ಶಾಲಾ ಜಾಗ ಉಳಿಸಲು ಬಿಜೆಪಿ ಹೋರಾಟ ಹೊರತು ಶಾಸಕರ ವಿರುದ್ಧದ ವೈಯಕ್ತಿಕ ದ್ವೇಷವಲ್ಲ: ಅಂಬಿ ಕಾರ್ಯಪ್ಪ

ನಾಪೋಕ್ಲು: ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆಯ ಜಾಗ ಒತ್ತುವರಿಯಾಗಿರುವ ಬಗ್ಗೆ ,ಒತ್ತುವರಿಯಾಗಿರುವ ಜಾಗವನ್ನು ಉಳಿಸಿಕೊಳ್ಳುವ ಬಗ್ಗೆ ಭಾರತೀಯ ಜನತಾ ಪಕ್ಷವು ಹೋರಾಟ ಮಾಡುತ್ತಿದೆ ಹೊರತು ಶಾಸಕರ ತೇಜೋವಧೆ ಮಾಡುವ ಉದ್ದೇಶಕ್ಕಾಗಿ ಅಲ್ಲ ಎಂದು ಬಿಜೆಪಿ ಪಕ್ಷದ ಪರವಾಗಿ ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಕ್ ಶಿವಾಚಾಳಿಯಂಡ ಅಂಬಿ ಕಾರ್ಯಪ್ಪ ಸ್ಪಷ್ಟನೆ ನೀಡಿದ್ದಾರೆ. ಪಟ್ಟಣದಲ್ಲಿ ಬಿಜೆಪಿ ಪಕ್ಷ ದಿಂದ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 1950 ರ ದಶಕದಲ್ಲಿ ಅಂದಿನ ಹಿರಿಯರ ಮತ್ತು ದಾನಿಗಳ ಪ್ರಯತ್ನದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ […]
ಹೆಗ್ಗಳ ಎಡಮಕ್ಕಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬ್ರಹ್ಮ ಕಲಶಾಭಿಷೇಕ ಹಾಗೂ ವಾರ್ಷಿಕ ಮಹೋತ್ಸವ

ವಿರಾಜಪೇಟೆ : ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ಎಡಮಕ್ಕಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶಭಿಷೇಕ ಹಾಗೂ ವಾರ್ಷಿಕ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ಜರುಗಿತು. ಜನವರಿ 27, 28 ಹಾಗೂ 29 ರಂದು ಮೂರು ದಿವಸಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಮಹೋತ್ಸವವು ತೆರೆ ಕಂಡಿತು. ಮೊದಲ ದಿವಸ ಮಹಾಪೂಜೆ, ಪ್ರಸಾದ ಶುದ್ದಿ ಕ್ರಿಯೆಗಳು, ಆಚಾರ್ಯವರಣಂ ಸೇವೆಗಳು ನಡೆದವು. ಎರಡನೆಯ ದಿನದಂದು ಮುಂಜಾನೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಬೆಳಿಗ್ಗೆ ಮಹಾ ಗಣಪತಿ ಹೋಮ, ಉಷಾ ಪೂಜೆ,ಕಲಶಾಭಿಷೇಕ, ಉಷಾ […]
ಮಡಿಕೇರಿ: ಶ್ರದ್ಧಾಭಕ್ತಿಯಿಂದ ಜರುಗಿದ ಹುತಾತ್ಮ ದಿನಾಚರಣೆ

ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಶುಕ್ರವಾರ ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಿಸಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ ಇರಿಸಿ ಪೊಲೀಸ್ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

66/11 ಕೆ.ವಿ ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್ಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಜನವರಿ, 30 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, ಮಲ್ಲೂರು, ಕಿರುಗೂರು, ವಡ್ಡರಮಾಡು, ಮಾಯಮುಡಿ, ಸುಳುಗೋಡು, ಧನುಗಾಲ, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ […]
ಸಂಪಾಜೆಯಲ್ಲಿ ಭೀಕರ ಅಪಘಾತ – ಆಟೋ ರಿಕ್ಷಾ ಚಾಲಕ ದುರ್ಮರಣ..! ಕಾರು ಚಾಲಕ ಎಸ್ಕೇಪ್…

ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಪಲ್ಟಿಯಾದ ಆಟೋ ರಿಕ್ಷಾ ಮೇಲೆ ಟಿಪ್ಪರ್ ವಾಹನ ಹರಿದ ಪರಿಣಾಮ ಆಟೋ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಸಂಪಾಜೆಯಲ್ಲಿ ಸಂಭವಿಸಿದೆ. ಇಲ್ಲಿನ ಪೆಟ್ರೋಲ್ ಬಂಕ್ ಬಳಿ ಆಟೋ ರಿಕ್ಷಾಗೆ ಹಿಂದಿನಿಂದ ಕಾರೊಂದು ವೇಗವಾಗಿ ಬಂದು ಡಿಕ್ಕಿಯಾಗಿದೆ. ಆ ಋಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಇದೇ ಸಂದರ್ಭ ಎದುರಿನಿಂದ ಬಂದ ಟಿಪ್ಪರ್ ವಾಹನ ಆಟೋ ರಿಕ್ಷಾ ಮೇಲೆ ಹರಿದಿದೆ. ರಸ್ತೆಗೆ ಎಸೆಯಲ್ಪಟ್ಟ ಚಾಲಕನ ಮೇಲೂ ಟಿಪ್ಪರ್ ಹರಿದಿದ್ದು, ಚಾಲಕ ಸುಂದರ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. […]
ವೀರಾಜಪೇಟೆ : ಕಾಡಾನೆ ದಾಳಿಗೆ ತೋಟ ಕಾವಲುಗಾರ ಬಲಿ..!

ವೀರಾಜಪೇಟೆ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿ ಮುಂದುವರೆದಿದೆ. ಓಂಟಿ ಸಲಗ ದಾಳಿಗೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಗೌರಿಬೆಟ್ಟ ಎಸ್ಟೇಟ್ನಲ್ಲಿ ಸಂಭವಿಸಿದೆ. ತೋಟದಲ್ಲಿ ಕಾವಲುಗಾರನಾಗಿದ್ದ ಲತೀಫ್(65) ಮೃತ ದುರ್ದೈವಿ. ಇಂದು ಮಧ್ಯಾಹ್ನದ ವೇಳೆ ಕಾಫಿ ತೋಟದಲ್ಲಿ ಕಾಣಿಸಿಕೊಂಡಿದ್ದು, ಲತೀಫ್ ಮೇಲೆ ದಾಳಿ ಮಾಡಿದೆ. ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಲತೀಫ್ ಅವರನ್ನು ಸಹಕಾರ್ಮಿಕರು ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಘಟನೆ ಬಳಿಕ ಅರಣ್ಯ ಇಲಾಖೆ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು. ಕಾಡು ಪ್ರಾಣಿ ಹಾವಳಿ ತಡೆಗಟ್ಟುವಲ್ಲಿ […]
ಶಾದಿ ಮಹಲ್ ವಿವಾದ: ವಿದ್ಯಾಸಂಸ್ಥೆಗೆ ದಾನ ನೀಡಿದ ಜಾಗ ಅನ್ಯ ಕಾರ್ಯಕ್ಕೆ ಬಳಸುವಂತಿಲ್ಲ: ಕೆ.ಜಿ. ಬೋಪಯ್ಯ

ನಾಪೋಕ್ಲು: ಇಲ್ಲಿಯ ವಿದ್ಯಾಸಂಸ್ಥೆಗೆ ದಾನವಾಗಿ ನೀಡಿದಂತಹ ಜಾಗ ಯಥಾ ಸ್ಥಿತಿಯಲ್ಲಿರಬೇಕು .ಯಾವುದೇ ಅನ್ಯ ಕಾರ್ಯಕ್ಕೆ ಬಳಕೆ ಆಗಬಾರದು ಎಂದು ಮಾಜಿ ವಿಧಾನಸಭಾ ಅಧ್ಯಕ್ಷ, ಮಾಜಿ ಶಾಸಕ ಕೆ. ಜಿ. ಬೋಪಯ್ಯ ಒತ್ತಾಯಿಸಿದರು.ಇಲ್ಲಿಗೆ ಸಮೀಪದ ಚೆರಿಯಪಬುವಿಗೆ ಬುಧವಾರ ಭೇಟಿ ನೀಡಿದ ಬಿಜೆಪಿ ಪಕ್ಷದ ಪ್ರಮುಖರು ನೂತನವಾಗಿ ನಿರ್ಮಾಣ ಹಂತದಲ್ಲಿರುವ ಶಾದಿ ಮಹಲ್ ಕಟ್ಟಡದ ಸ್ಥಳ ಪರಿಶೀಲನೆ ಮಾಡಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸರ್ಕಾರದಿಂದ ಒಟ್ಟು 47.2 ಎಕರೆ ಸ್ಥಳ ಇಲ್ಲಿಯ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ .ಇಲ್ಲಿ ಪ್ರೌಢಶಾಲೆ […]
ಕೊಡಗಿನ ನಟ-ನಟಿಯರು, ಗಾಯಕ, ಕಲಾವಿದರ ಸಮಾಗಮ

ಮಡಿಕೇರಿ : ಕೊಡಗು ಕಲಾವಿದರ ಬಳಗದ ವತಿಯಿಂದ ಚೆಯ್ಯಂಡಾಣೆಯ ಸಿನಿಮಾ ಕಲಾವಿದೆ ಚೆರುವಾಳಂಡ ಸುಜಲಾ ಹಾಗೂ ನಾಣಯ್ಯ ದಂಪತಿ ತೋಟದ ಮನೆಯಲ್ಲಿ ಜಿಲ್ಲೆಯ ಹಲವಷ್ಟು ಹಿರಿ-ಕಿರಿಯ ಸಿನಿಮಾ ಕಲಾವಿದರುಗಳು, ಬರಹಗಾರರು, ನಿರ್ದೇಶಕರು, ಗಾಯಕರು, ಛಾಯಾಚಿತ್ರ ಕಲಾವಿದರುಗಳು ಸಂತಸ ಸಮ್ಮಿಲನದಲ್ಲಿ ಭಾಗಿಗಳಾದರು. ದಶಕಗಳ ಹಿಂದೆ ಆರಂಭಗೊಂಡ ನೋಂದಾಯಿತ ಕಲಾವಿದರ ಸಂಘವೂ ಕಾರ್ಯಚಟುವಟಿಕೆಗಳಿಲ್ಲದೆ ನಿಷ್ಕ್ರಿಯವಾಗಿತ್ತು. ನಟ ನೆರವಂಡ ಉಮೇಶ್ ಹಾಗೂ ತಂಡದವರ ಸಂಚಾಲಕತ್ವದಲ್ಲಿ ವರ್ಷದಿಂದೀಚೆಗೆ ಸಂಘ ಮರುಜೀವ ಪಡೆದುಕೊಂಡಿದೆ. ರಾಜ್ಯದ ಹಲವೆಡೆಗಳಿಂದ ಕಲಾವಿದರುಗಳು ಆಗಮಿಸಿದ್ದು, ಮೈಸೂರಿನಲ್ಲಿ ನೆಲೆಸಿರುವ ಸಂಗೀತಗಾರ, ಹಾರ್ಮೋನಿಯಂ […]
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ 127ನೇ ಜನ್ಮ ದಿನಾಚರಣೆ

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ […]
ಕ್ಲೋಸ್ಬರ್ನ್ ಸಹಿಪ್ರಾ ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ

ಮಡಿಕೇರಿ : ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು. ಕಡಗದಾಳು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎನ್. ಪುಷ್ಪಾವತಿ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಿತು. ಎಸ್ಡಿಎಂಸಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ದಿನದ ಮಹತ್ವದ ಕುರಿತಾಗಿ ಮಾತನಾಡಿದರು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಅಂಗನವಾಡಿ […]