ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಕೊಡಗು ವಿಶ್ವವಿದ್ಯಾಲಯ ಸಾಧಕ-ಬಾಧಕ ಸಂವಾದ ಕಾರ್ಯಕ್ರಮ

ಮಡಿಕೇರಿ: ಸರ್ಕಾರದಿಂದ ಕೊಡಗಿಗೆ ಒದಗಿಬಂದ ಸೌಲಭ್ಯವನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕೆ ಹೊರತು ಅದನ್ನು ಯಾವುದೇ ಕಾರಣಕ್ಕೂ ಕೈಬಿಡುವ ಕೆಲಸ ಆಗಬಾರದು ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು. ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ (Kodagu University) ಸಾಧಕ-ಬಾಧಕ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ರಾಜ್ಯದಲ್ಲಿ ೯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಚಿಂತನೆ ನಡೆಸಿದ್ದು, ಅದರಲ್ಲಿ ಕೊಡಗು ವಿಶ್ವವಿದ್ಯಾಲಯವೂ ಒಂದು. ನೂರಾರು ಎಕರೆ […]
ಕಾವೇರಿ ಕಾಲೇಜಿನಲ್ಲಿ ಏಡ್ಸ್ ಕುರಿತ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಏಡ್ಸ್ (AIDS) ಎಂಬುದು ಒಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು ನಾವು ಇಡುವಂತಹ ತಪ್ಪು ಹೆಜ್ಜೆಯ ಮೂಲಕ ಗುಣವಾಗಲಾರದಂತಹ ಈ ಮಾರಕ ಕಾಯಿಲೆಗೆ ಬಲಿಯಾಗಬೇಕಾಗುತ್ತದೆ ಎಂದು ಕಾವೇರಿ ಕಾಲೇಜಿನ (Cauvery College) ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಹೇಳಿದರು. ಕೊಡಗು ಜಿಲ್ಲೆ ಏಡ್ಸ್ ನಿಯಂತ್ರಣ ಘಟಕ ಹಾಗೂ ಕಾವೇರಿ ಕಾಲೇಜಿನ ಎನ್ಎಸ್ಎಸ್ ಮತ್ತು ರೆಡ್ ರಿಬ್ಬನ್ ಘಟಕದ ವತಿಯಿಂದ ಮಂಗಳವಾರ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಏಡ್ಸ್ ಕುರಿತ ಜಾಗೃತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾನವನ ಅಜಾಗರುವುಕತೆ ಹಾಗೂ […]
ಸಹಾಯವಾಣಿ ಆರಂಭಿಸಿ ಸರ್ಕಾರ: ಜಮ್ಮು ಕಾಶ್ಮೀರ ಪ್ರವಾಸ ತೆರಳಿರುವ ವಿವರ ಇಲ್ಲಿ ಹಂಚಿಕೊಳ್ಳಿ

ಕಾಶ್ಮೀರದ ಪಹಲ್ಗಾಮದಲ್ಲಿ ಉಗ್ರರ ದಾಳಿಯಿಂದ ಕನ್ನಡಿಗರಿಬ್ಬರು ಸಾವಿಗೀಡಾಗಿರುವುದು ವಿಷಾದನೀಯ ಸಂಗತಿ. ಆದ್ದರಿಂದ ಜಮ್ಮು-ಕಾಶ್ಮೀರದ (Kashmir) ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರವು ಪ್ರಯತ್ನಿಸುತ್ತಿದೆ. ಆದ್ದರಿಂದ ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (ಟೂರ್ ಆಫರೇಟರ್ಸ್ ಮತ್ತು ಟ್ರಾವಲ್ ಏಜೆಂಟ್ಸ್) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಸಹಾಯವಾಣಿಗೆ (Helpline) ನೀಡಬೇಕೆಂದು ಕೋರಿದೆ. ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ 080-43344334, […]
ತೆರಾಲು ಬಳಿ ಹುಲಿ ಸೆರೆಹಿಡಿಯುವ ಕಾರ್ಯಾಚರಣೆ: ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಭೇಟಿ

ಕೊಡಗು ಜಿಲ್ಲೆಯ ಬಿರುನಾಣಿ ಗ್ರಾ.ಪಂ.ವ್ಯಾಪ್ತಿಯ ತೆರಾಲು ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ‘ಹುಲಿ (Tiger) ಹಿಡಿಯುವ ಕಾರ್ಯಾಚರಣೆ’ ಸ್ಥಳಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ವೀಕ್ಷಿಸಿದರು. ಹುಲಿ ಸೆರೆಹಿಡಿಯುವ ಕಾರ್ಯಚರಣೆ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸ್ಥಳೀಯರ ಜೊತೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸುದೀರ್ಘ ಚರ್ಚಿಸಿದರು. ತೆರಾಲು, ಟಿ.ಶೆಟ್ಟಿಗೇರಿ, ಶ್ರೀಮಂಗಲ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಹುಲಿಯು ಆಗಾಗ ಕಾಣಿಸಿಕೊಳ್ಳುತ್ತಿದ್ದು, […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಅಣಬೆ ಬೇಸಾಯದ ಕುರಿತು ಕಾರ್ಯಗಾರ

ವಿರಾಜಪೇಟೆ ಕಾವೇರಿ ಕಾಲೇಜು (Cauvery College) ಹಾಗೂ ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ಅಣಬೆ (Mushroom) ಬೇಸಾಯದ ಕುರಿತ ಪ್ರಯೋಗಾತ್ಮಕವಾದ ಕಾರ್ಯಗಾರವು (Workshop) ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಮಂಗಳವಾರ ನಡೆಯಿತು . ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ದಾನ ಬಡತನದಲ್ಲಿ ಹುಟ್ಟೋದು ನಮ್ಮ ತಪ್ಪಲ್ಲ ಆದರೆ ಬಡವರಾಗಿ ಸಾಯುವುದು ನಮ್ಮ ತಪ್ಪು. ಪ್ರತಿಯೊಬ್ಬ ಮನುಷ್ಯ ಸಾಧಿಸುವ ಚಲವಿದ್ದರೆ ಹಲವಾರು ಅವಕಾಶಗಳಿವೆ . ಆರ್ಥಿಕ […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಕುಶಾಲನಗರ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಸಿದ್ದಲಿಂಗಪುರ ಫೀಡರ್ನಲ್ಲಿ ಏಪ್ರಿಲ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಾಮಗಾರಿ ಇರುವುದರಿಂದ, ಆಲೂರು, ಸೋಮವಾರಪೇಟೆ, ಗೋಣಿಮರೂರು, ಮಾಲಂಬಿ, ಸಿದ್ದಲಿಂಗಪುರ, ಚಿಕ್ಕಳುವಾರ, ದೊಡ್ಡಳುವಾರ, ಬೈರಪ್ಪಗುಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮೂರ್ನಾಡು 33/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್4 ಮರಗೋಡು ಫೀಡರ್ನಲ್ಲಿ ಏಪ್ರಿಲ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ […]
ಮನೆಯ ಸುತ್ತಮುತ್ತ ಪರಿಸರ ಶುಚಿತ್ವಕ್ಕೆ ಒತ್ತು ನೀಡಿ: ಜಿಲ್ಲಾಧಿಕಾರಿ

ಮಡಿಕೇರಿ: ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ‘ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ (cleanliness) ಉತ್ತಮ ಆರೋಗ್ಯ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಮಡಿಕೇರಿ (Madikeri) 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆ.
ಅರ್ಜಿ ಆಹ್ವಾನ: ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್

ಐಐಎಸ್ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫೀಷಿಯಲ್ ಇಂಟಲಿಜೆನ್ಸ್ (Artificial Intelligence) ಮತ್ತು ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಎಂಜಿನಿಯರಿಂಗ್ ಪದವೀಧರರಿಗೆ ರೂ.15 ಸಾವಿರಗಳ ಶಿಷ್ಯವೇತನ/ ತರಬೇತಿ ನೀಡುವ ಸಂಬಂಧ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ಇಚ್ಚಿಸುವವರು ಏಪ್ರಿಲ್, 25 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲ್ಲೂಕು, ಪೊನ್ನಂಪೇಟೆ 9632465161. ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, […]
ಜನಿವಾರ ಧರಿಸಿ ಸಿಇಟಿ ಬರೆಯಲು ಅಧಿಕಾರಿಗಳ ಆಕ್ಷೇಪ – ಕುಶಾಲನಗರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

ಕುಶಾಲನಗರ : ಸಿಇಟಿ ಪರೀಕ್ಷೆ ಬೇಳೆ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಕುಶಾಲನಗರದಲ್ಲಿ ಕೂಡಾ ಈ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಯಿತು. ದೇವಸ್ಥಾನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅಧಿಕಾರಿಗಳ ನಡೆಯನ್ನು ಖಂಡಿಸಿದರು. ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದಿರುವುದು ಅಮಾನವೀಯ ಘಟನೆ. ತಪ್ಪೆಸಗಿದವರ ವಿರುದ್ಧ ಕ್ರಮವಾಗಬೇಕೆಂದು ಆಗ್ರಹಿಸಿದರು. ದೇವಾಲಯದಿಂದ ತಹಸೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಿದರು.