ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ರಾಜ್ಯಮಟ್ಟದ 5 ಎ ಸೈಡ್ ರಿಂಕ್‌ಹಾಕಿ ಪಂದ್ಯಾಟ ಉದ್ಘಾಟನೆ

hockey tournament

ಕ್ರೀಡೆಯು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಹೆಚ್ಚಿಸಲು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಎಂದು ಹಿರಿಯ ಹಾಕಿ ಆಟಗಾರ ಹಾಗೂ ಹಾಕಿ ವೀಕ್ಷಕ ವಿವರಣೆಗಾರರಾದ ಮಾಳೇಟಿರ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು . ವಿರಾಜಪೇಟೆ ಕಾವೇರಿ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಪೊನ್ನಂಪೇಟೆ ಟರ್ಫ್ ಮೈದಾನದಲ್ಲಿ ಆಯೋಜಿಸಲಾಗಿದ್ದ 5 ಎ ಸೈಡ್ ರಿಂಗ್ ಹಾಕಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೊಡಗು ಜಿಲ್ಲೆಯು ಹಾಕಿ ತವರೆಂದು ಪ್ರಸಿದ್ಧಿಯನ್ನು ಪಡೆದಿದ್ದು ಹಾಕಿ ಕ್ರೀಡೆಗೆ ಇಲ್ಲಿ ವಿಶೇಷವಾದ ಸ್ಥಾನಮಾನವಿದೆ . ಕ್ರೀಡೆಯೂ ನಮ್ಮಲ್ಲಿ […]

ಕೊಡಗು ಗೌಡ ಸಮುದಾಯಕ್ಕೆ ಭೂಮಿ ಮಂಜೂರು: ಮುಖ್ಯಮಂತ್ರಿಗೆ ಶಾಸಕ ಪೊನ್ನಣ್ಣ ನೇತೃತ್ವದಲ್ಲಿ ಸನ್ಮಾನ

Kodagu Gowda

ಕೊಡಗು ಅರೆಭಾಷೆ ಗೌಡ ಸಮುದಾಯದ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿಗಾಗಿ ಮಡಿಕೇರಿ ತಾಲೂಕಿನ ಮದೆ ಗ್ರಾಮದ ಕಾಟಕೇರಿಯಲ್ಲಿ 6 ಎಕರೆ ಜಾಗವನ್ನು ಮಂಜೂರು ಮಾಡಿದ ಹಾಗೂ ಜಿಲ್ಲೆಯ ಸುದೀರ್ಘ ಕಾಲದ ‘ಜಮ್ಮಬಾಣೆ’ ಸಮಸ್ಯೆಯನ್ನು ನಿವಾರಿಸಿದ ರಾಜ್ಯ ಸರ್ಕಾರಕ್ಕೆ ಗೌರವ ಸಮರ್ಪಿಸಲಾಯಿತು. ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಕೊಡಗು ಗೌಡ ಸಮಾಜದ ವತಿಯಿಂದ […]

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ರಾಜ್ಯಮಟ್ಟದ 5 ಎ ಸೈಡ್ ರಿಂಕ್‌ಹಾಕಿ ಪಂದ್ಯಾಟ

Cauvery College Virajpet

ರಾಜಪೇಟೆ ಕಾವೇರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ವತಿಯಿಂದ ಕೊಡಗಿನ ಇತಿಹಾಸದಲ್ಲಿ ಮೊದಲ ಬಾರಿಗೆ ರಿಂಕ್ 5 ಎ ಸೈಡ್ ರಾಜ್ಯಮಟ್ಟದ ಅಂತರ ಕಾಲೇಜು ಹಾಕಿ ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದು ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡನ್ ಮಾಹಿತಿ ನೀಡಿದರು . ಕಾವೇರಿ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿಯೆ ಮೊದಲ ಬಾರಿ ಅಂತರ ಕಾಲೇಜು 5 ಎ ಸೈಡ್ ರಿಂಕ್ ಹಾಕಿ ಪಂದ್ಯಾಟವನ್ನು […]

ಎಡಪಾಲ ಕೌಟುಂಬಿಕ ಕ್ರಿಕೆಟ್ ಕ್ರೀಡಾಕೂಟ-2026: ಕಿಕ್ಕರೆ ಚಾಂಪಿಯನ್

Edapala Family Cricket Tournament-2026

ನರಿಯಂದಡ ಗ್ರಾಮದ ಎಡಪಾಲದ ಕುಪ್ಪೋಡಂಡ ಕುಟುಂಬಸ್ಥರ ಆತಿಥ್ಯದಲ್ಲಿ ನಡೆದ 23ನೇ ವರ್ಷದ ಎಡಪಾಲ ಕೌಟುಂಬಿಕ ಕ್ರೀಡಾಕೂಟ ಇತ್ತೀಚಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಿಕ್ಕರೆ ತಂಡ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡು ಸಂಭ್ರಮಿಸಿತು. ಫೈನಲ್ ನಲ್ಲಿ ತೀವ್ರ ಪೈಪೋಟಿ ನೀಡಿದ, ಕ್ರೀಡಾಕೂಟದ ಅತಿಥ್ಯ ವಹಿಸಿದ್ದ ಕುಪ್ಪೋಡಂಡ ತಂಡ ಕೊನೆಗೆ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಡಪಾಲ ಗ್ರಾಮದ ಬದ್ರಿಯಾ ಫ್ರೆಂಡ್ಸ್ ತಂಡ ವಿನ್ನರ್ಸ್ ಪ್ರಶಸ್ತಿ ಪಡೆದರೆ, ಕಿಕ್ಕರೆ ತಂಡ […]

ಶಿವರಾತ್ರಿ ಪ್ರಯುಕ್ತ ಮುತ್ತಪ್ಪ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ

ವೀರಾಜಪೇಟೆ : ವೀರಾಜಪೇಟೆಯ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಮಹಾ ಶಿವರಾತ್ರಿಯ ಅಂಗವಾಗಿ ಮೀನುಪೇಟೆಯ ಚೈತನ್ಯ ಮಡಪ್ಪುರ ಶ್ರೀ ಮುತ್ತಪ್ಪ ದೇವಸ್ಥಾನದ ಆವರಣದಲ್ಲಿರುವ ಶ್ರೀ ಮುತ್ತಪ್ಪ ಕಲಾ ಮಂಟಪದಲ್ಲಿ ಮಹಾ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿದೆ. ಪೂಜೆಗೆ ಬರುವಾಗ ಎರಡು ಬಾಳೆ ಎಲೆ, ಹೂವು ಹಾಗೂ ದೀಪ ತರಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಮುತ್ತಪ್ಪ ಮಲಯಾಳಿ ಸಂಘದ ಅಧ್ಯಕ್ಷ ಸುಮೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಪಯ್ಯವೂರು ಶಿವ ದೇವಾಲಯದಲ್ಲಿ ಊಟ್‌ ಮಹೋತ್ಸವ – ಬೊವ್ವೇರಿಯಂಡ, ಮುಂಡಿಯೋಳಂಡ ಕುಟುಂಬಸ್ಥರು ಭಾಗಿ

ವೀರಾಜಪೇಟೆ : ಕೊಡಗು ನಿವಾಸಿಗಳು ಮತ್ತು ಮಲಯಾಳಿಗಳು ಜಂಟಿಯಾಗಿ ಕೇರಳದ ಪಯ್ಯಾವೂರಿನ ಶಿವ ದೇವಾಲಯದಲ್ಲಿ ಆಚರಿಸುವ ಹದಿಮೂರು ದಿನಗಳ ಪಯ್ಯವೂರು ಶಿವ ದೇವಾಲಯದ ಊಟ್‍ಮಹೋತ್ಸವವು ಕೊಡಗಿನಿಂದ ಮುಂಡಿಯೋಳಂಡ ಹಾಗೂ ಬೋವ್ವೇರಿಯಂಡ ಕುಟುಂಬಸ್ಥರ ಎತ್ತು ಪೋರಾಟ್‍ನೊಂದಿಗೆ ತೆರಳಿ ಅಕ್ಕಿ ಅಳೆಯುವ ಶಾಸ್ತ್ರದೊಂದಿಗೆ ಪ್ರಾರಂಭವಾಯಿತು. ಪಟ್ಟಣದ ಪಳಸ್ಸಿ ಭಗವತಿ ದೇವಸ್ಥಾನದ ಆವರಣಕ್ಕೆ ಆಗಮಿಸಿದ ಕೊಡವರನ್ನು ಪಯ್ಯಾವೂರು ದೇವಸ್ವಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ವಿ. ಅನೀಶ್, ವಿಶ್ವಸ್ಥ ಮಂಡಳಿ ಸದಸ್ಯ ಕೆ.ವಿ. ಉತ್ತಮರಾಜನ್, ಮತ್ತು ಆಚರಣೆ ಸಮಿತಿಯ ಪದಾಧಿಕಾರಿಗಳಾದ ಪಿ.ಸುಂದರನ್, ಫಲ್ಗುಣನ್ ಮೆಳೇದತ್, […]

ಮಡಿಕೇರಿ ಪೊಲೀಸ್ ಪೇದೆ ಸಂದೀಪ್ ನಿಧನ

Madikeri Police

ಮಡಿಕೇರಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಂದೀಪ್ ರೈ (42) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಮೂಲತಃ ಮಡಿಕೇರಿಯವರಾದ ಇವರು ಕಳೆದ ವಾರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಸಂದೀಪ್ ಅವರು ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಶಿಸ್ತು ಹಾಗೂ ಜನಸ್ನೇಹಿ ವ್ಯಕ್ತಿತ್ವದ ಮೂಲಕ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು.

Power Cut: ನಾಳೆ ಕೊಡಗಿನ ಈ ಈ ಎಲ್ಲಾ ಪ್ರದೇಶಗಳಲ್ಲಿ ಇರಲ್ಲ ಕರೆಂಟ್‌!

Kodagu power cut

ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಫೆಬ್ರವರಿ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಕಣಿವೆ, ಮಲ್ಲೇನಹಳ್ಳಿ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು, ಶಿರಂಗಾಲ, ಕಾನ್ ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮಡಿಕೇರಿ […]

ಕೊಡಗಿನಲ್ಲಿ ಶೀಘ್ರದಲ್ಲೇ ಮೆಗಾ ಪಾಸ್‌ಪೋರ್ಟ್‌ ಮೇಳ – ಸಂಸದ ಯದುವೀರ್ 

ನವದೆಹಲಿ : ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್ಪೋರ್ಟ್ ಸೇವಾ ಕೇಂದ್ರ ಆರಂಭಿಸುವಂತೆ ಕೇಂದ್ರ ವಿದೇಶಾಂಗ ಸಚಿವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ ದೇಶ-ವಿದೇಶಗಳಿಗೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಈಗಿರುವ ಪಾಸ್ಪೋರ್ಟ್ ಸೇವಾ ಕೇಂದ್ರವನ್ನು ತತ್ಕಾಲ್ ಸೇವೆಯನ್ನೂ ಒಳಗೊಂಡಂತೆ ಪೂರ್ಣ ಪ್ರಮಾಣದ ಕೇಂದ್ರವನ್ನಾಗಿ ಮೇರ್ಲರ್ಜೆಗೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿರುವ ಅಂಚೆ ಕಚೇರಿ ಪಾಸ್ಪೋರ್ಟ್ […]

ಪೊಮ್ಮಕ್ಕಡ ಕೂಟದಿಂದ ಚೇರಂಬಾಣೆಯಲ್ಲಿ ಗೃಹಬಳಕೆ ವಸ್ತುಗಳ ತಯಾರಿ ಕಾರ್ಯಾಗಾರ

ಚೇರಂಬಾಣೆ : ಮಹಿಳೆಯರು ದಿನಬಳಕೆ ವಸ್ತುಗಳ ತಯಾರಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸ್ವಾವಲಂಬಿಯಾಗಬೇಕು ಎಂದು ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಡ್ಡಿರ ನಳಿನಿ ಪೂವಯ್ಯ ಹೇಳಿದರು. ಚೇರಂಬಾಣೆ ಬೇಂಗ್‌ನಾಡು ಕೊಡವ ಸಮಾಜದಲ್ಲಿ ಮೊಮ್ಮಕ್ಕಡ ಕೂಟ ಮಹಿಳೆಯರಿಗಾಗಿ ಆಯೋಜಿಸಿದ್ದ ಗೃಹ ಬಳಕೆ ವಸ್ತುಗಳ ತಯಾರಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಸಂಸ್ಥೆಗಳು ಮಹಿಳೆಯರ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ ಮಹಿಳೆಯರು ಆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಆರ್ಥಿಕವಾಗಿ ಸ ಬಲರಾಗಬೇಕು ಎಂದರು. ಪ್ರಾತ್ಯಕ್ಷಿಕೆಯಲ್ಲಿ ಬಾಳೆದಿಂಡು, ನಿಂಬೆಹಣ್ಣು, ಕಾಳುಮೆಣಸು, ಶುಂಠಿ, ಕ್ಯಾರೆಟ್, […]