ಕೊಡಗು ವಿವಿ ಮುಚ್ಚುವ ಕ್ರಮ ಖಂಡಿಸಿ ಬಿಜೆಪಿ, ಎಬಿವಿಪಿಯಿಂದ ಪಾದಯಾತ್ರೆ: ಸಂಸದ ಭಾಗಿ

ಕೊಡಗು ವಿವಿ (Kodagu University) ಮುಚ್ಚಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಳುವಾರ ಗ್ರಾಮದಿಂದ ಕುಶಾಲನಗರದ ವರೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ಪಾದಯಾತ್ರೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ (Yaduveer Wadiyar) ಪಾಲ್ಗೊಂಡರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಎಂಎಲ್ಸಿ ಸುಜಾಕುಶಾಲಪ್ಪ, ಭಾರತೀಶ್ ಮತ್ತಿತರರು ಭಾಗಿ. ನೂರಾರು ವಿದ್ಯಾರ್ಥಿಗಳುˌ ಕಾರ್ಯಕರ್ತರು ಹಾಗೂ ಯುವಜನತೆಯೊಂದಿಗೆ ಹೆಜ್ಜೆ ಹಾಕಿದರು. ಎರಡು ವರ್ಷಗಳ ಹಿಂದೆ ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ […]
ಫ್ಲೂ ಲಸಿಕೆ ಪಡೆದು ಫ್ಲೂನಿಂದ ದೂರವಿರಿ ಹಾಗೂ ಆರೋಗ್ಯವಾಗಿರಿ

ಪ್ರತೀ ವರ್ಷದಲ್ಲೂ ಪ್ರಪಂಚದಾದ್ಯಂತ ಇರುವ ಲಕ್ಷಾಂತರ ಜನರು ಫ್ಲೂನಿಂದ (Flu) ತೊಂದರೆಗೊಳಗಾಗುತ್ತಾರೆ. ಪ್ರತೀ ವರ್ಷ 100 ಕೋಟಿಗಿಂತಲೂ ಹೆಚ್ಚು ಫ್ಲೂ ಪ್ರಕರಣಗಳಲ್ಲಿ 3 ರಿಂದ 5 ಮಿಲಿಯನ್ ಮಂದಿ ಗಂಭೀರ ಪರಿಸ್ಥಿತಿ ಎದುರಿಸುತ್ತಾರೆ. ಸಾಮಾನ್ಯವಾಗಿ ಫ್ಲೂ ಅನ್ನು ಶೀತ ಎಂದು ಭಾವಿಸಲಾಗುತ್ತದೆ. ಆದರೆ ಫ್ಲೂ ನಿಮ್ಮ ದೈನಂದಿನ ಜೀವನ ಮತ್ತು ಕೆಲಸ ಕಾರ್ಯನ್ನು ಅಡ್ಡಿಪಡಿಸುತ್ತದೆ. ಹಾಗಾಗಿ ಅದಕ್ಕೆ ಫ್ಲೂನಿಂದ ಕ್ತ ಲಸಿಕೆ ಪಡೆಯುವುದು ಅವಶ್ಯವಾಗಿದೆ ಮತ್ತು ಲಸಿಕೆಯಿಂದ (Vaccine) ನಿಮ್ಮನ್ನು ನೀವು ರಕ್ಷಿಸಬಹುದಾಗಿದೆ. ಆದರೆ ಅನೇಕ ಜನರು […]
ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಕಂಬಗಳು ಕಂಡುಬಂದರೆ ದೂರು ನೀಡಿ

ಮಡಿಕೇರಿ:-ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು (Power lines) ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 […]
Virajpet MLA Ponnanna: ಕೊಡಗು ವಿಶ್ವವಿದ್ಯಾಲಯದ ಕ್ಲೋಸ್ಗೆ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರ ನಿಲುವೇನು?

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು (Kodagu University) ಮುಚ್ಚುವ ಕಾಂಗ್ರೆಸ್ ಸರ್ಕಾರದ ಪ್ರಸ್ತಾವನೆಯ ವಿರುದ್ಧ ಮಡಿಕೇರಿ ಶಾಸಕ ಮಂತರ್ ಗೌಡ ಅವರ ದಿಟ್ಟ ನಿಲುವನ್ನು ಶ್ಲಾಘಿಸಬೇಕಿದೆ. ಮೇಲ್ನೋಟಕ್ಕೆ, ಹಿಂದಿನ ಬಿಜೆಪಿ ಸರ್ಕಾರವು ಪ್ರಾರಂಭಿಸಿದ ವಿಶ್ವವಿದ್ಯಾಲಯಗಳನ್ನು ರಾಜಕೀಯ ಕಾರಣಗಳಿಗಾಗಿ ಮುಚ್ಚಲು ಸಿದ್ದರಾಮಯ್ಯ ಸರ್ಕಾರ ಬಯಸುತ್ತಿರುವಂತೆ ಕಾಣುತ್ತದೆ ಎಂದಿದ್ದಾರೆ. ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ ಪ್ರಸ್ತುತ ಕಾಂಗ್ರೆಸ್ ಆಡಳಿತವು ನೀಡಿರುವ ನೆಪವೆಂದರೆ ವಿಶ್ವವಿದ್ಯಾಲಯಗಳು ಅಸಮರ್ಪಕ ಮೂಲಸೌಕರ್ಯ ಮತ್ತು ಆರ್ಥಿಕ ಸಮಸ್ಯೆಗಳಿಂದಾಗಿ ಕಾರ್ಯಸಾಧ್ಯವಲ್ಲ ಅನ್ನೋದು. ಕಾಂಗ್ರೆಸ್ ಪಕ್ಷದವರೇ […]
Requirement: ಕೊಡಗು ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ

ಕೊಡಗು (Kodagu) ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು (Requirement) ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಕಚೇರಿ ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆ, ಹುದ್ದೆಯ ಸಂಖ್ಯೆ 01, […]
ಬೆಂಕಿ ಬ್ಯಾಟಿಂಗ್: ದಾಖಲೆಗಳೆಲ್ಲಾ ಉಡೀಸ್… ಇತಿಹಾಸ ನಿರ್ಮಿಸಿದ ಇಬ್ರಾಹಿಂ ಜದ್ರಾನ್

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ (ICC Champions Trophy) ರೋಚಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬಿ ಗುಂಪಿನ ಪಂದ್ಯದಲ್ಲಿ ಬುಧವಾರ ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಕಾದಾಟ ನಡೆಸಿವೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಬ್ಯಾಟರ್ ಇಬ್ರಾಹಿಂ ಜದ್ರಾನ್ ( Ibrahim Zadran) ಅವರ ಸ್ಫೋಟಕ ಬ್ಯಾಟಿಂಗ್ ನಡೆಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಜದ್ರಾನ್ 146 ಎಸೆತಗಳಲ್ಲಿ 12 ಬೌಂಡರಿ, 6 ಸಿಕ್ಸರ್ಗಳ ನೆರವಿನಿಂದ 177 ರನ್ಗಳಿಸಿದರು. ಈ 177 ರನ್ಗಳ ನೆರನಿಂದ ಚಾಂಪಿಯನ್ಸ್ ಟ್ರೋಫಿಯಲ್ಲಿ […]
Govinda: ಬಾಲಿವುಡ್ ನಟ ಗೋವಿಂದ ಡಿವೋರ್ಸ್ ಕೇಸ್ಗೆ ಹೊಸ ಟ್ವಿಸ್ಟ್

ಬಾಲಿವುಡ್ ಸ್ಟಾರ್ ನಟ ಗೋವಿಂದ (Govinda) ಮತ್ತು ಅವರ ಪತ್ನಿ ಸುನೀತಾ ಅಹುಜಾ ಅವರ 37 ವರ್ಷಗಳ ದಾಂಪತ್ಯ ಕೊನೆಗೊಳಿಸುವ ವಿಚಾರ ಎಲ್ಲೆಡೆ ವೈರಲ್ ಆಗಿತ್ತು. ನಟ ಗೋವಿಂದ ಮತ್ತು ಪತ್ನಿ ಸುನೀತಾ ಅಹುಜಾ ದಾಂಪತ್ಯದಲ್ಲಿ ಬಿರುಕು ಸುದ್ದಿ ಬಿಟೌನ್ನಲ್ಲಿ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಕುಟುಂಬದ ಆಪ್ತ ಮೂಲವೊಂದು ಸುನೀತಾ ಕೆಲವು ತಿಂಗಳ ಹಿಂದೆಯೇ ಗೋವಿಂದ ಅವರಿಗೆ ಡಿವೋರ್ಸ್ ನೋಟಿಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಬಾಲಿವುಡ್ ಸ್ಟಾರ್ ನಟ ಮತ್ತು ಸುನೀತಾ ಅವರು 1987ರ ಮಾರ್ಚ್ನಲ್ಲಿ ಮದುವೆಯಾಗಿದ್ದರು. […]
ಕಾವೇರಿ ಪದವಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ಮನುಷ್ಯ ಕೋಟಿ ಕೋಟಿ ಸಂಪಾದಿಸುವುದು ಸಾಧನೆ ಈ ರೀತಿಯ ಸಂಪಾದನೆ ಆತನಿಗೆ ಸಂತೋಷವನ್ನು ನೀಡುತ್ತದೆ . ಆದರೆ ತೃಪ್ತಿ ಬೇಕಾದರೆ ತಾನು ಸಂಪಾದಿಸಿದ್ದನ್ನು ಇತರ ಸಹಾಯಕ್ಕೆ ದಾನ ನೀಡಿ ಸಮಾಜ ಸೇವೆ ಮಾಡಬೇಕು ಎಂದು ವಿರಾಜಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಣವ್ ಎಂ ಚಿತ್ರ ಬಾನು ಅಭಿಪ್ರಾಯ ವ್ಯಕ್ತಪಡಿಸಿದರು . ಬಿ. ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವೇರಿ ಪದವಿ ಕಾಲೇಜಿನ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ […]
ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ

ವಿರಾಜಪೇಟೆಯ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ […]
ಸ್ಕೂಟರ್ ಹಾಗೂ ಖಾಸಗಿ ಬಸ್ ಡಿಕ್ಕಿ: ಸ್ಕೂಟರ್ ಸವಾರ ಸಾವು

ಸ್ಕೂಟರ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಿದ್ದಲಿಂಗಪುರದ ಬಳಿ ಜರುಗಿದೆ. ಗ್ರಾಮದ ಕೃಷಿಕ ಶಾಂತಪ್ಪ ಎಂಬವರ ಪುತ್ರ ಎಸ್.ಎ.ಅಶೋಕ್ (64) ಮೃತ ದುರ್ದೈವಿ. ಮೃತರು ತಮ್ಮ ಜಮೀನಿನಲ್ಲಿ ನೀರಾವರಿ ಪೈಪ್ ಅಳವಡಿಸಲು ಕಾಲರ್ ತರಲೆಂದು ತಮ್ಮ ಸ್ಕೂಟಿಯಲ್ಲಿ ಹೆಬ್ಬಾಲೆ ಕಡೆ ತೆರಳುವಾಗ ಸಿದ್ದಲಿಂಗಪುರದ ನಾಪಂಡ ಮುತ್ತಪ್ಪ ಅವರ ಮನೆಯ ಮುಂಭಾಗದ ರಸ್ತೆಯಲ್ಲಿ ಘಟನೆ ಜರುಗಿದೆ. ಮೃತರು ಇಬ್ಬರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಕುಶಾಲನಗರ ಪೊಲೀಸರು […]