ಮಡಿಕೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟ

ಮಡಿಕೇರಿ (Madikeri) ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್ 28 ರಂದು ಸೋಮವಾರದಂದು ಚುನಾವಣೆವಣೆ ನಡೆಯಲಿದೆ. ದಿನಾಂಕ ನಿಗಧಿ ಪಡಿಸಿದ ನಗರದಭೆ ಆಡಳಿತಾಧಿಕಾರಿ ಮತ್ತು ಜಿಲ್ಲಾಧಿಕಾರಿ ವೆಂಕಟ ರಾಜಾ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು.
ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಸುವರ್ಣವಾಕಾಶ: ವಿಶೇಷ ಶಿಬಿರ

ಕ್ರೀಡೆಯಲ್ಲಿ (sports) ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ಕ್ರೀಡಾ ವಸತಿ ಮತ್ತು ನಿಲಯಗಳಲ್ಲಿ ಪ್ರವೇಶಾವಕಾಶ ನೀಡುವ ಸಲುವಾಗಿ ಆಯ್ಕೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 2 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, […]
ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ: ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳ ಸಾಧನೆ

ಮಡಿಕೇರಿ : ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಪದವಿ ಪ್ರದಾನ ಮಾಡಲಾಯಿತು. ಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ 21ನೇ ಬ್ಯಾಚ್ ನ ಒಟ್ಟು 22 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ ೧೦ ಹಂತಗಳಿರುವ ಅಬಾಕಸ್ ಕೋರ್ಸ್ನ್ನು ಈ ವಿದ್ಯಾರ್ಥಿಗಳು (students) ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ಕರ್ನಾಟಕ ಬ್ರೈನೋಬ್ರೈನ್ ಕಿಡ್ಸ್ ಅಕಾಡೆಮಿಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಾಲ್ ಸ್ವರ್ಣಕರ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ […]
ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ ಆಡಳಿತ ಮಂಡಳಿಗೆ ಇಶಾ ಅಂಬಾನಿ ಸೇರ್ಪಡೆ

ಅಂತಾರಾಷ್ಟ್ರೀಯ ವಾಲಿಬಾಲ್ ಒಕ್ಕೂಟದ (ಎಫ್ಐವಿಬಿ) ಆಡಳಿತ ಮಂಡಳಿಗೆ ಇಶಾ ಅಂಬಾನಿ (Isha Ambani) ಮತ್ತು ಲೂಯಿಸ್ ಬಾವ್ಡೆನ್ ಸೇರ್ಪಡೆಯಾಗಿದ್ದಾರೆ. 2024-2028ರ ಒಲಿಂಪಿಕ್ಸ್ ಸಾಲಿಗೆ ಈ ನೇಮಕಾತಿಯನ್ನು ಮಾಡಿರುವುದನ್ನು ಎಫ್ಐವಿಬಿ ಘೋಷಿಸಿದೆ. ಈ ಮೂಲಕ ಸಂಸ್ಥೆಯ ಅತ್ಯುನ್ನತ ಮಟ್ಟದಲ್ಲಿ ಹೊಸ ದೃಷ್ಟಿಕೋನ, ವ್ಯವಹಾರ ಕುಶಾಗ್ರಮತಿ ಮತ್ತು ಕ್ರೀಡಾಪಟುಗಳ ಪ್ರಾತಿನಿಧ್ಯವನ್ನು ತರಲಾಗಿದೆ. ಎಫ್ಐವಿಬಿ ಸಂವಿಧಾನದ ವಿಧಿ 2.4.1.5 ರ ಅಡಿಯಲ್ಲಿ ಅಂಬಾನಿ ಮತ್ತು ಬಾವ್ಡೆನ್ ಅವರನ್ನು ನೇಮಿಸಲಾಗಿದೆ, ಇದು ಎಫ್ಐವಿಬಿ ಅಧ್ಯಕ್ಷರು, ವಿಭಿನ್ನ ವರ್ಗಗಳಲ್ಲಿ ನಾಲ್ಕು ಹೆಚ್ಚುವರಿ ಮಂಡಳಿ ಸದಸ್ಯರನ್ನು […]
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗಾಗಿ ಸೂಪರ್ “ಮ್ಯಾಕ್ಸ್ಸೇವರ್” ಕೊಡುಗೆ ಘೋಷಣೆ

ತ್ವರಿತ ಇ-ಕಾಮರ್ಸ್ ತಾಣವಾದ ಸ್ವಿಗ್ಗಿ (Swiggy) ಇನ್ಸ್ಟಾಮಾರ್ಟ್ ತನ್ನ ಗ್ರಾಹಕರಿಗಾಗಿ “ಮ್ಯಾಕ್ಸ್ಸೇವರ್” ಎಂಬ ವಿನೂತನ ಸೇವೆ ಆರಂಭಿಸಿದ್ದು, ತಮ್ಮ ಪ್ರತಿ ಆರ್ಡರ್ಗಳ ಮೇಲೆ 500 ರೂ.ವರೆಗೂ ಉಳಿತಾಯ ಮಾಡಬಹುದು. ಇತ್ತೀಚೆಗೆ ರಾಷ್ಟ್ರದಾದ್ಯಂತ 100 ನಗರಗಳಿಗೆ ವಿಸ್ತರಣೆಯನ್ನು ಘೋಷಿಸಿದ್ದ ಸ್ವಿಗ್ಗಿ ಇನ್ಸ್ಟಾಮಾರ್ಟ್, ಈ ನಗರಗಳಲ್ಲಿನ ಬಳಕೆದಾರರಿಗೆ ಮ್ಯಾಕ್ಸ್ಸೇವರ್ ಅನ್ನು ಪ್ರಾರಂಭಿಸಿದೆ. ಸ್ವಿಗ್ಗಿ ಮ್ಯಾಕ್ಸ್ಸೇವರ್ ಬಳಸುವ ಗ್ರಾಹಕರು ಎಲ್ಲಾ ವಿಭಾಗದಲ್ಲೂ ಉತ್ತಮ ಡಿಸ್ಕೌಂಟ್ ಪಡೆಯಬಹುದು. ಅದರಲ್ಲೂಪ್ರತಿನಿತ್ಯ ಬಳಕೆಯ ದಿನಸಿಯಿಂದ ಹಿಡಿದು ಎಲೆಕ್ಟ್ರಾನಿಕ್ಸ್, ಸ್ಮಾರ್ಟ್ಫೋನ್, ಫ್ಯಾಷನ್, ಮೇಕಪ್, ಆಟಿಕೆಗಳು ಸೇರಿದಂತೆ 35,000 […]
ಅವಧಿಗೂ ಮುನ್ನ ಜನಿಸಿದ 830 ಗ್ರಾಂ ತೂಕದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾದ ವೈದ್ಯರು!

ತಾಯಿ ಹೊಟ್ಟೆಯಲ್ಲಿನ ಮಗುವಿನ ಬಗ್ಗೆ ಅದೆಷ್ಟೇ ಕಾಳಜಿ ವಹಿಸಿದರು ಕೆಲವೊಮ್ಮೆ ಇದ್ದಕ್ಕಿದ್ದಂತೆ ಸಮಸ್ಯೆಗಳು ಎದುರಾಗಿ ಬಿಡುತ್ತವೆ. ಅವುಗಳನ್ನ ದಾಟಿ ಮಗುವನ್ನ (Baby) ರಕ್ಷಿಸಿಕೊಳ್ಳುವುದು ಪವಾಡವೇ ಆಗಿರುತ್ತೆ. ಅಂಥಹ ಅಪರೂಪದ ಪ್ರಕರಣದಲ್ಲಿ ಯಶಸ್ವಿಯಾಗಿದ್ದಾರೆ ವಾಸವಿ ಆಸ್ಪತ್ರೆಯ ವೈದ್ಯರು. ಕೇವಲ 28 ವಾರಗಳಿಗೆ ಗರ್ಭಿಣಿಯೊಬ್ಬರು 830ಗ್ರಾಂ ತೂಕದ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಂಗಳೂರಿನ (Bengaluru) ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ. ತಾಯಿ ಅಧಿಕ ರಕ್ತದೊತ್ತಡ ಸಮಸ್ಯೆ ಸೇರಿದಂತೆ ಇನ್ನೂ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ ತುರ್ತು ಪರಿಸ್ಥಿತಿ ಎದುರಾದ ಹಿನ್ನೆಲೆ […]
ರೂ.10 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ: 10 ಮಂದಿ ಆರೋಪಿಗಳ ಬಂಧನ

ಕೇರಳದ ತಿರುವನಂತಪುರದಿಂದ ಕೊಡಗಿಗೆ ಅಕ್ರಮವಾಗಿ ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು (Ambergris) ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಾಲು ಸಮೇತ 10 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಈ ಘಟನೆಯು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಕೇರಳದ ತಿರುನಂತಪುರಂನಿಂದ ತಂದು ಆಂಧ್ರಪ್ರದೇಶ ಅಥವಾ ಬೆಂಗಳೂರಿನಲ್ಲಿ (Bengaluru) ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ರವರ ನೇತೃತ್ವದ […]
ರಾಷ್ಟ್ರೀಯ ಹೆದ್ದಾರಿಯನ್ನು ನುಂಗುತ್ತಿರುವ ಗಿಡಗಂಟಿಗಳಿಂದ ಕಾದಿದೆ ಅಪಾಯ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಇದು ಕಾಣುತ್ತಿಲ್ಲವೇಕೆ?

ಮಡಿಕೇರಿ : ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (National highway) ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ, ಮತ್ತು ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಕಾರಣದಿಂದ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೆಲವು ದಿನದ ಹಿಂದೆ ತೆರವು ಮಾಡಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಸಲಿಯಾಗಿ ವಾಹನಗಳ ಸಂಚಾರಕ್ಕೆ ತೊಡಕಾಗಿರುವ, ಅಪಘಾತಕ್ಕೆ ಕಾರಣವಾಗಿರುವ ಪ್ರಮುಖ ವಿಚಾರದ ಬಗ್ಗೆ ಅಧಿಕಾಗಳು ಗಮನಹರಿಸದಿರುವ ಬಗ್ಗೆ ಜನರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ(ಮಡಿಕೇರಿ-ಸಂಪಾಜೆ) ವಿವಿಧೆಡೆ ರಸ್ತೆಯನ್ನ ಕಾಡು […]
ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ದರೋಡೆ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಮಡಿಕೇರಿಯಲ್ಲಿ (Madikeri) ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಬ್ಬನಿ ರೆಸಾರ್ಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (35) ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ. ಆರೋಪಿ […]
ಪಿ.ಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ಪಿ.ಎಂ.ಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮವು ನಡೆಯಿತು. ಶಾಲಾ (School) ಹಿರಿಯ ಮುಖ್ಯ ಶಿಕ್ಷಕಿ ಹೆಚ್.ಕೆ.ಸುಶೀಲ ಅವರು ಮಾತನಾಡಿ ಶಾಲೆಯಲ್ಲಿ ಸಿಗುವ ಉಚಿತ ಸೌಲಭ್ಯ ಹಾಗೂ ಸರ್ಕಾರದ ವತಿಯಿಂದ ದೊರೆಯುವ ಉಚಿತ ಸೌಲಭ್ಯಗಳ ಬಗ್ಗೆ ವಿವರಿಸಿದರು. ಶಾಲೆಯಲ್ಲಿನ ಸೌಲಭ್ಯಗಳು ನುರಿತ ಶಿಕ್ಷಕರು, ಸುಸಜ್ಜಿತ ನವೀನ ಕಟ್ಟಡ, ಸುಸಜ್ಜಿತ ಪೀಠೋಪಕರಣಗಳು, ಅನುಭವಾತ್ಮಕ ಕಲಿಕೆ, ವಿಶಾಲವಾದ ಆಟದ ಮೈದಾನ, ಗ್ರಂಥಾಲಯ, ಉತ್ತಮ ವಿಜ್ಞಾನ, ಗಣಿತ, ಸಮಾಜ ಸಮಾಜ ವಿಜ್ಞಾನ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, […]