ಮಡಿಕೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

Kannada Sahitya Parishat

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ವತಿಯಿಂದ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahitya Parishat) ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ 111 ನೇ ಸಂಸ್ಥಾಪನಾ ದಿನವು ಮಂಗಳವಾರ ನಡೆಯಿತು. ಕಸಾಪದ 111 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ‘ಜನರಡೆಗೆ ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಕನ್ನಡ ಭಾಷೆ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕಿದೆ. […]

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

Power Cut

ಮೂರ್ನಾಡು 33/11 ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್4 ಮರಗೋಡು ಫೀಡರ್‍ನಲ್ಲಿ ಮೇ, 07 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಐಕೊಳ, ಕಟ್ಟೆಮಾಡು, ಮರಗೋಡು, ಹುಲಿತಾಳ, ಹೊಸ್ಕೇರಿ, ಅರೆಕಾಡು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಶನಿವಾರಸಂತೆ: ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

shanivarasante

ಶನಿವಾರಸಂತೆ (Shanivarasante) ಹೋಬಳಿಯ ಚೌಡೇನಹಳ್ಳಿ ರಸ್ತೆ ಮಧ್ಯೆ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಈ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದೆ. ಶನಿವಾರಸಂತೆ ಬಳಿಯ ನಿತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡೇನ ಹಳ್ಳಿ ಗ್ರಾಮದ ಚಂದನ್ ( 25) ಮೃತ ದುರ್ದೈವಿ. ಮೃತ ಚಂದನ್ ಹಾಗೂ ಆತನ ಸ್ನೇಹಿತ ಶನಿವಾರಸಂತೆಯಿಂದ ಚೌಡೇನಗಳ್ಳಿಗೆ ಬೈಕ್ ನಲ್ಲಿ ಸೋಮವಾರ ಸಂಜೆ ಹಿಂದಿರುಗುತ್ತಿದ್ದಾಗ ಅಪರಿಚಿತ ಕಾರು ಬಂದು ಡಿಕ್ಕಿ ಹೊಡೆದ್ದರಿಂದ ಈ ಅಪಘಾತ ಸಂಭವಿಸಿದೆ. ಎಂದು ವರದಿಯಾಗಿದೆ. ಈ ಪ್ರಕರಣದ ಬಗ್ಗೆ […]

ಕೊಡಗಿನಲ್ಲಿ ಮತ್ತೆ ಗುಂಡಿನ ಸದ್ದು: ಗುಂಡೇಟಿಗೆ ವ್ಯಕ್ತಿ ಬಲಿ

kodagu news

ವ್ಯಕ್ತಿಯೊಬ್ಬರು ಗುಂಡೇಟಿಗೆ ಬಲಿಯಾದ ಘಟನೆ ಕೊಡಗಿನ (kodagu) ಸಿದ್ದಾಪುರ ಸಮೀಪದ ಅಭ್ಯತ್ ಮಂಗಲದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಕೊಳಂಬೆ ವಿನು ಬೆಳ್ಯಪ್ಪ ಎಂಬುವವರೇ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು ಅವರು ಅಭ್ಯತ್ ಮಂಗಲದಲ್ಲಿ ಹೊಂದಿರುವ ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ ಹಿಂಬದಿಯಿಂದ ಗುಂಡು ಹಾರಿಸಿರುವ ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯ ಪತ್ತೆಗೆ ಕ್ರಮಕೈಗೊಂಡಿದ್ದಾರೆ. ಆಸ್ತಿ ವೈಶಮ್ಯ ಘಟನೆಗೆ ಕಾರಣ ಎಂದು […]

ಒಡಿಶಾ ಮೂಲದ ವ್ಯಕ್ತಿಯಿಂದ ಗಾಂಜಾ ಮಾರಾಟ ಯತ್ನ: ಪೊಲೀಸರ ವಶಕ್ಕೆ

arrested

ಒಡಿಶಾ ಮೂಲದ ವ್ಯಕ್ತಿಯೋರ್ವ ತನ್ನೂರಿನಿಂದ ಗಾಂಜಾವನ್ನು ತಂದು ಪೊನ್ನಂಪೇಟೆ (Ponnampet) ತಾಲೂಕು ಕಾನೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊನ್ನಂಪೇಟೆ ಪೊಲೀಸರು ಹೆಣೆದ ಬಲೆಗೆ ಬಿದ್ದಿದ್ದಾನೆ. ಕಳೆದ ಹಲವು ವರ್ಷಗಳಿಂದ ಗುತ್ತಿಗೆದಾರರೊಬ್ಬರ ಬಳಿ ರಿಂಗ್ ಕೆಲಸ ನಿರ್ವಹಿಸುತ್ತಿದ್ದ, ಮೂಲತಃ ಒಡಿಶಾ ರಾಜ್ಯದ ಸಿರಿಂಗಿಂ ಗ್ರಾಮದ ಸಂಜಯ್ ನಾಯಕ್ ಎಂಬಾತ ಬಂಧಿತ ಆರೋಪಿಯಾಗಿದ್ದು ಈತನಿಂದ 3 ಕೆ.ಜಿ. 250 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ. ಈತ ಪ್ರತಿ ವರ್ಷ 3 – 4 ಬಾರಿ ತನ್ನ ಊರಿಗೆ ತೆರಳಿ ಅಲ್ಲಿಂದ […]

ಮಡಿಕೇರಿಯಲ್ಲಿ ಗೌಡ ಮಹಿಳಾ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ – ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ತೊಡಗಿಸಿಕೊಳ್ಳಲು ಗಣ್ಯರ ಕರೆ

gowda

ಮಡಿಕೇರಿ : ಕೊಡಗು ಮತ್ತು ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಮಹಿಳಾ ಒಕ್ಕೂಟ ಹಾಗೂ ಕೊಡಗು ಗೌಡ (Gowda ಯುವ ವೇದಿಕೆಯ ಸಹಯೋಗದಲ್ಲಿ ನಗರದಲ್ಲಿ ೨ನೇ ವರ್ಷದ ಗೌಡ ಮಹಿಳಾ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆಗೊಂಡಿತು. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮರಗೋಡಿನ ಕೃಷಿ ಸಾಧಕರು ಹಾಗೂ ಕಾಫಿ ಬೆಳೆಗಾರರಾದ ಕಟ್ಟೆಮನೆ ಪ್ರೇಮಾ ಗಣೇಶ್ ಅವರು ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮೇಲುಗೈ ಸಾಧಿಸುತ್ತಿದ್ದಾರೆ. ಅಗತ್ಯ ಸಹಕಾರ ನೀಡಿದರೆ ರಾಷ್ಟಿçÃಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ […]

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Power Cut

ಸೋಮವಾರಪೇಟೆ (Somwarpet) 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಶಾಂತಳ್ಳಿ ಫೀಡರ್ ಮಾರ್ಗದಲ್ಲಿ ಮೇ, 05 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ, ಯಡೂರು, ತಲ್ತಾರೆಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರುಶೆಟ್ಟಳ್ಳಿ, ಕೂತಿ, ಹೊಸಬೀಡು, ಕಲ್ಕಂದೂರು, ಬಸವನಕಟ್ಟೆ, ನಗರಳ್ಳಿ, ಹೆಮನಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (power cut) ವ್ಯತ್ಯಯವಾಗಲಿದೆ. ಸಾರ್ವಜನಿಕರು […]

ಮೇ.12 ರಿಂದ 21ರವರೆಗೆ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ

camp

ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೇ 12 ರಿಂದ 21ರವರೆಗೆ ಮೂರ್ನಾಡಿನಲ್ಲಿ ಮಕ್ಕಳ ಉಚಿತ “ಚಿನ್ತನೆ – ಚಲನೆ” ಶಿಬಿರ (Camp) ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಈರಮಂಡ ಹರಿಣಿ ವಿಜಯ್ ತಿಳಿಸಿದರು. ಮೂರ್ನಾಡು ಪಂಚಾಯಿತಿ ಸಮುದಾಯ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ 10 ದಿನಗಳ ಕಾಲ ನಡೆಯುವ ಶಿಬಿರದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು. ಪ್ರತಿದಿನ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ […]

ಕುಶಾಲನಗರದಲ್ಲಿ ಡಿವೈಎಸ್ಪಿ ಗಂಗಾಧರಪ್ಪಗೆ ನಾಗರಿಕ ಸನ್ಮಾನ ಕಾರ್ಯಕ್ರಮ

DySP

ಕುಶಾಲನಗರದಲ್ಲಿ ಪೊಲೀಸ್ ಉಪ ಅಧೀಕ್ಷಕ (ಡಿವೈಎಸ್ಪಿ) ರಾಗಿ ಸೇವೆ ಸಲ್ಲಿಸುತ್ತಿದ್ದು, ಬೆಂಗಳೂರಿಗೆ ವರ್ಗಾವಣೆ ಆಗಿರುವ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ (DySP) ಪಿ ಆರ್.ವಿ.ಗಂಗಾಧರಪ್ಪ ಅವರಿಗೆ ಮಂಗಳವಾರ ಸಂಜೆ ಕುಶಾಲನಗರ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಇಲ್ಲಿನ ರೈತ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ವಿ.ಪಿ.ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ ಅಶೋಕ್ ಸಂಗಪ್ಪ ಆಲೂರ ಉದ್ಘಾಟಿಸಿದರು. […]

ಭಾರತದಾದ್ಯಂತ ರಸ್ತೆ ಸುರಕ್ಷತೆ ಸಾಧಿಸುವ ತನ್ನ ಬದ್ಧತೆಯನ್ನು ಪ್ರದರ್ಶಿಸಿದ ಟೊಯೋಟಾ

Toyota

ಬೆಂಗಳೂರು: ಸುರಕ್ಷಿತ ಮತ್ತು ಜವಾಬ್ದಾರಿಯುತ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸುವ ಗುರಿ ಹೊಂದಿರುವ ಟೊಯೋಟಾ (Toyota) ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಭಾರತದಾದ್ಯಂತ ತನ್ನ ವಿಶಿಷ್ಟ ಯೋಜನೆಗಳ ಮೂಲಕ ರಸ್ತೆ ಸುರಕ್ಷತೆ ಸಾಧಿಸುವ ತನ್ನ ದೀರ್ಘಕಾಲೀನ ಬದ್ಧತೆಯನ್ನು ಪುನರುಚ್ಛರಿಸಿದೆ. ಜಾಗೃತಿ, ಶಿಕ್ಷಣ ಮತ್ತು ಹೊಸತನವನ್ನು ಒಳಗೊಂಡ ಟಿಕೆಎಂನ ಸಮಗ್ರ ರಸ್ತೆ ಸುರಕ್ಷತಾ ಯೋಜನೆಗಳು ಭಾರತದ 10 ಲಕ್ಷಕ್ಕೂ ಹೆಚ್ಚು ಜನರ ಬದುಕಿನಲ್ಲಿ ಧನಾತ್ಮಕ ಪರಿಣಾಮ ಬೀರಿರುವುದು ಗಮನಾರ್ಹವಾಗಿದೆ. ಟೊಯೋಟಾದ ರಸ್ತೆ ಸುರಕ್ಷತಾ ಯೋಜನೆಗಳಲ್ಲಿ ಟಿಎಸ್ಇಪಿ ಪ್ರಮುಖ ಕಾರ್ಯಕ್ರಮವಾಗಿದ್ದು, ಈ ಯೋಜನೆಯನ್ನು […]