ಮಕ್ಕಂದೂರು, ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ರಚನೆ – ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಆಯ್ಕೆ

ಮಡಿಕೇರಿ : ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ನೂತನವಾಗಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಜಯಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತೇಲಬೈಲು ಅಸಿಕಾ ದಿನೇಶ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕೊಟ್ಟಗೇರಿಯನ ಕಲ್ಪನಾ ಪ್ರದೀಪ್, ಉಪಾಧ್ಯಕ್ಷರಾಗಿ ಕುಂಬುಗೌಡನ ಕವಿತಾ ಸುನಿಲ್, ಸಹಕಾರ್ಯದರ್ಶಿಯಾಗಿ ಮಳ್ಳನ ಅನಿತಾ ವಿಜಯಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಕುಡೆಕಲ್ಲು ಸವಿತಾ ಸಂತೋಷ್ ಹಾಗೂ ಕುಂಬುಗೌಡನ ನಿಶ್ಚಲ್ ಜಗದೀಶ್ ನೇಮಕಗೊಂಡರು. ಸದಸ್ಯರಾಗಿ ಲಕ್ಕಪನ ಸೌಮ್ಯ ವಿಜೇತ, ಹಿರೇಗೌಡನ ಚಲನ ತೀರ್ಥಕುಮಾರ್, ಕೋಳಿಬೈಲು ಅನಿತಾ ರಂಜು, ಮಳ್ಳನ […]
ಮನುಕುಲದ ಒಳಿತಿಗೆ ಪ್ರಕೃತಿ ಸಂರಕ್ಷಿಸಿ – ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಆರ್. ಶಂಕರಾನಂದ್ ಕರೆ

ಕುಶಾಲನಗರ : ಪ್ರಕೃತಿಯನ್ನು ತಾಯಿಯಂತೆ ಪೂಜಿಸಿ ಆರಾಧಿಸಿದಲ್ಲಿ ಮಾತ್ರ ಜೀವ ವೈವಿಧ್ಯತೆ ಸಂರಕ್ಷಿಸಲು ಸಾಧ್ಯ ಎಂದು ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಆರ್. ಶಂಕರಾನಂದ ಆಶಿಸಿದರು. ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ ಸೋಮವಾರ “ಹಸಿರು ಸಂರಕ್ಷಣೆಯಲ್ಲಿ ಕೊಡಗಿನ ಜೀವವೈವಿಧ್ಯ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಸ್ವಾರ್ಥದಿಂದಾಗಿ ಪ್ರಕೃತಿ ಇಂದು ವಿನಾಶದ ಅಂಚಿನಲ್ಲಿದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ಮೇಲಾಗುತ್ತಿರುವ ಅತ್ಯಾಚಾರದಿಂದಾಗಿ ಪ್ರಕೃತಿ ಮುನಿಯತೊಡಗಿದ್ದು, ಭೂಕಂಪ, ಪ್ರವಾಹಗಳು ಮನುಷ್ಯನ ನೆಮ್ಮದಿ […]
ಯೋಗಾಸನದಲ್ಲಿ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ ಮದೆನಾಡಿನ ಬಿ.ಕೆ. ಸಿಂಚನಾ

ಮಡಿಕೇರಿ : ಯೋಗಾಸನದಲ್ಲಿ ಕೊಡಗಿನ ಸಿಂಚನಾ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ್ದಾಳೆ. ಮದೆನಾಡಿನ ಬಿಜಿಎಸ್ ಶಾಲೆಯ ಆವರಣ ನೂತನ ದಾಖಲೆಗೆ ಸಾಕ್ಷಿಯಾಯಿತು. ಯೋಗಾಸನದಲ್ಲಿ ಈಗಾಗಲೆ 07 ವಿಶ್ವ ದಾಖಲೆ ಮಾಡಿದ್ದ ಸಿಂಚನಾ, ಮಂಗಳವಾರ ಮೂರು ಹೊಸ ದಾಖಲೆ ಸೃಷ್ಟಿಸುವ ಮೂಲಕ 10 ಜಾಗತಿಕ ದಾಖಲೆಯಲ್ಲಿ ತನ್ನ ಹೆಸರು ನಮೂದಿಸಿದ್ದಾರೆ. ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಗಾಗಿ ಶಾಲೆಯಲ್ಲಿ ವೇದಿಕೆ ಸಿದ್ಧವಾಗಿತ್ತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಸಮ್ಮುಖದಲ್ಲಿ, ಹಲವು ಗಣ್ಯರ ಉಪಸ್ಥಿತಿಯಲ್ಲಿ ಸಿಂಚನಾ ಹೊಸ […]
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ..!

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುಂದಿನ 05 ವರ್ಷ ನಾನೇ ಮುಖ್ಯಮಂತ್ರಿ ಅಂತ ಎಲ್ಲಾ ಕಡೆ ಹೇಳುತ್ತಾ ಬರುತ್ತಿದ್ದರು ಸಿದ್ದರಾಮಯ್ಯ. ಆದರೆ ಇವತ್ತು ಮಂಗಳೂರಿನಲ್ಲಿ ಅವರಿಂದ ಬಂದ ಪ್ರತಿಕ್ರಿಯೆ ಅಚ್ಚರಿ ಹುಟ್ಟಿಸಿದೆ. ಮುಂದೆ ನೀವೇ ಮುಖ್ಯಮಂತ್ರಿಯಾಗಿರುತ್ತೀರಾ ಅಂತ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ […]
ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧFIR – ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು : ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು. *ಎಸ್ ಐ ಟಿ ವರದಿ* […]
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಉಪಾಧ್ಯಕ್ಷ ಸ್ಥಾನ ಆಕಾಂಕ್ಷಿ ರಮೇಶ್ ಕುಟ್ಟಪ್ಪ ನಾಮಪತ್ರ ಸಲ್ಲಿಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಜ್ಜಮಾಡ ರಮೇಶ್ ಕುಟ್ಟಪ್ಪ ನಾಮಪತ್ರ ಸಲ್ಲಿಸಿದ್ದಾರೆ. 2022- 25ನೇ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಇವರು ಇದೀಗ ಎರಡನೇ ಅವಧಿಗೆ ಆಕಾಂಕ್ಷಿಯಾಗಿ ಸ್ಪರ್ಧಿಸಿದ್ದಾರೆ. 25 ವರ್ಷದಿಂದ ಪತ್ರಕರ್ತ ವೃತ್ತಿಯಲ್ಲಿರುವ ಇವರು ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸಂಘಟನಾತ್ಮಕವಾಗಿಯೂ ಸಕ್ರಿಯರಾಗಿರುವ ಇವರು ಎರಡು ಅವಧಿಗೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ, ಎರಡು […]
ಬೀದಿ ಶ್ವಾನಗಳ ಹಾವಳಿ – ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್..!

ನವದೆಹಲಿ : ಇತ್ತೀಚಿನ ದಿನದಲ್ಲಿ ಬೀದಿ ಶ್ವಾನಗಳ ಹಾವಳಿ ಮಿತಿ ಮೀರಿದೆ. ಈ ಸಮಸ್ಯೆ ಇಂಥದ್ದೇ ಪ್ರದೇಶಕ್ಕೆ ಸೀಮಿತ ಅಂತ ಹೇಳುವುದಕ್ಕಾಗಲ್ಲ. ದೇಶದ ಉದ್ದಗಲಕ್ಕೂ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಈ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಬೀದಿ ಶ್ವಾನಗಳ ಹಾವಳಿ ಹೆಚ್ಚಾದ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ, ಎಲ್ಲಾ ರಾಜ್ಯಗಳಿಂದಲೂ ಬೀದಿ ಶ್ವಾನಗಳ ದಾಳಿ ಬಗ್ಗೆ ವರದಿಗಳು, ದೂರುಗಳು ಬರುತ್ತಿವೆ ಎಂದು ಆತಂಕ […]
ಕರ್ನಾಟಕದ ಕಾಫಿಗೆ ಪ್ರಧಾನಿ ಮೆಚ್ಚುಗೆ – ಮನ್ ಕೀ ಬಾತ್ನಲ್ಲಿ ಕೊಡಗಿನ ಕಾಫಿಯನ್ನು ಉಲ್ಲೇಖಿಸಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ತಿಂಗಳ ʼಮನದ ಮಾತುʼ ಕಾರ್ಯಕ್ರಮದಲ್ಲಿ ದೇಶದ ವೈಶಿಷ್ಟ್ಯತೆಯನ್ನು ಉಲ್ಲೇಖಿಸುತ್ತಾ ಇರುತ್ತಾರೆ. ಈ ಬಾರಿ ಕಾಫಿ ಬಗ್ಗೆ ಪ್ರಸ್ತಾಪಿಸುತ್ತಾ ಕೊಡಗು ಜಿಲ್ಲೆಯ ಕೊಡುಗೆಯನ್ನು ಕೊಂಡಾಡಿದ್ದಾರೆ. ಅ.26ರಂದು ಪ್ರಸಾರವಾದ ಮನ್ ಕೀ ಬಾತ್ 127ನೇ ಸಂಚಿಕೆಯಲ್ಲಿ, ದಕ್ಷಿಣ ಭಾರತದಲ್ಲಿ ಬೆಳೆಯುವ ಕಾಫಿಯ ವಿಶೇಷತೆ ಬಗ್ಗೆ ಮಾತನಾಡಿದರು. ದೇಶದ ಒಟ್ಟು ಕಾಫಿ ಉತ್ಪನ್ನದ ಪೈಕಿ ಶೇ 70ರಷ್ಟನ್ನು ಕರ್ನಾಟಕದಲ್ಲೇ ಬೆಳೆಯಲಾಗುತ್ತಿದೆ. ನಂತರದ ಸ್ಥಾನದಲ್ಲಿ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಒಡಿಶಾ ಇದೆ. ದೇಶದಲ್ಲಿ […]
ಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣ – ಮಡಿಕೇರಿ ವ್ಯಾಪ್ತಿಯಲ್ಲಿ 120 ಎಕ್ರೆ ಜಾಗ ಖರೀದಿಗೆ ಸರ್ಕಾರದ ಒಪ್ಪಿಗೆ : ಶಾಸಕ ಮಂತರ್ ಗೌಡ ಮಾಹಿತಿ

ಮಡಿಕೇರಿ : ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರಕಾರ ತಯಾರಿದ್ದು, ಮಡಿಕೇರಿ ಸಮೀಪ ಖಾಸಗಿ ವ್ಯಕ್ತಿಗಳಿಂದ ಕನಿಷ್ಠ ೧೨೦ ಎಕರೆ ಸಮತಟ್ಟು ಜಾಗ ಲಭ್ಯವಿದ್ದಲ್ಲಿ ಅದನ್ನು ಮಾರುಕಟ್ಟೆ ದರದಲ್ಲಿ ಖರೀದಿಸಲು ಸರಕಾರ ಒಪ್ಪಿಗೆ ನೀಡಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ಹೇಳಿದರು. ಮಡಿಕೇರಿ ಹೊರವಲಯದ ಮಹಿಂದ್ರ ರೆಸಾರ್ಟ್ನಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ವಾಣಿಜ್ಯ ಮಹಾ ಸಂಸ್ಥೆ ವತಿಯಿಂದ ಸಂವಾದ ಕಾರ್ಯಕ್ರಮ ಹಾಗೂ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಇತರ […]
ಬರವಣಿಗೆ ನೀಡುವ ಅಮೂಲ್ಯ ಸಾರವನ್ನು AI, ಗೂಗಲ್ ನೀಡಲಾರದು – ಮಾಳೇಟಿರ ಸೀತಮ್ಮ ವಿವೇಕ್ ಅಭಿಪ್ರಾಯ

ಮಡಿಕೇರಿ : ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಬಹಳ ವಿರಳವಾಗಿದೆ. ಆದರೆ ಬರವಣಿಗೆ ನೀಡುವ ಅಮೂಲ್ಯ ಸಾರವನ್ನು ಎಐ ಅಥವಾ ಗೂಗಲ್ ತಂತ್ರಜ್ಞಾನ ನೀಡಲು ಸಾಧ್ಯವಿಲ್ಲವೆಂದು ಸಾಹಿತಿ ಹಾಗೂ ಸಮಾಜ ಸೇವಕಿ ಮಾಳೇಟಿರ ಸೀತಮ್ಮ ವಿವೇಕ್ ಹೇಳಿದರು. ಪತ್ರಿಕಾ ಭವನದಲ್ಲಿ ನಡೆದ ಕೊಟ್ಟಂಗಡ ಕವಿತಾ ವಾಸುದೇವ ರಚಿತ, ಕೊಡವ ಮಕ್ಕಡ ಕೂಟದ 119ನೇ ಪುಸ್ತಕ ‘ಬಯಂದ ಬಾಳ್’ ಕೊಡವ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಯಾವುದೇ ನಿರೀಕ್ಷೆಗಳಿಲ್ಲದೆ ಸಾಹಿತ್ಯವನ್ನು ಸಮಾಜಕ್ಕೆ ನೀಡಬೇಕು. […]