅಸೋಶಿಯೇಷನ್, ಹಿಂದೂ ಮಲಯಾಳಿ ಅಸೋಶಿಯೇಷನ್ ಮಹಿಳಾ ಘಟಕ ವಿರಾಜಪೇಟೆ ಮತ್ತು ಎಸ್.ಎನ್.ಡಿ.ಪಿ ವಿರಾಜಪೇಟೆ ಶಾಖೆಯ ವತಿಯಿಂದ ನಗರದ ಗಡಿಯಾರ ಕಂಬದ ಬಳಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು ಶ್ರೀ ಮುತ್ತಪ್ಪ ಮಲಯಾಳಿ ಸಮಾಜ ಅದ್ಯಕ್ಷ ಪಿ.ಜಿ. ಸುಮೇಶ್ ಮಾತನಾಡಿ, ಉಗ್ರರ ಧಾಳಿಯನ್ನು ನಾವು ಖಂಡಿಸುತ್ತೇವೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ಜಾರಿಗೆ ಮಾಡಿರುವುದನ್ನು ಸಹಿಸಲಾರದ […]

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಘಟಿಕೋತ್ಸವ

Kodagu Institute of Medical Sciences

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ(Kodagu Institute of Medical Sciences) ಅಪ್ರತಿಮ 2019ನೇ ಬ್ಯಾಚಿನ ಅವಿರತ 2025 ಘಟಿಕೋತ್ಸವ (Convocation) ಸಮಾರಂಭವು ಬುಧವಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕ್ಯಾಂಪಸ್‍ನಲ್ಲಿ ನಡೆಯಿತು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಭಗವಾನ್ ಬಿ.ಸಿ.ಅವರು ಮಾತನಾಡಿ, ಈ ಕ್ಷಣವು ವಿದ್ಯಾರ್ಥಿಗಳಿಗಿಂತ ಅವರ ಪೋಷಕರಿಗೆ ಅತೀವ ಸಂತೋಷ ತಂದಿರುವ ದಿನವಾಗಿದೆ ಎಂದರು. ಈ ದಿನದ ವರೆಗೂ ನೀವು ವಿದ್ಯಾರ್ಥಿಗಳಾಗಿದ್ದಿರಿ, ಇಂದಿನಿಂದ ವೃತ್ತಿಪರ ವೈದ್ಯರಾಗುತ್ತಿದ್ದಿರ ಎಂದು ತಿಳಿದರು. ಪದವಿ […]

ಸಮಗ್ರ-ಸಮತೆಯೆಡೆಗೆ ಸಾಹಿತ್ಯ: ರಾಷ್ಟ್ರೀಯ ವಿಚಾರ ಸಂಕಿರಣ

National symposium

ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯ ಪಟ್ಟಿದ್ದಾರೆ. ಕುಶಾಲನಗರ (Kushalnagar) ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟಿಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯರವರ “ಬೆಂದೊಡಲ ಕುಣಿತ” ಎಂಬ ಕೃತಿಯನ್ನು […]

ಚೆಕ್ಕೇರ ಕಪ್ ಕ್ರಿಕೆಟ್: ಅಜ್ಜಿಕುಟ್ಟಿರ ತಂಡದ ಪರ ಮೈದಾನಕ್ಕಿಳಿದ ಶಾಸಕ ಪೊನ್ನಣ್ಣ

MLA Ponnanna

ಹುದಿಕೇರಿಯಲ್ಲಿ ನಡೆಯುತ್ತಿರುವ ಚೆಕ್ಕೇರ ಕಪ್ ಕ್ರಿಕೆಟ್ (Chekkera Cup Cricket) ಪಂದ್ಯಾವಳಿಯ ವಿಶೇಷ ಅತಿಥಿಯಾಗಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ (Ponnanna) ರವರು ಭಾಗವಹಿಸಿ ಶುಭ ಕೋರಿದರು. ಕೊಡಗಿನ ಕೊಡವ ಕುಟುಂಬಸ್ಥರ ನಡುವೆ ನಡೆಯುತ್ತಿರುವ ಪ್ರತಿಷ್ಠಿತ ಚೆಕ್ಕೇರ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ, ಹಲವು ಪ್ರಬಲ ಕ್ರಿಕೆಟ್ ಕುಟುಂಬಗಳು ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಸೆಣಸಾಟ ನಡೆಸುತ್ತಿದೆ. ಇಂದು ಮೈದಾನಕ್ಕೆ ಭೇಟಿ ನೀಡಿದ ಮಾನ್ಯ ಶಾಸಕರು, ಕ್ರಿಕೆಟ್ ತಂಡಗಳ ಸದಸ್ಯರೊಂದಿಗೆ ಹಲವು ಸಮಯವನ್ನು […]

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿದ ಯುವಕ ಬಂಧನ: ಓರ್ವ ಸಾವು

Car accident

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಪರಿಣಾಮವಾಗಿ ವ್ತಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾದ ಆರೋಪಿಯನ್ನು ಬಂಧಿಸಲಾಗಿದೆ. ಮಧ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ಅತೀವೇಗ ಮತ್ತು ಅಜಾಗೂಕತೆಯಿಂದ ವಾಹನ ಚಾಲನೆ ಮಾಡಿ ಪಾದಚಾರಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾಗಿರುವ ಕೆಎ-05-ಎಂಕ್ಯೂ-2672 ಕಾರಿನ ಚಾಲಕನಾದ ಶಿವನ್ ಕರುಂಬಯ್ಯನ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 281,125(ಬಿ), 105, 62 ಬಿ.ಎನ್.ಎಸ್ ಆಕ್ಟ್ […]

ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಆರಂಭ

first degree class

2025 ನೇ ಸಾಲಿನ ಜೂನ್/ ಜುಲೈನಲ್ಲಿ ನಡೆಯಲಿರುವ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಹಾಗೂ 6 ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಂಡಶುಲ್ಕ ರಹಿತ ಮೇ, 05 ಹಾಗೂ ದಂಡ ಶುಲ್ಕದೊಂದಿಗೆ ಮೇ, 12 ಕೊನೆಯ ದಿನವಾಗಿದೆ. ಹಾಗೆಯೇ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿಯು (Admissions) ಆರಂಭವಾಗಿರುತ್ತದೆ. ಪ್ರವೇಶಾತಿ ಬಯಸುವವರು ಕಾಲೇಜನ್ನು ಸಂಪರ್ಕಿಸಬಹುದು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಕೊಡಗಿನಲ್ಲಿ ವಿದ್ಯುತ್ ಸಮಸ್ಯೆಗಳಿಗೆ ಸಹಾಯವಾಣಿ ಕೇಂದ್ರ ಆರಂಭ

Helpline center for electricity problems

ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್ (Electricity) ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ. […]