ಗರ್ಭದೊಳಗಿನ ಕಂದನಿಗೆ ಕಂಟಕವಾಗದಿರಲಿ ಅಬ್ಬರದ ಸಂಗೀತ..!

  ವಿಶೇಷ ಲೇಖನ : ಡಾ. ಕೆ.ಬಿ. ಸೂರ್ಯಕುಮಾರ್‌ ಮಹಾಭಾರತದಲ್ಲಿ ಶ್ರೀಕೃಷ್ಣ ತನ್ನ ತಂಗಿ ಸುಭದ್ರೆಗೆ ಯುದ್ಧದಲ್ಲಿನ ಅಭೇದ್ಯವ್ಯೂಹಗಳ ಭೇದನೆಯನ್ನು ವಿವರಿಸುವಾಗ ಗರ್ಭದಲ್ಲಿದ್ದ ಅಭಿಮನ್ಯು ಅದನ್ನು ಕೇಳಿ ತಿಳಿದು, ಮುಂದೆ ಧನುರ್ವಿದ್ಯಾಪಾರಂಗತನಾದ. ವೈಜ್ಞಾನಿಕ ಸಂಶೋಧನೆಯ ಪ್ರಗತಿಯಿಂದ ಗರ್ಭಾಶಯವು ಶಬ್ದರಹಿತವಲ್ಲ ಎಂಬುದು ತಿಳಿದುಬಂದಿದೆ. ಗರ್ಭದೊಳಗಿನ ಮಗುವಿಗೆ ಹೊರ ಜಗತ್ತಿನಿಂದ ಬರುವ ಜೋರಾದ ಶಬ್ದಗಳು ಗರ್ಭರಸದ ( ಅಮ್ನಿಯೋಟಿಕ್ ಫ್ಲೂಯಿಡ್) ಮೂಲಕ ತಲುಪಬಹುದು ಮತ್ತು ನೇರವಾಗಿ ಹಾನಿಕರ ಪರಿಣಾಮ ಬೀರಬಹುದು ಎಂಬುದು ಸಾಬೀತಾಗಿದೆ. ಗರ್ಭದಲ್ಲಿ ಮಗು ಶಬ್ದವನ್ನು ಹೇಗೆ ಕೇಳುತ್ತದೆ?… […]

ಸಾಮಾಜಿಕ ಜಾಲತಾಣದಲ್ಲಿ ಸಚಿವ ಸಂತೋಷ್‌ ಲಾಡ್‌ಗೆ ನಿಂದನೆ – ಯುವ ಕಾಂಗ್ರೆಸ್‌ನಿಂದ ಎಸ್ಪಿಗೆ ದೂರು

ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ಗೆ ಅವಾಚ್ಯ ಶಬ್ದಗಳಿಂದ ವ್ಯಕ್ತಿಯೊಬ್ಬರು ನಿಂದಿಸಿದ್ದಾರೆಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಎಸ್ಪಿ ಕೆ. ರಾಮರಾಜನ್‌ ಅವರಿಗೆ ದೂರು ನೀಡಲಾಯಿತು. ಇತ್ತೀಚೆಗೆ ಸಂತೋಷ್‌ ಲಾಡ್‌ ಕೊಡಗು ಜಿಲ್ಲೆಗೆ ಸಂತೋಷ್‌ ಲಾಡ್‌ ಭೇಟಿ ನೀಡಿದ ಸಂದರ್ಭದ ಫೋಟೋವನ್ನು ಶಾಸಕ ಎ.ಎಸ್.‌ ಪೊನ್ನಣ್ಣ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದಕ್ಕೆ ವ್ಯಕ್ತಿಯೊಬ್ಬರು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್‌, ಯುವ ಕಾಂಗ್ರೆಸ್‌ ನೇತೃತ್ವದಲ್ಲಿ ಎಸ್ಪಿ ಕೆ. ರಾಮರಾಜನ್‌ ಅವರಿಗೆ […]

ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣು ಕಾಡಾನೆ ಸಾವು

ಕುಶಾಲನಗರ : ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣಾನೆಯೊಂದು ಮೃತಪಟ್ಟ ಪ್ರಕರಣ ಮೀನುಕೊಲ್ಲಿ ಅರಣ್ಯದಲ್ಲಿ ವರದಿಯಾಗಿದೆ. ವಾಲ್ನೂರು-ಮಾಲ್ದಾರೆ ನಡುವೆ ಹರಿಯುವ ಕಾವೇರಿ ನದಿಯಲ್ಲಿ ಸೆ.17ರಂದು ಆನೆಯ ಮೃತದೇಹ ಕಂಡುಬಂದಿತ್ತು. ನದಿಯ ಮಧ್ಯ ಭಾಗದಲ್ಲಿ ಮೃತದೇಹವಿದ್ದ ಕಾರಣ ನಿನ್ನೆ ಹೊರಗೆಳೆಯಲು ಸಾಧ್ಯವಾಗಲಿಲ್ಲ. ಇಂದು ಬೋಟ್‌ ಹಾಗೂ ಸಾಕಾನೆಗಳ ನೆರವಿನಿಂದ ಆನೆಯ ಮೃತದೇಹವನ್ನು ನದಿಯಿಂದ ಹೊರತರಲಾಯಿತು. ಮರಣೋತ್ತರ ಪರೀಕ್ಷೆ ವೇಳೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಇದು ನೀರಿನಲ್ಲಿ ಮುಳುಗಿ ಮೃತಪಟ್ಟಿದೆ ಎಂದು ಇಲಾಖೆಯ ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಅಲ್ಲೇ […]

ಮಡಿಕೇರಿ ಜನೋತ್ಸವ ದಸರಾ 2025 : ಸೆ. 24 ರಂದು ಕಾಫಿ ದಸರಾ – ನೀವೂ ಭಾಗವಹಿಸಬಹುದು…

  ಮಡಿಕೇರಿ : ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ಸೆ 24 ರಂದು ಬುಧವಾರ ಆಯೋಜಿತ ಎರಡನೇ ವಷ೯ದ ಕಾಫಿ ದಸರಾ ಸಂದಭ೯ ಕಾಫಿಯಿಂದ ತಯಾರಿಸಲ್ಪಡುವ ವೈವಿಧ್ಯಮಯ ಖಾದ್ಯಗಳ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಮತ್ತು ಕಾಫಿ ದಸರಾ ಸಮಿತಿ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಕಾಫಿಯ ಮಹತ್ವ ತಿಳಿಸಲು ಮಾಹಿತಿಯುಕ್ತ ಸ್ಪಧೆ೯ಯನ್ನು ಸೆ.24 ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಕಾಫಿ […]

ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾವಳಿ – ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜು ಬಾಲಕಿಯರ ತಂಡ ರನ್ನರಪ್‌

ಗೋಣಿಕೊಪ್ಪ : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜಿನ ಬಾಲಕಿಯರ ತಂಡ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ಅಮ್ಮತ್ತಿ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪಂದ್ಯಾವಳಿಯಲ್ಲಿ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿತ್ತು. ಗೋಣಿಕೊಪ್ಪ ಕಾಪ್ಸ್‌ನಲ್ಲಿ ನಡೆದ ಜಿಲ್ಲಾಮಟ್ಟದ ಪಂದ್ಯಾವಳಿಯಲ್ಲಿ ರನ್ನರಪ್‌ ಆಗಿ ಹೊರಹೊಮ್ಮಿದೆ. ಶಾಲೆಯ ವಿದ್ಯಾರ್ಥಿನಿಯರಾದ ನಷ್ಮಾ ನೀಲಮ್ಮ, ನಿವೇದಾ ದೇಚಮ್ಮ, ಸಿಯಾ ಗಂಗಮ್ಮ, ಆಕೃತಿ ಬಿ.ಎಂ, ಪ್ರಜ್ಞಾ ಪೊನ್ನಮ್ಮ ಎಂ.ಬಿ, ಪೊನ್ನಮ್ಮ ಎ.ಎಸ್, ಸೃಜಲ್ ಬೋಜಮ್ಮ, […]

ಹಾವುಗಳನ್ನು ಹಿಡಿದು ಫೋಟೋ ಶೂಟ್ ಮಾಡಿದರೆ ಕೇಸ್‌ ಬೀಳುತ್ತೆ ಎಚ್ಚರ..!

ಬೆಂಗಳೂರು : ಇತ್ತೀಚಿನ ದಿನದಲ್ಲಿ ಉರಗ ರಕ್ಷಣೆ ಹೆಸರಿನಲ್ಲಿ ಹಾವುಗಳಿಗೆ ಹಿಂಸೆ ನೀಡುತ್ತಿರುವುದು ಹಾಗೂ ಅವುಗಳನ್ನು ಬಳಸಿಕೊಂಡು ಫೋಟೋಶೂಟ್‌ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೊನೆಗೂ ಎಚ್ಚೆತ್ತಿದೆ. ಹಾವು ಹಾಗೂ ಅವುಗಳ ಮೊಟ್ಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ವಿಷ ತೆಗೆಯುವುದು, ಅನುಮತಿ ಇಲ್ಲದೆ ಅರಣ್ಯ ಪ್ರವೇಶಿಸಿದ ಸಂಶೋಧನೆ ಮಾಡುವವರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಮಲೆನಾಡು ಭಾಗದಲ್ಲಿ ಅನಧಿಕೃತವಾಗಿ ಕಾಳಿಂಗ […]

ನಾಳೆ(ಸೆ.18) ಕೊಡಗು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ..!

ಮಡಿಕೇರಿ  :  ೬೬/೧೧ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್೬ ಭಾಗಮಂಡಲ ಫೀಡರ್‌ನಲ್ಲಿ ಸೆಪ್ಟೆಂಬರ್ ೧೮ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ತಲಕಾವೇರಿ ಜಾತ್ರೆ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್‌ ಇಂಜಿನಿಯರ್‌ ಕೋರಿದ್ದಾರೆ.  

ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ – ಬಂಟ ನಾಡವ ಎಂದು ನಮೂದಿಸಲು ಬಂಟರ ಸಂಘ ಮನವಿ

ಮಡಿಕೇರಿ : ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಸೆ.22ರಿಂದ ಆರಂಭವಾಗಲಿದೆ. ಗಣತಿ ಸಂದರ್ಭದಲ್ಲಿ ಬಂಟ ಸಮುದಾಯದವರು ಜಾತಿ ಕಾಲಂನಲ್ಲಿ ʼಬಂಟ ನಾಡವʼ ಎಂದು ನಮೂದಿಸುವಂತೆ ಕೊಡಗು ಜಿಲ್ಲಾ ಬಂಟರ ಸಂಘ ಮನವಿ ಮಾಡಿದೆ. ಗಣತಿದಾರರು ಮನೆಗೆ ಆಗಮಿಸಿದ ಸಂದರ್ಭ ಧರ್ಮದ ಕಾಲಂನಲ್ಲಿ ಹಿಂದು, ಜಾತಿ ಕಾಲಂನಲ್ಲಿ ಬಂಟ ನಾಡವ ಎಂದು ನಮೂದಿಸಬೇಕು. ಉಪಜಾತಿಯ ಕಾಲಂನಲ್ಲಿ ಏನನ್ನೂ ನಮೂದಿಸಬಾರದು ಎಂದು ಸಂಘದ ಜಿಲ್ಲಾಧ್ಯಕ್ಷ ಬಿ.ಡಿ. ಜಗದೀಶ್‌ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾತೃ ಸಂಘದ ಸಭೆಯಲ್ಲಿ ಈ […]

ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ – ಭಕ್ತರಿಗೆ ಕಿರಿಕಿರಿ ಆಗದಂತೆ ನೋಡಿಕೊಳ್ಳಿ ಅಂತ ಹೇಳಿದ್ಯಾರು..?

ಮಡಿಕೇರಿ : ಅಕ್ಟೋಬರ್ ೧೭ ರಂದು ತಲಕಾವೇರಿಯಲ್ಲಿ ಜರುಗುವ ಪವಿತ್ರ ಕಾವೇರಿ ತೀರ್ಥೋದ್ಭವ ಸಂಬಂಧ ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಸೂಚಿಸಿದ್ದಾರೆ. ಭಾಗಮಂಡಲ ‘ಶ್ರೀ ಭಗಂಡೇಶ್ವರ ದೇವಾಲಯದ ಹಳೆ ಮುಡಿಶೆಡ್ ಕಟ್ಟಡದ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ತಲಕಾವೇರಿಯಲ್ಲಿ ಭಕ್ತಾದಿಗಳಿಗೆ ಯಾವುದೇ ರೀತಿ ಕಿರಿಕಿರಿ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು. ೧೭ ರಂದು ಮಧ್ಯಾಹ್ನ ೧.೪೪ ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸುವುದರಿಂದ […]

ಬೆಳೆಹಾನಿ ಸಮೀಕ್ಷೆ ನಿಖರ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಸೂಚನೆ

ಮಡಿಕೇರಿ : ಕಳೆದ ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಕಳೆದ ನಾಲ್ಕು ತಿಂಗಳು ಸುರಿದ ಧಾರಾಕಾರ ಮಳೆಯಿಂದ ರಸ್ತೆ, ಸೇತುವೆ, ಶಾಲಾ ಹಾಗೂ […]