ಶ್ರದ್ಧಾಭಕ್ತಿಯಿಂದ ಜರುಗಿದ ಕೊಟ್ಟೋಳಿ ಶ್ರೀ ಧಾರಾಮಹೇಶ್ವರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ

ವರದಿ : ರಜಿತ ಕಾರ್ಯಪ್ಪ ವೀರಾಜಪೇಟೆ : ಕೊಟ್ಟೋಳಿ ಶ್ರೀ ಧಾರಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಎರಡು ದಿನಗಳ ಕಾಲ ಶ್ರದ್ದಾಭಕ್ತಿಯೊಂದಿಗೆ ನೆರವೇರಿತು. ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಉದ್ಭವ ಲಿಂಗ ಶ್ರೀ ಈಶ್ವರ ದೇವರಿಗೆ ವಿವಿಧ ಪೂಜೆಗಳು ಸಲ್ಲಿಕೆಯಾದವು. ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮೊದಲ ದಿನ ಬೆಳಗ್ಗೆಯಿಂದಲೇ ಗಣಪತಿ ಹೋಮ, ಪ್ರಾರ್ಥನೆ, ಸ್ವಸ್ಥಿ ಪುಣ್ಯವಾಚನ, ಪುಣ್ಯಾಹುತಿ, ದೇವನಾಂದಿ ಮಹಾಗಣಪತಿ ಪೂಜೆ, ಪಂಚಗವ್ಯ ಶುದ್ದಿ, ಋತ್ವಿಕ್ ವರ್ಣನೆ, ಸೇರಿದಂತೆ ರಾತ್ರಿಯವರೆಗೂ ವಿವಿಧ ಪೂಜೆ, ಅನ್ನ ಸಂತರ್ಪಣೆ, […]
ವಿವೇಕಾನಂದ ಜನ್ಮ ದಿನ ಪ್ರಯುಕ್ತ ಪ್ರಬಂಧ ಸ್ಪರ್ಧೆ

ಕುಶಾಲನಗರ : ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಪ್ರಯುಕ್ತ ಕೂಡುಮಂಗಳೂರು ಟುಲೀಪ್ ಟ್ರಸ್ಟ್ ವತಿಯಿಂದ ಗುಮ್ಮನಕೊಲ್ಲಿ ಮೂಕಾಂಬಿಕಾ ವಿದ್ಯಾಸಂಸ್ಥೆಯಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪಾರಿತೋಷಕ, ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಟುಲೀಪ್ ಟ್ರಸ್ಟ್ ಅಧ್ಯಕ್ಷ ಚಂದನ್, ವಿದ್ಯಾರ್ಥಿಗಳು ಯಾವುದೇ ಕ್ಲಿಷ್ಟಕರ ಸನ್ನಿವೇಶದಲ್ಲೂ ಧೃತಿಗೆಡದೆ, ಬಂದಂತಹ ಯಾವುದೇ ಸಮಸ್ಯೆಯನ್ನು ಎದುರಿಸಿ ಮುಂದೆ ಸಾಗಬೇಕು. ಸೋಲನ್ನು ಮೆಟ್ಟಿನಿಂತು ಹೊಸ ಚೈತನ್ಯವನ್ನು ಕಾಣಬೇಕು ಎಂದರು. […]
ರಸ್ತೆ ದುಸ್ಥಿತಿ: ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದ ಯುವಕರು

ನಾಪೋಕ್ಲು: ನಾಪೋಕ್ಲು- ಭಾಗಮಂಡಲ ರಸ್ತೆ ದುಸ್ಥಿತಿಯ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಆಟೋ ಚಾಲಕರು , ಸಾರ್ವಜನಿಕರು ಭಾನುವಾರ ಸಂಜೆ ಎಮ್ಮೆ ಮಾಡು – ಚೋ ನಕೆರೆ ರಸ್ತೆಯಲ್ಲಿ ಒಂದುವರೆ ಕಿಲೋಮೀಟರ್ ದೂರ ಬಾಳೆ ಗಿಡಗಳನ್ನು ನೆಟ್ಟು ಪ್ರತಿಭಟನೆ ನಡೆಸಿದರು. ಹಳೆ ತಾಲೂಕಿನಿಂದ ಎಮ್ಮೆ ಮಾಡು ಜಂಕ್ಷನ್ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದೆ ಈ ರಸ್ತೆಯಲ್ಲಿ ಸಂಚರಿಸುವ ಸಾಧ್ಯವೇ ಆಗುತ್ತಿಲ್ಲ. ಆಟೋ ಚಾಲಕರು ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಕಷ್ಟು ಬಾರಿ ಮನವಿ ಸಲ್ಲಿಸಿದರು […]
Power Cut: ಕೊಡಗಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ!

ಫೆಬ್ರುವರಿ 10 ರಂದು ಬೆಳಗ್ಗೆ 10 ರಿಂದ 06 ಗಂಟೆ ವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ ಶೆಟ್ಟಿಗೇರಿ, ಕೆದಮುಳ್ಳೂರು, ಕಾಕೋಟುಪರಂಬು, ಕದನೂರು, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಫೆಬ್ರುವರಿ 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಪಾರಾಣೆ, ನಾಪೋಕ್ಲು, ಮೂರ್ನಾಡು, […]
ಶ್ರೀ ದಕ್ಷಿಣ ಮಾರಿಯಮ್ಮ ಮತ್ತು ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ

ವಿರಾಜಪೇಟೆ : ವಿರಾಜಪೇಟೆಯ ಶ್ರೀ ದಕ್ಷಿಣ ಮಾರಿಯಮ್ಮ ಮತ್ತು ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನ, ಸಾಧು ಶೆಟ್ಟಿ 24 ಮನೆ ತೆಲುಗು ಶೆಟ್ಟಿ ಸಂಘ ಇವರ ವತಿಯಿಂದ ತೆಲುಗು ಶೆಟ್ಟರ ಬೀದಿಯ ಶ್ರೀ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಫೆ.13 ರಿಂದ 16 ರವೆರೆಗೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಟಿ.ಪಿ. ಕೃಷ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಟಿ.ಪಿ. ಕೃಷ್ಣ, ಅಖಿಲಾಂಡ ಕೋಟಿ, ಬ್ರಹ್ಮಾಂಡ ನಾಯಕಿ, ಆದಿಶಕ್ತಿ, […]
ಕಾಡಾನೆ ದಾಳಿ: ಜೀವಾಪಾಯದಿಂದ ಪಾರು

ನಾಪೋಕ್ಲು :ಇಲ್ಲಿಗೆ ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಜೀವಪಾಯದಿಂದ ಪಾರಾ ಘಟನೆ ಭಾನುವಾರ ಸಂಜೆ ನಡೆದಿದೆ. ಮದೆ ನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬವರ ಮಗ ಭರತ್ ಕುಮಾರ್ (50) ಕಾಡಾನೆ ದಾಳಿಗೆ ಒಳಗಾದ ದುರ್ದೈವಿ. . ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿರುವ ಭರತ್ ಕುಮಾರ್ ಎಂದಿನಂತೆ ತಮ್ಮ ಬೈಕಿನಲ್ಲಿ ಮದನಾಡು – ಬೆಟ್ಟತ್ತೂರು ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಸಾಲಪು ಎಂಬಲ್ಲಿ ರಸ್ತೆಯ ಮಧ್ಯೆ […]
ಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ಸಾತ್ವಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ: ಡಿವೈಎಸ್ಪಿ ಮಹೇಶ್ ಕುಮಾರ್

ವಿರಾಜಪೇಟೆ: ಮಕ್ಕಳಿಗೆ ಮಹನೀಯರ ಆದರ್ಶವನ್ನು ನೀಡಿ ಉತ್ತಮ ವ್ಯಕ್ತಿತ್ವ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ವಿರಾಜಪೇಟೆ ಡಿವೈಎಸ್ ಪಿ ಮಹೇಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು .ವಿರಾಜಪೇಟೆ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಆಯೋಜಿಸಲಾದ ಸ್ಪೋರ್ಟ್ಸ್ ಸ್ಪೆಕ್ಟ್ರಾ 2026 ಕಾರ್ಯಕ್ರಮವು ನಾಂಗಾಲ ಗ್ರಾಮದಲ್ಲಿರುವ ಎಲ್. ಎಸ್. ಎ. ಯ ನೂತನ ಕ್ಯಾಂಪಸ್ ನಲ್ಲಿ ಜರುಗಿತು. ಕ್ರೀಡಾ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್ಪಿ ಮಹೇಶ್ ಕುಮಾರ್ […]
ಕಾಫಿ ತೋಟಕ್ಕೆ ಕಡಗದಾಳು ಶಾಲೆ ವಿದ್ಯಾರ್ಥಿಗಳ ಭೇಟಿ : ಪ್ರಮುಖರೊಂದಿಗೆ ಸಂವಾದ

ಮಡಿಕೇರಿ : ಕಡಗದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಇತ್ತೀಚೆಗೆ ವಿಶೇಷ ಅನುಭವ ಪಡೆದರು. ತರಗತಿ, ಪಠ್ಯ, ಆಟೋಟ ಚಟುವಟಿಕೆಯ ಮಧ್ಯೆ ಕಾಫಿ ತೋಟಕ್ಕೆ ಭೇಟಿ ನೀಡುವ ಅವಕಾಶ ವಿದ್ಯಾರ್ಥಿಗಳಿಗೆ ಸಿಕ್ಕಿತ್ತು. ಕೊಡಗು ಜಿಲ್ಲೆಯಲ್ಲಿ ಕಾಫಿಯನ್ನು ಪ್ರಮುಖ ವಾಣಿಜ್ಯ ಬೆಳೆಯಾಗಿ ಬೆಳೆಯಲಾಗುತ್ತಿದೆ. ಹೀಗಾಗಿ ಶಾಲಾ ಮಕ್ಕಳಿಗೆ ಕಾಫಿಯ ಬಗ್ಗೆ ಅರಿವು ಹಾಗೂ ಮಾಹಿತಿ ಒದಗಿಸುವ ಉದ್ದೇಶದಿಂದ ಕಾಫಿ ತೋಟಕ್ಕೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಬೆಳೆಗಾರ ಮುಕ್ಕಾಟಿರ ಗಣಪತಿ ಅವರ ತೋಟಕ್ಕೆ ಮಕ್ಕಳ ಜೊತೆ ತೆರಳಿದ […]
ಮೌಲ್ಯಯುತ ಕುಟುಂಬ ವ್ಯವಸ್ಥೆಯನ್ನು ಉಳಿಸುವ ಹೊಣೆ ನಮ್ಮದು – ಜಿತೇಂದ್ರ ಮಂಜೇಶ್ವರ

: ✍️ ರಜಿತ ಕಾರ್ಯಪ್ಪ ವಿರಾಜಪೇಟೆ : ಹಿಂದೂ ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದು, ಸಂಸ್ಕೃತಿ ಉಳಿಸುವುದು, ಯುವ ಜನರಿಗೆ ಧಾರ್ಮಿಕ ಮೌಲ್ಯ ಪರಿಚಯಿಸುವ ಉದ್ದೇಶದಿಂದ ಹಿಂದೂ ಸಂಗಮ ಆಯೋಜಿಸಲಾಗುತ್ತಿದೆ ಎಂದು ಮಂಗಳೂರು ವಿಭಾಗದ ಕುಟುಂಬ ಪ್ರಭೋದನ್ ವಿಭಾಗ ಸಂಯೋಜಕ ಮಂಜೇಶ್ವರದ ಜಿತೇಂದ್ರ ತಿಳಿಸಿದರು. ಹಿಂದೂ ಸಂಗಮ ಆಯೋಜನಾ ಸಮಿತಿ ಆರ್ಜಿ, ಬೇಟೋಳಿ ಮಂಡಲದ ವತಿಯಿಂದ ಕೋಟಿ ಸವಾಲಿಗೆ ಉತ್ತರ ಒಂದೇ ಹಿಂದೂ ಭಾವದ ಜಾಗರಣ ಎನ್ನುವ ಧ್ಯೇಯಯಡಿ ಪೆರುಂಬಾಡಿಯ ವಾಲ್ಮಿಕಿ ಭವನದಲ್ಲಿ ನಡೆದ ಹಿಂದೂ ಸಂಗಮ […]
ಆಪ್ತಮಿತ್ರ ಬಳಗ ಮೂರ್ನಾಡು ವತಿಯಿಂದ ಫೆ. 1 ರಂದು ಯಕ್ಷೋತ್ಸವ

ನಾಪೋಕ್ಲು: ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಇದೇ ಫೆ ತಾ.1. ಆದಿತ್ಯವಾರದಂದು ಮೂರ್ನಾಡಿನಲ್ಲಿ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಎಂದು ಆಪ್ತಮಿತ್ರ ಬಳಗ ಮೂರ್ನಾಡು ಇದರ ಆಯೋಜಕ ಚಂದ್ರಶೇಖರ್ ಕುಲಾಲ್ ಮೂರ್ನಾಡು ಅವರು ಹೇಳಿದರು. ಮೂರ್ನಾಡು ಪಟ್ಟಣದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ತೆಂಕುತಿಟ್ಟಿನ ಗಜಮೇಳವೆಂದೇ ಪ್ರಸಿದ್ಧಿ ಪಡೆದ ಇವರಿಂದ ಫೆ ತಾ.1. ರ0ದು ಮೂರ್ನಾಡಿನ ಪಾಂಡಾಣೆ ನಾಡ್ ಮಂದ್, ಶಾಲಾ ಮೈದಾನದಲ್ಲಿ ಸೇವಾರ್ಥವಾಗಿ […]