ವಾಹನ ಸವಾರರೇ ಗಮನಿಸಿ: ಕೊಡಗಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

Vehicle traffic banned

ಮಡಿಕೇರಿ (Madikeri) ಕುಟ್ಟ ಹೆದ್ದಾರಿ ಸಂ-89ರ ಕಿ.ಮೀ. 80.40 ರಲ್ಲಿನ (ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಭಾಗದಲ್ಲಿ ಮಳೆಹಾನಿ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಏಪ್ರಿಲ್, 08 ರಿಂದ ಮೇ, 10 ರವರೆಗೆ ಪೊನ್ನಂಪೇಟೆ ತಾಲ್ಲೂಕು ಮಡಿಕೇರಿ ಕುಟ್ಟ ಹೆದ್ದಾರಿ ಸಂ.89ರ ಕಿ.ಮೀ.80.40 ರಲ್ಲಿನ(ಮಂಚಳ್ಳಿ ಗ್ರಾಮ, ಶ್ರೀಮಂಗಲ ಹೋಬಳಿ) ರಸ್ತೆ ಮಾರ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ (Vehicle) ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. […]

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕೊಡಗು ಜಿಲ್ಲೆಗೆ ಯಾರು ಟಾಪರ್ಸ್? ಇಲ್ಲಿದೆ ವಿವರ

2nd PUC Result

2024–25 ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಯು ಶೇ 83.84 ರಷ್ಟು ಫಲಿತಾಂಶ ದಾಖಲಿಸಿದ್ದು, ರಾಜ್ಯದಲ್ಲಿ ಕೊಡಗು ಜಿಲ್ಲೆ 4 ನೇ ಸ್ಥಾನ ಗಳಿಸಿದೆ. 2024 ರ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಜಿಲ್ಲೆಯು 5 ಸ್ಥಾನದಿಂದ 4 ನೇ ಸ್ಥಾನವನ್ನು ಪಡೆದಿದೆ. ಜಿಲ್ಲೆಯಲ್ಲಿ 4697 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3938 ಮಂದಿ ತೇರ್ಗಡೆಯಾಗಿದ್ದಾರೆ. ಪರೀಕ್ಷೆಗೆ ಕುಳಿತಿದ್ದ 2,320 ಬಾಲಕರಲ್ಲಿ 1750 ಬಾಲಕರು ಉತ್ತೀರ್ಣರಾಗಿ 75.43 ರಷ್ಟು ಫಲಿತಾಂಶ ಪಡೆದಿದ್ದಾರೆ. […]

2nd PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

2nd PUC Result

ದ್ವಿತೀಯ ಪಿಯುಸಿ (2nd PUC) ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಿದ್ದಾರೆ. ವೆಬ್​​ಸೈಟ್​ನಲ್ಲಿಯೂ ಫಲಿತಾಂಶ ಲಭ್ಯವಿದೆ. ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದರೆ ಕೊಡಗು ಜಿಲ್ಲೆ 4ನೇ ಸ್ಥಾನ (ಶೇ.83.84) ಹಾಗೂ ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಮಧ್ಯಾಹ್ನ 12.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಬಿಡುಗಡೆ ಮಾಡಿದ್ದಾರೆ. karresults.nic.in ಹಾಗೂ […]

ಕೊಡಗಿನ ಮಾದರಿ ಗ್ರಾಮಕ್ಕೆ ಅಂಡಮಾನ್‌, ನಿಕೋಬಾರ್‌ ದ್ವೀಪದ ಅಧಿಕಾರಿಗಳ ಭೇಟಿ – ಅಭಿವೃದ್ಧಿ ಬಗ್ಗೆ ಅಧ್ಯಯನ..!

ಮೂರ್ನಾಡು : ಒಂದು ಪ್ರದೇಶದ ಅಭಿವೃದ್ಧಿಯ ಅಧ್ಯಯನ ಸಂಬಂಧ ಬೇರೆ ಬೇರೆ ಕಡೆಯ ತಂಡಗಳು ಬಂದು ಪರಿಶೀಲನೆ ಮಾಡುತ್ತವೆ. ಅದೇ ರೀತಿ ಕೊಡಗಿನ ಮಾದರಿ ಗ್ರಾಮ ಪಂಚಾಯಿತಿಯೊಂದಕ್ಕೆ ಅಂಡಮಾನ್‌ ನಿಕೋಬಾರ್‌ ದ್ವೀಪದ ಪ್ರತಿನಿಧಿಗಳು ಭೇಟಿ ನೀಡಿ ಮಾಹಿತಿ ಪಡೆದು ತೆರಳಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿಗೆ ಅಂಡಮಾನ್ ನಿಕೋಬಾರ್ ದ್ವೀಪ ಸಮೂಹಗಳ ಪಂಚಾಯತ್ ರಾಜ್ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭೇಟಿ ನೀಡಿದರು.  ಪಂಚಾಯಿತ ವ್ಯಾಪ್ತಿಯ ವಿವಿಧ ರೀತಿಯ ಅಭಿವೃದ್ಧಿ ಬಗ್ಗೆ ಇಲ್ಲಿನ […]

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ – ರೌಡಿಶೀಟರ್‌ ಹಾಕುವ ಬೆದರಿಕೆವೊಡ್ಡಿದ್ದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು..!

ಮಡಿಕೇರಿ : ವಿನಯ್ ಸೋಮಯ್ಯ(vinay somaiah) ಮತ್ತು ವಿಷ್ಣು ನಾಚಪ್ಪ) ವಿರುದ್ಧ ರೌಡಿ ಶೀಟರ್ ಹಾಕುವುದಾಗಿ ಹೇಳಿದ್ದ ಪೊಲೀಸ್ ಸಿಬ್ಬಂದಿ ವಿರುದ್ದ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಯಿತು. ಮೃತ ವಿನಯ್ ಸೋಮಯ್ಯ ಸಹೋದರ ಜೀವನ್ ಮಾಜಿ ಸಂಸದ ಪ್ರತಾಪ್ ಸಿಂಹ(pratap simha), ಮಾಜಿ ಶಾಸಕ ಕೆ.ಜಿ ಬೋಪಯ್ಯ(kg bopaiah), ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಮುಖರಾದ ಭಾರತೀಶ್, ರಾಬಿನ್ ದೇವಯ್ಯ ಹಾಗೂ ಪ್ರಮುಖ ಮುಖಂಡರು ಈ ಸಂದರ್ಭ ಇದ್ದರು.

ನೂತನ ಎಎಸ್‌ಪಿಯಾಗಿ ಬಾರಿಕೆ ದಿನೇಶ್ ಕುಮಾರ್ ನೇಮಕ

Barike Dinesh Kumar

ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ (ASP) ಸುಂದರರಾಜ್ ರವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕೊಡಗು ಮೂಲದ ಬಾರಿಕೆ ದಿನೇಶ್ ಕುಮಾರ್ (Dinesh Kumar) ನೇಮಕ. 2 ವರ್ಷಗಳ ಹಿಂದೆ ಡಿ ವೈ ಎಸ್ ಪಿ ಆಗಿ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ

Cooperative sector awareness

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮವು (program) ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಅವರು ಉದ್ಘಾಟಿಸಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ […]

2nd PUC Result: ನಾಳೆ ದ್ವಿತೀಯ ಪಿಯು ಫಲಿತಾಂಶ: ನೋಡುವುದು ಹೇಗೆ?

2nd PUC Result

ದ್ವಿತೀಯ ಪಿಯು (2nd PUC) ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್. ಮಾರ್ಚ್ 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಅಂದರೆ ಏಪ್ರಿಲ್ 8ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ವೆಬ್​ಸೈಟ್​ನಲ್ಲಿ PUC ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಆನ್​​ಲೈನ್​​ನಲ್ಲಿ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ […]

ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀರಾಮ ನವಮಿ ಆಚರಣೆ

ಮಡಿಕೇರಿ : ಕತ್ತಲೆಕಾಡು ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀ ರಾಮನವಮಿಯನ್ನು ಸಂಭ್ರಮದಿಂದ‌ ಆಚರಿಸಲಾಯಿತು. ಟ್ರಸ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗಿಯಾಗಿದ್ದರು. ಮಹಿಳೆಯರು ಆವರಣದಲ್ಲಿ ದೀಪ ಬೆಳಗಿದರು. ಬಳಿಕ ಶ್ರೀರಾಮನಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಟ್ರಸ್ಟ್‌ನ ವಿದ್ಯಾರ್ಥಿ ಘಟಕದ ಸದಸ್ಯರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಸುರೇಶ್ ಮಾವಟ್ಕರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ‌ ಮಾಡಿದರು. ರಾಮನವಮಿಯನ್ನು ದೇಶದೆಲ್ಲೆಡೆ ಹಿಂದುಗಳು ಸಡಗರ, ಸಂಭ್ರಮದಿಂದ ಆಚರಿಸುತ್ತಾರೆ. ಮರ್ಯಾದ […]

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಹಾಗೂ ಸಂಬಂಧಿಸಿದ ಕಾಯ್ದೆ ಕಾರ್ಯಾಗಾರ

Karnataka Land Grabbing Prohibition Act

ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಮಾಹಿತಿ ಪಡೆದು ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ (Karnataka Land Grabbing Prohibition Act) ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತ ಇವರ […]