ಎ.ಎಸ್. ಪೊನ್ನಣ್ಣ ಅಭಿವೃದ್ಧಿಯ ಹರಿಕಾರ – ಅವರಿಗೆ ಸಚಿವ ಸ್ಥಾನ ನೀಡಬೇಕು : ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ

ವಿರಾಜಪೇಟೆ : ನೂತನ ಸಚಿವ ಸಂಪುಟದಲ್ಲಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಹಾಗೂ ವಿರಾಜಪೇಟೆ ತಾಲೂಕು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಜೋಕೀಂ ರಾಡ್ರಿಗಸ್ ಮಾತನಾಡಿ, ಪೊನ್ನಣ್ಣರವರಿಗೆ ಸಚಿವ ಸ್ಥಾನ ನೀಡಿದಲ್ಲಿ ಕೊಡಗು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ. ಇಂದು ಶಾಸಕರು ಸಂಪೂರ್ಣವಾಗಿ ಅನುದಾನವನ್ನು ತಂದು ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಎಲ್ಲೆಡೆ ರಸ್ತೆಗಳು ಕಾಂಕ್ರಿಟೀಕರಣಗೊಳ್ಳುತಿದ್ದು ಶಾಸಕರ ಕಾರ್ಯವೈಖರಿಗೆ ಒಂದು ಉದಾಹರಣೆಯಾಗಿದೆ ಎಂದು ಹೇಳಿದರು. ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ವಿರಾಜಪೇಟೆ […]
ಕೊಡಗಿನ ಮೂಲಕ ರೈಲ್ವೇ ಮಾರ್ಗ..?-ಕೇಂದ್ರ ಸಚಿವರ ಭೇಟಿ ಬಳಿಕ ಸಂಸದ ಯದುವೀರ್ ಹೇಳಿದ್ದೇನು..?

ನವದೆಹಲಿ : ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಪ್ರತಿಕ್ರಿಯಿಸಿದ್ದು, ಭೇಟಿ ಸಂದರ್ಭ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಹರಿದಾಡುತ್ತಿರುವ […]
ಜನಮೆಚ್ಚುಗೆಯ ಶಿಕ್ಷಕಿ ಐರಿನ್ ಡಿಸೋಜಾ ವಯೋನಿವೃತ್ತಿ

ವಿರಾಜಪೇಟೆ : ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಐರಿನ್ ಡಿಸೋಜಾ ವಯೋನಿವೃತ್ತಿ ಹೊಂದಿದ್ದಾರೆ. ಒಟ್ಟು 27 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಐರಿನ್ರವರು 1999ರಲ್ಲಿ ಹಚ್ಚಿನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ್ದರು. 2012ರಲ್ಲಿ ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡು 13 ವರ್ಷ ಕಾಲ ಕಾರ್ಯನಿರ್ವಹಿಸಿದ್ದಾರೆ. ಸೇವಾ ಅವಧಿಯಲ್ಲಿ ಕರ್ತವ್ಯ ನಿಷ್ಠೆ, ಸರಳತೆ ಮೂಲಕ ವಿದ್ಯಾರ್ಥಿಗಳ ಹಾಗೂ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಐರಿನ್ ಡಿಸೋಜಾ […]
ಹುಲಿ ದಾಳಿಗೆ ಜಾನುವಾರು ಬಲಿ..? – ಕತ್ತಲೆಕಾಡು ಗ್ರಾಮದಲ್ಲಿ ವ್ಯಾಘ್ರ ಭೀತಿ..!

ಮಡಿಕೇರಿ : ತಾಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ ಎಂಬವರ ಎತ್ತು ನಾಲ್ಕು ದಿನದಿಂದ ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ಬ್ರೂಕ್ ವ್ಯೂ ಎಸ್ಟೇಟ್ನಲ್ಲಿ ಭಾನುವಾರ ಸಂಜೆ ಕಳೇಬರ ಪತ್ತೆಯಾಗಿದೆ. ಈ ಬಗ್ಗೆ ಸ್ಥಳೀತಯರಾದ ನಾಸರ್ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸೋಮವಾರ ಅರಣ್ಯ ಇಲಾಖೆ ಸಿಬ್ಬಂದಿ, ಪಶು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಪಕ್ಕದಲ್ಲೇ ಕಾಡು ಹಂದಿಯ […]
ವೀರಾಜಪೇಟೆ ಪೊಮ್ಮಕ್ಕಡ ಒಕ್ಕೂಟದ ವಾರ್ಷಿಕ ಮಹಾಸಭೆ

ವಿರಾಜಪೇಟೆ : ವಿರಾಜಪೇಟೆ ಕೊಡವ ಸಮಾಜದ ಕೊಡವ ಪೊಮ್ಮಕ್ಕಡ ಒಕ್ಕೂಟದ 2025-26 ನೇ ಸಾಲಿನ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ, ಮಹಿಳೆಯರು ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾಳೆ. ಆಕೆ ಕೇವಲ ಮನೆಯ ನಿರ್ವಹಣೆ ಮಾಡುವಲ್ಲಿ ಮಾತ್ರ ಸೀಮಿತವಾಗದೆ ಸಮಾಜದಲ್ಲಿಯೂ ತನ್ನ ಸೇವೆಯನ್ನು ಸಲ್ಲಿಸುತ್ತಾ ಬಂದಿರುತ್ತಾಳೆ. ಯಾವುದೇ ಕೆಲಸವನ್ನು ನಾವು ಮಾಡುವ ಸಂದರ್ಭದಲ್ಲಿ ಶ್ರದ್ಧೆಯಿಂದ ಪ್ರಾಮಾಣಿಕತೆಯಿಂದ ಮಾಡಬೇಕು. ಮನಸ್ಸಿಟ್ಟು ಮಾಡುವ […]
ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ – ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ

ಮಡಿಕೇರಿ : ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ವಯೋನಿವೃತ್ತಿ ಬಳಿಕ ಒಂದು ವರ್ಷ ಕಾಲ ಸ್ವಇಚ್ಛೆಯಿಂದ ತನ್ನ ಸೇವೆಯನ್ನು ನೀಡುವ ಮಹತ್ವ ನಿರ್ಧಾರ ಕೈಗೊಳ್ಳುವ ಮೂಲಕ ಮಾದರಿ ನಡೆ ತೋರಿದ್ದಾರೆ. ಮಡಿಕೇರಿ ತಾಲೂಕಿನ ಕ್ಲೋಸ್ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿದ್ದ ಎಂ.ಟಿ. ಲಕ್ಷ್ಮೀ ಈ ಮಾದರಿ ನಿರ್ಧಾರ ತೆಗೆದುಕೊಂಡವರು. 32 ವರ್ಷ ಕಾಲ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಅವರು ಮೇ 30ಕ್ಕೆ ವಯೋನಿವೃತ್ತಿಯಾದರು. ಈ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ವೇಳೆ ಸಹಶಿಕ್ಷಕರು, ಎಸ್ಡಿಎಂಸಿ, ಹಳೆ […]
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ..!

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಖಾಸಗಿ ಕಾರ್ನಲ್ಲಿ ಲೋಕಭವನಕ್ಕೆ ತೆರಳಿದ ಅವರು ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ತುರ್ತು ಕಾರ್ಯನಿಮಿತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂಧೋರ್ಗೆ ತೆರಳಿರುವ ಕಾರಣಕ್ಕೆ ಅವರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿ ಪ್ರಭುಶಂಖರ್ ಅವರಿಗೆ ರಾಜೀನಾಮೆ ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಅವರ ಜೊತೆ ಡಿ.ಕೆ. ಶಿವಕುಮಾರ್ ಜೊತೆಗಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅರ್ಧಾವಧಿ ಬಳಿಕ ಡಿ.ಕೆ. ಶಿವಕುಮಾರ್ ಅವರಿಗೆ ಸ್ಥಾನ ಬಿಟ್ಟು ಕೊಡುವ ಬಗ್ಗೆ ಒಪ್ಪಂದವಾಗಿತ್ತು. ಕೆಲವು ದಿನದ […]
ಆಧುನಿಕತೆಯ ಅತಿರೇಕದಲ್ಲಿ ಸಾಂಪ್ರದಾಯಿಕ ‘ಬೋಡ್ ನಮ್ಮೆ’ ಮರೆಯಾಗದಿರಲಿ..!

ಸಾಂದರ್ಭಿಕ ಲೇಖನ – ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಕೊಡವರ ನಾಡಿನ ಸಾಂಪ್ರದಾಯಿಕ ‘ಬೋಡ್ ನಮ್ಮೆ’ಯು ಮಾನವನ ಬದುಕಿನಲ್ಲಿ ಬರುವ ಶಾರೀರಿಕ ವಾಂಛೆಗಳು, ಮಾನಸಿಕ ಬಯಕೆಗಳು ಹಾಗು ಭಾವನಾತ್ಮಕ ತುಮುಲಗಳಂತಹ ಅತಿರೇಕಗಳನ್ನು ದೇವರಿಗೆ ಸಮರ್ಪಿಸಿ ಮನಸ್ಸಿನ ಕ್ಲೇಶ ನಿವಾರಣೆ ಮಾಡಿ ಕೊಳ್ಳುವುದರೊಂದಿಗೆ ಶಾರೀರ, ಮನಸ್ಸು ಹಾಗು ಭಾವನೆಗಳ ಸಮತೋಲನವನ್ನು ಕಾಪಾಡಿಕೊಳ್ಳುವ ಒಂದು ಪಾರಂಪರಿಕ ಪ್ರಕ್ರಿಯೆಯಾಗಿದೆ, ಆಚರಣೆಯಾಗಿದೆ. ಇದನ್ನು ಧಾರ್ಮಿಕ ಕಟ್ಟುಪಾಡುಗಳೊಂದಿಗೆ ಪೀಳಿಗೆಯಿಂದ ಪೀಳಿಗೆಗೆ ಮುಂದುವರಿಸಿಕೊಂಡು ಬರಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ‘ಬೋಡ್ ಕಳಿಯು’ ಅತಿರೇಕವನ್ನು ಮುಟ್ಟಿದೆ, ಇದು ಬೋಡ್ […]
ಅನ್ಯ ಭಾಷೆಯ ಮಕ್ಕಳಲ್ಲಿ ಬೋಧಕರು ನೈಜ ಭಾಷೆಯ ಮನೋಭಾವನೆ ಬರುವಂತೆ ನೋಡಿಕೊಂಡು ಬೋಧಿಸಬೇಕು – ಅಶೋಕ ಸಂಗಪ್ಪ ಆಲೂರ

ವಿರಾಜಪೇಟೆ : ಅನ್ಯ ಭಾಷೆ ಮಾತನಾಡುವ ಮಕ್ಕಳಲ್ಲಿ ಬೋಧಕರು ನೈಜ ಭಾಷೆಯ ಮನೋಭಾವನೆ ಬರುವಂತೆ ನೋಡಿಕೊಂಡು ಬೋಧಿಸಬೇಕಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಸಂಗಪ್ಪ ಅಲೂರ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜು ಹಾಗೂ ದಲಿತ ಸಾಹಿತ್ಯ ಪರಿಷತ್ ನುಡಿ ಉತ್ಸವ ಮತ್ತು ಕೊಡಗು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಗಡಿ ಪ್ರದೇಶಗಳ ಪಠ್ಯ ಕ್ರಮದಲ್ಲಿ ಕನ್ನಡ ಭಾಷಾ ನೀತಿ ಹಾಗೂ ಬಹುಭಾಷ ವಾಸ್ತವಿಕತೆಗಳ ಮರುಚಿಂತನೆ ಎನ್ನುವ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಗಿಡಕ್ಕೆ ನೀರು […]
ಕಾಟ್ರಕೊಲ್ಲಿ ಆಲೀರ ಕುಟುಂಬ ಸಂಘ ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಎ.ಎಂ. ರಶೀದ್ ಅವಿರೋಧ ಆಯ್ಕೆ..!

ಪೊನ್ನಂಪೇಟೆ : ಕಾಟ್ರಕೊಲ್ಲಿಯಲ್ಲಿ ನೆಲೆಸಿರುವ ಕೊಡವ ಮುಸ್ಲಿಮರ ಮನೆತನಗಳಲ್ಲಿ ಒಂದಾಗಿರುವ ಆಲೀರ ಕುಟುಂಬಸ್ಥರ ಸಾಮಾಜಿಕ ಶ್ರೇಯೋಭಿವೃದ್ಧಿಗಾಗಿ ಕಾಟ್ರಕೊಲ್ಲಿ ಆಲೀರ ಕುಟುಂಬ ಸಂಘವನ್ನು ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಆಲೀರ ಐನ್ ಮನೆಯಲ್ಲಿ ಇತ್ತೀಚಿಗೆ ನಡೆದ ಕುಟುಂಬಸ್ಥರ ಸಭೆಯಲ್ಲಿ ಈ ಕುರಿತು ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಯಿತು. ಕುಟುಂಬದ ಹಿರಿಯರಾದ, ನಿವೃತ್ತ ಕೃಷಿ ಅಧಿಕಾರಿ ಆಲೀರ ಅಬು ಹಾಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕುಟುಂಬಸ್ಥರ ಸಭೆಯಲ್ಲಿ ಕಾಟ್ರಕೊಲ್ಲಿ ಆಲೀರ ಕುಟುಂಬ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ಪೊನ್ನಂಪೇಟೆ ಪಂಚಾಯಿತಿ ಉಪಾಧ್ಯಕ್ಷರಾಗಿರುವ […]