ಮುದ್ದಂಡ ಹಾಕಿ ಉತ್ಸವ : ಸೆಮಿಫೈನಲ್ ಉದ್ಘಾಟನೆ… ಕೊಡವ ಜನಸಂಖ್ಯೆ ಹೆಚ್ಚಳಕ್ಕೆ ಅಜ್ಜಿನಿಕಂಡ ಮಹೇಶ್ ನಾಚಯ್ಯ ಕರೆ

ಮಡಿಕೇರಿ : ಕೊಡವ ಸಮುದಾಯ ಅತ್ಯಂತ ಚಿಕ್ಕ ಸಮುದಾಯವಾಗಿದ್ದು, ಕೊಡವ ಜನಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ. ಕೊಡವ ಕುಟುಂಬ ತಂಡಗಳ ನಡುವಿನ ಮುದ್ದಂಡ ಕಪ್ ಹಾಕಿ ಉತ್ಸವದ (Muddanda Cup Hockey Festival) ಸೆಮಿಫೈನಲ್ ಪಂದ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿ ಕೊಡವ ಕುಟುಂಬಗಳು ಕನಿಷ್ಟ ಮೂರು ಮಕ್ಕಳನ್ನಾದರು ಹೊಂದುವ ಮೂಲಕ ಕೊಡವ ಜನಾಂಗದ ಅಭ್ಯುದಯಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಕೊಡಗಿನ 1176 ಕೊಡವ […]
ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಅವಿರೋಧ ಆಯ್ಕೆ..!

ಕೊಡಗು : ಕೊಡಗು ಕಾಫಿ (Coffee) ಬೆಳೆಗಾರರ ಸಹಕಾರರ ಸಂಘದ ಚುನಾವಣೆ ದಿನಾಂಕ ಶುಕ್ರವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದು, ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮತ್ತು ಉಪಾಧ್ಯಕ್ಷರಾಗಿ ಸುರೇಶ್ ಮಾಯಮುಡಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರು ಮತ್ತು ಬಿಜೆಪಿ(bjp) ಪ್ರಮುಖರು ಹಾಜರಿದ್ದರು.
power outage : ಏಪ್ರಿಲ್ 29 ರಂದು ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ..!

ಮಡಿಕೇರಿ : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಸೀಟ್ ಫೀಡರ್ನಲ್ಲಿ ಏಪ್ರಿಲ್, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ಮಂಗಳೂರು ರಸ್ತೆ, ತಾಳತ್ಮನೆ, ಡಿ.ಸಿ ಕಚೇರಿ, ರಾಜಸೀಟ್ ರಸ್ತೆ, ರೇಸ್ಕೋರ್ಸ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿನಗರ, ಸ್ಟೋನ್ ಹಿಲ್, ಎಲ್.ಐ.ಸಿ ರಸ್ತೆ, ಹೊಸ ಬಡಾವಣೆ, ರಿಮೈಂಡ್ ಹೋಮ್ ಹಿಂಭಾಗ, ಡೈರಿ ಫಾರಂ, ಎಫ್.ಎಂ.ಸಿ ಕಾಲೇಜು ರಸ್ತೆ, ಕನ್ನಿಕಾ ಬಡಾವಣೆ, ಮೈತ್ರಿ ಜಂಕ್ಷನ್, ವಿದ್ಯಾನಗರ, ಮುಳಿಯ ಬಡಾವಣೆ, […]
ಪ್ರಾದೇಶಿಕ ಅಸಮತೋಲನ ನಿವಾರಣೆ ಬಗ್ಗೆ ಸುದೀರ್ಘ ಸಂವಾದ

ಪ್ರಾದೇಶಿಕ ಅಸಮತೋಲನ (Regional imbalances) ಬಗ್ಗೆ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತ ಅಧಿಕಾರ ಸಮಿತಿ ಸದಸ್ಯರಾದ ಎಂ.ಎಚ್.ಸೂರ್ಯನಾರಾಯಣ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳ ಜತೆ ಸುಧೀರ್ಘ ಚರ್ಚೆ ನಡೆಸಿದರು. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಮರು ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ನಂಜುಂಡಪ್ಪ ವರದಿಯಂತೆ ಜಿಲ್ಲೆ ಜಿಲ್ಲೆಗಳ ನಡುವೆ ಶಿಕ್ಷಣ, ಆರೋಗ್ಯ, ಉದ್ಯೋಗ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ, ಕೃಷಿ, ಕೈಗಾರಿಕೆ, ಮತ್ತಿತರ ಸಂಬಂಧ […]
ಮಿಟ್ಟು ಚಂಗಪ್ಪ ಅಂತಿಮ ದರ್ಶನಕ್ಕೆ ಆಗಮಿಸಿದ ಸಚಿವರಾದ ಕೆ. ಜೆ. ಜಾರ್ಜ್, ಎನ್. ಎಸ್. ಬೋಸರಾಜ್

ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದರು. ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು. ನಿನ್ನೆ ನಿಧನರಾದ ಮಿಟ್ಟು ಚಂಗಪ್ಪ(Mitoo Chengappa) ಅಂತಿಮ ದರ್ಶನಕ್ಕೆ ಸಚಿವರಾದ ಕೆ. ಜೆ. ಜಾರ್ಜ್ ಹಾಗೂ ಎನ್. ಎಸ್. ಬೋಸರಾಜ್ ಹೆಲಿಕಾಪ್ಟರ್ ಮೂಲಕ ಮಡಿಕೇರಿಗೆ ಆಗಮಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 1 ಗಂಟೆವರೆಗೆ ಮಡಿಕೇರಿ […]
ಮುದ್ದಂಡ ಹಾಕಿ ಉತ್ಸವ: ಮಹಿಳಾ ಕ್ವಾಟರ್ ಫೈನಲ್-ಸೆಮಿ ಫೈನಲ್ ಪಂದ್ಯಾವಳಿಯ ವಿಜೇತರ ವಿವರ

ಕ್ವಾಟರ್ ಫೈನಲ್: ಕಾಂಡಂಡ ಮತ್ತು ಕೇಚೆಟ್ಟಿರ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಕೇಚೆಟ್ಟಿರ ಜಯ ಸಾಧಿಸಿತು. ಕೇಚೆಟ್ಟಿರ ಪರ ತೇಜಸ್ವಿ 2 ಹಾಗೂ ಲಕ್ಷ್ಯ 1 ಗೋಲು ದಾಖಲಿಸಿದರು. ಕಾಂಡಂಡ ನೇಹಾ ಅಪ್ಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.ಕುಟ್ಟಂಡ (ಮಾದಾಪುರ) ಮತ್ತು ಕುಪ್ಪಂಡ (ಕೈಕೇರಿ) ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್ನಲ್ಲಿ 2-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಜಯ ಸಾಧಿಸಿತು. ಕುಟ್ಟಂಡ ಚುಪ್ಪಿ ಕಾರ್ಯಪ್ಪ […]
ಮಡಿಕೇರಿಯಲ್ಲಿ ವರನಟ ಡಾ.ರಾಜ್ ಕುಮಾರ್ 97ನೇ ಜನ್ಮ ದಿನಾಚರಣೆ

ಮಡಿಕೇರಿ:- ಚಲನಚಿತ್ರ ಬರೀ ಮನರಂಜನೆಯಲ್ಲ. ಅದೊಂದು ಸಮಾಜದಲ್ಲಿ ಬದಲಾವಣೆ ಮತ್ತು ಸುಧಾರಣೆ ತರುವ ಮಾಧ್ಯಮವಾಗಿದೆ. ಆ ನಿಟ್ಟಿನಲ್ಲಿ ಡಾ.ರಾಜ್ಕುಮಾರ್ (Dr.Rajkumar) ಅವರು ಕನ್ನಡ ನಾಡಿನ ಚಲನಚಿತ್ರ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಕನ್ನಡಿಗರ ಕಣ್ಮಣಿಯಾಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ […]
ಹಿರಿಯ ರಾಜಕಾರಣಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಇನ್ನು ನೆನಪು ಮಾತ್ರ

ರಾಜಕಾರಣಿಯಾಗಿ, ಪ್ರವಾಸೋದ್ಯಮಿಯಾಗಿ, ಕೖಷಿಕರಾಗಿ, ಕಾಫಿ ಉದ್ಯಮಿಯಾಗಿ ಗಮನ ಸೆಳೆದಿದ್ದ ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ (83) ಅವರು ಅಮ್ಮತ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಿಟ್ಟು ಚಂಗಪ್ಪ ಅವರು ಐದು ದಶಕಗಳ ಕಾಲ ರಾಜಕೀಯದಲ್ಲಿ ಕಾಂಗ್ರೆಸ್ ನ ನಿಷ್ಟಾವಂತ ನಾಯಕರೆನಿಸಿದ್ದರು. ನಾಳೆ ಬೆಳಗ್ಗೆ 10 ಗಂಟೆಯಿಂದ 1 ಗಂಟೆವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬೊಟ್ಟೋಳಂಡ ಮಿಟ್ಟು ಚಂಗಪ್ಪ (Bottolanda Mitoo Chengappa) ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಸಾವ೯ಜನಿಕರಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತೀರ […]
ಲಾವಣ್ಯ ಬೋರ್ಕರ್ ಗೆ ಡಾ. ಬಿ.ಆರ್.ಅಂಬೇಡ್ಕರ್ ಸದ್ಭಾವನಾ ಪ್ರಶಸ್ತಿ

ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕರ್ ರವರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ (Dr. B. R. Ambedkar) ಸದ್ಭಾವನಾ ರಾಷ್ಟ್ರ ಮಟ್ಟದ ಪ್ರಶಸ್ತಿಗೆ (Award) ಭಾಜನರಾಗಿದ್ದಾರೆ. ಅವರು ಭರತನಾಟ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ )ಸಂಸ್ಥೆಯ ವತಿಯಿಂದ ಮೈಸೂರಿನ ಸಾಹಸಸಿಂಹ ಸಭಾಂಗಣ ಡಾ.ವಿಷ್ಣು ವರ್ಧನ್ ಸ್ಮಾರಕ ಭವನದಲ್ಲಿ ಇತ್ತೀಚಿಗೆ ಆಯೋಜಿಸಲಾಗಿದ್ದ ವಿವಿಧ ಸಾಧಕರುಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ […]
Power Cut… ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 13 ದೇವನೂರು ಫೀಡರ್ನಲ್ಲಿ ಏಪ್ರಿಲ್, 24 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ, ದೇವನೂರು, ಮಲ್ಲೂರು, ಕಿಸ್ತೂರು, ರಾಜಪುರ, ಬೆಟ್ಟತ್ತೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಸುಳುಗೋಡು, ಬಾಳೆಲೆ, ಜಾಗಲೆ, ನಿಟ್ಟೂರು, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.