ಮನೆಯ ಸುತ್ತಮುತ್ತ ಪರಿಸರ ಶುಚಿತ್ವಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ

ಮಡಿಕೇರಿ: ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ‘ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ (cleanliness) ಉತ್ತಮ ಆರೋಗ್ಯ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮಡಿಕೇರಿ (Madikeri) 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆ.
ಅರ್ಜಿ ಆಹ್ವಾನ: ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್

ಐಐಎಸ್ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇಂಟಲಿಜೆನ್ಸ್ (Artificial Intelligence) ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಎಂಜಿನಿಯರಿಂಗ್ ಪದವೀಧರರಿಗೆ ರೂ.15 ಸಾವಿರಗಳ ಶಿಷ್ಯವೇತನ/ ತರಬೇತಿ ನೀಡುವ ಸಂಬಂಧ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ಇಚ್ಚಿಸುವವರು ಏಪ್ರಿಲ್, 25 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ 9632465161. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, […]
ಜನಿವಾರ ಧರಿಸಿ ಸಿಇಟಿ ಬರೆಯಲು ಅಧಿಕಾರಿಗಳ ಆಕ್ಷೇಪ – ಕುಶಾಲನಗರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

ಕುಶಾಲನಗರ : ಸಿಇಟಿ ಪರೀಕ್ಷೆ ಬೇಳೆ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಕುಶಾಲನಗರದಲ್ಲಿ ಕೂಡಾ ಈ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಯಿತು. ದೇವಸ್ಥಾನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅಧಿಕಾರಿಗಳ ನಡೆಯನ್ನು ಖಂಡಿಸಿದರು. ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದಿರುವುದು ಅಮಾನವೀಯ ಘಟನೆ. ತಪ್ಪೆಸಗಿದವರ ವಿರುದ್ಧ ಕ್ರಮವಾಗಬೇಕೆಂದು ಆಗ್ರಹಿಸಿದರು. ದೇವಾಲಯದಿಂದ ತಹಸೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಹಾತೂರುವಿನಲ್ಲಿ ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ: ತಾಯಿ ಮಗ ಸ್ಥಳದಲ್ಲೇ ಸಾವು!

ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತದಲ್ಲಿ (Road accident) ತಾಯಿ ಮಗ ಸಾವನಪ್ಪಿದ್ದಾರೆ. ಬಿ.ಶೆಟ್ಟಿಗೇರಿ ಅರ್ಚಕರ ಕುಟುಂಬದ ಸುದರ್ಶನ ಬೆಂಗಳೂರುವಿನಲ್ಲಿ ಉದ್ಯಗೋದಲ್ಲಿ ಇದ್ದು ತಾಯಿಯೊಂದಿಗೆ ಗೋಣಿಕೊಪ್ಪಲಿನಿಂದ ಮನೆಗೆ ಸಾಮಾಗ್ರಿಗಳನ್ನು ತೆಗೆದುಕೊಂಡು ತನ್ನ ಓಮ್ನಿ ಕಾರಿನಲ್ಲಿ ಹೋಗುತ್ತಿದ್ದಾಗ ಸಂದರ್ಭ ಈ ಘಟನೆ ನಡೆದಿದೆ. ಕೇರಳ ರಾಜ್ಯದ ಲಾರಿ ಮೈಸೂರಿನತ್ತ ತರಕಾರಿ ಸಾಗಾಟ ಮಾಡಲು ತೆರಳುತ್ತಿತ್ತು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಸುದರ್ಶನ (42) ಹಾಗೂ ತಾಯಿ ಲಲಿತಾ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಓಮಿನಿ ವ್ಯಾನ್ ಸಂಪೂರ್ಣವಾಗಿ […]
ಸೆಸ್ಕ್ ಸಹಾಯಕ ಇಂಜಿನಿಯರ್ ಎ.ಆರ್. ಸಂಪತ್ ಕುಮಾರ್ ಅವರಿಗೆ ಬೀಳ್ಕೊಡುಗೆ

ಮಡಿಕೇರಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಲ್ಲಿ (Cesc) ಸಹಾಯಕ ಇಂಜಿನಿಯ್ ಆಗಿದ್ದು ವರ್ಗಾವಣೆಯಾದ ಎ.ಆರ್. ಸಂಪತ್ ಅವರಿಗೆ ಗ್ರೀನ್ ಸಿಟಿ ಫೋರಂ ವತಿಯಿಂದ ಅಭಿನಂದಿಸಿ ಬೀಳ್ಕೊಡಲಾಯಿತು. 2015ರಿಂದ ಸುದೀರ್ಘ ಅವಧಿವರೆಗೆ ಸಹಾಯಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದ ಸಂಪತ್ ಅವರು ಸರ್ಕಾರದ ಆದೇಶದಂತೆ ಹಾಸನ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕಚೇರಿಯಲ್ಲಿ ಭೇಟಿಯಾದ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಅವರು ಲೈನ್ಮನ್ಗಳ ಮೂಲಕ ಶಾಲು ಹೊಸಿದಿ ಫಲ ತಾಂಬೂಲ ನೀಡಿ ಗೌರವಿಸಿದರು. ಸಂಪತ್ […]
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ (State Government) ನೌಕರರ ಕ್ರೀಡಾಕೂಟ (Sports) ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ ಚಾಲನೆ ನೀಡಿದರು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಜ್ಯೋತಿ ಬೆಳಗಿ ಚಾಲನೆ ನೀಡಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ […]
ಮುದ್ದಂಡ ಹಾಕಿ ನಮ್ಮೆ: ಬೆಳ್ಳಿ ಹಬ್ಬಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ

ಮಡಿಕೇರಿ : ಮಡಿಕೇರಿಯಲ್ಲಿ ನಡೆಯುತ್ತಿರುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ (Muddanda Hockey Festival) ಇಂದು ಶ್ವಾನ ಪ್ರದರ್ಶನ ಮೆರುಗು ನೀಡಿತು. ವಿವಿಧ ತಳಿಯ ಶ್ವಾನಗಳು ಹಾಕಿ (Hockey) ಮೈದಾನದಲ್ಲಿ ಆಕರ್ಷಣೆ ಮತ್ತು ಚಾಕಚಕ್ಯತೆಯಿಂದ ನೋಡುಗರ ಗಮನ ಸೆಳೆದವು. ಪಶುವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ನಡೆದ ಶ್ವಾನ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾನವನ ವಿಶ್ವಾಸ, ನಂಬಿಕೆಗೆ ಅರ್ಹವಾದ ನಿಷ್ಠಾವಂತ ಸಾಕು ಪ್ರಾಣಿಗಳಲ್ಲಿ ಶ್ವಾನ ಅಗ್ರ ಸ್ಥಾನ ಪಡೆದಿದೆ. ಮನೆಯಲ್ಲಿ […]
ಬೆಂಗಳೂರಿನಲ್ಲಿ ಕೊಡಗಿನ ಪೊಲೀಸ್ ಅಧಿಕಾರಿಯ ಸಾಧನೆ

ಬೆಂಗಳೂರಿನ ಸಿದ್ದಾಪುರ ಪೊಲೀಸ್ (Police) ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು, ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಗ್ರಾಮದ ಬಿ.ಟಿ. ಕಿಶೋರ್ ಎಂಬುವವರೇ ಈ ಕಾರ್ಯಾಚರಣೆ ನಡೆಸಿ, ಹಿರಿಯ ಅಧಿಕಾರಿಗಳಿಂದ ಪ್ರಶಂಸೆಗೊಳಗಾದವರಾಗಿದ್ದಾರೆ. ಬೆಂಗಳೂರು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ದಿವಂಗತ ಲೋಕೇಶ್ ಎಂಬುವವರ ಪತ್ನಿ ಮಂಜುಳಾರವರು ದಿನಾಂಕ 24-11-2024 […]
ಏ.21 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇದೇ ಏಪ್ರಿಲ್, 21 ರಿಂದ 45 ದಿನಗಳ ಕಾಲ 7 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕಾರ್ಯಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ (Vaccination) ಅಭಿಯಾನ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ ಸಂಬಂಧಿಸಿದಂತೆ […]