CSIR-NIIST ಮತ್ತು ಕೊಡಗು ವಿಶ್ವವಿದ್ಯಾಲಯದ ನಡುವೆ ಒಪ್ಪಂದಕ್ಕೆ ಸಹಿ – ಏನಿದರ ವಿಶೇಷತೆ..?

ಕುಶಾಲನಗರ : ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆಯು ಸ್ಮಾರ್ಟ್, ಸ್ವಚ್ಛ ಮತ್ತು ಸುಸ್ಥಿರ ಆಹಾರ ವ್ಯವಸ್ಥೆಯತ್ತ ಒಂದು ಹೆಜ್ಜೆಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯ ವ್ಯಕ್ತಪಡಿಸಿದರು. ತಿರುವನಂತಪುರಂನ ಸಿಎಸ್ಐಆರ್-ರಾಷ್ಟ್ರೀಯ ಅಂತರಶಿಸ್ತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಎಸ್ಐಆರ್-ಎನ್ಐಐಎಸ್ಟಿ)ಯಲ್ಲಿ ಎನ್ಐಐಎಸ್ಟಿಯ ಸುವರ್ಣ ಮಹೋತ್ಸವ ಆಚರಣೆಗಾಗಿ ಆಯೋಜಿಸಿದ್ದ ‘ಮುಂದಿನ ಪೀಳಿಗೆಯ ಆಹಾರ ತಂತ್ರಜ್ಞಾನಗಳು: ಸುಸ್ಥಿರ ನಾಳೆಗಾಗಿ ಸಂಸ್ಕರಣೆ’ ಕುರಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆ ಕೇವಲ ತಾಂತ್ರಿಕ […]

ʼಕೊಡವ ಮುಸ್ಲಿಂ ಅಸೋಸಿಯೇಷನ್ ದಫ್ ಮುಟ್ಟ್’ ತಂಡ ಅಸ್ತಿತ್ವಕ್ಕೆ – ದೂರದರ್ಶನ ಕೇಂದ್ರದಲ್ಲಿ ಪ್ರದರ್ಶನ ಮತ್ತು ದಾಖಲೀಕರಣ…

ಪೊನ್ನಂಪೇಟೆ : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧೀನದಲ್ಲಿ ‘ಕೆ.ಎಂ.ಎ. ದಫ್ ಮುಟ್ಟ್ (ರಾತೀಬ್)’ ತಂಡವನ್ನು ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಕೊಡವ ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಧಾರ್ಮಿಕ ಕಲೆಯಾದ ‘ದಫ್ ಮುಟ್ಟ್’ ಅನ್ನು ಮತ್ತಷ್ಟು ಪ್ರೋತ್ಸಾಹಿಸಿ ಅದರ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಹಿನ್ನೆಲೆಯಲ್ಲಿ ಈ ತಂಡವನ್ನು ರಚಿಸಲಾಗಿದೆ. ಹೊಸದಾಗಿ ರಚನೆಯಾದ ಈ ತಂಡ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ದಫ್ ಮುಟ್ಟ್ ಪ್ರದರ್ಶನವನ್ನು ಪ್ರಸ್ತುತಪಡಿಸಿತು. ಈ ಮೂಲಕ ಕೊಡವ ಮುಸ್ಲಿಮರ ಸಾಂಪ್ರದಾಯಿಕ ಧಾರ್ಮಿಕ ಕಲೆಯನ್ನು ಬೆಂಗಳೂರು ದೂರದರ್ಶನ ಚಂದನ […]

ಕೃತಕ ಕಾಲು ಜೋಡಣೆ ಯಶಸ್ವಿ – ಅಸಹಾಯಕನಿಗೆ ನೆರವಾದ ಮಾಧ್ಯಮ ಸ್ಪಂದನ ಟೀಂ..!

ಗೋಣಿಕೊಪ್ಪ : ತಿತಿಮತಿ ಸಮೀಪದ ನೊಕ್ಯಾ ನಿವಾಸಿ ಪಿ.ಡಿ. ಸುಬ್ರಮಣಿ ಅವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶನಿವಾರ ಕೃತಕ ಕಾಲು ಅಳವಡಿಸಲಾಗಿದೆ. ಮನೆಯಿಂದ ಬೆಂಗಳೂರಿಗೆ ತೆರಳಲು ಅವರಿಗೆ ವಾಹನದ ಅಗತ್ಯತೆ ಪಾಲಿಬೆಟ್ಟ ಚೆಶೆರ್ ಹೋಮ್ ಪ್ರಾಂಶುಪಾಲರಾದ ಶಿವರಾಜ ಮಾಧ್ಯಮ ಸ್ಪಂದನ ಗಮನ ಸೆಳೆದಿದ್ದರು. ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಅಧ್ಯಕ್ಷರಾದ ಅನೂಪ್ ಕುಮಾರ್ ಸುಂಟಿಕೊಪ್ಪ ಅವರು ವ್ಯವಸ್ಥೆ ಮಾಡಿದ ವಾಹನದಲ್ಲಿ ಶುಕ್ರವಾರ ರಾತ್ರಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು. ಮಾಧ್ಯಮ ಸ್ಪಂದನ ತಂಡದ ಸದಸ್ಯ ಪುತ್ತಂ ಪದೀಪ್ ಬಾಲನ್, […]

ಕ್ಲೋಸ್‌ಬರ್ನ್‌ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ಕೊಡುಗೆಯಾಗಿ ನೀಡಿದ ಬೆಳೆಗಾರ…

ಮಡಿಕೇರಿ : ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಬೆಳೆಗಾರರಾದ ಜೆ. ಶರತ್‌ ಬಾಬುರವರು ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಗತ್ಯವಿರುವ ನೋಟ್‌ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯಲ್ಲಿ ೧ರಿಂದ ೭ನೇ ತರಗತಿವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯವಿರುವ ನೋಟ್‌ ಪುಸ್ತಕಗಳನ್ನು ಖರೀದಿಸಿ ಶಿಕ್ಷಕರಿಗೆ ತಲುಪಿಸಿದ್ದರು. ಶಿಕ್ಷಕರು ಅದನ್ನು ಇತ್ತೀಚೆಗೆ ವಿದ್ಯಾರ್ಥಿಗಳಿಗೆ ವಿತರಿಸಿದರು. ಸರ್ಕಾರಿ ಶಾಲೆ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ನೆರವಾದ ಶರತ್‌ ಬಾಬು ಅವರ ಕಾರ್ಯಕ್ಕೆ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ […]

16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಮುಖ್ಯಮಂತ್ರಿ – ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯ 

ನವದೆಹಲಿ : 16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಗೆ ಜೊತೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು 16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ ಎಂದರು. ಯಾರಿಗೂ ಅನ್ಯಾಯವಾಗಬಾರದು […]

ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ -‌ ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಕಾರ್ಯನಿರ್ವಹಿಸಲು ಸೂಚನೆ

ಮಡಿಕೇರಿ  : ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ನಡೆಸುವ ರ್ಯಾಪ್ಟ್ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್‍ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಹಾರಂಗಿ ಜಲಾಶಯದ ಬಳಿಯ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. […]

ಜೂ.16 ರಂದು ನವೋದಯ ಶಾಲೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಡಿಕೇರಿ : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪಿಜಿಟಿ(ಕಂಪ್ಯೂಟರ್ ಸೈನ್ಸ್/ಐಟಿ) 1, ಪಿಜಿಟಿ(ಗಣಿತ) 1, ಟಿಜಿಟಿ ಕನ್ನಡ 1, ಕೌನ್ಸಿಲರ್(ಮಹಿಳೆ) 1, ಜೆಆರ್. ಕ್ಲಕ್ರ್ಸ್ 2, ವಾಹನ ಚಾಲಕರು 1, ಮೆಟ್ರಾನ್ 1, ಆಫೀಸ್ ಅಸಿಸ್ಟೆಂಟ್ 2, ಎಂಟಿಎಸ್ 2 ಮತ್ತು ಸೆಕ್ಯುರಿಟಿ ಗಾರ್ಡ್ 6 ಹುದ್ದೆಗಳಿಗೆ ಜೂನ್, 16 ರಂದು ಬೆಳಗ್ಗೆ 10.30 ಗಂಟೆಗೆ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9447136164 ಮತ್ತು 9448215623 ನ್ನು ಸಂಪರ್ಕಿಸಬಹುದು ಎಂದು […]

ಕೊಡಗು ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ

ಮಡಿಕೇರಿ :  ಕೊಡಗು ಪತ್ರಕತ೯ರ ಸಂಘ(ರಿ)ದ ವತಿಯಿಂದ ವಾರ್ಷಿಕ ಪ್ರಶಸ್ತಿಗಳಿಗೆ  ಅಜಿ೯ ಆಹ್ವಾನಿಸಲಾಗಿದೆ. ಸಂಘದಿಂದ 8 ಪ್ರಶಸ್ತಿಗಳನ್ನು  ಸ್ಥಾಪಿಸಲಾಗಿದ್ದು ಮುದ್ರಣ ಮಾಧ್ಯಮಕ್ಕೆ ಅತ್ಯುತ್ತಮ ಕ್ರೀಡೆ, ರಾಜಕೀಯ, ಕೃಷಿ ಹಾಗೂ ಗ್ರಾಮೀಣ  ವರದಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇದರೊಂದಿಗೆ ಸಂಘದ ಹಿರಿಯ ಸಲಹೆಗಾರರಾದ ಶಕ್ತಿ ದಿನ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷ್ಮಿ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿ, 2. ಗ್ರಾಮೀಣ ವರದಿ – ಕೊಡಗು ಚೇಂಬರ್ ಆಫ್ ಕಾಮಸ್೯ […]

ಶರಣರು ಸಾರಿದ ಜೀವನ ಮೌಲ್ಯಗಳು ಸಾರ್ವಕಾಲಿಕ ಶ್ರೇಷ್ಠ ಚಿಂತನೆಗಳು – ಡಾ. ಜಮೀರ್‌ ಅಹ್ಮದ್

ಕುಶಾಲನಗರ : ಬಸವಾದಿ ಶರಣರು ತಮ್ಮ ವಚನಗಳ ಮೂಲಕ ಈ ಜಗತ್ತಿಗೆ ಸಾರಿದ ಜೀವನ ಮೌಲ್ಯಗಳು ಸಾರ್ವಕಾಲಿಕ ಶ್ರೇಷ್ಠ ಚಿಂತನೆಗಳು ಮತ್ತು ವಿಶ್ವ ಮೌಲಿಕವಾದ ಸಂದೇಶಗಳು ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಅಭಿಪ್ರಾಯಪಟ್ಟರು. ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಪುಣ್ಣಿಮೆ ಪೂಜಾ ಕಾರ್ಯಕ್ರಮದ ಅಂಗವಾಗಿ ಜರುಗಿದ ʼವಚನಗಳಲ್ಲಿ ಜೀವನ ಮೌಲ್ಯʼ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಸಾಮಾನ್ಯ ಜನರ ಜೀವನ ವಿಧಾನವನ್ನು ಪ್ರಧಾನವಾಗಿರಿಸಿಕೊಂಡು ಜನತೆಗೆ ಹತ್ತಿರವಾಗಿ ಅವರ […]

ಭಾರತ ಕಡಲ ತೀರದ ಬಾಹುಬಲಿ ʼINS ಕದಂಬʼ – ಕಾರವಾರ ಸೀಬರ್ಡ್ ನೌಕಾನೆಲೆಯೆಂಬ ರಕ್ಷಣಾ ಜಗತ್ತು..!

ಬರಹ – ಬನೀತ್‌ ಬೋಜಣ್ಣ ಚೈಯ್ಯಂಡ         ಭಾರತದ ಸೇನಾ ಪಡೆಗಳಲ್ಲಿ ಒಂದಾದ, ಗಡಿಯನ್ನು ಕಡಲಿನಲ್ಲಿ ಕಾಯುವ ಪಡೆಯೇ ನೌಕಾಪಡೆ. ಭಾರತೀಯ ನೌಕಾ ಪಡೆಗೆ ದೇಶದ ಕಡಲ ತೀರಗಳಲ್ಲಿ ಹಲವು ನೆಲೆಗಳಿವೆ. ಅದರಲ್ಲೊಂದು ನಮ್ಮ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಕಾರವಾರದ ನೌಕಾನೆಲೆ ಐಎನ್‌ಎಸ್‌ಕದಂಬ. ನಮ್ಮ ರಾಜ್ಯದಲ್ಲಿ ನೌಕಾನೆಲೆ ಇದೆ ಎಂದು ಗೊತ್ತಿದ್ದರೂ, ಅಲ್ಲಿ ಹೋಗಿ ಅನುಭವಿಸಿದ ನಂತರವೇ ನನಗೆ ತಿಳಿದದ್ದು, ಅದೊಂದು ಅದ್ಭುತ ಲೋಕವೆಂದು. ಕಾರವಾರದ ನೌಕಾನೆಲೆಗೆ ನಾನು ಭೇಟಿ ನೀಡಿ […]