ಯುಗಾದಿ, ರಂಜಾನ್ ಹಬ್ಬಕ್ಕೆ KSRTC 2 ಸಾವಿರ ವಿಶೇಷ ಬಸ್: ಮುಂಗಡ ಬುಕ್ಕಿಂಗ್ಗೆ ಡಿಸ್ಕೌಂಟ್

ಮಾರ್ಚ್ 30 ರಂದು ಚಂದ್ರಮಾನ ಯುಗಾದಿ, ಮಾರ್ಚ್ 31 ರಂದು ರಂಜಾನ್ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ (KSRTC) ವತಿಯಿಂದ 2000 ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್ಗಳು ಮಾರ್ಚ್ 28, 29 ಹಾಗೂ 30 ರಂದು ಮೂರು ದಿನ ಬೆಂಗಳೂರಿನಿಂದ ರಾಜ್ಯ, ಹೊರ ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಚಾರ ನಡೆಸಲಿವೆ. ಈ ಬಗ್ಗೆ ಕೆಎಸ್ಆರ್ಟಿಸಿ ಪ್ರಕಟಣೆ ನೀಡಿದೆ. ಹಬ್ಬವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿನಿಂದ ಪ್ರಯಾಣಿಕರು ತಮ್ಮ ಊರುಗಳಿಗೆ ಸಂಚಾರ ನಡೆಸುತ್ತಾರೆ. ಇವರ […]
ರಾಜ್ಯ ಸರ್ಕಾರದಿಂದ ಯುಗಾದಿ, ರಂಜಾನ್ ಗಿಫ್ಟ್ – ಹಾಲಿನ ದರ ೪ ರೂ. ಹೆಚ್ಚಿಸಿ ಶಾಕ್ ಕೊಟ್ಟ ಕಾಂಗ್ರೆಸ್ ಸರ್ಕಾರ.!
ಬೆಂಗಳೂರು : ಯುಗಾದಿ(ugadi, ರಂಜಾನ್(ramdan) ಹಬ್ಬಕ್ಕೆ ಇನ್ನೆರೆಡು ದಿನ ಮಾತ್ರ ಬಾಕಿ ಇದೆ. ಈ ನಡುವೆ ರಾಜ್ಯ ಸರ್ಕಾರ(govt) ಜನತೆಗೆ ಭರ್ಜರಿ ಗಿಫ್ಟ್ ಕೊಟ್ಟಿದೆ. ಸರ್ಕಾರ ಕೊಟ್ಟ ಗಿಫ್ಟ್ಗೆ ಜನತೆ ಶಾಕ್ಗೊಳಗಾಗಿದ್ದಾರೆ. ಈಗಾಗಲೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿ ಹೋಗಿರುವ ಗ್ರಾಹಕರಿಗೆ ಸರ್ಕಾರ ಇಂದು ಬಿಗ್ ಶಾಕ್ ನೀಡಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 4 ರೂಪಾಯಿ ಹೆಚ್ಚಳ ಮಾಡಿದೆ. ನಂದಿನಿ(nandini) ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ […]
ಕೊಡಗಿನಲ್ಲಿ ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಉಸ್ತುವಾರಿ ಸಚಿವರ ಸೂಚನೆ

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು (Kodagu) ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾಕೀತು ಮಾಡಿದ್ದಾರೆ. ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು. ತಹಶೀಲ್ದಾರರು ಮತ್ತು ತಾ.ಪಂ.ಇಒಗಳು ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ವಿಶೇಷ ಗಮನಹರಿಸಬೇಕು. ಜೊತೆಗೆ […]
ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ ಪದವಿ ಪೂರ್ವ ಕಾಲೇಜು, ಕಲಬುರಗಿ ಈ ಕಾಲೇಜಿನಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ (English Lecturer) ಹುದ್ದೆಗೆ ಆಡಳಿತ ಮಂಡಳಿ ನಿಗದಿಪಡಿಸಿದ ರಿಕ್ತಸ್ಥಾನ-8ರ ಸಾಮಾನ್ಯ ಅಂಗವಿಕಲ (ದೃಷ್ಟಿಮಾಂದ್ಯ) ಅಭ್ಯರ್ಥಿಯನ್ನು ಭರ್ತಿ ಮಾಡಿಕೊಳ್ಳಲು ಅವಕಾಶವಿರುವುದರಿಂದ ಜಿಲ್ಲೆಯಲ್ಲಿ ಇರುವ ಈ ಹುದ್ದೆಗೆ ಅರ್ಹ ಅಂಗವಿಕಲ ದೃಷ್ಟಿದೋಷವಿರುವ ಅಭ್ಯರ್ಥಿಗಳು ನೇರವಾಗಿ ಅಧ್ಯಕ್ಷರು/ ಕಾರ್ಯದರ್ಶಿಗಳು ಕರ್ನಾಟಕ ಪೀಪಲ್ ಎಜುಕೇಷನ್ ಸೊಸೈಟಿ ಕಲಬುರಗಿ ಈ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲಿಂದ […]
ಕಾವೇರಿ ಕಾಲೇಜಿನಲ್ಲಿ ಹುತಾತ್ಮ ದಿನ ಆಚರಣೆ

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಭಾನುವಾರ ಹುತಾತ್ಮ ದಿನವನ್ನು (Martyrs Day) ಆಚರಿಸಲಾಯಿತು. ಭಗತ್ ಸಿಂಗ್, ಸುಖದೇವ್,ರಾಜ್ ಗುರು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್ ಸಲ್ದಾನ ಈ ಮೂರು ಕ್ರಾಂತಿಕಾರಿಗಳು ಅಸಂಖ್ಯಾತ ಭಾರತೀಯರ ಮನದಲ್ಲಿ ಇಂದಿಗೂ ಜೀವಂತವಾಗಿದ್ದಾರೆ. ದೇಶಕ್ಕಾಗಿ ಅವರು ಮಾಡಿದ ತ್ಯಾಗ ಬಲಿದಾನ ಸದಾ ಅಚ್ಚಳಿಯದೆ ಇರುತ್ತದೆ . ಈ ಮೂರು ಮಹನೀಯರಲ್ಲಿ ಇದ್ದ ದೇಶ ಪ್ರೇಮ , ದೇಶಾಭಿಮಾನದ ಎಲ್ಲಾರಲ್ಲು ನೆಳೆಯಾಗ ಬೇಕು ನಾವೆಲ್ಲ ಭಾರತೀಯರೆಂಬ ಹೆಮ್ಮೆಯಿಂದ ದೇಶ […]
‘ಮುದ್ದಂಡ ಹಾಕಿ ನಮ್ಮೆ’ ಮಾ.28 ರಂದು ಉದ್ಘಾಟನೆ : ನಗರದಲ್ಲಿ ಮೆರವಣಿಗೆ, ಪ್ರದರ್ಶನ ಪಂದ್ಯದ ಆಕರ್ಷಣೆ
ಮಡಿಕೇರಿ : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಹಬ್ಬದ ‘ಮುದ್ದಂಡ ಹಾಕಿ ಉತ್ಸವ’ ಮಾ.೨೮ ರಂದು ಮಡಿಕೇರಿಯ ಫೀ.ಮಾ. ಕೆ.ಎಂ.ಕಾರ್ಯಪ್ಪ ಕಾಲೇಜು(fmkmc) ಮೈದಾನದಲ್ಲಿ ಉದ್ಘಾಟನೆಗೊಳ್ಳಲಿದೆ. ಅಂದು ಬೆಳಿಗ್ಗೆ ೯.೪೫ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಕೊಡವ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ನಂತರ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ(AS Ponnanna) ಉದ್ಘಾಟಿಸಲಿದ್ದಾರೆ. […]
ಕಾವೇರಿ ಕಾಲೇಜಿನಲ್ಲಿ ನಡೆದ ಹಾಕಿ ತೀರ್ಪುಗಾರರ ಕಾರ್ಯಾಗಾರ ಸಮಾರೋಪ

ವಿರಾಜಪೇಟೆ ಕಾವೇರಿ ಕಾಲೇಜು, ಕೊಡವ ಹಾಕಿ ಅಕಾಡೆಮಿ ಹಾಗೂ ಹಾಕಿ ಕರ್ನಾಟಕದ ಸಂಯುಕ್ತ ಆಶ್ರಯದಲ್ಲಿ ಕಾವೇರಿ ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಗುರುವಿರ ನಡೆದ ಹಾಕಿ ತೀರ್ಪುಗಾರರ ಕಾರ್ಯಗಾರದ (Hockey Referee Workshop) ಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೋಮವಾರಪೇಟೆ ತಾಲೂಕು ಕೊಡವ ಹಾಕಿ ((Hockey) ಮಿಯ ಕಾರ್ಯನಿರತ ಉಪಾಧ್ಯಕ್ಷರಾದ ಕುಕ್ಕೆರ ಜಯ ಚಿನ್ನಪ್ಪ ಮಾತನಾಡಿ, ನಮ್ಮ ಕಾಲದ ಹಾಕಿ ಆಟಕ್ಕೂ ,ಈ ಕಾಲದ ಹಾಕಿಯ ಆಟಕ್ಕೂ ಬಹಳ ಬದಲಾವಣೆಯಾಗಿದೆ. ಈ ರೀತಿಯ ಕಾರ್ಯಗಾರಗಳು ನಡೆದಂತಹ ಸಂದರ್ಭದಲ್ಲಿ […]
SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ಖಾಸಗಿ ಬಸ್ ಸೇವೆ

ವಿದ್ಯಾರ್ಥಿಗಳು ಎಸ್.ಎಸ್. ಎಲ್. ಸಿ. ಪರೀಕ್ಷೆ (SSLC Exam) ಮುಗಿಸಿ ಮನೆಗೆ ಹಿಂತಿರುಗಲು ಅನುಕೂಲವಾಗುವ ಸದುದ್ದೇಶದಿಂದ ಖಾಸಗಿ ಬಸ್ ಮಾಲೀಕರೊಬ್ಬರು ತನ್ನ ಒಡೆತನದ ಬಸ್ ಅನ್ನು ಒದಗಿಸುವ ಮೂಲಕ ಪೋಷಕರ ಮತ್ತು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಜಯಲಕ್ಷ್ಮಿ ಬಸ್ ಮಾಲಿಕರಾದ ಕಾಡೇಮಾಡ ಗೌತಮ್ ಅವರು ತಮ್ಮ ಖಾಸಗಿ ಬಸ್ ಅನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯವಸ್ಥೆ ಮಾಡಿ ಜನಮೆಚ್ಚುಗೆಗೆ ಪಾತ್ರರಾದವರಾಗಿದ್ದಾರೆ. ಪೊನ್ನಂಪೇಟೆ ತಾಲೂಕು ತಿತಿಮತಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿ ಪರೀಕ್ಷೆ ಬರೆದ ನಂತರ ಬಾಳೆಲೆ, ಪೊನ್ನಪಸಂತೆ, […]
ಹೋಂ ಸ್ಟೇ ನೋಂದಣಿ ಮಾಡಿಕೊಳ್ಳಲು ಅವಕಾಶ – ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಡಳಿತ
ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು […]
ಬಿಳಿಗೇರಿಯಲ್ಲಿ 35ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ – ಹಲವು ಕ್ರೀಡಾ ಸ್ಪರ್ಧೆ ಆಯೋಜನೆ…
ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ ಹಾಗೂ ರ್ವತ್ತೋಕ್ಲು, ಬಿಳಿಗೇರಿ ಮತ್ತು ಕುಂಬಳದಾಳು ಪೆರಾತ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ೩೫ನೇ ವರ್ಷದ ಜಿಲ್ಲಾ ಮಟ್ಟದ ಕ್ರೀಡಾಕೂಟ ಏ.೬ ರಂದು ಬಿಳಿಗೇರಿ ಗ್ರಾಮದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಕುರಿತು ಮಾಹಿತಿ ನೀಡಿದ ಪೆರಾತ ಯುವಕ ಸಂಘದ ಮಾಜಿ ಅಧ್ಯಕ್ಷ ಹಾಗೂ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಳಾಡಿ […]