ಕೊಡಗು ವಿಶ್ವವಿದ್ಯಾಲಯ ಉಳಿವಿಗಾಗಿ ಮಾನವ ಹಕ್ಕು ಆಯೋಗಕ್ಕೆ ಮನವಿ ಸಲ್ಲಿಸಿದ ಮುಖಂಡರು..!

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯವನ್ನು ಸ್ವತಂತ್ರವಾಗಿ ಉಳಿಸಿ ಅಭಿವೃದ್ಧಿಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಕ್ತ ಸಲಹೆ ಸೂಚನೆ ನೀಡುವ ಸಂಬಂಧ ಕೊಡಗು ಜಿಲ್ಲಾ ಸಂಘ ಸಂಸ್ಥೆಗಳ ಒಕ್ಕೂಟದ ಮೂಲಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಿಗೆ ಮನವಿ ಪತ್ರ ನೀಡಲಾಯಿತು. ಈ ಸಂದರ್ಭ ಪ್ರತಿಕ್ರಿಯಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ಶ್ರೀಮತಿ ವಿಜಯ ಭಾರತಿ ಸಯಾನಿ ಮತ್ತು ಮಾಜಿ ಸದಸ್ಯರಾದ ರಾಜೀವ್ ಜೈನ್ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು. ವಿವಿ ಹಿತ ರಕ್ಷಣಾ […]

ವೀರಾಜಪೇಟೆ ನೆಹರು ನಗರ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು – ಆತಂಕದಲ್ಲಿ ಅಕ್ಕಪಕ್ಕದ ನಿವಾಸಿಗಳು..!

ವೀರಾಜಪೇಟೆ : ಕೊಡಗು ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯ ಸಿಂಚನವಾಗುತ್ತಿದೆ. ಆದ್ರೆ ಈ ನಡುವೆ ಅಲ್ಲಲ್ಲಿ ಕಾಳ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಬಿಸಿಲಿನ ಬೇಗೆಯ ಮಧ್ಯೆ ಆತಂಕ ಹೆಚ್ಚಿಸುತ್ತಿದೆ. ವಿರಾಜಪೇಟೆಯಲ್ಲಿ ಇಂದು ಮತ್ತೆ ಬೆಂಕಿ ಹೊತ್ತಿಕೊಂಡಿದೆ. ನೆಹರು ನಗರ ಬಳಿಯ ಕಾಡಿನಲ್ಲಿ ಬೆಂಕಿ ಕಾಣಿಸಿದ್ದು, ದಟ್ಟ ಹೊಗೆ ಆವರಿಸಿದೆ. ಅಕ್ಕಪಕ್ಕದಲ್ಲಿ ಮನೆಗಳಿದ್ದು, ಬೆಂಕಿ ವ್ಯಾಪಿಸಿದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ಅರಿತ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಅಗ್ನಿಶಾಮಕ ದಳಕ್ಕೆ […]

ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಜಿ. ವಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಆಯ್ಕೆ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದ ಕ್ಷೇಮಾಭಿವೃದ್ಧಿ ಸಮಿತಿಯ ೨೦೨೫-೨೭ರ ಸಾಲಿನ ಅಧ್ಯಕ್ಷರಾಗಿ ಜಿ.ವಿ. ರವಿ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಕೂರ್ಗ್ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಸಂಘದ ಅಧ್ಯಕ್ಷರಾದ ಅನಿಲ್ ಹೆಚ್.ಟಿ. ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ. ಸಂತೋಷ್, ನಿಕಟ ಪೂರ್ವ ಅಧ್ಯಕ್ಷ ಎಸ್.ಎ. ಮುರಳೀಧರ್, ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ, ಪ್ರಸಾದ್ ಸಂಪಿಗೆ ಕಟ್ಟೆ ಹಾಗೂ ಟಿ .ಜೆ. ಪ್ರವೀಣ್ ಕುಮಾರ್, ಸೋಮವಾರಪೇಟೆ ತಾಲ್ಲೂಕು […]

ಆಟವಾಡಲು ಕೆರೆಗೆ ಇಳಿದ ಬಾಲಕಿ ದುರ್ಮರಣ!

Ponnampete

ಆಟವಾಡಲೆಂದು ಕೆರೆಗೆ ಇಳಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ವಪ್ಪಿರುವ ದಾರುಣ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆ (Ponnampete) ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚನ್ನಂಗೊಲ್ಲಿ ಸಮೀಪದ ಈಸ್ಟ್ ವೇಸ್ಟ್ ಮಿಲ್ ಸಮೀಪದ ತೋಟದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ 9 ವರ್ಷದ ಪುತ್ರಿ ಲಾವಣ್ಯ ಮೃತ ದುರ್ದೈವಿ ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಇಳಿದಿದ್ದರು. ಆದರೆ ಕೆರೆಯಲ್ಲಿ ನೀರು […]

ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಶಾಸಕ ಡಾ.ಮಂತರ್ ಗೌಡ

Mantar Gowda

ಮಾನವ-ವನ್ಯಜೀವಿ (wildlife) ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ಶಾಸಕ ಡಾ.ಮಂತರ್ ಗೌಡ (Mantar Gowda) ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು […]

ಕಟ್ಟೆಮಾಡು ದೇವಾಲಯದ ವ್ಯಾಪ್ತಿಯಲ್ಲಿ ಮತ್ತೆ ಮುಂದುವರಿದ ನಿಷೇಧಾಜ್ಞೆ!

Kattemadu temple

ಮಡಿಕೇರಿ ತಾಲೂಕು ಕಟ್ಟೆ ಮಾಡು (Kattemadu) ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧವಾಗಿ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್ 14 ರಿಂದ ಏಪ್ರಿಲ್ 11 ರವರೆಗೆ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರದಂತೆ, ಪ್ರತಿಭಟನೆ ರ್ಯಾಲಿ,ಜಾತ, ಪ್ರಚೋದಾತ್ಮಕ ಘೋಷಣೆಗಳನ್ನು ಕೂಗದಂತೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಹಿರಿಯ ಉಪ ವಿಭಾಗಾಧಿಕಾರಿಗಳಾದ ವಿನಾಯಕ ನರ್ವಾಡೆ ರವರು ದಿನಾಂಕ 14.03.2025 ರಂದು ಆದೇಶ ಹೊರಡಿಸಿದ್ದಾರೆ.

Power Cut: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ವಿರಾಜಪೇಟೆ 66/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಿದ್ದಾಪುರ, ಗುಹ್ಯ, ಮಾಲ್ದಾರೆ, ಕರಡಿಗೋಡು, ಇಂಜಲಗೆರೆ, ಮೇಕೂರು, ಮೂರ್ನಾಡು, ಪಾರಣೆ, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಅಗ್ನಿವೀರ್ ಆಗಲು ಸುವರ್ಣ ಅವಕಾಶ: ಅರ್ಜಿ ಸಲ್ಲಿಸುವುದು ಹೇಗೆ?

Indian Army Agniveer

ಭಾರತೀಯ ಸೇನೆಯಲ್ಲಿ ಅಗ್ನಿಪಥ (Agni path) ಯೋಜನೆಯ ಅಗ್ನಿವೀರರಾಗಲು (Agniveer) ಸುವರ್ಣ ಅವಕಾಶವಿದೆ. ಭಾರತೀಯ ರಕ್ಷಣಾ ಪಡೆಗಳಲ್ಲಿ ಅಗ್ನಿವೀರರನ್ನು ಆಯ್ಕೆ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು, ಅರ್ಹತೆ ಇರುವವರು ಅರ್ಜಿ ಸಲ್ಲಿಸಿ. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ. ಅರ್ಜಿಗೆ ಬೇಕಾದ ಕಂಪ್ಲೀಟ್‌ ಡೀಟೇಲ್ಸ್‌ ಇಲ್ಲಿದೆ. […]

Health Tips: ಮಹಿಳೆಯರಿಗಿರಬೇಕು ಆರೋಗ್ಯ ಕಾಳಜಿ!

Health Tips

ಹಿಂದಿನ ಕಾಲದಿಂದಲೂ ಮಹಿಳೆಯರು ಮನೆಯ ಸದಸ್ಯರ ಆರೋಗ್ಯದ ಪಾಲನೆ ಮತ್ತು ಪೋಷಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ ತನ್ನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದುನ್ನು ಬಿಡಬೇಕು ಹಾಗಾದಾಗ ಮಾತ್ರ ಆರೋಗ್ಯವಂತರಾಗಿ ಬದುಕಲು ಸಾಧ್ಯ ಮತ್ತು ಉತ್ತಮ ಜೀವನಶೈಲಿಯನ್ನು ಹೊಂದಲು ಸಾಧ್ಯ ಎಂದು ಬೆಂಗಳೂರಿನ ವಾಸವಿ ಆಸ್ಪತ್ರೆಯ ಪ್ರಸೂತಿ ತಜ್ಞರಾದ ಡಾ. ನಿಶಾ ಬುಚಾಡೆ ಅವರ ಆರೋಗ್ಯ ಸಲಹೆಗಳು (Health Tips) ಇಲ್ಲಿದೆ. * ಅಡುಗೆ ಮಾಡುವುದು, ಮಕ್ಕಳ ಪಾಲನೆ ಜೊತೆಗೆ ಮನೆಯ ಕೆಲಸದ ಒತ್ತಡ ನಡುವೆ ಸರಿಯಾದ ಸಮಯಕ್ಕೆ […]

ಕಣ್ಣಿನ ಆರೋಗ್ಯ: ಗ್ಲಾಕೋಮಾ ಬಗ್ಗೆ ಇರಲಿ ಎಚ್ಚರ

Glaucoma

ಗ್ಲಾಕೋಮವನ್ನು (Glaucoma) ಸದ್ದಿಲ್ಲದೇ ದೃಷ್ಟಿ ಕದ್ದೊಯ್ಯುವ ಕಳ್ಳ ಎಂದು ಕರೆಯ ಬಹುದು. ಗ್ಲಾಕೋಮಾ ಕಣ್ಣಿಗೆ ಸಂಬಂಧ ಪಟ್ಟ ಆತಂಕಕಾರಿ ಕಾಯಿಲೆಯ ಸ್ಥಿತಿಗಳಲ್ಲೊಂದು. ಇದರಿಂದ ಕಣ್ಣಿನ ದೃಷ್ಟಿ ಹೋಗುತ್ತದೆ. ಸಾಧಾರಣವಾಗಿ 40 ವರ್ಷಗಳಿಗಿಂತಲೂ ಹೆಚ್ಚಿನ ವಯಸ್ಸಿನವರಿಗೆ, ಅದರಲ್ಲೂ ಅನುವಂಶಿಕವಾಗಿ ಗ್ಲಾಕೋಮಾ ರೋಗವು ಹರಡುವುದು ಕಂಡು ಬರುತ್ತದೆ. ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಟಿ ಕದಿಯುವ ಕಾಯಿಲೆ ಗ್ಲಾಕೋಮಾ ರೋಗ ಲಕ್ಷಣಗಳು: ಯಾವುದೇ ರೋಗ ಲಕ್ಷಣಗಳಿಲ್ಲದೆ ದೃಷ್ಠಿ ಕದಿಯುವ ಕಾಯಿಲೆ ಗ್ಲಾಕೋಮಾ, 40 ವಯಸ್ಸಿನ ನಂತರ ಪ್ರತೀಯೊಬ್ಬರೂ ವರ್ಷಕ್ಕೊಮ್ಮೆ ಕಣ್ಣಿನ ಒತ್ತಡ […]