Power Cut: ಕೊಡಗಿನ ಜನರೇ… ನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ!

ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ಕೈಗೊಳ್ಳಬೇಕಿದೆ. ಆದ್ದರಿಂದ ಈ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಈ ಹಿನ್ನೆಲೆ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್ಆರ್ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ […]
ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎಂ.ಹನೀಫ್ ಇನ್ನಿಲ್ಲ

ಕೊಡಗು ಜಲ್ಲಾ ಕಾಂಗ್ರೆಸ್ ಹಿರಿಯ ಕಾರ್ಯಕರ್ತ,ಜಿಲ್ಲಾ ಕಾರಾಗೃಹ ಸಮಿತಿ ಸದಸ್ಯರಾದ ಎಂ.ಎಂ.ಹನೀಫ್ (M.M. Haneef) ರವರು ಮಂಗಳೂರಿನಲ್ಲಿ ಅನಾರೋಗ್ಯದಿಂದ ಮೃತರಾಗಿದ್ದಾರೆ.ಮೃತರ ಅಂತ್ಯಕ್ರಿಯೆ ಮಡಿಕೇರಿಯಲ್ಲಿ ಸಂಜೆ ನಡೆಯಲಿದೆ.
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ:- ಸರ್ಕಾರದ ಆದೇಶದಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕøತ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿ ಅವರ ಅನುಮೋದನೆಯಂತೆ ಕೊಡಗು ಜಿಲ್ಲೆಯ ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ (Anganwadi workers), ಮಿನಿ ಅಂಗನವಾಡಿ ಕಾರ್ಯಕರ್ತೆ-1 ಮತ್ತು 32- ಸಹಾಯಕಿಯರು ಹುದ್ದೆ ಸೇರಿದಂತೆ ಒಟ್ಟು 45 ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ವೆಬ್ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ […]
ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

ಮಡಿಕೇರಿ:- ವಿರಾಜಪೇಟೆ (Virajpet) ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿ ಹಾಗೂ ಜಿಂ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬೀ ಅವರ ನೇತೃತ್ವದಲ್ಲಿ ಜರುಗಿತು. ಮುಂದಿನ ದಿನಗಳಲ್ಲಿ ಮಳೆಗಾಲ ಪ್ರಾರಂಭವಾಗುತ್ತಿದ್ದು, ಮುಂಜಾಗ್ರತೆಯಾಗಿ ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಸಿದ್ದರಾಗಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಲಜೀವನ್ ಮಿಷನ್ ಬ್ಯಾಚ್ 1, ಬ್ಯಾಚ್ 2 ಹಾಗೂ ಬ್ಯಾಚ್ 3 ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. […]
ಗೌತಮ ಬುದ್ಧನ ಸಂದೇಶ ಇಡೀ ಮಾನವಕುಲಕ್ಕೆ ಮಾರ್ಗದರ್ಶಿ: ವಿನಾಯಕ ನರ್ವಡೆ

ಗೌತಮ ಬುದ್ಧನ (Gautama Buddha) ಸಂದೇಶಗಳು ಇಡೀ ಮಾನವಕುಲಕ್ಕೆ ಮಾನವೀಯತೆಯ ಮಾರ್ಗದರ್ಶಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗೌತಮ ಬುದ್ಧ ಇಡೀ ವಿಶ್ವಕ್ಕೆ ಶಾಂತಿ, ಸಹನೆ, ಸಹಭಾಳ್ವೆ, ಸಹೋದರತೆಯನ್ನು ಬಿತ್ತಿದರು. ಭಾರತದಲ್ಲಿ ಹುಟ್ಟಿ ಬೆಳೆದ ಗೌತಮ ಬುದ್ಧರು ಇಡೀ ವಿಶ್ವಕ್ಕೆ ಶಾಂತಿಯ […]
Power Cut: ನಾಳೆ ಕೊಡಗಿನ ಈ ಭಾಗದಲ್ಲಿ ಕರೆಂಟ್ ಇರಲ್ಲ!

ಆಲೂರು ಸಿದ್ದಾಪುರ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಪ್3 ಮಾಲಂಬಿ ಫೀಡರ್ನಲ್ಲಿ ಮೇ, 13 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಫೀಡರ್ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಕೂಡುರಸ್ತೆ, ಮಾಲಂಬಿ, ಹೊಸಗುತ್ತಿ, ಕಣಿವೆ, ಬಸವನಹಳ್ಳಿ, ಸಂತೆ ಬಸವನಹಳ್ಳಿ, ಸೀಗೆಮರೂರು, ಬಡುವನಹಳ್ಳಿ, ಕೈಸರಳ್ಳಿ, ಹೊನ್ನೆಕೊಪ್ಪಲು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ನದಿಯಲ್ಲಿ ಸ್ನಾನಕ್ಕೆ ತೆರಳಿದ ಯುವಕರಿಬ್ಬರು ನೀರುಪಾಲು

ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ನೀರು ಪಾಲಾಗಿರುವ ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಎಂಬಿಬ್ಬರು ಯುವಕರು ಕಾವೇರಿ ನದಿಯಲ್ಲಿ (kaveri river) ಈಜಲು ತೆರಳಿ ಜಲ ಸಮಾಧಿ ಆಗಿರುವ ನತದೃಷ್ಟ ರಾಗಿದ್ದಾರೆ. ಇವರ ಪೈಕಿ ಓರ್ವನ ಮೃತದೇಹ ದೊರಕಿದೆ, ಇನ್ನೊರ್ವನ ಮೃತದೇಹದ ಶೋಧ ಕಾರ್ಯ ನಡೆಯುತ್ತಿದ್ದು, ಸ್ಥಳಕ್ಕೆ ನಾಪೋಕ್ಲು ಪಿ.ಎಸ್.ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು […]
ದಲಿತ ಸಂಘರ್ಷ ಸಮಿತಿಯ ಹಿರಿಯ ಹೋರಾಟಗಾರ ಹೆಚ್. ಕೆ. ಸಣ್ಣಯ್ಯ ನಿಧನ

ದಲಿತ ಸಂಘರ್ಷ ಸಮಿತಿಯ ವೀರಾಜಪೇಟೆ ತಾಲೂಕಿನಲ್ಲಿ ದಲಿತ ಸಂಘರ್ಷ ಸಮಿತಿಯನ್ನೂ ಹುಟ್ಟು ಹಾಕಿದ ಹಿರಿಯ ಹೋರಾಟಗಾರ ಹಾಗೂ ವಿರಾಜಪೇಟೆಯ ಅಂಬೇಡ್ಕರ್ ಭವನಕ್ಕೆ ಮುಖ್ಯ ಕಾರಣ ಕರ್ತರಾದ, ಹೆಚ್. ಕೆ. ಸಣ್ಣಯ್ಯ (H. K. Sannaiah) ನಿಧನರಾಗಿದ್ದಾರೆ. ಇವರ ಅಂತಿಮ ಸಂಸ್ಕಾರ ವು ನಾಳೆ ಅವರ ಸ್ವಗ್ರಾಮ ಆದ ಹಾಸನ ಜಿಲ್ಲೆಯ ಬೆಳವಾಡಿಯಲ್ಲಿ ನಡೆಯಲಿದ್ದು ಇಂದು ಬೆಂಗಳೂರಿನಿಂದ ಹೊರಟು ಅವರ ವೀರಾಜಪೇಟೆಯ ರಾಮನಗರದ ಸ್ವಂತ ಮನೆಗೆ ಬರಲಿದ್ದು ನಾಳೆ ಬೆಳಿಗ್ಗೆ ಹುಟ್ಟೂರಿಗೆ ಪ್ರಾರ್ಥಿರ್ವ ವನ್ನು ರವಾನಿಸಲಾಗುತ್ತದೆ, ನಾಳೆ ಅಂತ್ಯಕ್ರಿಯೆ […]
ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ, ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ (Bhagamandala) ಸಂಪರ್ಕಿಸುವ ಮಡಿಕೇರಿ (Madikeri) ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್ ಪೊನ್ನಣ್ಣ (A. S. Ponnanna) ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು, ಸುಮಾರು ₹4 ಕೋಟಿ ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ತನಕದ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು. ದಿನವೊಂದಕ್ಕೆ ಸಾವಿರಾರು ಭಕ್ತಾದಿಗಳು ಹಾಗೂ […]
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ವಿಚಾರಣೆಗೆ ಹಾಜರಾದ ತೆನ್ನಿರ ಮೈನಾ

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಕೊಡಗು ಮೂಲದ ಬಿಜೆಇಪ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ (Thennira Maheena) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗಲು ಬೆಂಗಳೂರಿನ ಹೆಣ್ಣೂರು ಪೊಲೀಸರು ನೊಟೀಸ್ ನೀಡಿದ್ದರು. ಅದರಂತೆ ಠಾಣೆಯ ಇನ್ಸ್ಪೆಕ್ಟರ್ ಎದುರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಕೊಡಗು ಮೂಲದ ವಿನಯ್ ಸೋಮಯ್ಯ ನವರು ಏಪ್ರಿಲ್ 4 ರಂದು ಮುಂಜಾನೆ ನಾಗವಾರದದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ […]