ಕೊಡವರಿಗೆ ವಿಶೇಷ ಪ್ರಾತಿನಿಧ್ಯಕ್ಕೆ ಆಗ್ರಹ : ಬಿರುನಾಣಿಯಲ್ಲಿ ಸಿಎನ್‌ಸಿಯಿಂದ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡನೆ

ಮಡಿಕೇರಿ : ಸಿಕ್ಕಿಂನ ಬೌದ್ಧ ಬಿಕ್ಷುಗಳಿಗೆ ನೀಡಿರುವ “ಸಂಘ” ವರ್ಚುವಲ್, ಅಮೂರ್ತ (ಅದೃಶ್ಯ) ಕ್ಷೇತ್ರದ ರೀತಿಯಲ್ಲಿ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಆದಿಮಸಂಜಾತ ಕೊಡವರಿಗೆ(kodava) ಕೂಡ ವಿಶೇಷ ಪ್ರಾತಿನಿಧ್ಯ ಅಥವಾ ಪರ್ಯಾಯವಾಗಿ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭೆಯ ಕೊಡವ ಮತ ಕ್ಷೇತ್ರವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಬಿರುನಾಣಿಯಲ್ಲಿ ಮಾನವ ಸರಪಳಿ ರಚಿಸಿ ಹಕ್ಕೊತ್ತಾಯವನ್ನು ಮಂಡಿಸಿತು. ಸAಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ಪ್ರಾತಿನಿಧ್ಯ ಕಲ್ಪಿಸಬೇಕು, ಕೊಡವ ಲ್ಯಾಂಡ್(kodava land) ಭೂರಾಜಕೀಯ ಸ್ವಾಯತ್ತತೆ ಘೋಷಿಸಬೇಕು, ಎಸ್‌ಟಿ(ST) […]

ತೆನ್ನಿರ ಮೈನಾ ರಾಜ್ಯ ಕೋರ್ ಕಮಿಟಿ ಸದಸ್ಯರಾಗಿ ನೇಮಕ

Thennira Maheena

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಂಚೂಣಿ ಘಟಕವಾದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಕೋರ್ ಕಮಿಟಿಯಲ್ಲಿ ಕೊಡಗು ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರ ಮೈನಾ (Thennira Maheena) ಸದಸ್ಯರಾಗಿ ನೇಮಕವಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಮತ್ತು ಹೊಣೆಗಾರಿಕೆ ಹೊತ್ತಿದ್ದ ತೆನ್ನಿರ ಮೈನಾ ರವರನ್ನು ಕೋರ್ ಕಮಿಟಿಗೆ ನೇಮಕ ಮಾಡುವಂತೆ ಸಂಘಟನೆಯ ರಾಜ್ಯಾಧ್ಯಕ್ಷರಾದ ವಿಜಯ್ ಸಿಂಗ್ ರವರು ಎ.ಐ.ಸಿ.ಸಿ […]

ಕೊಡಗಿನ ಗೀತಾ ನಾಯ್ಡುಗೆ ಕರ್ನಾಟಕ ಇನ್ ಸ್ಪೈರಿಂಗ್ ವುಮೆನ್ ಪ್ರಶಸ್ತಿ

Geetha Naidu

ಬಹುಮುಖ ಪ್ರತಿಭೆ ಪಾಲಿಬೆಟ್ಟದ ಟಿ.ಸಿ ಗೀತಾ ನಾಯ್ಡು (Geetha Naidu) ಅವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ಕರ್ನಾಟಕ ಇನಸ್ಪೈರ್ರಿಂಗ್ ವುಮೆನ್ – 2025’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಗೀತಾ ನಾಯ್ಡು ಅವರದು ಆರಂಭದಿಂದಲೂ ಬಹುಮುಖ ಪ್ರತಿಭೆಯುಳ್ಳ ವಕ್ತಿತ್ವ. 2023ರಿಂದ ದಕ್ಷಿಣ ಕೊಡಗಿನ ಬಾಳೆಲೆಯ ಪ್ರತಿಭಾ ಎಜುಕೇಷನಲ್ ಇನ್ಸ್ಟಿಟ್ಯೂಟಿನ ಪ್ರಿನ್ಸಿಪಾಲ್ ಆಗಿ ಕೆಲಸ ಮಾಡುತ್ತಿರುವ ಗೀತಾ ನಾಯ್ಡು ಅವರು ಪೊನ್ನಂಪೇಟೆ ಜಾನಪದ ಪರಿಷತ್ ಪ್ರಧಾನ ಕಾರ್ಯದರ್ಶಿಯಾಗಿ, ಕೊಡಗು ಬಲಿಜ ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ, […]

ಜನರಲ್ ತಿಮ್ಮಯ್ಯನವರ 119ನೇ ಜಯಂತಿ ಆಚರಣೆ

General Thimmaiah

ಕೊಡಗು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೖತಿ ಇಲಾಖೆ ವತಿಯಿಂದ ಸೋಮವಾರ ನಗರದ ಜನರಲ್ ತಿಮ್ಮಯ್ಯ ಜನ್ಮ ನಿವಾಸ ಸನ್ನಿಸೈಡ್ ನಲ್ಲಿರುವ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ತಿಮ್ಮಯ್ಯ ಅವರ 119 ನೇ ಜನ್ಮ ಜಯಂತಿಯನ್ನು ತಿಮ್ಮಯ್ಯ ಭಾವಚಿತ್ರಕ್ಕೆ ಪುಪ್ಪಾಚ೯ನೆ ಮಾಡಿ ವಿನಾಯಕ ನವಾ೯ಡೆ ಉದ್ಘಾಟಿಸಿದರು. ಈ ಸಂದಭ೯ ಮಾತನಾಡಿದ ವಿನಾಯಕ ನವಾ೯ಡೆ, ಜನರಲ್ ತಿಮ್ಮಯ್ಯ ಅವರ ಜೀವನ ಪ್ರತೀಯಬ್ಬರಿಗೂ ಆದಶ೯ಪ್ರಾಯ. ಸೇನೆಯೇ ಅವರ ಆತ್ಮವಾಗಿತ್ತು ಹಾಗೇ ಆತ್ಮದಲ್ಲಿಯೇ ಸೇನಾ ಪ್ರೇಮ ಹುದುಗಿತ್ತು ಎಂದು ಸ್ಮರಿಸಿದರು. ಕೊಡಗಿನ […]

ಮುದ್ದಂಡ ಹಾಕಿ ಉತ್ಸವ: ಮಾ.31 ಹಾಕಿ ಪಂದ್ಯಾವಳಿಯ ವಿಜೇತ ತಂಡಗಳ ಮಾಹಿತಿ!

Muddanda Hockey Festival

ಮೈದಾನ ಸಂಖ್ಯೆ 1: ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಹಬ್ಬದ ‘ಮುದ್ದಂಡ ಹಾಕಿ ಉತ್ಸವ’ (Muddanda Hockey Festival) ದಲ್ಲಿ ಪುಚ್ಚಿಮಾಡ ಮತ್ತು ಮಂಡೀರ (ಮಾದಪುರ) ತಂಡಗಳ ನಡುವೆ ನಡೆದ ಪಂದ್ಯಾವಳಿಯಲ್ಲಿ ಪುಚ್ಚಿಮಾಡ ತಂಡ 3 ಗೋಲುಗಳನ್ನು ಬಾರಿಸಿ ಮಂಡೀರ ತಂಡವನ್ನು ಪರಬಾವಗೊಳಿಸಿತು. ಪುಚ್ಚಿಮಾಡ ತಂಡದ ಯಶ್ವಿನ್ ಗಣಪತಿ 2 ಹಾಗೂ ಭವನ್ ಬೋಪಣ್ಣ 1 ಗೋಲು ದಾಖಲಿಸಿದರು. ಮಂಡೀರ ತಂಡದ ದ್ಯಾನ್ ದೇವಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.ಮುಕ್ಕಾಟಿರ (ಮೂವತ್ತೊಕ್ಲು) ಮತ್ತು […]

ಮಾ.31 ರಂದು ಜನರಲ್ ತಿಮ್ಮಯ್ಯ ಜನ್ಮ ದಿನಾಚರಣೆ

General Thimmaiah

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ (General Thimmaiah) ಅವರ 119 ನೇ ಜನ್ಮ ದಿನಾಚರಣೆಯು ಮಾರ್ಚ್ 31 ರಂದು ಬೆಳಗ್ಗೆ 11 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಅಮ್ಮತ್ತಿಯಲ್ಲಿ ‘ಕೊಡವ ಬಲ್ಯ ನಮ್ಮೆ’ ಆಕರ್ಷಕ ಮೆರವಣಿಗೆ

Kodava Ballya Namme

ಕಾವೇರಿ ನಾಡಿನ ಪುಣ್ಯ ಭೂಮಿಯಲ್ಲಿ ಹುಟ್ಟಿ ಬೆಳೆದ ನಾವುಗಳು ಕೊಡವ ಭಾಷೆ, ಕಲೆ, ಸಾಹಿತ್ಯ, ಸಂಸ್ಕøತಿಯನ್ನು ಎಲ್ಲೆಡೆ ಪಸರಿಸುವಂತಾಗಬೇಕು. ಆ ದಿಸೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸಾಹಿತ್ಯ ಮತ್ತು ಸಂಸ್ಕøತಿ ಚಟುವಟಿಕೆಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಅಮ್ಮತ್ತಿ ಕೊಡವ ಸಮಾಜದಲ್ಲಿ ಶನಿವಾರ ನಡೆದ ‘ಕೊಡವ ಬಲ್ಯ ನಮ್ಮೆ’ […]

ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಇತಿಹಾಸ ನಿರ್ಮಿಸಿದ ಕಾವೇರಿ ಕಾಲೇಜು

Cauvery College

ಮೈಸೂರು ಸೇಂಟ್ ಜೋಸೆಫ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ವಿರಾಜಪೇಟೆಯ ಕಾವೇರಿ ಪದವಿ ಹಾಗೂ ಪದವಿ ಪೂರ್ವ ಪೈನಲ್ ಪಂದ್ಯ ಆಡುದರ ಮೂಲಕ ಒಂದೇ ವಿದ್ಯಾಸಂಸ್ಥೆಯ ಎ ಹಾಗೂ ಬಿ ತಂಡಗಳು ಪೈನಲ್ ಹಣಾಹಣಿಯಲ್ಲಿ ಆಡಿದ ಇತಿಹಾಸ ಸೃಷ್ಟಿ ಮಾಡಿದೆ. ಒಟ್ಟು 16 ತಂಡಗಳು ಭಾಗವಹಿಸಿದ್ದ ರಾಜ್ಯ ಮಟ್ಟದ 5ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ವಿರಾಜಪೇಟೆ ಕಾವೇರಿ ಪದವಿ ಕಾಲೇಜು (Cauvery College) 4 -1 ಗೋಲುಗಳ ಅಂತರದಲ್ಲಿ ವಿರಾಜಪೇಟೆ […]

ಕೊಡಗಿನ ಭರವಸೆಯ ಪ್ರತಿಭೆ ವರ್ತ ಕಾಳಿ ಕಿರುಚಿತ್ರದ ನಿರ್ದೇಶಕ ಕೃತಾರ್ಥ ಮಂಡೆಕುಟ್ಟಂಡ

kritartha mandekuttanda

ಕೊಡಗಿನ ಹಲವಾರು ಅಪೂರ್ವ ಪ್ರತಿಭೆಗಳು ಸಿನಿಮಾ ರಂಗದಲ್ಲಿ ಹಲವಷ್ಟು ಸಾಧನೆ ಮಾಡುತ್ತಿದ್ದಾರೆ. ಅದರಲ್ಲಿ ಈಗ ಹೊಸ ಸೇರ್ಪಡೆ ಕೊಡಗಿನ ಯುವ ಪ್ರತಿಭಾನ್ವಿತ ಕೃತಾರ್ಥ್ ಮಂಡೆಕುಟ್ಟಂಡ. ‘ವರ್ತ ಕಾಳಿ’ ಎಂಬ ಕಿರು ಚಿತ್ರಕಥೆ (Short film) ಹಾಗು ನಿರ್ದೇಶನವನ್ನು ಮಾಡಿದ್ದಾರೆ ಕೃತಾರ್ಥ್ ಮಂಡೆಕುಟ್ಟಂಡ ಅವರು. ತಮ್ಮ ಸಂಪೂರ್ಣ ಪರಿಶ್ರಮವನ್ನು ಹಾಕಿ, ನಿದೇ೯ಶನದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. 14:59 ನಿಮಿಷಗಳ ಕಾಲ ಇರುವ ಕಿರು ಚಿತ್ರವು ಪ್ರತಿ ಕ್ಷಣವೂ ರಣ ರೋಚಕವಾಗಿದೆ. ಕಿರು ಚಿತ್ರವು ಪರಿಸರ ಸಂರಕ್ಷಣೆ, ಕೊಡವರಲ್ಲಿ ಇರುವ […]

ರಾಜ್ಯ ಸರ್ಕಾರದಿಂದ ಯುಗಾದಿ, ರಂಜಾನ್‌ ಗಿಫ್ಟ್‌ – ಹಾಲಿನ ದರ ೪ ರೂ. ಹೆಚ್ಚಿಸಿ ಶಾಕ್‌ ಕೊಟ್ಟ ಕಾಂಗ್ರೆಸ್‌ ಸರ್ಕಾರ.!

ಬೆಂಗಳೂರು : ಯುಗಾದಿ(ugadi, ರಂಜಾನ್‌(ramdan) ಹಬ್ಬಕ್ಕೆ ಇನ್ನೆರೆಡು ದಿನ ಮಾತ್ರ ಬಾಕಿ ಇದೆ. ಈ ನಡುವೆ ರಾಜ್ಯ ಸರ್ಕಾರ(govt) ಜನತೆಗೆ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಸರ್ಕಾರ ಕೊಟ್ಟ ಗಿಫ್ಟ್‌ಗೆ ಜನತೆ ಶಾಕ್‌ಗೊಳಗಾಗಿದ್ದಾರೆ. ಈಗಾಗಲೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿ ಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಳ ಮಾಡಿದೆ. ನಂದಿನಿ(nandini) ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ […]