ಲೋಕ ಕಲ್ಯಾಣಕ್ಕಾಗಿ ಕೊಡಗಿನಲ್ಲಿ ಜಪಯಜ್ಞ – ಸಹಸ್ರ ಮೋದಕಗಳಿಂದ ಮಹಾಗಣಪತಿ ಹೋಮ

ಮಡಿಕೇರಿ : ಜೀವನದಿ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ೧೧ ರಿಂದ ಅತಿರುದ್ರ ಜಪಯಜ್ಞ ಆರಂಭಗೊಂಡಿದೆ. ಬೆಳಗ್ಗೆ ೬.೩೦ಕ್ಕೆ ಜಪಯಜ್ಞದೊಂದಿಗೆ ಧಾರ್ಮಿಕ ಕಾರ್ಯ ಆರಂಭವಾಗಿದ್ದು, ಬಳಿಕ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ. ಪ್ರಶಾಂತ್ ಆಚಾರ್ಯ ನೇತೃತ್ವದಲ್ಲಿ ಪೂಜಾ ಕಾರ್ಯ ನಡೆಯುತ್ತಿದೆ. ಮೇ ೧೧ರಿಂದ ೨೧ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯದೆಲ್ಲೆಡೆಯಿಂದ ೫೦ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ […]
ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ಮಹಾಸಭೆ ಮೇ ೧೪ಕ್ಕೆ

ಮಡಿಕೇರಿ : ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ವಾರ್ಷಿಕ ಮಹಾಸಭೆಯು ಮೇ ೧೪ ರಂದು ಮಡಿಕೇರಿಯಲ್ಲಿ(madikeri) ನಡೆಯಲಿದೆ. ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರಸಭಾ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ತಿಳಿಸಿದ್ದಾರೆ.
ಮುಂಗಾರಿಗೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ವಹಿಸಿ: ಜಿಲ್ಲಾಧಿಕಾರಿ

ಮುಂಗಾರು ಸಂಬಂಧ ನೋಡಲ್ ಅಧಿಕಾರಿಗಳು ಹಾಗೂ ಎಂಜಿನಿಯರ್ಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಆದ್ದರಿಂದ ವ್ಯಾಪಕ ಮಳೆಯಿಂದ ಸಂಭವಿಸಬಹುದಾದ ಅನಾಹುತವನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಮುಂಗಾರು ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ, […]
ಅಮೃತ ಯುವ ಮೊಗೇರ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯ

ಅಮೃತ ಯುವ ಮೊಗೇರ ಸಿದ್ದಾಪುರ ಅಮ್ಮತಿ ಹೋಬಳಿ ಇವರ ವತಿಯಿಂದ ತೃತೀಯ ಬಾರಿಗೆ ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ (Mogera cricket) ಪಂದ್ಯವು ಮೇ 17 ಹಾಗೂ18 ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ. ಮೊಗೇರ ಬಾಂಧವರಿಗೆ ಮಾತ್ರ ಅವಕಾಶ ಇದ್ದು ಒಟ್ಟು 40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಪಂದ್ಯದ ಶುಲ್ಕ 3,000 ನಿಗದಿ ಪಡಿಸಲಾಗಿದ್ದು ಕ್ರೀಡಾ ಕೂಟದ ವಿನ್ನರ್ಸ್ ತಂಡಕ್ಕೆ 33,333 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 22,222 ನಗದು […]
ನಾಳೆ ಕೊಡಗಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಕುಶಾಲನಗರ ಪುರಸಭೆ ವ್ಯಾಪ್ತಿಯ KSRTC ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ನ್ನು (Indira Canteeen) ಮೇ, 10 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ ಅವರು ಸಾರ್ವಜನಿಕರ ಉಪಯೋಗಕ್ಕೆ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಶಾಲನಗರ ಪುರಸಭೆ ಅಧ್ಯಕ್ಷರು ಕೋರಿದ್ದಾರೆ.
ಕೆ.ಎಂ.ಎ. ವತಿಯಿಂದ ಕುಪ್ಪಂದಿರ ಕೆ.ಯೂಸುಫ್ ಹಾಜಿಗೆ ಬೀಳ್ಕೊಡುಗೆ

ಪ್ರಪಂಚದಾದ್ಯಂತದ ವೈವಿಧ್ಯಮಯ ಭಾಷೆಗಳ, ವಿವಿಧ ವರ್ಣಗಳ ಮತ್ತು ವಿವಿಧ ಆರ್ಥಿಕ ವರ್ಗಗಳ ಜನರು ಒಟ್ಟು ಸೇರುವ ಪವಿತ್ರ ಹಜ್ ಯಾತ್ರೆಯು ಯಾತ್ರಾರ್ಥಿಗಳಲ್ಲಿ ಏಕತೆ ಮತ್ತು ಸಮಾನತೆಯ ಭಾವನೆ ಮೂಡಿಸುತ್ತದೆ. ಒಂದೇ ಸಮಯದಲ್ಲಿ ಮತ್ತು ಒಂದೇ ಸ್ಥಳದಲ್ಲಿ ಒಬ್ಬನೇ ಸರ್ವಶಕ್ತನನ್ನು ಆರಾಧಿಸುವ ಈ ಹಜ್ಜ್ ನಿರ್ವಹಣೆ ವಿಶ್ವಾಸಿಗಳ ಜೀವನದ ಬಹುದೊಡ್ಡ ಆಧ್ಯಾತ್ಮಿಕ ಅನುಭವವಾಗಿದೆ. ಆಧ್ಯಾತ್ಮಿಕ ಉತ್ಕರ್ಷ, ಸಮಾನತೆ, ಸಹೋದರತೆಗಳನ್ನು ಬೆಳೆಸಿ ಮುಂದಿನ ಕೆಡುಕು ರಹಿತ ಬದುಕು ಮತ್ತು ಆತ್ಮ ಪರಿಶುದ್ಧತೆಯನ್ನು ಏಕೀಕರಿಸುವುದರಲ್ಲಿ ಹಜ್ಜ್ ಬಹು ದೊಡ್ಡ ಪಾತ್ರ ವಹಿಸುತ್ತದೆ […]
ಜಲಜೀವನ್ ಮಿಷನ್ ಯೋಜನೆ ಜೂನ್ ಅಂತ್ಯದೊಳಗೆ ಪ್ರಗತಿ ಸಾಧಿಸಿ: ಯದುವೀರ್

ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್ಗೆ ಸಂಸದರಾದ ಯದುವೀರ್ (Yaduveer) ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಾಕೀತು ಮಾಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತೀ ಕುಟುಂಬಕ್ಕೂ ನಲ್ಲಿ ನೀರು ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಇದರ ಗಂಭೀರತೆ ಅರ್ಥ ಮಾಡಿಕೊಂಡು ಬಾಕಿ ಇರುವ ಕಾಮಗಾರಿಯನ್ನು […]
ಆಪರೇಷನ್ ಸಿಂಧೂರ್ ಯಶಸ್ವಿ: ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಮಡಿಕೇರಿ: 2025 ರ ಏಪ್ರಿಲ್, 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿಗೆ ಪ್ರತ್ಯುತ್ತರವಾಗಿ ಮೇ, 7 ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ‘ಸಿಂಧೂರ್’ (Operation Sindoor) ಹೆಸರಿನಲ್ಲಿ ಸೇನಾ ಕಾರ್ಯಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆದ್ದರಿಂದ ಕರ್ನಾಟಕ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರ ನಿರ್ದೇಶದಂತೆ ರಾಜ್ಯದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತಾ, […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ…!

ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಫೀಡರ್ನಲ್ಲಿ ಮೇ, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗ್ರತಾ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಗೌಳಿ ಬೀದಿ, ಪೆನ್ಸನ್ ಲೇನ್, ಅಪ್ಪಚ್ಚಕವಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್, ಹಳೆ ಪ್ರೈವೆಟ್ ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಕುಶಾಲನಗರ 220/66/11 ಕೆ.ವಿ ಮತ್ತು ಸುಂಟಿಕೊಪ್ಪ […]
ಕೊಡಗಿನಲ್ಲಿ ತಮ್ಮನಿಗೆ ಗುಂಡಿಟ್ಟು ಕೊಂದ ಅಣ್ಣ: ಕಾರಣ ಏನು ಗೊತ್ತಾ?

ಅಣ್ಣ-ತಮ್ಮನ ನಡುವೆ ಆಸ್ತಿಗಾಗಿ ಆರಂಭವಾದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಚೆಟ್ಟಳ್ಳಿ ಬಳಿಯ ಅಭ್ಯತ್ ಮಂಗಲದಲ್ಲಿ ನಡೆದಿದೆ. ಕೊಳಂಬೆ(Kolambe) ವಿನು ಬೆಳ್ಯಪ್ಪ(53) ಮೃತ ದುರ್ದೈವಿ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು, ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಸಹೋದರ ಮಣಿ ಹಿಂದಿನಿಂದ ಬಂದು ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಇಂದು ಬೆಳಿಗ್ಗೆ 11:45 ರ ಸುಮಾರಿಗೆ ಸುಬ್ಬಯ್ಯ ತನ್ನ ಮನೆಯಿಂದ ತನ್ನ SBBL ಬಂದೂಕನ್ನು ತೆಗೆದುಕೊಂಡು […]